Homeಕರ್ನಾಟಕತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ತನ್ನ ತಂದೆಯೊಂದಿಗೆ ಜಗಳವಾಡಿ ಕತ್ತರಿ ಚುಚ್ಚಿದ ನಂತರ ಬಂಧನಕ್ಕೊಳಗಾಗಿದ್ದ 15 ವರ್ಷದ ಬೆಂಗಳೂರು ಬಾಲಕಿಯನ್ನು ಒಂದು ವಾರದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆಕೆಯನ್ನು ಬಾಲಾಪರಾಧಿ ಜೈಲಿನಲ್ಲಿ ಇರಿಸಿದ್ದು, ಗುರುವಾರ ಬಾಲಾಪರಾಧಿ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಯಿತು. ಆ ಸಮಯದಲ್ಲಿ ಆಕೆಗೆ ಜಾಮೀನು ನೀಡಲಾಯಿತು.

ಜುಲೈ 23, ಗುರುವಾರ ಬಾಲಕಿಯನ್ನು ವಶಕ್ಕೆ ಪಡೆಯಲಾಯಿತು. ಆಕೆ, ತಂದೆಯ ಮೇಲೆ ಗಲಾಟೆಯ ಸಮಯದಲ್ಲಿ ಕತ್ತರಿಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಳು. ನಂತರ ಆಕೆಯ ತಂದೆ ಸಾವನ್ನಪ್ಪಿದ್ದರು.

ಐಪಿಸಿಯ ಸೆಕ್ಷನ್ 304 ರ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಕೊಲೆಯ ಉದ್ದೇಶವಲ್ಲದ ನರಹತ್ಯೆಯಾಗಿದೆ ಎನ್ನಲಾಗಿದೆ.

ಜನವರಿಯಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಬಾಲಾಪರಾಧಿಗಳು ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುವ ಅಪರಾಧದ ಆರೋಪಗಳನ್ನು ಹೊತ್ತಿದ್ದರೆ, ಅದನ್ನು ‘ಘೋರ ಅಥವಾ ಗಂಭೀರ’ ಎಂದು ಪರಿಗಣಿಸಲಾಗುತ್ತದೆ.

ಐಪಿಸಿ  ಸೆಕ್ಷನ್ 304 ರ ಪ್ರಕಾರ ಗರಿಷ್ಠ 10 ವರ್ಷ ಶಿಕ್ಷೆ ವಿಧಿಸಲಾಗಿದ್ದರೂ, ಅದು ಕನಿಷ್ಠ ಶಿಕ್ಷೆಯನ್ನು ಸೂಚಿಸುವುದಿಲ್ಲ, ಆದ್ದರಿಂದ ಬಾಲಕಿ ಜಾಮೀನು ಪಡೆಯಲು ಅರ್ಹಳಾಗಿದ್ದಳು.

ಬಾಲಕಿ ಪ್ರಸ್ತುತ ತನ್ನ ಕುಟುಂಬಕ್ಕೆ ಮರಳಿದ್ದಾಳೆ. ಆಕೆಯ ಅಜ್ಜಿ ಮತ್ತು ಚಿಕ್ಕಪ್ಪ ಅವರೊಂದಿಗೆ ಇರಲು ಬೆಂಗಳೂರಿನಲ್ಲಿದ್ದಾಳೆ. ಈ ನಡುವೆ ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

ಘಟನೆಯ ವಿವರ

ಜುಲೈ 22 ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಕುಟುಂಬವು ಈ ಹಿಂದೆ ತಿಳಿಸಿತ್ತು. ಬಾಲಕಿಯು ಪ್ರತಿನಿತ್ಯ ಅತಿಯಾಗಿ ಕುಡಿಯುತ್ತಿದ್ದ ತನ್ನ ತಂದೆಗೆ ಬುದ್ಧಿ ಹೇಳಲು ಪ್ರಯತ್ನಿಸಿದ್ದಳು. ತನ್ನ ಅಧ್ಯಯನಕ್ಕೆ ತೊಂದರೆಯಾಗುವಂತೆ ಜೋರಾಗಿ ಪಿಯಾನೋ ನುಡಿಸಬಾರದೆಂದು ಹೇಳಿದ್ದಳು ಎನ್ನಲಾಗಿದೆ.

ಇದರಿಂದ ಕೋಪಗೊಂಡು ಆಕೆಯ ತಂದೆ ಯುವತಿಯನ್ನು ಹೊಡೆದು ಆಕ್ರಮಣ ಮಾಡಲು ಪ್ರಯತ್ನಿಸಿದನು. ನಂತರ ತೀಕ್ಷ್ಣವಾದ ವಸ್ತುವನ್ನು ಎತ್ತಿಕೊಂಡನು. ತನ್ನನ್ನು ರಕ್ಷಿಸಿಕೊಳ್ಳಲು ಹುಡುಗಿ ಕೈಗೆ ಸಿಕ್ಕ ಕತ್ತರಿಗಳನ್ನು ತೆಗೆದುಕೊಂಡು ಚುಚ್ಚಿದ್ದಾಳೆ ಎಂದು ಕುಟುಂಬ ಹೇಳಿದೆ.

ಮತ್ತೊಂದು ಕೋಣೆಯಲ್ಲಿದ್ದ ಹುಡುಗಿಯ ಕಿರಿಯ ಸಹೋದರ ನೆರೆಹೊರೆಯವರನ್ನು ಕರೆತರಲು ಓಡಿಹೋದನು. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ತಂದೆ ಕುಡಿಯುತ್ತಿದ್ದರು, ಆಗಾಗ್ಗೆ ಹಿಂಸೆ ನಿಡುತ್ತಿದ್ದರು. ಕೆಲವು ವರ್ಷಗಳ ಹಿಂದೆ ನಮ್ಮ ತಾಯಿಯ ಮರಣದ ನಂತರ ಹೀಗೆ ಮಾಡುತ್ತಿದ್ದರು ಎಂದು ಕುಟುಂಬವು ತಿಳಿಸಿದೆ.

“ಅವನು ತುಂಬಾ ಓದಿದ್ದ ಮತ್ತು ಬುದ್ಧಿವಂತ. ಐಟಿ ಮೇಜರ್‌ನಲ್ಲಿ 12 ವರ್ಷಗಳ ಕಾಲ ಕೆಲಸ ಮಾಡಿದ ನಂತರ ಕೆಲಸ ಬಿಟ್ಟಿದ್ದ. 2011 ರ ಸುಮಾರಿಗೆ ಅವರ ಪತ್ನಿ ಎರಡನೇ ಮಗುವಿಗೆ ಜನ್ಮ ನಿಡಿದ್ದಳು. ಮಗುವಿಗೆ ಹತ್ತು ದಿನಗಳಿದ್ದಾಗ, ತಾಯಿ ತೀರಿಕೊಂಡಳು. ಇದು ಆತನ ಜೀವನದಲ್ಲಿ ಮಹತ್ವದ ತಿರುವು ಎಂದು ಸಂಬಂಧಿಯೊಬ್ಬರು ಹೇಳಿದ್ದಾರೆ.

ನೆರೆಹೊರೆಯವರು ತಮ್ಮ ಹೇಳಿಕೆಯಲ್ಲಿ ಇಬ್ಬರು ಮಕ್ಕಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹಾಗಾಗಿ ಸಹಾನುಭೂತಿಯ ದೃಷ್ಟಿಕೋನದಿಂದ ಕ್ರಮ ತೆಗೆದುಕೊಳ್ಳಬೇಕು ಎಂದು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ವಾಡಿಕೆಯ ಆರೋಗ್ಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...