Homeಕರ್ನಾಟಕತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ತಂದೆಯ ಹತ್ಯೆ ನಂತರ ಬಂಧನಕ್ಕೊಳಗಾಗಿದ್ದ ಯುವತಿ ಜಾಮೀನಿನ ಮೇಲೆ ಬಿಡುಗಡೆ

ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ತನ್ನ ತಂದೆಯೊಂದಿಗೆ ಜಗಳವಾಡಿ ಕತ್ತರಿ ಚುಚ್ಚಿದ ನಂತರ ಬಂಧನಕ್ಕೊಳಗಾಗಿದ್ದ 15 ವರ್ಷದ ಬೆಂಗಳೂರು ಬಾಲಕಿಯನ್ನು ಒಂದು ವಾರದ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆಕೆಯನ್ನು ಬಾಲಾಪರಾಧಿ ಜೈಲಿನಲ್ಲಿ ಇರಿಸಿದ್ದು, ಗುರುವಾರ ಬಾಲಾಪರಾಧಿ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಯಿತು. ಆ ಸಮಯದಲ್ಲಿ ಆಕೆಗೆ ಜಾಮೀನು ನೀಡಲಾಯಿತು.

ಜುಲೈ 23, ಗುರುವಾರ ಬಾಲಕಿಯನ್ನು ವಶಕ್ಕೆ ಪಡೆಯಲಾಯಿತು. ಆಕೆ, ತಂದೆಯ ಮೇಲೆ ಗಲಾಟೆಯ ಸಮಯದಲ್ಲಿ ಕತ್ತರಿಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಳು. ನಂತರ ಆಕೆಯ ತಂದೆ ಸಾವನ್ನಪ್ಪಿದ್ದರು.

ಐಪಿಸಿಯ ಸೆಕ್ಷನ್ 304 ರ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದು ಕೊಲೆಯ ಉದ್ದೇಶವಲ್ಲದ ನರಹತ್ಯೆಯಾಗಿದೆ ಎನ್ನಲಾಗಿದೆ.

ಜನವರಿಯಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಬಾಲಾಪರಾಧಿಗಳು ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುವ ಅಪರಾಧದ ಆರೋಪಗಳನ್ನು ಹೊತ್ತಿದ್ದರೆ, ಅದನ್ನು ‘ಘೋರ ಅಥವಾ ಗಂಭೀರ’ ಎಂದು ಪರಿಗಣಿಸಲಾಗುತ್ತದೆ.

ಐಪಿಸಿ  ಸೆಕ್ಷನ್ 304 ರ ಪ್ರಕಾರ ಗರಿಷ್ಠ 10 ವರ್ಷ ಶಿಕ್ಷೆ ವಿಧಿಸಲಾಗಿದ್ದರೂ, ಅದು ಕನಿಷ್ಠ ಶಿಕ್ಷೆಯನ್ನು ಸೂಚಿಸುವುದಿಲ್ಲ, ಆದ್ದರಿಂದ ಬಾಲಕಿ ಜಾಮೀನು ಪಡೆಯಲು ಅರ್ಹಳಾಗಿದ್ದಳು.

ಬಾಲಕಿ ಪ್ರಸ್ತುತ ತನ್ನ ಕುಟುಂಬಕ್ಕೆ ಮರಳಿದ್ದಾಳೆ. ಆಕೆಯ ಅಜ್ಜಿ ಮತ್ತು ಚಿಕ್ಕಪ್ಪ ಅವರೊಂದಿಗೆ ಇರಲು ಬೆಂಗಳೂರಿನಲ್ಲಿದ್ದಾಳೆ. ಈ ನಡುವೆ ಆಕೆಯ ವಿರುದ್ಧದ ಪ್ರಕರಣಕ್ಕೆ ಸೆಕ್ಷನ್ 100 (ಆತ್ಮರಕ್ಷಣೆ) ಸೇರಿಸಬಹುದೇ ಎಂದು ಪೊಲೀಸರು ಇನ್ನೂ ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

ಘಟನೆಯ ವಿವರ

ಜುಲೈ 22 ರಂದು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಕುಟುಂಬವು ಈ ಹಿಂದೆ ತಿಳಿಸಿತ್ತು. ಬಾಲಕಿಯು ಪ್ರತಿನಿತ್ಯ ಅತಿಯಾಗಿ ಕುಡಿಯುತ್ತಿದ್ದ ತನ್ನ ತಂದೆಗೆ ಬುದ್ಧಿ ಹೇಳಲು ಪ್ರಯತ್ನಿಸಿದ್ದಳು. ತನ್ನ ಅಧ್ಯಯನಕ್ಕೆ ತೊಂದರೆಯಾಗುವಂತೆ ಜೋರಾಗಿ ಪಿಯಾನೋ ನುಡಿಸಬಾರದೆಂದು ಹೇಳಿದ್ದಳು ಎನ್ನಲಾಗಿದೆ.

ಇದರಿಂದ ಕೋಪಗೊಂಡು ಆಕೆಯ ತಂದೆ ಯುವತಿಯನ್ನು ಹೊಡೆದು ಆಕ್ರಮಣ ಮಾಡಲು ಪ್ರಯತ್ನಿಸಿದನು. ನಂತರ ತೀಕ್ಷ್ಣವಾದ ವಸ್ತುವನ್ನು ಎತ್ತಿಕೊಂಡನು. ತನ್ನನ್ನು ರಕ್ಷಿಸಿಕೊಳ್ಳಲು ಹುಡುಗಿ ಕೈಗೆ ಸಿಕ್ಕ ಕತ್ತರಿಗಳನ್ನು ತೆಗೆದುಕೊಂಡು ಚುಚ್ಚಿದ್ದಾಳೆ ಎಂದು ಕುಟುಂಬ ಹೇಳಿದೆ.

ಮತ್ತೊಂದು ಕೋಣೆಯಲ್ಲಿದ್ದ ಹುಡುಗಿಯ ಕಿರಿಯ ಸಹೋದರ ನೆರೆಹೊರೆಯವರನ್ನು ಕರೆತರಲು ಓಡಿಹೋದನು. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ತಂದೆ ಕುಡಿಯುತ್ತಿದ್ದರು, ಆಗಾಗ್ಗೆ ಹಿಂಸೆ ನಿಡುತ್ತಿದ್ದರು. ಕೆಲವು ವರ್ಷಗಳ ಹಿಂದೆ ನಮ್ಮ ತಾಯಿಯ ಮರಣದ ನಂತರ ಹೀಗೆ ಮಾಡುತ್ತಿದ್ದರು ಎಂದು ಕುಟುಂಬವು ತಿಳಿಸಿದೆ.

“ಅವನು ತುಂಬಾ ಓದಿದ್ದ ಮತ್ತು ಬುದ್ಧಿವಂತ. ಐಟಿ ಮೇಜರ್‌ನಲ್ಲಿ 12 ವರ್ಷಗಳ ಕಾಲ ಕೆಲಸ ಮಾಡಿದ ನಂತರ ಕೆಲಸ ಬಿಟ್ಟಿದ್ದ. 2011 ರ ಸುಮಾರಿಗೆ ಅವರ ಪತ್ನಿ ಎರಡನೇ ಮಗುವಿಗೆ ಜನ್ಮ ನಿಡಿದ್ದಳು. ಮಗುವಿಗೆ ಹತ್ತು ದಿನಗಳಿದ್ದಾಗ, ತಾಯಿ ತೀರಿಕೊಂಡಳು. ಇದು ಆತನ ಜೀವನದಲ್ಲಿ ಮಹತ್ವದ ತಿರುವು ಎಂದು ಸಂಬಂಧಿಯೊಬ್ಬರು ಹೇಳಿದ್ದಾರೆ.

ನೆರೆಹೊರೆಯವರು ತಮ್ಮ ಹೇಳಿಕೆಯಲ್ಲಿ ಇಬ್ಬರು ಮಕ್ಕಳು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹಾಗಾಗಿ ಸಹಾನುಭೂತಿಯ ದೃಷ್ಟಿಕೋನದಿಂದ ಕ್ರಮ ತೆಗೆದುಕೊಳ್ಳಬೇಕು ಎಂದು ಉಲ್ಲೇಖಿಸಿದ್ದಾರೆ.


ಇದನ್ನೂ ಓದಿ: ವಾಡಿಕೆಯ ಆರೋಗ್ಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...