Homeಮುಖಪುಟಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

ಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

- Advertisement -
- Advertisement -

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಮತ್ತೆ ಸಿನಿಪ್ರಿಯರಿಗಾಗಿ ಮತ್ತೆ ಓಪನ್ ಆಗಿವೆ. ಆದರೆ ಹೊಸ ಚಿತ್ರಗಳನ್ನು ಥಿಯೇಟರ್‌ಗಳಿಗೆ ಬಿಡುಗಡೆ ಮಾಡಲು ಚಿತ್ರತಂಡಗಳು ಅಷ್ಟೊಂದು ಧೈರ್ಯವಹಿಸುತ್ತಿಲ್ಲ. ಇದರ ಕಾರಣ ಹಳೆಯ ಬ್ಲಾಕ್‌ ಬ್ಲಾಸ್ಟರ್‌ ಚಿತ್ರಗಳನ್ನೇ ರಿರಿಲೀಸ್ ಮಾಡಲು ಹೊರಟಿವೆ.

ಚಿತ್ರಮಂದಿರಗಳಿಗೆ ಹೋಗುವ ಜನರು ಕಡಿಮೆಯಾಗಿದ್ದಾರೆ. ಚಿತ್ರಮಂದಿರ ಓಪನ್ ಇದ್ದರೂ ಕೊರೊನಾ ಆತಂಕ ಇನ್ನು ಜನರನ್ನು ಬಿಟ್ಟಿಲ್ಲ. ಕೆಲವು ಸಿನಿಮಾ ನಿರ್ದೇಶಕರು ಮಾತ್ರ ತಮ್ಮ ಚಿತ್ರಗಳು ಜನರನ್ನು ಚಿತ್ರಮಂದಿರದತ್ತ ಸೆಳೆಯುತ್ತವೆ ಎಂಬ ಭರವಸೆಯಲ್ಲಿ ಚಿತ್ರ ಬಿಡುಗಡೆಗೆ ಸಿದ್ಧರಾಗಿದ್ದಾರೆ.

ಭಾರತೀಯ ಚಿತ್ರರಂಗವೇ ದಕ್ಷಿಣ ಭಾರತದ ಸಿನಿ ರಂಗದ ಕಡೆ ತಿರುಗುವಂತೆ ಮಾಡಿದ ಚಿತ್ರ ಎಂದರೆ ಎಸ್​.ಎಸ್​ ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಸಿನಿಮಾಗಳು. 2015 ರಲ್ಲಿ ರಿಲೀಸ್ ಆಗಿದ್ದ ಬಾಹುಬಲಿ-ದಿ ಬಿಗಿನ್ನಿಂಗ್ ಹಾಗೂ 2017 ರಲ್ಲಿ ಅದರ ಮುಂದುವರಿದ ಭಾಗವಾಗಿ ಬಂದ ಬಾಹುಬಲಿ-ದಿ ಕನ್​ಕ್ಲೂಷನ್ ಸಿನಿಮಾ ಸೂಪರ್‌ ಹಿಟ್ ಆಗಿದ್ದವು.

ಇದನ್ನೂ ಓದಿ: ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ಈ ಸಿನಿಮಾಗಳನ್ನು ದೊಡ್ಡಪರದೆಯಲ್ಲಿ ಮಿಸ್ ಮಾಡಿಕೊಂಡವರಿಗಾಗಿ ಮತ್ತೆ ಸಿನಿಮಾ ನೋಡುವ ಅವಕಾಶ ಬರುತ್ತಿದೆ. ಇವತ್ತು ಬಾಹುಬಲಿ-ದಿ ಬಿಗಿನ್ನಿಂಗ್ ಮತ್ತೆ ರಿಲೀಸ್ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿದೆ. ಬಾಹುಬಲಿ-ದಿ ಕನ್​ಕ್ಲೂಷನ್ ಮುಂದಿನ ಶುಕ್ರವಾರ ಅಂದರೆ ನವೆಂಬರ್​ 13 ರಂದು ರೀ ರಿಲೀಸ್​ ಆಗಲಿವೆ. ಬಾಲಿವುಡ್​ ಟ್ರೇಡ್​ ಅನಲಿಸ್ಟ್​ ತರಣ್​ ಆದರ್ಶ್​ ಈ ವಿಚಾರವನ್ನ ಟ್ವಿಟರ್​​ನಲ್ಲಿ ತಿಳಿಸಿದ್ದಾರೆ

ನಟ ಪ್ರಭಾಸ್​, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣ ಮುಂತಾದ ಸ್ಟಾರ್​ ನಟ ನಟಿಯರು ಅಭಿನಯಿಸಿದ್ದ ಈ ಸಿನಿಮಾ ಭಾರತದ ಜೊತೆಗೆ ವಿದೇಶಗಳಲ್ಲೂ ತೆರೆ ಕಂಡಿತ್ತು. ಅಲ್ಲದೆ ಅಂತರಾಷ್ಟ್ರೀಯ ಫಿಲ್ಮ್​​​ ಫೆಸ್ಟ್​​​ಗಳಾದ ಬ್ರಿಟಿಷ್​ ಫಿಲ್ಮ್​​ ಇನ್ಸ್​​ಟಿಟ್ಯೂಟ್​ ಹಾಗೂ 39 ನೇ ಮಸ್ಕೋ ಇಂಟರ್‌ನ್ಯಾಷನಲ್​ ಫಿಲ್ಮ್​​ ಫೆಸ್ಟಿವಲ್​ನಲ್ಲೂ ಉತ್ತಮ ಪ್ರದರ್ಶನ ಕಂಡಿತ್ತು.

ಇನ್ನು ನಟ, ನಿರ್ದೇಶಕ ರಿಷಬ್​ ಶೆಟ್ಟಿ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿ ಬಂದು ಸಾಕಷ್ಟು ಮೆಚ್ಚುಗೆ ಗಳಿಸಿದ್ದ, ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮತ್ತೆ ಸಿನಿಮಾ ಥಿಯೇಟರ್‌ಗಳಿಗೆ ಲಗ್ಗೆ ಇಟ್ಟಿದೆ.

PC:Rishabshettyfilms@Instagram

2018 ರ ಆಗಸ್ಟ್​ನಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ 125 ದಿನಗಳ ಭರ್ಜರಿ ಪ್ರದರ್ಶನ ಕಂಡಿತ್ತು. ಸಾಕಷ್ಟು ಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದ್ದ ಚಿತ್ರ ಮಕ್ಕಳು-ಹಿರಿಯರು ಎಲ್ಲರ ಮನಸ್ಸನ್ನು ಗೆದ್ದುಕೊಂಡಿತ್ತು.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....