Homeಮುಖಪುಟಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

ಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

- Advertisement -
- Advertisement -

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಮತ್ತೆ ಸಿನಿಪ್ರಿಯರಿಗಾಗಿ ಮತ್ತೆ ಓಪನ್ ಆಗಿವೆ. ಆದರೆ ಹೊಸ ಚಿತ್ರಗಳನ್ನು ಥಿಯೇಟರ್‌ಗಳಿಗೆ ಬಿಡುಗಡೆ ಮಾಡಲು ಚಿತ್ರತಂಡಗಳು ಅಷ್ಟೊಂದು ಧೈರ್ಯವಹಿಸುತ್ತಿಲ್ಲ. ಇದರ ಕಾರಣ ಹಳೆಯ ಬ್ಲಾಕ್‌ ಬ್ಲಾಸ್ಟರ್‌ ಚಿತ್ರಗಳನ್ನೇ ರಿರಿಲೀಸ್ ಮಾಡಲು ಹೊರಟಿವೆ.

ಚಿತ್ರಮಂದಿರಗಳಿಗೆ ಹೋಗುವ ಜನರು ಕಡಿಮೆಯಾಗಿದ್ದಾರೆ. ಚಿತ್ರಮಂದಿರ ಓಪನ್ ಇದ್ದರೂ ಕೊರೊನಾ ಆತಂಕ ಇನ್ನು ಜನರನ್ನು ಬಿಟ್ಟಿಲ್ಲ. ಕೆಲವು ಸಿನಿಮಾ ನಿರ್ದೇಶಕರು ಮಾತ್ರ ತಮ್ಮ ಚಿತ್ರಗಳು ಜನರನ್ನು ಚಿತ್ರಮಂದಿರದತ್ತ ಸೆಳೆಯುತ್ತವೆ ಎಂಬ ಭರವಸೆಯಲ್ಲಿ ಚಿತ್ರ ಬಿಡುಗಡೆಗೆ ಸಿದ್ಧರಾಗಿದ್ದಾರೆ.

ಭಾರತೀಯ ಚಿತ್ರರಂಗವೇ ದಕ್ಷಿಣ ಭಾರತದ ಸಿನಿ ರಂಗದ ಕಡೆ ತಿರುಗುವಂತೆ ಮಾಡಿದ ಚಿತ್ರ ಎಂದರೆ ಎಸ್​.ಎಸ್​ ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಸಿನಿಮಾಗಳು. 2015 ರಲ್ಲಿ ರಿಲೀಸ್ ಆಗಿದ್ದ ಬಾಹುಬಲಿ-ದಿ ಬಿಗಿನ್ನಿಂಗ್ ಹಾಗೂ 2017 ರಲ್ಲಿ ಅದರ ಮುಂದುವರಿದ ಭಾಗವಾಗಿ ಬಂದ ಬಾಹುಬಲಿ-ದಿ ಕನ್​ಕ್ಲೂಷನ್ ಸಿನಿಮಾ ಸೂಪರ್‌ ಹಿಟ್ ಆಗಿದ್ದವು.

ಇದನ್ನೂ ಓದಿ: ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ಈ ಸಿನಿಮಾಗಳನ್ನು ದೊಡ್ಡಪರದೆಯಲ್ಲಿ ಮಿಸ್ ಮಾಡಿಕೊಂಡವರಿಗಾಗಿ ಮತ್ತೆ ಸಿನಿಮಾ ನೋಡುವ ಅವಕಾಶ ಬರುತ್ತಿದೆ. ಇವತ್ತು ಬಾಹುಬಲಿ-ದಿ ಬಿಗಿನ್ನಿಂಗ್ ಮತ್ತೆ ರಿಲೀಸ್ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿದೆ. ಬಾಹುಬಲಿ-ದಿ ಕನ್​ಕ್ಲೂಷನ್ ಮುಂದಿನ ಶುಕ್ರವಾರ ಅಂದರೆ ನವೆಂಬರ್​ 13 ರಂದು ರೀ ರಿಲೀಸ್​ ಆಗಲಿವೆ. ಬಾಲಿವುಡ್​ ಟ್ರೇಡ್​ ಅನಲಿಸ್ಟ್​ ತರಣ್​ ಆದರ್ಶ್​ ಈ ವಿಚಾರವನ್ನ ಟ್ವಿಟರ್​​ನಲ್ಲಿ ತಿಳಿಸಿದ್ದಾರೆ

ನಟ ಪ್ರಭಾಸ್​, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣ ಮುಂತಾದ ಸ್ಟಾರ್​ ನಟ ನಟಿಯರು ಅಭಿನಯಿಸಿದ್ದ ಈ ಸಿನಿಮಾ ಭಾರತದ ಜೊತೆಗೆ ವಿದೇಶಗಳಲ್ಲೂ ತೆರೆ ಕಂಡಿತ್ತು. ಅಲ್ಲದೆ ಅಂತರಾಷ್ಟ್ರೀಯ ಫಿಲ್ಮ್​​​ ಫೆಸ್ಟ್​​​ಗಳಾದ ಬ್ರಿಟಿಷ್​ ಫಿಲ್ಮ್​​ ಇನ್ಸ್​​ಟಿಟ್ಯೂಟ್​ ಹಾಗೂ 39 ನೇ ಮಸ್ಕೋ ಇಂಟರ್‌ನ್ಯಾಷನಲ್​ ಫಿಲ್ಮ್​​ ಫೆಸ್ಟಿವಲ್​ನಲ್ಲೂ ಉತ್ತಮ ಪ್ರದರ್ಶನ ಕಂಡಿತ್ತು.

ಇನ್ನು ನಟ, ನಿರ್ದೇಶಕ ರಿಷಬ್​ ಶೆಟ್ಟಿ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿ ಬಂದು ಸಾಕಷ್ಟು ಮೆಚ್ಚುಗೆ ಗಳಿಸಿದ್ದ, ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮತ್ತೆ ಸಿನಿಮಾ ಥಿಯೇಟರ್‌ಗಳಿಗೆ ಲಗ್ಗೆ ಇಟ್ಟಿದೆ.

PC:Rishabshettyfilms@Instagram

2018 ರ ಆಗಸ್ಟ್​ನಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ 125 ದಿನಗಳ ಭರ್ಜರಿ ಪ್ರದರ್ಶನ ಕಂಡಿತ್ತು. ಸಾಕಷ್ಟು ಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದ್ದ ಚಿತ್ರ ಮಕ್ಕಳು-ಹಿರಿಯರು ಎಲ್ಲರ ಮನಸ್ಸನ್ನು ಗೆದ್ದುಕೊಂಡಿತ್ತು.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...