Homeಮುಖಪುಟಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

ಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

- Advertisement -
- Advertisement -

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಮತ್ತೆ ಸಿನಿಪ್ರಿಯರಿಗಾಗಿ ಮತ್ತೆ ಓಪನ್ ಆಗಿವೆ. ಆದರೆ ಹೊಸ ಚಿತ್ರಗಳನ್ನು ಥಿಯೇಟರ್‌ಗಳಿಗೆ ಬಿಡುಗಡೆ ಮಾಡಲು ಚಿತ್ರತಂಡಗಳು ಅಷ್ಟೊಂದು ಧೈರ್ಯವಹಿಸುತ್ತಿಲ್ಲ. ಇದರ ಕಾರಣ ಹಳೆಯ ಬ್ಲಾಕ್‌ ಬ್ಲಾಸ್ಟರ್‌ ಚಿತ್ರಗಳನ್ನೇ ರಿರಿಲೀಸ್ ಮಾಡಲು ಹೊರಟಿವೆ.

ಚಿತ್ರಮಂದಿರಗಳಿಗೆ ಹೋಗುವ ಜನರು ಕಡಿಮೆಯಾಗಿದ್ದಾರೆ. ಚಿತ್ರಮಂದಿರ ಓಪನ್ ಇದ್ದರೂ ಕೊರೊನಾ ಆತಂಕ ಇನ್ನು ಜನರನ್ನು ಬಿಟ್ಟಿಲ್ಲ. ಕೆಲವು ಸಿನಿಮಾ ನಿರ್ದೇಶಕರು ಮಾತ್ರ ತಮ್ಮ ಚಿತ್ರಗಳು ಜನರನ್ನು ಚಿತ್ರಮಂದಿರದತ್ತ ಸೆಳೆಯುತ್ತವೆ ಎಂಬ ಭರವಸೆಯಲ್ಲಿ ಚಿತ್ರ ಬಿಡುಗಡೆಗೆ ಸಿದ್ಧರಾಗಿದ್ದಾರೆ.

ಭಾರತೀಯ ಚಿತ್ರರಂಗವೇ ದಕ್ಷಿಣ ಭಾರತದ ಸಿನಿ ರಂಗದ ಕಡೆ ತಿರುಗುವಂತೆ ಮಾಡಿದ ಚಿತ್ರ ಎಂದರೆ ಎಸ್​.ಎಸ್​ ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಸಿನಿಮಾಗಳು. 2015 ರಲ್ಲಿ ರಿಲೀಸ್ ಆಗಿದ್ದ ಬಾಹುಬಲಿ-ದಿ ಬಿಗಿನ್ನಿಂಗ್ ಹಾಗೂ 2017 ರಲ್ಲಿ ಅದರ ಮುಂದುವರಿದ ಭಾಗವಾಗಿ ಬಂದ ಬಾಹುಬಲಿ-ದಿ ಕನ್​ಕ್ಲೂಷನ್ ಸಿನಿಮಾ ಸೂಪರ್‌ ಹಿಟ್ ಆಗಿದ್ದವು.

ಇದನ್ನೂ ಓದಿ: ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ಈ ಸಿನಿಮಾಗಳನ್ನು ದೊಡ್ಡಪರದೆಯಲ್ಲಿ ಮಿಸ್ ಮಾಡಿಕೊಂಡವರಿಗಾಗಿ ಮತ್ತೆ ಸಿನಿಮಾ ನೋಡುವ ಅವಕಾಶ ಬರುತ್ತಿದೆ. ಇವತ್ತು ಬಾಹುಬಲಿ-ದಿ ಬಿಗಿನ್ನಿಂಗ್ ಮತ್ತೆ ರಿಲೀಸ್ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿದೆ. ಬಾಹುಬಲಿ-ದಿ ಕನ್​ಕ್ಲೂಷನ್ ಮುಂದಿನ ಶುಕ್ರವಾರ ಅಂದರೆ ನವೆಂಬರ್​ 13 ರಂದು ರೀ ರಿಲೀಸ್​ ಆಗಲಿವೆ. ಬಾಲಿವುಡ್​ ಟ್ರೇಡ್​ ಅನಲಿಸ್ಟ್​ ತರಣ್​ ಆದರ್ಶ್​ ಈ ವಿಚಾರವನ್ನ ಟ್ವಿಟರ್​​ನಲ್ಲಿ ತಿಳಿಸಿದ್ದಾರೆ

ನಟ ಪ್ರಭಾಸ್​, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣ ಮುಂತಾದ ಸ್ಟಾರ್​ ನಟ ನಟಿಯರು ಅಭಿನಯಿಸಿದ್ದ ಈ ಸಿನಿಮಾ ಭಾರತದ ಜೊತೆಗೆ ವಿದೇಶಗಳಲ್ಲೂ ತೆರೆ ಕಂಡಿತ್ತು. ಅಲ್ಲದೆ ಅಂತರಾಷ್ಟ್ರೀಯ ಫಿಲ್ಮ್​​​ ಫೆಸ್ಟ್​​​ಗಳಾದ ಬ್ರಿಟಿಷ್​ ಫಿಲ್ಮ್​​ ಇನ್ಸ್​​ಟಿಟ್ಯೂಟ್​ ಹಾಗೂ 39 ನೇ ಮಸ್ಕೋ ಇಂಟರ್‌ನ್ಯಾಷನಲ್​ ಫಿಲ್ಮ್​​ ಫೆಸ್ಟಿವಲ್​ನಲ್ಲೂ ಉತ್ತಮ ಪ್ರದರ್ಶನ ಕಂಡಿತ್ತು.

ಇನ್ನು ನಟ, ನಿರ್ದೇಶಕ ರಿಷಬ್​ ಶೆಟ್ಟಿ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿ ಬಂದು ಸಾಕಷ್ಟು ಮೆಚ್ಚುಗೆ ಗಳಿಸಿದ್ದ, ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮತ್ತೆ ಸಿನಿಮಾ ಥಿಯೇಟರ್‌ಗಳಿಗೆ ಲಗ್ಗೆ ಇಟ್ಟಿದೆ.

PC:Rishabshettyfilms@Instagram

2018 ರ ಆಗಸ್ಟ್​ನಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ 125 ದಿನಗಳ ಭರ್ಜರಿ ಪ್ರದರ್ಶನ ಕಂಡಿತ್ತು. ಸಾಕಷ್ಟು ಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದ್ದ ಚಿತ್ರ ಮಕ್ಕಳು-ಹಿರಿಯರು ಎಲ್ಲರ ಮನಸ್ಸನ್ನು ಗೆದ್ದುಕೊಂಡಿತ್ತು.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...