Homeಮುಖಪುಟಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

ಮತ್ತೆ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿವೆ ನಿಮ್ಮ ನೆಚ್ಚಿನ ಚಲನಚಿತ್ರಗಳು!

- Advertisement -
- Advertisement -

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಮತ್ತೆ ಸಿನಿಪ್ರಿಯರಿಗಾಗಿ ಮತ್ತೆ ಓಪನ್ ಆಗಿವೆ. ಆದರೆ ಹೊಸ ಚಿತ್ರಗಳನ್ನು ಥಿಯೇಟರ್‌ಗಳಿಗೆ ಬಿಡುಗಡೆ ಮಾಡಲು ಚಿತ್ರತಂಡಗಳು ಅಷ್ಟೊಂದು ಧೈರ್ಯವಹಿಸುತ್ತಿಲ್ಲ. ಇದರ ಕಾರಣ ಹಳೆಯ ಬ್ಲಾಕ್‌ ಬ್ಲಾಸ್ಟರ್‌ ಚಿತ್ರಗಳನ್ನೇ ರಿರಿಲೀಸ್ ಮಾಡಲು ಹೊರಟಿವೆ.

ಚಿತ್ರಮಂದಿರಗಳಿಗೆ ಹೋಗುವ ಜನರು ಕಡಿಮೆಯಾಗಿದ್ದಾರೆ. ಚಿತ್ರಮಂದಿರ ಓಪನ್ ಇದ್ದರೂ ಕೊರೊನಾ ಆತಂಕ ಇನ್ನು ಜನರನ್ನು ಬಿಟ್ಟಿಲ್ಲ. ಕೆಲವು ಸಿನಿಮಾ ನಿರ್ದೇಶಕರು ಮಾತ್ರ ತಮ್ಮ ಚಿತ್ರಗಳು ಜನರನ್ನು ಚಿತ್ರಮಂದಿರದತ್ತ ಸೆಳೆಯುತ್ತವೆ ಎಂಬ ಭರವಸೆಯಲ್ಲಿ ಚಿತ್ರ ಬಿಡುಗಡೆಗೆ ಸಿದ್ಧರಾಗಿದ್ದಾರೆ.

ಭಾರತೀಯ ಚಿತ್ರರಂಗವೇ ದಕ್ಷಿಣ ಭಾರತದ ಸಿನಿ ರಂಗದ ಕಡೆ ತಿರುಗುವಂತೆ ಮಾಡಿದ ಚಿತ್ರ ಎಂದರೆ ಎಸ್​.ಎಸ್​ ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಸಿನಿಮಾಗಳು. 2015 ರಲ್ಲಿ ರಿಲೀಸ್ ಆಗಿದ್ದ ಬಾಹುಬಲಿ-ದಿ ಬಿಗಿನ್ನಿಂಗ್ ಹಾಗೂ 2017 ರಲ್ಲಿ ಅದರ ಮುಂದುವರಿದ ಭಾಗವಾಗಿ ಬಂದ ಬಾಹುಬಲಿ-ದಿ ಕನ್​ಕ್ಲೂಷನ್ ಸಿನಿಮಾ ಸೂಪರ್‌ ಹಿಟ್ ಆಗಿದ್ದವು.

ಇದನ್ನೂ ಓದಿ: ತೆಲುಗು, ತಮಿಳು ಚಿತ್ರರಂಗದಲ್ಲಿ ಯಶಕಂಡ ಫ್ಯಾಂಟಸಿ ಸಿನಿಮಾಗಳ ನಿರ್ದೇಶಕ, ಕನ್ನಡಿಗ ವಿಠಲಾಚಾರ್ಯ

ಈ ಸಿನಿಮಾಗಳನ್ನು ದೊಡ್ಡಪರದೆಯಲ್ಲಿ ಮಿಸ್ ಮಾಡಿಕೊಂಡವರಿಗಾಗಿ ಮತ್ತೆ ಸಿನಿಮಾ ನೋಡುವ ಅವಕಾಶ ಬರುತ್ತಿದೆ. ಇವತ್ತು ಬಾಹುಬಲಿ-ದಿ ಬಿಗಿನ್ನಿಂಗ್ ಮತ್ತೆ ರಿಲೀಸ್ ಥಿಯೇಟರ್‌ಗಳಿಗೆ ಲಗ್ಗೆ ಇಡುತ್ತಿದೆ. ಬಾಹುಬಲಿ-ದಿ ಕನ್​ಕ್ಲೂಷನ್ ಮುಂದಿನ ಶುಕ್ರವಾರ ಅಂದರೆ ನವೆಂಬರ್​ 13 ರಂದು ರೀ ರಿಲೀಸ್​ ಆಗಲಿವೆ. ಬಾಲಿವುಡ್​ ಟ್ರೇಡ್​ ಅನಲಿಸ್ಟ್​ ತರಣ್​ ಆದರ್ಶ್​ ಈ ವಿಚಾರವನ್ನ ಟ್ವಿಟರ್​​ನಲ್ಲಿ ತಿಳಿಸಿದ್ದಾರೆ

ನಟ ಪ್ರಭಾಸ್​, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣ ಮುಂತಾದ ಸ್ಟಾರ್​ ನಟ ನಟಿಯರು ಅಭಿನಯಿಸಿದ್ದ ಈ ಸಿನಿಮಾ ಭಾರತದ ಜೊತೆಗೆ ವಿದೇಶಗಳಲ್ಲೂ ತೆರೆ ಕಂಡಿತ್ತು. ಅಲ್ಲದೆ ಅಂತರಾಷ್ಟ್ರೀಯ ಫಿಲ್ಮ್​​​ ಫೆಸ್ಟ್​​​ಗಳಾದ ಬ್ರಿಟಿಷ್​ ಫಿಲ್ಮ್​​ ಇನ್ಸ್​​ಟಿಟ್ಯೂಟ್​ ಹಾಗೂ 39 ನೇ ಮಸ್ಕೋ ಇಂಟರ್‌ನ್ಯಾಷನಲ್​ ಫಿಲ್ಮ್​​ ಫೆಸ್ಟಿವಲ್​ನಲ್ಲೂ ಉತ್ತಮ ಪ್ರದರ್ಶನ ಕಂಡಿತ್ತು.

ಇನ್ನು ನಟ, ನಿರ್ದೇಶಕ ರಿಷಬ್​ ಶೆಟ್ಟಿ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿ ಬಂದು ಸಾಕಷ್ಟು ಮೆಚ್ಚುಗೆ ಗಳಿಸಿದ್ದ, ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮತ್ತೆ ಸಿನಿಮಾ ಥಿಯೇಟರ್‌ಗಳಿಗೆ ಲಗ್ಗೆ ಇಟ್ಟಿದೆ.

PC:Rishabshettyfilms@Instagram

2018 ರ ಆಗಸ್ಟ್​ನಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ 125 ದಿನಗಳ ಭರ್ಜರಿ ಪ್ರದರ್ಶನ ಕಂಡಿತ್ತು. ಸಾಕಷ್ಟು ಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದ್ದ ಚಿತ್ರ ಮಕ್ಕಳು-ಹಿರಿಯರು ಎಲ್ಲರ ಮನಸ್ಸನ್ನು ಗೆದ್ದುಕೊಂಡಿತ್ತು.


ಇದನ್ನೂ ಓದಿ: ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...