Homeಮುಖಪುಟನಿಮ್ಮ ಕೈಕಾಲುಗಳು ಮುರಿಯುತ್ತವೆ; ಕೊಲೆಯಾಗುತ್ತೀರಿ: ಬಿಜೆಪಿ ರಾಜ್ಯಾಧ್ಯಕ್ಷನಿಂದ ಬೆದರಿಕೆ

ನಿಮ್ಮ ಕೈಕಾಲುಗಳು ಮುರಿಯುತ್ತವೆ; ಕೊಲೆಯಾಗುತ್ತೀರಿ: ಬಿಜೆಪಿ ರಾಜ್ಯಾಧ್ಯಕ್ಷನಿಂದ ಬೆದರಿಕೆ

ಬಿಹಾರದಲ್ಲಿ ಲಾಲು ರಾಜ್ ಇದ್ದಾಗ, ಜಂಗಲ್ ರಾಜ್ ಇದ್ದವು, ಆಗ ಅಲ್ಲಿ ದಿನವು ಹಿಂಸಾಚಾರ ನಡೆಯುತ್ತಿತ್ತು. ಆದರೆ ನಾವು ಆ ಗೂಂಡಾಗಳನ್ನು ಓಡಿಸಿದ್ದೇವೆ, ಇದನ್ನೇ ಬಿಜೆಪಿ ರಾಜ್ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.

- Advertisement -
- Advertisement -

ಮಮತಾ ಬ್ಯಾನರ್ಜಿ ಬೆಂಬಲಿಗರು ತಮ್ಮ ನಡೆಗಳನ್ನು ಸರಿಪಡಿಸಿಕೊಳ್ಳಬೇಕು ಇಲ್ಲವೆಂದರೆ ಅವರ ಕೈ ಕಾಲುಗಳು ಮುರಿದು ಹೋಗುವ ಇಲ್ಲವೆಂದರೆ, ಕೊಲೆಯಾಗುವ ಅಪಾಯವಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ ನಿನ್ನೆ ವಿವಾದಾತ್ಮಕ ಎಚ್ಚರಿಕೆ ನೀಡಿದ್ದಾರೆ.

“ತೊಂದರೆ ಸೃಷ್ಟಿಸುತ್ತಿರುವ ದೀದಿ ಸಹೋದರರು ಮುಂದಿನ ಆರು ತಿಂಗಳಲ್ಲಿ ತಮ್ಮ ಅಭ್ಯಾಸವನ್ನು ಬದಲಾಯಿಸಿಕೊಳ್ಳಬೇಕು ಇಲ್ಲದಿದ್ದರೆ ನಿಮ್ಮ ತಲೆ, ತೋಳು, ಕಾಲು ಹಾಗೂ ಪಕ್ಕೆಲುಬು ಮುರಿದುಹೋಗುತ್ತದೆ. ನೀವು ಆಸ್ಪತ್ರೆಗೆ ಸೇರಬೇಕಾಗುತ್ತದೆ. ಅದಕ್ಕಿಂತ ಹೆಚ್ಚಿನದನ್ನು ಮಾಡಿದರೆ ಶ್ಮಶಾನಕ್ಕೆ ಹೋಗಬೇಕಾಗುತ್ತದೆ ” ಎಂದು ಅವರು ಹಲ್ಡಿಯಾದಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ತೃಣಮೂಲ ಸರ್ಕಾರದ ಕೊನೆಯ ದಿನಗಳನ್ನು ಎಣಿಸಲಾಗುತ್ತಿದೆ ಎಂದಿರುವ ದಿಲೀಪ್ ಘೋಷ್, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಯುತ ವಿಧಾನಸಭಾ ಚುನಾವಣೆಯನ್ನು ಕೇಂದ್ರ ಪಡೆಗಳು ಖಚಿತಪಡಿಸುತ್ತವೆ ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಲಾಲು ರಾಜ್ ಇದ್ದಾಗ, ಜಂಗಲ್ ರಾಜ್ ಇದ್ದವು, ಆಗ ಅಲ್ಲಿ ದಿನವು ಹಿಂಸಾಚಾರ ನಡೆಯುತ್ತಿತ್ತು. ಆದರೆ ನಾವು ಆ ಗೂಂಡಾಗಳನ್ನು ಓಡಿಸಿದ್ದೇವೆ, ಇದನ್ನೇ ಬಿಜೆಪಿ ರಾಜ್ ಎಂದು ಕರೆಯಲಾಗುತ್ತದೆ. ನಾವು ಜಂಗಲ್ ರಾಜ್ ಅನ್ನು ಪ್ರಜಾಪ್ರಭುತ್ವಕ್ಕೆ ಬದಲಾಯಿಸಿದ್ದೇವೆ ಮತ್ತು ಪಶ್ಚಿಮ ಬಂಗಾಳದಲ್ಲಿಯೂ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುತ್ತೇವೆ” ಎಂದು ಹೇಳಿದ್ಧಾರೆ.

“ಮುಂಬರುವ ವಿಧಾನಸಭಾ ಚುನಾವಣೆ ದೀದಿ ಪೊಲೀಸರ ಅಡಿಯಲ್ಲಿ ನಡೆಯುವುದಿಲ್ಲ, ಬದಲಾಗಿ ದಾದಾ ಅವರ ಪೊಲೀಸರಿಂದ ಘೋಷಣೆಯಾಗಬೇಕೆಂದು ನಾನು ಬಯಸುತ್ತೇನೆ. ಖಾಕಿ ಧರಿಸಿದ ಪೊಲೀಸರು ಮಾವಿನ ಮರದ ಕೆಳಗೆ ಬೂತ್‌ಗಳಿಂದ ನೂರು ಮೀಟರ್ ದೂರದಲ್ಲಿ, ಕುರ್ಚಿಯ ಮೇಲೆ ಕುಳಿತು, ಖೈನಿ ಜಗಿಯುತ್ತಾ ಮತದಾನ ವೀಕ್ಷಿಸುತ್ತಾರೆ” ಎಂದು ದಿಲೀಪ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಎದುರಿಸಲು ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ತೀವ್ರ ಪೈಪೋಟಿ ನಡೆಸುತ್ತಿದೆ. ರಾಜಕೀಯ ಹಿಂಸಾಚಾರ ಮತ್ತು ಪರಸ್ಪರರ ಬೆಂಬಲಿಗರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಉಭಯ ಪಕ್ಷಗಳೂ ಪರಸ್ಪರ ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಇದಾಗಿ ಕಲವೇ ದಿನಗಳಲ್ಲಿ ದಿಲೀಪ್ ಘೋಷ್ ಹೇಳಿಕೆಗಳು ಹೊರಬಿದ್ದಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತುಕತೆ ನಡೆಸಲು ದಿಲೀಪ್ ಘೋಷ್ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಸೋಮವಾರ ದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ? 

ದಿಲೀಪ್‌ ಹೇಳಿಕೆಗೆ ಖಂಡನೆ

ಬಿಜೆಪಿ ರಾಜ್ಯಾಧ್ಯಕ್ಷರ ಬೆದರಿಕೆಯ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ ಖಂಡಿಸಿದ್ದು, ಅವರು ರಾಜ್ಯದ ರಾಜಕೀಯ ವಾತಾವರಣವನ್ನು ಕಳಂಕಗೊಳಿಸುತ್ತಿದ್ದಾರೆ ಎಂದು ಹೇಳಿದೆ ಎಂದು ಹೇಳಿದೆ.

ಹಿರಿಯ ತೃಣಮೂಲ ನಾಯಕ ಮತ್ತು ಸಂಸದರಾಗಿರುವ ಸುಗತ ರಾಯ್, “ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ತನ್ನ ಭಯೋತ್ಪಾದನಾ ಆಳ್ವಿಕೆಯನ್ನು ಬಹಿರಂಗಪಡಿಸಲು ಮತ್ತು ರಾಜ್ಯದ ರಾಜಕೀಯ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸುತ್ತಿದೆ ಎಂದು ಈ ಹೇಳಿಕೆಗಳು ಸೂಚಿಸುತ್ತವೆ. ರಾಜ್ಯದ ಜನರು ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಹೇಳಿಕೆಯನ್ನು ಖಂಡಿಸಿದ್ದು, “ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾರೂ ರಾಜಕೀಯ ಭಾಷಣವನ್ನು ಬೀದಿ ಗಲಾಟೆಯ ಮಟ್ಟಕ್ಕೆ ಅಥವಾ ಸಾಮಾನ್ಯ ಕೊಲೆಗಡುಕನ ಭಾಷೆಗೆ ಇಳಿಸಬಾರದು. ಇದಕ್ಕಿಂತ ಕೆಟ್ಟದ್ದೇನೆಂದರೆ, ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಇದನ್ನು ಮಾಡುತ್ತಿದ್ದಾರೆ!” ಎಂದಿದ್ದಾರೆ.

ಇದನ್ನೂ ಓದಿ: ‘ಡಬ್ಬಲ್ ಸ್ಟಾಂಡರ್ಡ್’ ಪ್ರಧಾನಿ: ಪಶ್ಚಿಮ ಬಂಗಾಳದ ಭೇಟಿಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...