Homeಮುಖಪುಟನಿಮ್ಮ ಕೈಕಾಲುಗಳು ಮುರಿಯುತ್ತವೆ; ಕೊಲೆಯಾಗುತ್ತೀರಿ: ಬಿಜೆಪಿ ರಾಜ್ಯಾಧ್ಯಕ್ಷನಿಂದ ಬೆದರಿಕೆ

ನಿಮ್ಮ ಕೈಕಾಲುಗಳು ಮುರಿಯುತ್ತವೆ; ಕೊಲೆಯಾಗುತ್ತೀರಿ: ಬಿಜೆಪಿ ರಾಜ್ಯಾಧ್ಯಕ್ಷನಿಂದ ಬೆದರಿಕೆ

ಬಿಹಾರದಲ್ಲಿ ಲಾಲು ರಾಜ್ ಇದ್ದಾಗ, ಜಂಗಲ್ ರಾಜ್ ಇದ್ದವು, ಆಗ ಅಲ್ಲಿ ದಿನವು ಹಿಂಸಾಚಾರ ನಡೆಯುತ್ತಿತ್ತು. ಆದರೆ ನಾವು ಆ ಗೂಂಡಾಗಳನ್ನು ಓಡಿಸಿದ್ದೇವೆ, ಇದನ್ನೇ ಬಿಜೆಪಿ ರಾಜ್ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.

- Advertisement -
- Advertisement -

ಮಮತಾ ಬ್ಯಾನರ್ಜಿ ಬೆಂಬಲಿಗರು ತಮ್ಮ ನಡೆಗಳನ್ನು ಸರಿಪಡಿಸಿಕೊಳ್ಳಬೇಕು ಇಲ್ಲವೆಂದರೆ ಅವರ ಕೈ ಕಾಲುಗಳು ಮುರಿದು ಹೋಗುವ ಇಲ್ಲವೆಂದರೆ, ಕೊಲೆಯಾಗುವ ಅಪಾಯವಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ ನಿನ್ನೆ ವಿವಾದಾತ್ಮಕ ಎಚ್ಚರಿಕೆ ನೀಡಿದ್ದಾರೆ.

“ತೊಂದರೆ ಸೃಷ್ಟಿಸುತ್ತಿರುವ ದೀದಿ ಸಹೋದರರು ಮುಂದಿನ ಆರು ತಿಂಗಳಲ್ಲಿ ತಮ್ಮ ಅಭ್ಯಾಸವನ್ನು ಬದಲಾಯಿಸಿಕೊಳ್ಳಬೇಕು ಇಲ್ಲದಿದ್ದರೆ ನಿಮ್ಮ ತಲೆ, ತೋಳು, ಕಾಲು ಹಾಗೂ ಪಕ್ಕೆಲುಬು ಮುರಿದುಹೋಗುತ್ತದೆ. ನೀವು ಆಸ್ಪತ್ರೆಗೆ ಸೇರಬೇಕಾಗುತ್ತದೆ. ಅದಕ್ಕಿಂತ ಹೆಚ್ಚಿನದನ್ನು ಮಾಡಿದರೆ ಶ್ಮಶಾನಕ್ಕೆ ಹೋಗಬೇಕಾಗುತ್ತದೆ ” ಎಂದು ಅವರು ಹಲ್ಡಿಯಾದಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ತೃಣಮೂಲ ಸರ್ಕಾರದ ಕೊನೆಯ ದಿನಗಳನ್ನು ಎಣಿಸಲಾಗುತ್ತಿದೆ ಎಂದಿರುವ ದಿಲೀಪ್ ಘೋಷ್, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಯುತ ವಿಧಾನಸಭಾ ಚುನಾವಣೆಯನ್ನು ಕೇಂದ್ರ ಪಡೆಗಳು ಖಚಿತಪಡಿಸುತ್ತವೆ ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಲಾಲು ರಾಜ್ ಇದ್ದಾಗ, ಜಂಗಲ್ ರಾಜ್ ಇದ್ದವು, ಆಗ ಅಲ್ಲಿ ದಿನವು ಹಿಂಸಾಚಾರ ನಡೆಯುತ್ತಿತ್ತು. ಆದರೆ ನಾವು ಆ ಗೂಂಡಾಗಳನ್ನು ಓಡಿಸಿದ್ದೇವೆ, ಇದನ್ನೇ ಬಿಜೆಪಿ ರಾಜ್ ಎಂದು ಕರೆಯಲಾಗುತ್ತದೆ. ನಾವು ಜಂಗಲ್ ರಾಜ್ ಅನ್ನು ಪ್ರಜಾಪ್ರಭುತ್ವಕ್ಕೆ ಬದಲಾಯಿಸಿದ್ದೇವೆ ಮತ್ತು ಪಶ್ಚಿಮ ಬಂಗಾಳದಲ್ಲಿಯೂ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುತ್ತೇವೆ” ಎಂದು ಹೇಳಿದ್ಧಾರೆ.

“ಮುಂಬರುವ ವಿಧಾನಸಭಾ ಚುನಾವಣೆ ದೀದಿ ಪೊಲೀಸರ ಅಡಿಯಲ್ಲಿ ನಡೆಯುವುದಿಲ್ಲ, ಬದಲಾಗಿ ದಾದಾ ಅವರ ಪೊಲೀಸರಿಂದ ಘೋಷಣೆಯಾಗಬೇಕೆಂದು ನಾನು ಬಯಸುತ್ತೇನೆ. ಖಾಕಿ ಧರಿಸಿದ ಪೊಲೀಸರು ಮಾವಿನ ಮರದ ಕೆಳಗೆ ಬೂತ್‌ಗಳಿಂದ ನೂರು ಮೀಟರ್ ದೂರದಲ್ಲಿ, ಕುರ್ಚಿಯ ಮೇಲೆ ಕುಳಿತು, ಖೈನಿ ಜಗಿಯುತ್ತಾ ಮತದಾನ ವೀಕ್ಷಿಸುತ್ತಾರೆ” ಎಂದು ದಿಲೀಪ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಎದುರಿಸಲು ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ತೀವ್ರ ಪೈಪೋಟಿ ನಡೆಸುತ್ತಿದೆ. ರಾಜಕೀಯ ಹಿಂಸಾಚಾರ ಮತ್ತು ಪರಸ್ಪರರ ಬೆಂಬಲಿಗರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಉಭಯ ಪಕ್ಷಗಳೂ ಪರಸ್ಪರ ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಇದಾಗಿ ಕಲವೇ ದಿನಗಳಲ್ಲಿ ದಿಲೀಪ್ ಘೋಷ್ ಹೇಳಿಕೆಗಳು ಹೊರಬಿದ್ದಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತುಕತೆ ನಡೆಸಲು ದಿಲೀಪ್ ಘೋಷ್ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಸೋಮವಾರ ದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ? 

ದಿಲೀಪ್‌ ಹೇಳಿಕೆಗೆ ಖಂಡನೆ

ಬಿಜೆಪಿ ರಾಜ್ಯಾಧ್ಯಕ್ಷರ ಬೆದರಿಕೆಯ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ ಖಂಡಿಸಿದ್ದು, ಅವರು ರಾಜ್ಯದ ರಾಜಕೀಯ ವಾತಾವರಣವನ್ನು ಕಳಂಕಗೊಳಿಸುತ್ತಿದ್ದಾರೆ ಎಂದು ಹೇಳಿದೆ ಎಂದು ಹೇಳಿದೆ.

ಹಿರಿಯ ತೃಣಮೂಲ ನಾಯಕ ಮತ್ತು ಸಂಸದರಾಗಿರುವ ಸುಗತ ರಾಯ್, “ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ತನ್ನ ಭಯೋತ್ಪಾದನಾ ಆಳ್ವಿಕೆಯನ್ನು ಬಹಿರಂಗಪಡಿಸಲು ಮತ್ತು ರಾಜ್ಯದ ರಾಜಕೀಯ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸುತ್ತಿದೆ ಎಂದು ಈ ಹೇಳಿಕೆಗಳು ಸೂಚಿಸುತ್ತವೆ. ರಾಜ್ಯದ ಜನರು ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಹೇಳಿಕೆಯನ್ನು ಖಂಡಿಸಿದ್ದು, “ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾರೂ ರಾಜಕೀಯ ಭಾಷಣವನ್ನು ಬೀದಿ ಗಲಾಟೆಯ ಮಟ್ಟಕ್ಕೆ ಅಥವಾ ಸಾಮಾನ್ಯ ಕೊಲೆಗಡುಕನ ಭಾಷೆಗೆ ಇಳಿಸಬಾರದು. ಇದಕ್ಕಿಂತ ಕೆಟ್ಟದ್ದೇನೆಂದರೆ, ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಇದನ್ನು ಮಾಡುತ್ತಿದ್ದಾರೆ!” ಎಂದಿದ್ದಾರೆ.

ಇದನ್ನೂ ಓದಿ: ‘ಡಬ್ಬಲ್ ಸ್ಟಾಂಡರ್ಡ್’ ಪ್ರಧಾನಿ: ಪಶ್ಚಿಮ ಬಂಗಾಳದ ಭೇಟಿಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...