Homeಮುಖಪುಟನಿಮ್ಮ ಕೈಕಾಲುಗಳು ಮುರಿಯುತ್ತವೆ; ಕೊಲೆಯಾಗುತ್ತೀರಿ: ಬಿಜೆಪಿ ರಾಜ್ಯಾಧ್ಯಕ್ಷನಿಂದ ಬೆದರಿಕೆ

ನಿಮ್ಮ ಕೈಕಾಲುಗಳು ಮುರಿಯುತ್ತವೆ; ಕೊಲೆಯಾಗುತ್ತೀರಿ: ಬಿಜೆಪಿ ರಾಜ್ಯಾಧ್ಯಕ್ಷನಿಂದ ಬೆದರಿಕೆ

ಬಿಹಾರದಲ್ಲಿ ಲಾಲು ರಾಜ್ ಇದ್ದಾಗ, ಜಂಗಲ್ ರಾಜ್ ಇದ್ದವು, ಆಗ ಅಲ್ಲಿ ದಿನವು ಹಿಂಸಾಚಾರ ನಡೆಯುತ್ತಿತ್ತು. ಆದರೆ ನಾವು ಆ ಗೂಂಡಾಗಳನ್ನು ಓಡಿಸಿದ್ದೇವೆ, ಇದನ್ನೇ ಬಿಜೆಪಿ ರಾಜ್ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.

- Advertisement -
- Advertisement -

ಮಮತಾ ಬ್ಯಾನರ್ಜಿ ಬೆಂಬಲಿಗರು ತಮ್ಮ ನಡೆಗಳನ್ನು ಸರಿಪಡಿಸಿಕೊಳ್ಳಬೇಕು ಇಲ್ಲವೆಂದರೆ ಅವರ ಕೈ ಕಾಲುಗಳು ಮುರಿದು ಹೋಗುವ ಇಲ್ಲವೆಂದರೆ, ಕೊಲೆಯಾಗುವ ಅಪಾಯವಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ ನಿನ್ನೆ ವಿವಾದಾತ್ಮಕ ಎಚ್ಚರಿಕೆ ನೀಡಿದ್ದಾರೆ.

“ತೊಂದರೆ ಸೃಷ್ಟಿಸುತ್ತಿರುವ ದೀದಿ ಸಹೋದರರು ಮುಂದಿನ ಆರು ತಿಂಗಳಲ್ಲಿ ತಮ್ಮ ಅಭ್ಯಾಸವನ್ನು ಬದಲಾಯಿಸಿಕೊಳ್ಳಬೇಕು ಇಲ್ಲದಿದ್ದರೆ ನಿಮ್ಮ ತಲೆ, ತೋಳು, ಕಾಲು ಹಾಗೂ ಪಕ್ಕೆಲುಬು ಮುರಿದುಹೋಗುತ್ತದೆ. ನೀವು ಆಸ್ಪತ್ರೆಗೆ ಸೇರಬೇಕಾಗುತ್ತದೆ. ಅದಕ್ಕಿಂತ ಹೆಚ್ಚಿನದನ್ನು ಮಾಡಿದರೆ ಶ್ಮಶಾನಕ್ಕೆ ಹೋಗಬೇಕಾಗುತ್ತದೆ ” ಎಂದು ಅವರು ಹಲ್ಡಿಯಾದಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

ತೃಣಮೂಲ ಸರ್ಕಾರದ ಕೊನೆಯ ದಿನಗಳನ್ನು ಎಣಿಸಲಾಗುತ್ತಿದೆ ಎಂದಿರುವ ದಿಲೀಪ್ ಘೋಷ್, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಯುತ ವಿಧಾನಸಭಾ ಚುನಾವಣೆಯನ್ನು ಕೇಂದ್ರ ಪಡೆಗಳು ಖಚಿತಪಡಿಸುತ್ತವೆ ಎಂದು ಹೇಳಿದ್ದಾರೆ.

“ಬಿಹಾರದಲ್ಲಿ ಲಾಲು ರಾಜ್ ಇದ್ದಾಗ, ಜಂಗಲ್ ರಾಜ್ ಇದ್ದವು, ಆಗ ಅಲ್ಲಿ ದಿನವು ಹಿಂಸಾಚಾರ ನಡೆಯುತ್ತಿತ್ತು. ಆದರೆ ನಾವು ಆ ಗೂಂಡಾಗಳನ್ನು ಓಡಿಸಿದ್ದೇವೆ, ಇದನ್ನೇ ಬಿಜೆಪಿ ರಾಜ್ ಎಂದು ಕರೆಯಲಾಗುತ್ತದೆ. ನಾವು ಜಂಗಲ್ ರಾಜ್ ಅನ್ನು ಪ್ರಜಾಪ್ರಭುತ್ವಕ್ಕೆ ಬದಲಾಯಿಸಿದ್ದೇವೆ ಮತ್ತು ಪಶ್ಚಿಮ ಬಂಗಾಳದಲ್ಲಿಯೂ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುತ್ತೇವೆ” ಎಂದು ಹೇಳಿದ್ಧಾರೆ.

“ಮುಂಬರುವ ವಿಧಾನಸಭಾ ಚುನಾವಣೆ ದೀದಿ ಪೊಲೀಸರ ಅಡಿಯಲ್ಲಿ ನಡೆಯುವುದಿಲ್ಲ, ಬದಲಾಗಿ ದಾದಾ ಅವರ ಪೊಲೀಸರಿಂದ ಘೋಷಣೆಯಾಗಬೇಕೆಂದು ನಾನು ಬಯಸುತ್ತೇನೆ. ಖಾಕಿ ಧರಿಸಿದ ಪೊಲೀಸರು ಮಾವಿನ ಮರದ ಕೆಳಗೆ ಬೂತ್‌ಗಳಿಂದ ನೂರು ಮೀಟರ್ ದೂರದಲ್ಲಿ, ಕುರ್ಚಿಯ ಮೇಲೆ ಕುಳಿತು, ಖೈನಿ ಜಗಿಯುತ್ತಾ ಮತದಾನ ವೀಕ್ಷಿಸುತ್ತಾರೆ” ಎಂದು ದಿಲೀಪ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಎದುರಿಸಲು ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ತೀವ್ರ ಪೈಪೋಟಿ ನಡೆಸುತ್ತಿದೆ. ರಾಜಕೀಯ ಹಿಂಸಾಚಾರ ಮತ್ತು ಪರಸ್ಪರರ ಬೆಂಬಲಿಗರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಉಭಯ ಪಕ್ಷಗಳೂ ಪರಸ್ಪರ ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದು, ಇದಾಗಿ ಕಲವೇ ದಿನಗಳಲ್ಲಿ ದಿಲೀಪ್ ಘೋಷ್ ಹೇಳಿಕೆಗಳು ಹೊರಬಿದ್ದಿದೆ. ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತುಕತೆ ನಡೆಸಲು ದಿಲೀಪ್ ಘೋಷ್ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ನಾಯಕರು ಸೋಮವಾರ ದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಮೋದಿ ಪಶ್ಚಿಮ ಬಂಗಾಳ ಭೇಟಿ ವೇಳೆ ಚೌಕಿದಾರ್‌ ಚೋರ್‌ ಹೈ ಘೋಷಣೆ ಕೂಗಿದ್ದು ನಿಜವೇ? 

ದಿಲೀಪ್‌ ಹೇಳಿಕೆಗೆ ಖಂಡನೆ

ಬಿಜೆಪಿ ರಾಜ್ಯಾಧ್ಯಕ್ಷರ ಬೆದರಿಕೆಯ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ ಖಂಡಿಸಿದ್ದು, ಅವರು ರಾಜ್ಯದ ರಾಜಕೀಯ ವಾತಾವರಣವನ್ನು ಕಳಂಕಗೊಳಿಸುತ್ತಿದ್ದಾರೆ ಎಂದು ಹೇಳಿದೆ ಎಂದು ಹೇಳಿದೆ.

ಹಿರಿಯ ತೃಣಮೂಲ ನಾಯಕ ಮತ್ತು ಸಂಸದರಾಗಿರುವ ಸುಗತ ರಾಯ್, “ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ತನ್ನ ಭಯೋತ್ಪಾದನಾ ಆಳ್ವಿಕೆಯನ್ನು ಬಹಿರಂಗಪಡಿಸಲು ಮತ್ತು ರಾಜ್ಯದ ರಾಜಕೀಯ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸುತ್ತಿದೆ ಎಂದು ಈ ಹೇಳಿಕೆಗಳು ಸೂಚಿಸುತ್ತವೆ. ರಾಜ್ಯದ ಜನರು ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಹೇಳಿಕೆಯನ್ನು ಖಂಡಿಸಿದ್ದು, “ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಯಾರೂ ರಾಜಕೀಯ ಭಾಷಣವನ್ನು ಬೀದಿ ಗಲಾಟೆಯ ಮಟ್ಟಕ್ಕೆ ಅಥವಾ ಸಾಮಾನ್ಯ ಕೊಲೆಗಡುಕನ ಭಾಷೆಗೆ ಇಳಿಸಬಾರದು. ಇದಕ್ಕಿಂತ ಕೆಟ್ಟದ್ದೇನೆಂದರೆ, ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರು ಇದನ್ನು ಮಾಡುತ್ತಿದ್ದಾರೆ!” ಎಂದಿದ್ದಾರೆ.

ಇದನ್ನೂ ಓದಿ: ‘ಡಬ್ಬಲ್ ಸ್ಟಾಂಡರ್ಡ್’ ಪ್ರಧಾನಿ: ಪಶ್ಚಿಮ ಬಂಗಾಳದ ಭೇಟಿಯ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...