Homeಕರ್ನಾಟಕನಿಮ್ಮ ಪ್ರೀತಿ ನನಗೆ ತಲುಪಿದೆ: ಕನ್ನಡಿಗರಿಗೆ ಹಂಸಲೇಖ ಪತ್ರ

ನಿಮ್ಮ ಪ್ರೀತಿ ನನಗೆ ತಲುಪಿದೆ: ಕನ್ನಡಿಗರಿಗೆ ಹಂಸಲೇಖ ಪತ್ರ

- Advertisement -
- Advertisement -

“ನಿಮ್ಮ ಪ್ರೀತಿ ನನಗೆ ತಲುಪಿದೆ” ಎಂದು ಖ್ಯಾತ ಸಂಗೀತ ನಿರ್ದೇಶಕ, ನೆಲದ ಕವಿ ಹಂಸಲೇಖ ಪತ್ರ ಬರೆದಿದ್ದಾರೆ. “ಯಾವುದೇ ಆವೇಶಗಳಿಗೆ ಒಳಗಾಗಬಾರದು” ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಮಾಂಸಾಹಾರ ಸಂಬಂಧಿಸಿದಂತೆ ಹಂಸಲೇಖ ಅವರು ಮೈಸೂರಿನಲ್ಲಿ ಮಾಡಿದ ಭಾಷಣ ವಿವಾದಕ್ಕೆ ಕಾರಣವಾಗಿತ್ತು. “ದಲಿತರ ಮನೆಗಳಿಗೆ ಹೋಗುವುದಷ್ಟೇ ಅಲ್ಲ. ಅವರು ಕೊಟ್ಟಿದ್ದು ತಿನ್ನಲು ಆಗುತ್ತದೆಯೇ? ಕೋಳಿ, ಕುರಿ ಮಾಂಸ ಕೊಟ್ಟರೆ ತಿನ್ನುತ್ತಾರೆಯೇ? ಎಂದು ಪೇಜಾವರ ಮಠದ ದಿವಂಗತ ವಿಶ್ವೇಶತೀರ್ಥರನ್ನು ಉಲ್ಲೇಖಿಸಿ ಮಾತನಾಡಿದ್ದರು.

ಹಂಸಲೇಖರ ಹೇಳಿಕೆ ವಿವಾದದ ಸ್ವರೂಪ ಪಡೆದ ಬಳಿಕ ಹಂಸಲೇಖ ಕ್ಷಮೆಯಾಚಿಸಿದ್ದರು. ಆದರೂ ಸುಮ್ಮನಾಗದ ಕೆಲವರು, ಬೃಂದಾವನಕ್ಕೆ ಬಂದು ಹಂಸಲೇಖ ಅವರು ಕ್ಷಮೆ ಕೇಳಬೇಕು ಎಂದು ವಾದಿಸಿದಾಗ ಹಂಸಲೇಖರ ಮಾತಿನಲ್ಲಿ ಯಾವ ತಪ್ಪಿದೆ ಎಂಬ ಚರ್ಚೆ ಆರಂಭವಾಯಿತು. ಮಾಂಸಾಹಾರಿಗಳನ್ನು ತುಚ್ಛವಾಗಿ ಕಾಣುವ ವಿಡಿಯೊವೊಂದು ಹರಿದಾಡಿತು. ಅದಕ್ಕೆ ಪ್ರತಿರೋಧವಾಗಿ ಜನರು ‘ಬಾಡೇ ನಮ್‌ ಗಾಡು’ ಅಭಿಯಾನ ಆರಂಭಿಸಿ, ಆಹಾರ ಸಂಸ್ಕೃತಿಯನ್ನು ಹೀಗಳೆಯುವವರಿಗೆ ಉತ್ತರ ಕೊಟ್ಟರು. ಹಂಸಲೇಖ ಅವರ ಸಾಹಿತ್ಯದಲ್ಲಿ ಹಾಸುಹೊಕ್ಕಾಗಿರುವ ಶ್ರಮ ಸಂಸ್ಕೃತಿಯ ಸಾಲುಗಳನ್ನು ಹೆಕ್ಕಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡರು.

ಹಂಸಲೇಖ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿ ಪ್ರತಿಭಟನೆ ಮಾಡಿದನ್ನು ಖಂಡಿಸಿ, ದಲಿತ ಯುವಕರು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಮತ್ತು ಸಂಸದ ಪ್ರತಾಪ್‌ ಸಿಂಹ ಅವರ ಫೋಟೋಗಳನ್ನು ಇಟ್ಟು ಪೇಜಾವರ ಅಭಿಮಾನಿಗಳ ರೀತಿಯೇ ಪ್ರತಿಕ್ರಿಯಿಸುವ ಘಟನೆಯೂ ನಡೆಯಿತು. ಇಂತಹ ಘಟನೆಗಳಿಗೆಲ್ಲ ಹಂಸಲೇಖರ ಪ್ರಕರಣ ಸಾಕ್ಷಿಯಾಗಿದ್ದು, ಹಂಸಲೇಖ ಅವರು ಕನ್ನಡಿಗರಿಗೆ ಪತ್ರ ಬರೆದಿದ್ದಾರೆ.

ಸಂಗೀತ ನಿರ್ದೇಶಕ ಹಂಸಲೇಖ ಅವರ ಪತ್ರ

“ಪೂಜ್ಯ ಕರ್ನಾಟಕವೇ ನಮಸ್ಕಾರ, ನಾನು ಆರೋಗ್ಯವಾಗಿದ್ದೇನೆ. ನನಗೆ ಆರೋಗ್ಯ ತಪ್ಪಿದೇ ಎಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೇ ಸವೆದಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ.

ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ. ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರವಾಗಿ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ.”

“ಅಭಿಮಾನ ಆವೇಶವಾಗಬಾರದು: ಆವೇಶ ಅವಘಡಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತೆ ಇರಬೇಕು. ಹಾಡು ಕೇಳಿಸುತ್ತದೆ… ಮುಟ್ಟಿಸುತ್ತದೆ. ನಿಮ್ಮ ಪ್ರೀತಿ ನನಗೆ ತಲುಪಿದೆ. ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು- ನಿಮ್ಮ ಹಂಸಲೇಖ”

ಹೀಗೆ ಹಂಸಲೇಖ ಅವರು ಕನ್ನಡಿಗರಿಗೆ ಪತ್ರ ಬರೆದಿದ್ದು, ಅದು ವೈರಲ್ ಆಗಿದೆ. ಯಾವುದೇ ಆವೇಶಗಳಿಗೆ ಒಳಗಾಗದಂತೆ ಅಭಿಮಾನಿಗಳಿಗೆ ಹಂಸಲೇಖ ಅವರು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಾಡಿನ ಸಜ್ಜನರನ್ನು ಅವಹೇಳನ ಮಾಡಿ, ಕೀಳು ಅಭಿರುಚಿಯ ಹಿಯ್ಯಾಳಿಕೆ ಸಾಮಾನ್ಯವಾಗಿರುವ ವಿಚಿತ್ರ ಕಾಲಘಟ್ಟದಲ್ಲಿ ನಾವಿದ್ದೇವೆ. ಮೃದು ಮಾತಿನ , ಮಗು ಮನಸ್ಸಿನ ಹಂಸಲೇಖ ಅವರಾಡಿದ ಒಂದು ಮಾತು ಕುರಿತು ವಿಮರ್ಶೆ ಮಾಡುವ; ವಿಮರ್ಶೆ ವಿಷಯಕ್ಕೆ ಸೀಮಿತವಾಗಿರಬೇಕೆ ಅಥವಾ, ವ್ಯಕ್ತಿವಧೆವರೆಗೆ ಹೋಗಬೇಕೆ?

    ಸರ್, ನಿಮ್ಮೊಂದಿಗೆ ನಾವಿದ್ದೇವೆ, ನಾವು ಆಗಬೇಕಿದ್ದ ಮಾತು ನಿಮ್ಮ ಬಾಯಲ್ಲಿ ಬಂದಿದೆ. ಒರಟು ಎನ್ನಿಸಿದರೂ ಸತ್ಯ, ಸತ್ಯವೇ!

  2. ನಾಡಿನ ಸಜ್ಜನರನ್ನು ಅವಹೇಳನ ಮಾಡಿ, ಕೀಳು ಅಭಿರುಚಿಯ ಹಿಯ್ಯಾಳಿಕೆ ಸಾಮಾನ್ಯವಾಗಿರುವ ವಿಚಿತ್ರ ಕಾಲಘಟ್ಟದಲ್ಲಿ ನಾವಿದ್ದೇವೆ. ಮೃದು ಮಾತಿನ , ಮಗು ಮನಸ್ಸಿನ ಹಂಸಲೇಖ ಅವರಾಡಿದ ಒಂದು ಮಾತು ಕುರಿತು ವಿಮರ್ಶೆ ಮಾಡುವ; ವಿಮರ್ಶೆ ವಿಷಯಕ್ಕೆ ಸೀಮಿತವಾಗಿರಬೇಕೆ ಅಥವಾ, ವ್ಯಕ್ತಿವಧೆವರೆಗೆ ಹೋಗಬೇಕೆ?

    ಸರ್, ನಿಮ್ಮೊಂದಿಗೆ ನಾವಿದ್ದೇವೆ, ನಾವು ಆಡಬೇಕಿದ್ದ ಮಾತು ನಿಮ್ಮ ಬಾಯಲ್ಲಿ ಬಂದಿದೆ. ಒರಟು ಎನ್ನಿಸಿದರೂ ಸತ್ಯ, ಸತ್ಯವೇ!

  3. I think Hamsalekha will henceforth think more than twice before talking on sensitive and communal issues.
    This is good lesson for u . Go ahead with ur musical work.Definately as music is concerned
    we all like ur music.

  4. If u have guts Mr Hamsalekha why dont u talk about Muslims, Christian’s or Lingayats.
    U thought Brahmins are soft and minority so u can talk .No sir change ur attitude all love music but all dont like ur philosophy or advice outside music.
    I think u will follow this principle

  5. HAMSALEKHA ALIAS GAGARAJU WHO IS CALLED MAHAGURU AND NAADH BRAMHA SHOULD INTROSPECT HIMSELF WHAT HE SPOKE ABOUT PEJAWAR SHREE AND BRAMHINS HE HAD TO THINK BEFORE HE SPEAK FOR HIS SPEACH HE MIGHT HAVE GOT CLAPS AND LAUGHS FROM AUDIENCE BUT HOW MUCH IT HAS HURT FOLLOWERS OF PEJAWR SHREE AND BRAMHINS. HE IS CALLED A GREAT PERSON DOES HE NOT HAVE THINKING POWER WHAT TO SPEAK AND WHAT NOT. WHY HE SHOULD HAVE ALLOWED HIS TONGUE TO GO IN ITS OWN WAY UNNECESSARILY MAKE PEOPLE TO BECOME ANGRY AND AGAINST HIM. IF HE WHOLEHEARTELY LOVE ALL PEOPLE OF ALL COMMUNITY SUCH WORDS SHOULD NOT HAVE COME OUT OF HIS MOUTH. I HOPE THAT HE HAS LEARNT AT LEAST IN FUTURE BEFORE UTTERING HE WILL THINK TWICE AND SPEAK. GOD BLESS HIM

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...