Homeಕರ್ನಾಟಕನಿಮ್ಮ ಪ್ರೀತಿ ನನಗೆ ತಲುಪಿದೆ: ಕನ್ನಡಿಗರಿಗೆ ಹಂಸಲೇಖ ಪತ್ರ

ನಿಮ್ಮ ಪ್ರೀತಿ ನನಗೆ ತಲುಪಿದೆ: ಕನ್ನಡಿಗರಿಗೆ ಹಂಸಲೇಖ ಪತ್ರ

- Advertisement -
- Advertisement -

“ನಿಮ್ಮ ಪ್ರೀತಿ ನನಗೆ ತಲುಪಿದೆ” ಎಂದು ಖ್ಯಾತ ಸಂಗೀತ ನಿರ್ದೇಶಕ, ನೆಲದ ಕವಿ ಹಂಸಲೇಖ ಪತ್ರ ಬರೆದಿದ್ದಾರೆ. “ಯಾವುದೇ ಆವೇಶಗಳಿಗೆ ಒಳಗಾಗಬಾರದು” ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಮಾಂಸಾಹಾರ ಸಂಬಂಧಿಸಿದಂತೆ ಹಂಸಲೇಖ ಅವರು ಮೈಸೂರಿನಲ್ಲಿ ಮಾಡಿದ ಭಾಷಣ ವಿವಾದಕ್ಕೆ ಕಾರಣವಾಗಿತ್ತು. “ದಲಿತರ ಮನೆಗಳಿಗೆ ಹೋಗುವುದಷ್ಟೇ ಅಲ್ಲ. ಅವರು ಕೊಟ್ಟಿದ್ದು ತಿನ್ನಲು ಆಗುತ್ತದೆಯೇ? ಕೋಳಿ, ಕುರಿ ಮಾಂಸ ಕೊಟ್ಟರೆ ತಿನ್ನುತ್ತಾರೆಯೇ? ಎಂದು ಪೇಜಾವರ ಮಠದ ದಿವಂಗತ ವಿಶ್ವೇಶತೀರ್ಥರನ್ನು ಉಲ್ಲೇಖಿಸಿ ಮಾತನಾಡಿದ್ದರು.

ಹಂಸಲೇಖರ ಹೇಳಿಕೆ ವಿವಾದದ ಸ್ವರೂಪ ಪಡೆದ ಬಳಿಕ ಹಂಸಲೇಖ ಕ್ಷಮೆಯಾಚಿಸಿದ್ದರು. ಆದರೂ ಸುಮ್ಮನಾಗದ ಕೆಲವರು, ಬೃಂದಾವನಕ್ಕೆ ಬಂದು ಹಂಸಲೇಖ ಅವರು ಕ್ಷಮೆ ಕೇಳಬೇಕು ಎಂದು ವಾದಿಸಿದಾಗ ಹಂಸಲೇಖರ ಮಾತಿನಲ್ಲಿ ಯಾವ ತಪ್ಪಿದೆ ಎಂಬ ಚರ್ಚೆ ಆರಂಭವಾಯಿತು. ಮಾಂಸಾಹಾರಿಗಳನ್ನು ತುಚ್ಛವಾಗಿ ಕಾಣುವ ವಿಡಿಯೊವೊಂದು ಹರಿದಾಡಿತು. ಅದಕ್ಕೆ ಪ್ರತಿರೋಧವಾಗಿ ಜನರು ‘ಬಾಡೇ ನಮ್‌ ಗಾಡು’ ಅಭಿಯಾನ ಆರಂಭಿಸಿ, ಆಹಾರ ಸಂಸ್ಕೃತಿಯನ್ನು ಹೀಗಳೆಯುವವರಿಗೆ ಉತ್ತರ ಕೊಟ್ಟರು. ಹಂಸಲೇಖ ಅವರ ಸಾಹಿತ್ಯದಲ್ಲಿ ಹಾಸುಹೊಕ್ಕಾಗಿರುವ ಶ್ರಮ ಸಂಸ್ಕೃತಿಯ ಸಾಲುಗಳನ್ನು ಹೆಕ್ಕಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡರು.

ಹಂಸಲೇಖ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿ ಪ್ರತಿಭಟನೆ ಮಾಡಿದನ್ನು ಖಂಡಿಸಿ, ದಲಿತ ಯುವಕರು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಮತ್ತು ಸಂಸದ ಪ್ರತಾಪ್‌ ಸಿಂಹ ಅವರ ಫೋಟೋಗಳನ್ನು ಇಟ್ಟು ಪೇಜಾವರ ಅಭಿಮಾನಿಗಳ ರೀತಿಯೇ ಪ್ರತಿಕ್ರಿಯಿಸುವ ಘಟನೆಯೂ ನಡೆಯಿತು. ಇಂತಹ ಘಟನೆಗಳಿಗೆಲ್ಲ ಹಂಸಲೇಖರ ಪ್ರಕರಣ ಸಾಕ್ಷಿಯಾಗಿದ್ದು, ಹಂಸಲೇಖ ಅವರು ಕನ್ನಡಿಗರಿಗೆ ಪತ್ರ ಬರೆದಿದ್ದಾರೆ.

ಸಂಗೀತ ನಿರ್ದೇಶಕ ಹಂಸಲೇಖ ಅವರ ಪತ್ರ

“ಪೂಜ್ಯ ಕರ್ನಾಟಕವೇ ನಮಸ್ಕಾರ, ನಾನು ಆರೋಗ್ಯವಾಗಿದ್ದೇನೆ. ನನಗೆ ಆರೋಗ್ಯ ತಪ್ಪಿದೇ ಎಂತ ಇಡೀ ಕರ್ನಾಟಕದಿಂದ ಕರೆಗಳು ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೇ ಸವೆದಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ.

ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ. ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಜನ ಅಭಿಮಾನಿಗಳು ನನ್ನ ಪರವಾಗಿ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ.”

“ಅಭಿಮಾನ ಆವೇಶವಾಗಬಾರದು: ಆವೇಶ ಅವಘಡಗಳಿಗೆ ಕಾರಣವಾಗಬಾರದು. ಅಭಿಮಾನ ಹಾಡಿನಂತೆ ಇರಬೇಕು. ಹಾಡು ಕೇಳಿಸುತ್ತದೆ… ಮುಟ್ಟಿಸುತ್ತದೆ. ನಿಮ್ಮ ಪ್ರೀತಿ ನನಗೆ ತಲುಪಿದೆ. ನಿಮ್ಮ ಪ್ರೀತಿಗೆ ನನ್ನ ಹೃದಯ ತುಂಬಿದ ನಮಸ್ಕಾರಗಳು- ನಿಮ್ಮ ಹಂಸಲೇಖ”

ಹೀಗೆ ಹಂಸಲೇಖ ಅವರು ಕನ್ನಡಿಗರಿಗೆ ಪತ್ರ ಬರೆದಿದ್ದು, ಅದು ವೈರಲ್ ಆಗಿದೆ. ಯಾವುದೇ ಆವೇಶಗಳಿಗೆ ಒಳಗಾಗದಂತೆ ಅಭಿಮಾನಿಗಳಿಗೆ ಹಂಸಲೇಖ ಅವರು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಕಸಾಪ ನೂತನ ಅಧ್ಯಕ್ಷರಾದ ಮಹೇಶ್‌ ಜೋಶಿ ಬಿಜೆಪಿ ಬೆಂಬಲಿತರು ಎಂಬುದಕ್ಕೆ ಇಲ್ಲಿದೆ ಪುರಾವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ನಾಡಿನ ಸಜ್ಜನರನ್ನು ಅವಹೇಳನ ಮಾಡಿ, ಕೀಳು ಅಭಿರುಚಿಯ ಹಿಯ್ಯಾಳಿಕೆ ಸಾಮಾನ್ಯವಾಗಿರುವ ವಿಚಿತ್ರ ಕಾಲಘಟ್ಟದಲ್ಲಿ ನಾವಿದ್ದೇವೆ. ಮೃದು ಮಾತಿನ , ಮಗು ಮನಸ್ಸಿನ ಹಂಸಲೇಖ ಅವರಾಡಿದ ಒಂದು ಮಾತು ಕುರಿತು ವಿಮರ್ಶೆ ಮಾಡುವ; ವಿಮರ್ಶೆ ವಿಷಯಕ್ಕೆ ಸೀಮಿತವಾಗಿರಬೇಕೆ ಅಥವಾ, ವ್ಯಕ್ತಿವಧೆವರೆಗೆ ಹೋಗಬೇಕೆ?

    ಸರ್, ನಿಮ್ಮೊಂದಿಗೆ ನಾವಿದ್ದೇವೆ, ನಾವು ಆಗಬೇಕಿದ್ದ ಮಾತು ನಿಮ್ಮ ಬಾಯಲ್ಲಿ ಬಂದಿದೆ. ಒರಟು ಎನ್ನಿಸಿದರೂ ಸತ್ಯ, ಸತ್ಯವೇ!

  2. ನಾಡಿನ ಸಜ್ಜನರನ್ನು ಅವಹೇಳನ ಮಾಡಿ, ಕೀಳು ಅಭಿರುಚಿಯ ಹಿಯ್ಯಾಳಿಕೆ ಸಾಮಾನ್ಯವಾಗಿರುವ ವಿಚಿತ್ರ ಕಾಲಘಟ್ಟದಲ್ಲಿ ನಾವಿದ್ದೇವೆ. ಮೃದು ಮಾತಿನ , ಮಗು ಮನಸ್ಸಿನ ಹಂಸಲೇಖ ಅವರಾಡಿದ ಒಂದು ಮಾತು ಕುರಿತು ವಿಮರ್ಶೆ ಮಾಡುವ; ವಿಮರ್ಶೆ ವಿಷಯಕ್ಕೆ ಸೀಮಿತವಾಗಿರಬೇಕೆ ಅಥವಾ, ವ್ಯಕ್ತಿವಧೆವರೆಗೆ ಹೋಗಬೇಕೆ?

    ಸರ್, ನಿಮ್ಮೊಂದಿಗೆ ನಾವಿದ್ದೇವೆ, ನಾವು ಆಡಬೇಕಿದ್ದ ಮಾತು ನಿಮ್ಮ ಬಾಯಲ್ಲಿ ಬಂದಿದೆ. ಒರಟು ಎನ್ನಿಸಿದರೂ ಸತ್ಯ, ಸತ್ಯವೇ!

  3. I think Hamsalekha will henceforth think more than twice before talking on sensitive and communal issues.
    This is good lesson for u . Go ahead with ur musical work.Definately as music is concerned
    we all like ur music.

  4. If u have guts Mr Hamsalekha why dont u talk about Muslims, Christian’s or Lingayats.
    U thought Brahmins are soft and minority so u can talk .No sir change ur attitude all love music but all dont like ur philosophy or advice outside music.
    I think u will follow this principle

  5. HAMSALEKHA ALIAS GAGARAJU WHO IS CALLED MAHAGURU AND NAADH BRAMHA SHOULD INTROSPECT HIMSELF WHAT HE SPOKE ABOUT PEJAWAR SHREE AND BRAMHINS HE HAD TO THINK BEFORE HE SPEAK FOR HIS SPEACH HE MIGHT HAVE GOT CLAPS AND LAUGHS FROM AUDIENCE BUT HOW MUCH IT HAS HURT FOLLOWERS OF PEJAWR SHREE AND BRAMHINS. HE IS CALLED A GREAT PERSON DOES HE NOT HAVE THINKING POWER WHAT TO SPEAK AND WHAT NOT. WHY HE SHOULD HAVE ALLOWED HIS TONGUE TO GO IN ITS OWN WAY UNNECESSARILY MAKE PEOPLE TO BECOME ANGRY AND AGAINST HIM. IF HE WHOLEHEARTELY LOVE ALL PEOPLE OF ALL COMMUNITY SUCH WORDS SHOULD NOT HAVE COME OUT OF HIS MOUTH. I HOPE THAT HE HAS LEARNT AT LEAST IN FUTURE BEFORE UTTERING HE WILL THINK TWICE AND SPEAK. GOD BLESS HIM

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...