Homeರಾಜಕೀಯ‘ನಿಮ್ಮ ಸಚಿವ ಶರದ್ ಪವಾರ್‌ಗೆ ಬೆದರಿಸುತ್ತಿದ್ದಾರೆ’: ಪ್ರಧಾನಿ ಮತ್ತು ಅಮಿತ್ ಶಾಗೆ ಶಿವಸೇನೆ ನಾಯಕ ಸಂಜಯ್...

‘ನಿಮ್ಮ ಸಚಿವ ಶರದ್ ಪವಾರ್‌ಗೆ ಬೆದರಿಸುತ್ತಿದ್ದಾರೆ’: ಪ್ರಧಾನಿ ಮತ್ತು ಅಮಿತ್ ಶಾಗೆ ಶಿವಸೇನೆ ನಾಯಕ ಸಂಜಯ್ ರಾವತ್‌‌

- Advertisement -
- Advertisement -

ಮಹಾರಾಷ್ಟ್ರ ಮೈತ್ರಿಕೂಟದ ನಾಯಕ ಶರದ್ ಪವಾರ್ ಅವರಿಗೆ ಒಕ್ಕೂಟ ಸರ್ಕಾರದ ಸಚಿವರೊಬ್ಬರು ಬೆದರಿಕೆ ಹಾಕಿದ್ದಾರೆ ಎಂದು ಶಿವಸೇನೆ ಶುಕ್ರವಾರ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ತಮ್ಮ ಸಚಿವರ ಇಂತಹ ಬೆದರಿಕೆಗಳನ್ನು ಒಪ್ಪುತ್ತಾರೆಯೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

“ಶರದ್‌ ಪವಾರ್‌‌ ಮಹಾರಾಷ್ಟ್ರದ ಮಗ. ಒಕ್ಕೂಟ ಸರ್ಕಾರದ ಸಚಿವ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಮೋದಿ ಮತ್ತು ಅಮಿತ್ ಶಾ ಅವರೇ, ಇದನ್ನು ನೀವು ಕೇಳಿದ್ದೀರಾ? ನಿಮ್ಮ ಸಚಿವರು ಶರದ್ ಪವಾರ್‌ಗೆ ಬೆದರಿಕೆ ಹಾಕುತ್ತಿದ್ದಾರೆ. ನೀವು ಅಂತಹ ಬೆದರಿಕೆಗಳನ್ನು ಬೆಂಬಲಿಸುತ್ತೀರಾ ಎಂಬುವದನ್ನು ಮಹಾರಾಷ್ಟ್ರವು ತಿಳಿದುಕೊಳ್ಳಲು ಬಯಸುತ್ತದೆ” ಎಂದು ರಾವತ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾರಾಷ್ಟ್ರ ಸರ್ಕಾರದಲ್ಲಿನ ಬಂಡಾಯದ ನಂತರ ಶಿವಸೇನೆಯ ಕೆಲವು ನಾಯಕರು ಇನ್ನೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೊಂದಿಗೆ ಇದ್ದಾರೆ. ಆದರೆ ಪಕ್ಷದ ಬಹುಪಾಲು ಶಾಸಕರು ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಬೆದರಿಕೆ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್‌, “ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉಳಿಸಲು ಒಂದು ವೇಳೆ ಶರದ್ ಪವಾರ್ ಪ್ರಯತ್ನಿಸಿದರೆ, ಅವರನ್ನು ಮನೆಗೆ ಹೋಗಲು ಬಿಡುವುದಿಲ್ಲ, ಅವರನ್ನು ರಸ್ತೆಯಲ್ಲೇ ತಡೆಯುತ್ತೇವೆ ಎಂದು ಒಕ್ಕೂಸ ಸರ್ಕಾರದ ಸಚಿವರೊಬ್ಬರು ಬೆದರಿಕೆ ಹಾಕಿದ್ದಾರೆ’’

“ಒಂದು ವೇಳೆ ಬಿಜೆಪಿ ಇದನ್ನು ಮಾಡುವುದಿದ್ದರೆ, ನೀವೇ ಅದನ್ನು ಘೋಷಿಸಿ. ಸರ್ಕಾರ ಉಳಿಯಲಿ ಅಥವಾ ಹೋಗಲಿ, ಶರದ್ ಪವಾರ್ ಅವರ ವಿರುದ್ಧ ಇಂತಹ ಮಾತುಗಳನ್ನು ಆಡುವುದನ್ನು ನಾವು ಒಪ್ಪುವುದಿಲ್ಲ” ಎಂದು ಬರೆದಿದ್ದಾರೆ.

ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಉರುಳುವ ಸಾಧ್ಯತೆ ಇರುವ ಈ ಬಂಡಾಯದಲ್ಲಿ, ಉದ್ಧವ್ ಠಾಕ್ರೆ ಅವರ ತಂದೆ ಬಾಳ್ ಠಾಕ್ರೆ ಸ್ಥಾಪಿಸಿದ ಪಕ್ಷದವರೇ ಹೆಚ್ಚಿನ ಜನರಿದ್ದಾರೆ. ಸಚಿವ ಏಕನಾಥ್ ಶಿಂಧೆ ಅವರು ಶಿವಸೇನೆಯ 50 ಶಾಸಕರಲ್ಲಿ 40 ಶಾಸಕರ ಬೆಂಬಲ ಇದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

ಶಿಂಧೆ ಮತ್ತು ಬಂಡಾಯ ಶಾಸಕರು ಮಂಗಳವಾರ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌‌ಗೆ ತೆರಳುವ ಮೂಲಕ ಸರ್ಕಾರದ ವಿರುದ್ಧ ತಮ್ಮ ದಂಗೆಯನ್ನು ಪ್ರಾರಂಭಿಸಿದರು. ಅಲ್ಲಿಂದ ಅವರು ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂಗೆ ವಿಶೇಷ ವಿಮಾನಗಳ ಮೂಲಕ ತೆರಳಿದ್ದಾರೆ.

ಉದ್ಧವ್ ಠಾಕ್ರೆ ಅವರು ಶಿಂಧೆ ಸೇರಿದಂತೆ 12 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದಾರೆ. ಆದರೆ ಶಿಂಧೆ ಅವರು ತಮ್ಮೊಂದಿಗೆ ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸುತ್ತಿದ್ದು, ತಾವೇ ನಿಜವಾದ ಶಿವಸೇನೆ ಎಂದು ಹೇಳಿಕೊಂಡಿದ್ದಾರೆ.

ಶರದ್ ಪವಾರ್ ಅವರ ಪಕ್ಷ ಮತ್ತು ಕಾಂಗ್ರೆಸ್‌ನೊಂದಿಗಿನ ತನ್ನ ‘ಅಸ್ವಾಭಾವಿಕ ಮೈತ್ರಿ’ಯನ್ನು ಶಿವಸೇನೆ ಕೊನೆಗೊಳಿಸಬೇಕು ಮತ್ತು ಹಳೆಯ ಮಿತ್ರಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿ ಮಹಾರಾಷ್ಟ್ರವನ್ನು ಆಳಬೇಕು ಎಂದು ಬಂಡಾಯ ನಾಯಕ ಶಿಂಧೆ ಅವರು ಪ್ರತಿಪಾದಿಸುತ್ತಿದ್ದಾರೆ.

ಇದನ್ನೂ ಓದಿ: ‘ಮೈತ್ರಿ ತೊರೆಯುವ ಬಗ್ಗೆ ಚರ್ಚಿಸುತ್ತೇವೆ, ಬಂಡಾಯ ಶಾಸಕರು ಹಿಂತಿರುಗುವ ಧೈರ್ಯ ತೋರಲಿ’: ಶಿವಸೇನೆ ವಕ್ತಾರ ಸಂಜಯ್ ರಾವತ್‌

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಿದ ನಂತರ ಶಾಸಕರು ಸರ್ಕಾರದ ಭವಿಷ್ಯವನ್ನು ನಿರ್ಧರಿಸುತ್ತಾರೆ ಎಂದು ಶರದ್ ಪವಾರ್ ಅವರು ನಿನ್ನೆ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...