Homeರಾಜಕೀಯ‘ನಿಮ್ಮ ಸಚಿವ ಶರದ್ ಪವಾರ್‌ಗೆ ಬೆದರಿಸುತ್ತಿದ್ದಾರೆ’: ಪ್ರಧಾನಿ ಮತ್ತು ಅಮಿತ್ ಶಾಗೆ ಶಿವಸೇನೆ ನಾಯಕ ಸಂಜಯ್...

‘ನಿಮ್ಮ ಸಚಿವ ಶರದ್ ಪವಾರ್‌ಗೆ ಬೆದರಿಸುತ್ತಿದ್ದಾರೆ’: ಪ್ರಧಾನಿ ಮತ್ತು ಅಮಿತ್ ಶಾಗೆ ಶಿವಸೇನೆ ನಾಯಕ ಸಂಜಯ್ ರಾವತ್‌‌

- Advertisement -
- Advertisement -

ಮಹಾರಾಷ್ಟ್ರ ಮೈತ್ರಿಕೂಟದ ನಾಯಕ ಶರದ್ ಪವಾರ್ ಅವರಿಗೆ ಒಕ್ಕೂಟ ಸರ್ಕಾರದ ಸಚಿವರೊಬ್ಬರು ಬೆದರಿಕೆ ಹಾಕಿದ್ದಾರೆ ಎಂದು ಶಿವಸೇನೆ ಶುಕ್ರವಾರ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ತಮ್ಮ ಸಚಿವರ ಇಂತಹ ಬೆದರಿಕೆಗಳನ್ನು ಒಪ್ಪುತ್ತಾರೆಯೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

“ಶರದ್‌ ಪವಾರ್‌‌ ಮಹಾರಾಷ್ಟ್ರದ ಮಗ. ಒಕ್ಕೂಟ ಸರ್ಕಾರದ ಸಚಿವ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಮೋದಿ ಮತ್ತು ಅಮಿತ್ ಶಾ ಅವರೇ, ಇದನ್ನು ನೀವು ಕೇಳಿದ್ದೀರಾ? ನಿಮ್ಮ ಸಚಿವರು ಶರದ್ ಪವಾರ್‌ಗೆ ಬೆದರಿಕೆ ಹಾಕುತ್ತಿದ್ದಾರೆ. ನೀವು ಅಂತಹ ಬೆದರಿಕೆಗಳನ್ನು ಬೆಂಬಲಿಸುತ್ತೀರಾ ಎಂಬುವದನ್ನು ಮಹಾರಾಷ್ಟ್ರವು ತಿಳಿದುಕೊಳ್ಳಲು ಬಯಸುತ್ತದೆ” ಎಂದು ರಾವತ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾರಾಷ್ಟ್ರ ಸರ್ಕಾರದಲ್ಲಿನ ಬಂಡಾಯದ ನಂತರ ಶಿವಸೇನೆಯ ಕೆಲವು ನಾಯಕರು ಇನ್ನೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೊಂದಿಗೆ ಇದ್ದಾರೆ. ಆದರೆ ಪಕ್ಷದ ಬಹುಪಾಲು ಶಾಸಕರು ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಬೆದರಿಕೆ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್‌, “ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉಳಿಸಲು ಒಂದು ವೇಳೆ ಶರದ್ ಪವಾರ್ ಪ್ರಯತ್ನಿಸಿದರೆ, ಅವರನ್ನು ಮನೆಗೆ ಹೋಗಲು ಬಿಡುವುದಿಲ್ಲ, ಅವರನ್ನು ರಸ್ತೆಯಲ್ಲೇ ತಡೆಯುತ್ತೇವೆ ಎಂದು ಒಕ್ಕೂಸ ಸರ್ಕಾರದ ಸಚಿವರೊಬ್ಬರು ಬೆದರಿಕೆ ಹಾಕಿದ್ದಾರೆ’’

“ಒಂದು ವೇಳೆ ಬಿಜೆಪಿ ಇದನ್ನು ಮಾಡುವುದಿದ್ದರೆ, ನೀವೇ ಅದನ್ನು ಘೋಷಿಸಿ. ಸರ್ಕಾರ ಉಳಿಯಲಿ ಅಥವಾ ಹೋಗಲಿ, ಶರದ್ ಪವಾರ್ ಅವರ ವಿರುದ್ಧ ಇಂತಹ ಮಾತುಗಳನ್ನು ಆಡುವುದನ್ನು ನಾವು ಒಪ್ಪುವುದಿಲ್ಲ” ಎಂದು ಬರೆದಿದ್ದಾರೆ.

ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಉರುಳುವ ಸಾಧ್ಯತೆ ಇರುವ ಈ ಬಂಡಾಯದಲ್ಲಿ, ಉದ್ಧವ್ ಠಾಕ್ರೆ ಅವರ ತಂದೆ ಬಾಳ್ ಠಾಕ್ರೆ ಸ್ಥಾಪಿಸಿದ ಪಕ್ಷದವರೇ ಹೆಚ್ಚಿನ ಜನರಿದ್ದಾರೆ. ಸಚಿವ ಏಕನಾಥ್ ಶಿಂಧೆ ಅವರು ಶಿವಸೇನೆಯ 50 ಶಾಸಕರಲ್ಲಿ 40 ಶಾಸಕರ ಬೆಂಬಲ ಇದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

ಶಿಂಧೆ ಮತ್ತು ಬಂಡಾಯ ಶಾಸಕರು ಮಂಗಳವಾರ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌‌ಗೆ ತೆರಳುವ ಮೂಲಕ ಸರ್ಕಾರದ ವಿರುದ್ಧ ತಮ್ಮ ದಂಗೆಯನ್ನು ಪ್ರಾರಂಭಿಸಿದರು. ಅಲ್ಲಿಂದ ಅವರು ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂಗೆ ವಿಶೇಷ ವಿಮಾನಗಳ ಮೂಲಕ ತೆರಳಿದ್ದಾರೆ.

ಉದ್ಧವ್ ಠಾಕ್ರೆ ಅವರು ಶಿಂಧೆ ಸೇರಿದಂತೆ 12 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದಾರೆ. ಆದರೆ ಶಿಂಧೆ ಅವರು ತಮ್ಮೊಂದಿಗೆ ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸುತ್ತಿದ್ದು, ತಾವೇ ನಿಜವಾದ ಶಿವಸೇನೆ ಎಂದು ಹೇಳಿಕೊಂಡಿದ್ದಾರೆ.

ಶರದ್ ಪವಾರ್ ಅವರ ಪಕ್ಷ ಮತ್ತು ಕಾಂಗ್ರೆಸ್‌ನೊಂದಿಗಿನ ತನ್ನ ‘ಅಸ್ವಾಭಾವಿಕ ಮೈತ್ರಿ’ಯನ್ನು ಶಿವಸೇನೆ ಕೊನೆಗೊಳಿಸಬೇಕು ಮತ್ತು ಹಳೆಯ ಮಿತ್ರಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿ ಮಹಾರಾಷ್ಟ್ರವನ್ನು ಆಳಬೇಕು ಎಂದು ಬಂಡಾಯ ನಾಯಕ ಶಿಂಧೆ ಅವರು ಪ್ರತಿಪಾದಿಸುತ್ತಿದ್ದಾರೆ.

ಇದನ್ನೂ ಓದಿ: ‘ಮೈತ್ರಿ ತೊರೆಯುವ ಬಗ್ಗೆ ಚರ್ಚಿಸುತ್ತೇವೆ, ಬಂಡಾಯ ಶಾಸಕರು ಹಿಂತಿರುಗುವ ಧೈರ್ಯ ತೋರಲಿ’: ಶಿವಸೇನೆ ವಕ್ತಾರ ಸಂಜಯ್ ರಾವತ್‌

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಿದ ನಂತರ ಶಾಸಕರು ಸರ್ಕಾರದ ಭವಿಷ್ಯವನ್ನು ನಿರ್ಧರಿಸುತ್ತಾರೆ ಎಂದು ಶರದ್ ಪವಾರ್ ಅವರು ನಿನ್ನೆ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...