Homeರಾಜಕೀಯ‘ನಿಮ್ಮ ಸಚಿವ ಶರದ್ ಪವಾರ್‌ಗೆ ಬೆದರಿಸುತ್ತಿದ್ದಾರೆ’: ಪ್ರಧಾನಿ ಮತ್ತು ಅಮಿತ್ ಶಾಗೆ ಶಿವಸೇನೆ ನಾಯಕ ಸಂಜಯ್...

‘ನಿಮ್ಮ ಸಚಿವ ಶರದ್ ಪವಾರ್‌ಗೆ ಬೆದರಿಸುತ್ತಿದ್ದಾರೆ’: ಪ್ರಧಾನಿ ಮತ್ತು ಅಮಿತ್ ಶಾಗೆ ಶಿವಸೇನೆ ನಾಯಕ ಸಂಜಯ್ ರಾವತ್‌‌

- Advertisement -
- Advertisement -

ಮಹಾರಾಷ್ಟ್ರ ಮೈತ್ರಿಕೂಟದ ನಾಯಕ ಶರದ್ ಪವಾರ್ ಅವರಿಗೆ ಒಕ್ಕೂಟ ಸರ್ಕಾರದ ಸಚಿವರೊಬ್ಬರು ಬೆದರಿಕೆ ಹಾಕಿದ್ದಾರೆ ಎಂದು ಶಿವಸೇನೆ ಶುಕ್ರವಾರ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ತಮ್ಮ ಸಚಿವರ ಇಂತಹ ಬೆದರಿಕೆಗಳನ್ನು ಒಪ್ಪುತ್ತಾರೆಯೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವತ್ ಪ್ರಶ್ನಿಸಿದ್ದಾರೆ.

“ಶರದ್‌ ಪವಾರ್‌‌ ಮಹಾರಾಷ್ಟ್ರದ ಮಗ. ಒಕ್ಕೂಟ ಸರ್ಕಾರದ ಸಚಿವ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಮೋದಿ ಮತ್ತು ಅಮಿತ್ ಶಾ ಅವರೇ, ಇದನ್ನು ನೀವು ಕೇಳಿದ್ದೀರಾ? ನಿಮ್ಮ ಸಚಿವರು ಶರದ್ ಪವಾರ್‌ಗೆ ಬೆದರಿಕೆ ಹಾಕುತ್ತಿದ್ದಾರೆ. ನೀವು ಅಂತಹ ಬೆದರಿಕೆಗಳನ್ನು ಬೆಂಬಲಿಸುತ್ತೀರಾ ಎಂಬುವದನ್ನು ಮಹಾರಾಷ್ಟ್ರವು ತಿಳಿದುಕೊಳ್ಳಲು ಬಯಸುತ್ತದೆ” ಎಂದು ರಾವತ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಾರಾಷ್ಟ್ರ ಸರ್ಕಾರದಲ್ಲಿನ ಬಂಡಾಯದ ನಂತರ ಶಿವಸೇನೆಯ ಕೆಲವು ನಾಯಕರು ಇನ್ನೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೊಂದಿಗೆ ಇದ್ದಾರೆ. ಆದರೆ ಪಕ್ಷದ ಬಹುಪಾಲು ಶಾಸಕರು ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಬೆದರಿಕೆ ಬಗ್ಗೆ ಟ್ವೀಟ್ ಮಾಡಿರುವ ಸಂಜಯ್ ರಾವತ್‌, “ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉಳಿಸಲು ಒಂದು ವೇಳೆ ಶರದ್ ಪವಾರ್ ಪ್ರಯತ್ನಿಸಿದರೆ, ಅವರನ್ನು ಮನೆಗೆ ಹೋಗಲು ಬಿಡುವುದಿಲ್ಲ, ಅವರನ್ನು ರಸ್ತೆಯಲ್ಲೇ ತಡೆಯುತ್ತೇವೆ ಎಂದು ಒಕ್ಕೂಸ ಸರ್ಕಾರದ ಸಚಿವರೊಬ್ಬರು ಬೆದರಿಕೆ ಹಾಕಿದ್ದಾರೆ’’

“ಒಂದು ವೇಳೆ ಬಿಜೆಪಿ ಇದನ್ನು ಮಾಡುವುದಿದ್ದರೆ, ನೀವೇ ಅದನ್ನು ಘೋಷಿಸಿ. ಸರ್ಕಾರ ಉಳಿಯಲಿ ಅಥವಾ ಹೋಗಲಿ, ಶರದ್ ಪವಾರ್ ಅವರ ವಿರುದ್ಧ ಇಂತಹ ಮಾತುಗಳನ್ನು ಆಡುವುದನ್ನು ನಾವು ಒಪ್ಪುವುದಿಲ್ಲ” ಎಂದು ಬರೆದಿದ್ದಾರೆ.

ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಉರುಳುವ ಸಾಧ್ಯತೆ ಇರುವ ಈ ಬಂಡಾಯದಲ್ಲಿ, ಉದ್ಧವ್ ಠಾಕ್ರೆ ಅವರ ತಂದೆ ಬಾಳ್ ಠಾಕ್ರೆ ಸ್ಥಾಪಿಸಿದ ಪಕ್ಷದವರೇ ಹೆಚ್ಚಿನ ಜನರಿದ್ದಾರೆ. ಸಚಿವ ಏಕನಾಥ್ ಶಿಂಧೆ ಅವರು ಶಿವಸೇನೆಯ 50 ಶಾಸಕರಲ್ಲಿ 40 ಶಾಸಕರ ಬೆಂಬಲ ಇದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಈಶಾನ್ಯ ಪ್ರವಾಹಕ್ಕೆ ಕುರುಡಾಗಿರುವ ಬಿಜೆಪಿಗೆ ಅಧಿಕಾರದಲ್ಲಿ ಮಾತ್ರ ಆಸಕ್ತಿ: ಕಾಂಗ್ರೆಸ್

ಶಿಂಧೆ ಮತ್ತು ಬಂಡಾಯ ಶಾಸಕರು ಮಂಗಳವಾರ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌‌ಗೆ ತೆರಳುವ ಮೂಲಕ ಸರ್ಕಾರದ ವಿರುದ್ಧ ತಮ್ಮ ದಂಗೆಯನ್ನು ಪ್ರಾರಂಭಿಸಿದರು. ಅಲ್ಲಿಂದ ಅವರು ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂಗೆ ವಿಶೇಷ ವಿಮಾನಗಳ ಮೂಲಕ ತೆರಳಿದ್ದಾರೆ.

ಉದ್ಧವ್ ಠಾಕ್ರೆ ಅವರು ಶಿಂಧೆ ಸೇರಿದಂತೆ 12 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದಾರೆ. ಆದರೆ ಶಿಂಧೆ ಅವರು ತಮ್ಮೊಂದಿಗೆ ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸುತ್ತಿದ್ದು, ತಾವೇ ನಿಜವಾದ ಶಿವಸೇನೆ ಎಂದು ಹೇಳಿಕೊಂಡಿದ್ದಾರೆ.

ಶರದ್ ಪವಾರ್ ಅವರ ಪಕ್ಷ ಮತ್ತು ಕಾಂಗ್ರೆಸ್‌ನೊಂದಿಗಿನ ತನ್ನ ‘ಅಸ್ವಾಭಾವಿಕ ಮೈತ್ರಿ’ಯನ್ನು ಶಿವಸೇನೆ ಕೊನೆಗೊಳಿಸಬೇಕು ಮತ್ತು ಹಳೆಯ ಮಿತ್ರಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿ ಮಹಾರಾಷ್ಟ್ರವನ್ನು ಆಳಬೇಕು ಎಂದು ಬಂಡಾಯ ನಾಯಕ ಶಿಂಧೆ ಅವರು ಪ್ರತಿಪಾದಿಸುತ್ತಿದ್ದಾರೆ.

ಇದನ್ನೂ ಓದಿ: ‘ಮೈತ್ರಿ ತೊರೆಯುವ ಬಗ್ಗೆ ಚರ್ಚಿಸುತ್ತೇವೆ, ಬಂಡಾಯ ಶಾಸಕರು ಹಿಂತಿರುಗುವ ಧೈರ್ಯ ತೋರಲಿ’: ಶಿವಸೇನೆ ವಕ್ತಾರ ಸಂಜಯ್ ರಾವತ್‌

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಿದ ನಂತರ ಶಾಸಕರು ಸರ್ಕಾರದ ಭವಿಷ್ಯವನ್ನು ನಿರ್ಧರಿಸುತ್ತಾರೆ ಎಂದು ಶರದ್ ಪವಾರ್ ಅವರು ನಿನ್ನೆ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...