Homeಮುಖಪುಟ‘ನಿಮ್ಮ ಅತ್ತಿಗೆ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರಾ?’: NCB ಅಧಿಕಾರಿಗೆ ನವಾಬ್ ಮಲಿಕ್ ಪ್ರಶ್ನೆ

‘ನಿಮ್ಮ ಅತ್ತಿಗೆ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರಾ?’: NCB ಅಧಿಕಾರಿಗೆ ನವಾಬ್ ಮಲಿಕ್ ಪ್ರಶ್ನೆ

- Advertisement -
- Advertisement -

ಬಾಲಿವುಡ್‌ ನಟ ಶಾರುಕ್‌ ಖಾನ್‌ ಅವರ ಮಗ ಆರ್ಯನ್‌ ಖಾನ್‌ ಡ್ರಗ್ಸ್‌ ಆರೋಪ ಪ್ರಕರಣದ ವಿಚಾರದಲ್ಲಿ, ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿ ಸಮೀರ್ ವಾಂಖೆಡೆ ನಡುವಿನ ಮಾತಿನ ಚಕಮಕಿ ಸೋಮವಾರ ತೀವ್ರಗೊಂಡಿದೆ.

ಇಂದು ಸಮೀರ್‌ ವಾಂಖೆಡೆಯ ಮೇಲೆ ಹೊಸ ದಾಳಿ ಮಾಡಿರುವ ನವಾಬ್‌ ಮಲಿಕ್‌, “ಸಮೀರ್ ದಾವೂದ್ ವಾಂಖೆಡೆ, ನಿಮ್ಮ ಅತ್ತಿಗೆ ಹರ್ಷದಾ ದೀನಾನಾಥ್ ರೆಡ್ಕರ್ ಡ್ರಗ್ ದಂಧೆಯಲ್ಲಿ ತೊಡಗಿದ್ದಾರೆಯೇ? ಆಕೆಯ ಮೇಲಿನ ಪ್ರಕರಣ ಪುಣೆ ನ್ಯಾಯಾಲಯದಲ್ಲಿ ಬಾಕಿ ಇದ್ದು, ಇದಕ್ಕೆ ಕಾರಣವೇನೆಂದು ನೀವು ಉತ್ತರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ ಟ್ವೀಟ್‌‌ನಲ್ಲಿ ದಾಖಲೆಯನ್ನೂ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!

ಜನವರಿ 14, 2008 ರಂದು ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ವಸ್ತುಗಳ (ಎನ್‌ಡಿಪಿಎಸ್) ಕಾಯ್ದೆಯ ಅಕ್ರಮ ಸಾಗಣೆ ತಡೆ ಕಾಯ್ದೆಯ ಸೆಕ್ಷನ್ 3458 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಸಚಿವ ನವಾಬ್‌ ಮಲಿಕ್‌ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್ ದಾಖಲೆ ಹೇಳುತ್ತದೆ. ಈ ಪ್ರಕರಣದ ವಿಚಾರಣೆಯು ಫೆಬ್ರವರಿ 18, 2008 ರಂದು ನಡೆದಿದ್ದು, ಮುಂದಿನ ವಿಚಾರಣೆಯನ್ನು ಮಾರ್ಚ್ 18, 2022 ಕ್ಕೆ ನಿಗದಿಪಡಿಸಲಾಗಿದೆ ಎಂದು ಆ ದಾಖಲೆಯಿಂದ ತಿಳಿದು ಬರುತ್ತದೆ.

ಈ ಮಧ್ಯೆ, ನವಾಬ್‌ ಮಲಿಕ್‌ ಅವರ ಟ್ವಿಟ್‌ಗೆ ಪ್ರತಿಕ್ರಿಯಿಸಿರುವ ಸಮೀರ್‌‌ ವಾಂಖೆಡೆ ಪ್ರಕರಣವನ್ನು ತನಗೆ ಲಿಂಕ್ ಮಾಡುತ್ತಿರುವುದರ ಬಗ್ಗೆ ಪ್ರಶ್ನಿಸಿದ್ದಾರೆ. “ಜನವರಿ 2008 ರಲ್ಲಿ ಪ್ರಕರಣ ನಡೆದಾಗ ನಾನು ಸೇವೆಯಲ್ಲಿ ಇರಲಿಲ್ಲ. ನಾನು ಕ್ರಾಂತಿ ರೆಡ್ಕರ್ ಅವರನ್ನು 2017 ರಲ್ಲಿ ವಿವಾಹವಾದೆ. ಹೀಗಾಗಿ ನನಗೂ, ಈ ಪ್ರಕರಣಕ್ಕೂ ಏನು ಸಂಬಂಧವಿದೆ” ಎಂದು ಅವರು ಹೇಳಿದ್ದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಕಳೆದ ಶುಕ್ರವಾರ, ಡ್ರಗ್ಸ್ ವಿರೋಧಿ ಸಂಸ್ಥೆ ತನ್ನ ಮುಂಬೈ ಘಟಕದಿಂದ ತನಿಖೆ ನಡೆಸುತ್ತಿರುವ ಒಟ್ಟು ಆರು ಪ್ರಕರಣಗಳನ್ನು ದೆಹಲಿಯಲ್ಲಿರುವ ತನ್ನ ಕಾರ್ಯಾಚರಣಾ ಶಾಖೆಗೆ ವರ್ಗಾಯಿಸಿದೆ. ಇವುಗಳಲ್ಲಿ ಆರ್ಯನ್‌ ಪ್ರಕರಣ (ಡ್ರಗ್ಸ್ ಆನ್ ಕ್ರೂಸ್ ಪ್ರಕರಣ) ಮತ್ತು ಈ ವರ್ಷದ ಜನವರಿಯಲ್ಲಿ ನವಾಬ್‌‌ ಮಲಿಕ್ ಅವರ ಅಳಿಯ ಸಮೀರ್ ಖಾನ್ ಅವರನ್ನು ಎನ್‌ಸಿಬಿ ಬಂಧಿಸಿದ ಪ್ರಕರಣವೂ ಸೇರಿದೆ. ಸಮೀರ್‌‌ ಖಾನ್ ಅವರಿಗೆ ಸೆಪ್ಟೆಂಬರ್ 27 ರಂದು ಜಾಮೀನು ನೀಡಲಾಗಿತ್ತು.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದುತ್ವ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...