Homeಮುಖಪುಟ‘ನಿಮ್ಮ ಅತ್ತಿಗೆ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರಾ?’: NCB ಅಧಿಕಾರಿಗೆ ನವಾಬ್ ಮಲಿಕ್ ಪ್ರಶ್ನೆ

‘ನಿಮ್ಮ ಅತ್ತಿಗೆ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರಾ?’: NCB ಅಧಿಕಾರಿಗೆ ನವಾಬ್ ಮಲಿಕ್ ಪ್ರಶ್ನೆ

- Advertisement -
- Advertisement -

ಬಾಲಿವುಡ್‌ ನಟ ಶಾರುಕ್‌ ಖಾನ್‌ ಅವರ ಮಗ ಆರ್ಯನ್‌ ಖಾನ್‌ ಡ್ರಗ್ಸ್‌ ಆರೋಪ ಪ್ರಕರಣದ ವಿಚಾರದಲ್ಲಿ, ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಅಧಿಕಾರಿ ಸಮೀರ್ ವಾಂಖೆಡೆ ನಡುವಿನ ಮಾತಿನ ಚಕಮಕಿ ಸೋಮವಾರ ತೀವ್ರಗೊಂಡಿದೆ.

ಇಂದು ಸಮೀರ್‌ ವಾಂಖೆಡೆಯ ಮೇಲೆ ಹೊಸ ದಾಳಿ ಮಾಡಿರುವ ನವಾಬ್‌ ಮಲಿಕ್‌, “ಸಮೀರ್ ದಾವೂದ್ ವಾಂಖೆಡೆ, ನಿಮ್ಮ ಅತ್ತಿಗೆ ಹರ್ಷದಾ ದೀನಾನಾಥ್ ರೆಡ್ಕರ್ ಡ್ರಗ್ ದಂಧೆಯಲ್ಲಿ ತೊಡಗಿದ್ದಾರೆಯೇ? ಆಕೆಯ ಮೇಲಿನ ಪ್ರಕರಣ ಪುಣೆ ನ್ಯಾಯಾಲಯದಲ್ಲಿ ಬಾಕಿ ಇದ್ದು, ಇದಕ್ಕೆ ಕಾರಣವೇನೆಂದು ನೀವು ಉತ್ತರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ ಟ್ವೀಟ್‌‌ನಲ್ಲಿ ದಾಖಲೆಯನ್ನೂ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!

ಜನವರಿ 14, 2008 ರಂದು ಮಾದಕ ದ್ರವ್ಯಗಳು ಮತ್ತು ಸೈಕೋಟ್ರೋಪಿಕ್ ವಸ್ತುಗಳ (ಎನ್‌ಡಿಪಿಎಸ್) ಕಾಯ್ದೆಯ ಅಕ್ರಮ ಸಾಗಣೆ ತಡೆ ಕಾಯ್ದೆಯ ಸೆಕ್ಷನ್ 3458 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಸಚಿವ ನವಾಬ್‌ ಮಲಿಕ್‌ ಹಂಚಿಕೊಂಡಿರುವ ಸ್ಕ್ರೀನ್‌ಶಾಟ್ ದಾಖಲೆ ಹೇಳುತ್ತದೆ. ಈ ಪ್ರಕರಣದ ವಿಚಾರಣೆಯು ಫೆಬ್ರವರಿ 18, 2008 ರಂದು ನಡೆದಿದ್ದು, ಮುಂದಿನ ವಿಚಾರಣೆಯನ್ನು ಮಾರ್ಚ್ 18, 2022 ಕ್ಕೆ ನಿಗದಿಪಡಿಸಲಾಗಿದೆ ಎಂದು ಆ ದಾಖಲೆಯಿಂದ ತಿಳಿದು ಬರುತ್ತದೆ.

ಈ ಮಧ್ಯೆ, ನವಾಬ್‌ ಮಲಿಕ್‌ ಅವರ ಟ್ವಿಟ್‌ಗೆ ಪ್ರತಿಕ್ರಿಯಿಸಿರುವ ಸಮೀರ್‌‌ ವಾಂಖೆಡೆ ಪ್ರಕರಣವನ್ನು ತನಗೆ ಲಿಂಕ್ ಮಾಡುತ್ತಿರುವುದರ ಬಗ್ಗೆ ಪ್ರಶ್ನಿಸಿದ್ದಾರೆ. “ಜನವರಿ 2008 ರಲ್ಲಿ ಪ್ರಕರಣ ನಡೆದಾಗ ನಾನು ಸೇವೆಯಲ್ಲಿ ಇರಲಿಲ್ಲ. ನಾನು ಕ್ರಾಂತಿ ರೆಡ್ಕರ್ ಅವರನ್ನು 2017 ರಲ್ಲಿ ವಿವಾಹವಾದೆ. ಹೀಗಾಗಿ ನನಗೂ, ಈ ಪ್ರಕರಣಕ್ಕೂ ಏನು ಸಂಬಂಧವಿದೆ” ಎಂದು ಅವರು ಹೇಳಿದ್ದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಕಳೆದ ಶುಕ್ರವಾರ, ಡ್ರಗ್ಸ್ ವಿರೋಧಿ ಸಂಸ್ಥೆ ತನ್ನ ಮುಂಬೈ ಘಟಕದಿಂದ ತನಿಖೆ ನಡೆಸುತ್ತಿರುವ ಒಟ್ಟು ಆರು ಪ್ರಕರಣಗಳನ್ನು ದೆಹಲಿಯಲ್ಲಿರುವ ತನ್ನ ಕಾರ್ಯಾಚರಣಾ ಶಾಖೆಗೆ ವರ್ಗಾಯಿಸಿದೆ. ಇವುಗಳಲ್ಲಿ ಆರ್ಯನ್‌ ಪ್ರಕರಣ (ಡ್ರಗ್ಸ್ ಆನ್ ಕ್ರೂಸ್ ಪ್ರಕರಣ) ಮತ್ತು ಈ ವರ್ಷದ ಜನವರಿಯಲ್ಲಿ ನವಾಬ್‌‌ ಮಲಿಕ್ ಅವರ ಅಳಿಯ ಸಮೀರ್ ಖಾನ್ ಅವರನ್ನು ಎನ್‌ಸಿಬಿ ಬಂಧಿಸಿದ ಪ್ರಕರಣವೂ ಸೇರಿದೆ. ಸಮೀರ್‌‌ ಖಾನ್ ಅವರಿಗೆ ಸೆಪ್ಟೆಂಬರ್ 27 ರಂದು ಜಾಮೀನು ನೀಡಲಾಗಿತ್ತು.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...