Homeಮುಖಪುಟನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

- Advertisement -
- Advertisement -

ನಿಮ್ಮ ಟಿಕೆಟ್ ಶುಲ್ಕವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾವತಿಸಿದ್ದಾರೆ. ಕಾಂಗ್ರೆಸ್ ಪಕ್ಷ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಖರ್ ಅವರು ನಿಮ್ಮನ್ನು ಕಳುಹಿಸುತ್ತಿದ್ದಾರೆ. ಎಲ್ಲವನ್ನೂ ಈ ಕರಪತ್ರದಲ್ಲಿ ಬರೆಯಲಾಗಿದೆ, ನಿಮ್ಮ ಪ್ರಯಾಣದ ಬಿಡುವಿನ ವೇಳೆಯಲ್ಲಿ ನೀವು ಇದನ್ನು ಓದಬಹುದು ಎಂದು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಭಾಷಣ ಮಾಡಿರುವ ವಿಶೇಷ ಘಟನೆ ಜರುಗಿದೆ.

ಕಾಂಗ್ರೆಸ್‌ ಶಾಸಕರಾದ ಅಮರಿಂದರ್ ರಾಜಾ ವಾರಿಂಗ್ ಅವರು ಇಂದು ಪಂಜಾಬ್‌ನಿಂದ ರೈಲಿನಲ್ಲಿ ಬಿಹಾರದ ಮುಜಾಫರ್‌ಪುರಕ್ಕೆ ತೆರಳುತ್ತಿರುವ ವಲಸಿಗರನ್ನು ನೋಡಲು ಮತ್ತು ಅದಕ್ಕೆ ಹಣ ಪಾವತಿಸಿದವರು ಯಾರೆಂದು ಅವರಿಗೆ ತಿಳಿದಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರ ತಂಡದೊಂದಿಗೆ ರೈಲು ನಿಲ್ದಾಣಕ್ಕೆ ಧಾವಿಸಿದ್ದಾರೆ.

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

Posted by Naanu Gauri on Monday, May 11, 2020

ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ವಲಸಿಗರಿಗೆ ವಿಶೇಷ ರೈಲು ಭಾನುವಾರ ಆರಂಭವಾಗುತ್ತಿದ್ದಂತೆಯೇ ಪ್ರತಿ ಪ್ರಯಾಣಿಕರಿಗೆ “ನಿಮ್ಮ ಅಗತ್ಯದ ಸಮಯದಲ್ಲಿ ಕಾಂಗ್ರೆಸ್ ಜೊತೆಗಿರುತ್ತದೆ” ಎಂದು ಶೀರ್ಷಿಕೆಯುಳ್ಳ ಕರಪತ್ರವನ್ನು ಹಂಚಲಾಯಿತು. “ನಿಮ್ಮ ಟಿಕೆಟ್ ದರವನ್ನು ಸೋನಿಯಾ ಗಾಂಧಿ ಪಾವತಿಸಿದ್ದಾರೆ” ವಲಸೆ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಳೆದ ವಾರ ಘೋಷಿಸಿದ್ದ ಒಂದು ಕ್ರಮದಿಂದ ಇದು ಸಾಧ್ಯವಾಗಿದೆ ಎಂದು ಆ ಶಾಸಕರು ಭಟಿಂಡಾ ನಿಲ್ದಾಣದಲ್ಲಿ ಭಾಷಣ ಮಾಡಿದ್ದಾರೆ.

ವೈರಲ್‌ ವಿಡಯೋದ ದೃಶ್ಯಗಳಲ್ಲಿ ಗಿಡ್ಡರ್‌ಬಾಹಾದ ಶಾಸಕರು ಕಿಟಕಿಗಳ ಮೂಲಕ ರೈಲಿನಲ್ಲಿ ಕುಳಿತ ಪ್ರಯಾಣಿಕರಿಗೆ ಕರಪತ್ರಗಳನ್ನು ಹಂಚುವುದನ್ನು ಕಾಣಬಹುದು.

ಮೇ 1 ರಿಂದ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್‌ ರೈಲುಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ ಅದರ ಟಿಕೆಟ್ ಹಣವನ್ನು ಕಾರ್ಮಿಕರಿಂದಲೇ ಪಡೆಯಲು ನಿರ್ಧರಿಸಿತ್ತು. ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ಕಾರ್ಮಿಕರು ರೈಲು ಪ್ರಯಾಣದರವನ್ನು ಭರಿಸಲು ಸಾಧ್ಯವಾಗದ ಹಲವು ದೃಶ್ಯಗಳು ಕಂಡುಬಂದಿದ್ದವು. ನಂತರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದ ಎಲ್ಲಾ ಕಾರ್ಮಿಕರ ರೈಲು ಪ್ರಯಣದರವನ್ನು ಕಾಂಗ್ರೆಸ್‌ ಪಕ್ಷ ಭರಿಸುತ್ತದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 


ತದನಂತರ ರೈಲ್ವೆ ಸಚಿವಾಲಯವು ಶೇಕಡಾ 85 ರಷ್ಟು ಶುಲ್ಕವನ್ನು ಕೇಂದ್ರ ಸರ್ಕಾರ ಪಾವತಿ ಮಾಡುತ್ತದೆ ಮತ್ತು ಉಳಿದ ಹಣವನ್ನು ರಾಜ್ಯಗಳು ಪಾವತಿಸಬಹುದೆಂದು ಸ್ಪಷ್ಟಪಡಿಸಿತು. ಆದಾಗ್ಯೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಯಾಣದರವನ್ನು ವಲಸೆ ಕಾರ್ಮಿಕರಿಂದಲೇ ವಸೂಲಿ ಮಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ಧ ಪ್ರತಿಭಟನೆಯೂ ಆರಂಭವಾಗಿದೆ.

ಇಂತಹ ಸಮಯದಲ್ಲಿ ಪಂಜಾಬ್‌ ಸರ್ಕಾರ ಉಚಿತವಾಗಿ ವಲಸೆ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದ ಅದಕ್ಕಾಗಿ ಕರಪತ್ರವನ್ನು ಸಹ ಹಂಚುತ್ತಿರುವುದು ವಿಶೇಷವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ತಪ್ಪು ಸಂದೇಶ್ ನೀಡುವ ವಿಚಾರವಾಗಿದೆ ಬಿಜೆಪಿ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...