Homeಮುಖಪುಟನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

- Advertisement -
- Advertisement -

ನಿಮ್ಮ ಟಿಕೆಟ್ ಶುಲ್ಕವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾವತಿಸಿದ್ದಾರೆ. ಕಾಂಗ್ರೆಸ್ ಪಕ್ಷ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಖರ್ ಅವರು ನಿಮ್ಮನ್ನು ಕಳುಹಿಸುತ್ತಿದ್ದಾರೆ. ಎಲ್ಲವನ್ನೂ ಈ ಕರಪತ್ರದಲ್ಲಿ ಬರೆಯಲಾಗಿದೆ, ನಿಮ್ಮ ಪ್ರಯಾಣದ ಬಿಡುವಿನ ವೇಳೆಯಲ್ಲಿ ನೀವು ಇದನ್ನು ಓದಬಹುದು ಎಂದು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಭಾಷಣ ಮಾಡಿರುವ ವಿಶೇಷ ಘಟನೆ ಜರುಗಿದೆ.

ಕಾಂಗ್ರೆಸ್‌ ಶಾಸಕರಾದ ಅಮರಿಂದರ್ ರಾಜಾ ವಾರಿಂಗ್ ಅವರು ಇಂದು ಪಂಜಾಬ್‌ನಿಂದ ರೈಲಿನಲ್ಲಿ ಬಿಹಾರದ ಮುಜಾಫರ್‌ಪುರಕ್ಕೆ ತೆರಳುತ್ತಿರುವ ವಲಸಿಗರನ್ನು ನೋಡಲು ಮತ್ತು ಅದಕ್ಕೆ ಹಣ ಪಾವತಿಸಿದವರು ಯಾರೆಂದು ಅವರಿಗೆ ತಿಳಿದಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರ ತಂಡದೊಂದಿಗೆ ರೈಲು ನಿಲ್ದಾಣಕ್ಕೆ ಧಾವಿಸಿದ್ದಾರೆ.

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

Posted by Naanu Gauri on Monday, May 11, 2020

ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ವಲಸಿಗರಿಗೆ ವಿಶೇಷ ರೈಲು ಭಾನುವಾರ ಆರಂಭವಾಗುತ್ತಿದ್ದಂತೆಯೇ ಪ್ರತಿ ಪ್ರಯಾಣಿಕರಿಗೆ “ನಿಮ್ಮ ಅಗತ್ಯದ ಸಮಯದಲ್ಲಿ ಕಾಂಗ್ರೆಸ್ ಜೊತೆಗಿರುತ್ತದೆ” ಎಂದು ಶೀರ್ಷಿಕೆಯುಳ್ಳ ಕರಪತ್ರವನ್ನು ಹಂಚಲಾಯಿತು. “ನಿಮ್ಮ ಟಿಕೆಟ್ ದರವನ್ನು ಸೋನಿಯಾ ಗಾಂಧಿ ಪಾವತಿಸಿದ್ದಾರೆ” ವಲಸೆ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಳೆದ ವಾರ ಘೋಷಿಸಿದ್ದ ಒಂದು ಕ್ರಮದಿಂದ ಇದು ಸಾಧ್ಯವಾಗಿದೆ ಎಂದು ಆ ಶಾಸಕರು ಭಟಿಂಡಾ ನಿಲ್ದಾಣದಲ್ಲಿ ಭಾಷಣ ಮಾಡಿದ್ದಾರೆ.

ವೈರಲ್‌ ವಿಡಯೋದ ದೃಶ್ಯಗಳಲ್ಲಿ ಗಿಡ್ಡರ್‌ಬಾಹಾದ ಶಾಸಕರು ಕಿಟಕಿಗಳ ಮೂಲಕ ರೈಲಿನಲ್ಲಿ ಕುಳಿತ ಪ್ರಯಾಣಿಕರಿಗೆ ಕರಪತ್ರಗಳನ್ನು ಹಂಚುವುದನ್ನು ಕಾಣಬಹುದು.

ಮೇ 1 ರಿಂದ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್‌ ರೈಲುಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ ಅದರ ಟಿಕೆಟ್ ಹಣವನ್ನು ಕಾರ್ಮಿಕರಿಂದಲೇ ಪಡೆಯಲು ನಿರ್ಧರಿಸಿತ್ತು. ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ಕಾರ್ಮಿಕರು ರೈಲು ಪ್ರಯಾಣದರವನ್ನು ಭರಿಸಲು ಸಾಧ್ಯವಾಗದ ಹಲವು ದೃಶ್ಯಗಳು ಕಂಡುಬಂದಿದ್ದವು. ನಂತರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದ ಎಲ್ಲಾ ಕಾರ್ಮಿಕರ ರೈಲು ಪ್ರಯಣದರವನ್ನು ಕಾಂಗ್ರೆಸ್‌ ಪಕ್ಷ ಭರಿಸುತ್ತದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 


ತದನಂತರ ರೈಲ್ವೆ ಸಚಿವಾಲಯವು ಶೇಕಡಾ 85 ರಷ್ಟು ಶುಲ್ಕವನ್ನು ಕೇಂದ್ರ ಸರ್ಕಾರ ಪಾವತಿ ಮಾಡುತ್ತದೆ ಮತ್ತು ಉಳಿದ ಹಣವನ್ನು ರಾಜ್ಯಗಳು ಪಾವತಿಸಬಹುದೆಂದು ಸ್ಪಷ್ಟಪಡಿಸಿತು. ಆದಾಗ್ಯೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಯಾಣದರವನ್ನು ವಲಸೆ ಕಾರ್ಮಿಕರಿಂದಲೇ ವಸೂಲಿ ಮಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ಧ ಪ್ರತಿಭಟನೆಯೂ ಆರಂಭವಾಗಿದೆ.

ಇಂತಹ ಸಮಯದಲ್ಲಿ ಪಂಜಾಬ್‌ ಸರ್ಕಾರ ಉಚಿತವಾಗಿ ವಲಸೆ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದ ಅದಕ್ಕಾಗಿ ಕರಪತ್ರವನ್ನು ಸಹ ಹಂಚುತ್ತಿರುವುದು ವಿಶೇಷವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ತಪ್ಪು ಸಂದೇಶ್ ನೀಡುವ ವಿಚಾರವಾಗಿದೆ ಬಿಜೆಪಿ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...