Homeಮುಖಪುಟನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

- Advertisement -
- Advertisement -

ನಿಮ್ಮ ಟಿಕೆಟ್ ಶುಲ್ಕವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾವತಿಸಿದ್ದಾರೆ. ಕಾಂಗ್ರೆಸ್ ಪಕ್ಷ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಖರ್ ಅವರು ನಿಮ್ಮನ್ನು ಕಳುಹಿಸುತ್ತಿದ್ದಾರೆ. ಎಲ್ಲವನ್ನೂ ಈ ಕರಪತ್ರದಲ್ಲಿ ಬರೆಯಲಾಗಿದೆ, ನಿಮ್ಮ ಪ್ರಯಾಣದ ಬಿಡುವಿನ ವೇಳೆಯಲ್ಲಿ ನೀವು ಇದನ್ನು ಓದಬಹುದು ಎಂದು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಭಾಷಣ ಮಾಡಿರುವ ವಿಶೇಷ ಘಟನೆ ಜರುಗಿದೆ.

ಕಾಂಗ್ರೆಸ್‌ ಶಾಸಕರಾದ ಅಮರಿಂದರ್ ರಾಜಾ ವಾರಿಂಗ್ ಅವರು ಇಂದು ಪಂಜಾಬ್‌ನಿಂದ ರೈಲಿನಲ್ಲಿ ಬಿಹಾರದ ಮುಜಾಫರ್‌ಪುರಕ್ಕೆ ತೆರಳುತ್ತಿರುವ ವಲಸಿಗರನ್ನು ನೋಡಲು ಮತ್ತು ಅದಕ್ಕೆ ಹಣ ಪಾವತಿಸಿದವರು ಯಾರೆಂದು ಅವರಿಗೆ ತಿಳಿದಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರ ತಂಡದೊಂದಿಗೆ ರೈಲು ನಿಲ್ದಾಣಕ್ಕೆ ಧಾವಿಸಿದ್ದಾರೆ.

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

Posted by Naanu Gauri on Monday, May 11, 2020

ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ವಲಸಿಗರಿಗೆ ವಿಶೇಷ ರೈಲು ಭಾನುವಾರ ಆರಂಭವಾಗುತ್ತಿದ್ದಂತೆಯೇ ಪ್ರತಿ ಪ್ರಯಾಣಿಕರಿಗೆ “ನಿಮ್ಮ ಅಗತ್ಯದ ಸಮಯದಲ್ಲಿ ಕಾಂಗ್ರೆಸ್ ಜೊತೆಗಿರುತ್ತದೆ” ಎಂದು ಶೀರ್ಷಿಕೆಯುಳ್ಳ ಕರಪತ್ರವನ್ನು ಹಂಚಲಾಯಿತು. “ನಿಮ್ಮ ಟಿಕೆಟ್ ದರವನ್ನು ಸೋನಿಯಾ ಗಾಂಧಿ ಪಾವತಿಸಿದ್ದಾರೆ” ವಲಸೆ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಳೆದ ವಾರ ಘೋಷಿಸಿದ್ದ ಒಂದು ಕ್ರಮದಿಂದ ಇದು ಸಾಧ್ಯವಾಗಿದೆ ಎಂದು ಆ ಶಾಸಕರು ಭಟಿಂಡಾ ನಿಲ್ದಾಣದಲ್ಲಿ ಭಾಷಣ ಮಾಡಿದ್ದಾರೆ.

ವೈರಲ್‌ ವಿಡಯೋದ ದೃಶ್ಯಗಳಲ್ಲಿ ಗಿಡ್ಡರ್‌ಬಾಹಾದ ಶಾಸಕರು ಕಿಟಕಿಗಳ ಮೂಲಕ ರೈಲಿನಲ್ಲಿ ಕುಳಿತ ಪ್ರಯಾಣಿಕರಿಗೆ ಕರಪತ್ರಗಳನ್ನು ಹಂಚುವುದನ್ನು ಕಾಣಬಹುದು.

ಮೇ 1 ರಿಂದ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್‌ ರೈಲುಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ ಅದರ ಟಿಕೆಟ್ ಹಣವನ್ನು ಕಾರ್ಮಿಕರಿಂದಲೇ ಪಡೆಯಲು ನಿರ್ಧರಿಸಿತ್ತು. ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ಕಾರ್ಮಿಕರು ರೈಲು ಪ್ರಯಾಣದರವನ್ನು ಭರಿಸಲು ಸಾಧ್ಯವಾಗದ ಹಲವು ದೃಶ್ಯಗಳು ಕಂಡುಬಂದಿದ್ದವು. ನಂತರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದ ಎಲ್ಲಾ ಕಾರ್ಮಿಕರ ರೈಲು ಪ್ರಯಣದರವನ್ನು ಕಾಂಗ್ರೆಸ್‌ ಪಕ್ಷ ಭರಿಸುತ್ತದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 


ತದನಂತರ ರೈಲ್ವೆ ಸಚಿವಾಲಯವು ಶೇಕಡಾ 85 ರಷ್ಟು ಶುಲ್ಕವನ್ನು ಕೇಂದ್ರ ಸರ್ಕಾರ ಪಾವತಿ ಮಾಡುತ್ತದೆ ಮತ್ತು ಉಳಿದ ಹಣವನ್ನು ರಾಜ್ಯಗಳು ಪಾವತಿಸಬಹುದೆಂದು ಸ್ಪಷ್ಟಪಡಿಸಿತು. ಆದಾಗ್ಯೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಯಾಣದರವನ್ನು ವಲಸೆ ಕಾರ್ಮಿಕರಿಂದಲೇ ವಸೂಲಿ ಮಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ಧ ಪ್ರತಿಭಟನೆಯೂ ಆರಂಭವಾಗಿದೆ.

ಇಂತಹ ಸಮಯದಲ್ಲಿ ಪಂಜಾಬ್‌ ಸರ್ಕಾರ ಉಚಿತವಾಗಿ ವಲಸೆ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದ ಅದಕ್ಕಾಗಿ ಕರಪತ್ರವನ್ನು ಸಹ ಹಂಚುತ್ತಿರುವುದು ವಿಶೇಷವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ತಪ್ಪು ಸಂದೇಶ್ ನೀಡುವ ವಿಚಾರವಾಗಿದೆ ಬಿಜೆಪಿ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...