Homeಮುಖಪುಟನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

- Advertisement -
- Advertisement -

ನಿಮ್ಮ ಟಿಕೆಟ್ ಶುಲ್ಕವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾವತಿಸಿದ್ದಾರೆ. ಕಾಂಗ್ರೆಸ್ ಪಕ್ಷ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಖರ್ ಅವರು ನಿಮ್ಮನ್ನು ಕಳುಹಿಸುತ್ತಿದ್ದಾರೆ. ಎಲ್ಲವನ್ನೂ ಈ ಕರಪತ್ರದಲ್ಲಿ ಬರೆಯಲಾಗಿದೆ, ನಿಮ್ಮ ಪ್ರಯಾಣದ ಬಿಡುವಿನ ವೇಳೆಯಲ್ಲಿ ನೀವು ಇದನ್ನು ಓದಬಹುದು ಎಂದು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಭಾಷಣ ಮಾಡಿರುವ ವಿಶೇಷ ಘಟನೆ ಜರುಗಿದೆ.

ಕಾಂಗ್ರೆಸ್‌ ಶಾಸಕರಾದ ಅಮರಿಂದರ್ ರಾಜಾ ವಾರಿಂಗ್ ಅವರು ಇಂದು ಪಂಜಾಬ್‌ನಿಂದ ರೈಲಿನಲ್ಲಿ ಬಿಹಾರದ ಮುಜಾಫರ್‌ಪುರಕ್ಕೆ ತೆರಳುತ್ತಿರುವ ವಲಸಿಗರನ್ನು ನೋಡಲು ಮತ್ತು ಅದಕ್ಕೆ ಹಣ ಪಾವತಿಸಿದವರು ಯಾರೆಂದು ಅವರಿಗೆ ತಿಳಿದಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರ ತಂಡದೊಂದಿಗೆ ರೈಲು ನಿಲ್ದಾಣಕ್ಕೆ ಧಾವಿಸಿದ್ದಾರೆ.

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

Posted by Naanu Gauri on Monday, May 11, 2020

ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ವಲಸಿಗರಿಗೆ ವಿಶೇಷ ರೈಲು ಭಾನುವಾರ ಆರಂಭವಾಗುತ್ತಿದ್ದಂತೆಯೇ ಪ್ರತಿ ಪ್ರಯಾಣಿಕರಿಗೆ “ನಿಮ್ಮ ಅಗತ್ಯದ ಸಮಯದಲ್ಲಿ ಕಾಂಗ್ರೆಸ್ ಜೊತೆಗಿರುತ್ತದೆ” ಎಂದು ಶೀರ್ಷಿಕೆಯುಳ್ಳ ಕರಪತ್ರವನ್ನು ಹಂಚಲಾಯಿತು. “ನಿಮ್ಮ ಟಿಕೆಟ್ ದರವನ್ನು ಸೋನಿಯಾ ಗಾಂಧಿ ಪಾವತಿಸಿದ್ದಾರೆ” ವಲಸೆ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಳೆದ ವಾರ ಘೋಷಿಸಿದ್ದ ಒಂದು ಕ್ರಮದಿಂದ ಇದು ಸಾಧ್ಯವಾಗಿದೆ ಎಂದು ಆ ಶಾಸಕರು ಭಟಿಂಡಾ ನಿಲ್ದಾಣದಲ್ಲಿ ಭಾಷಣ ಮಾಡಿದ್ದಾರೆ.

ವೈರಲ್‌ ವಿಡಯೋದ ದೃಶ್ಯಗಳಲ್ಲಿ ಗಿಡ್ಡರ್‌ಬಾಹಾದ ಶಾಸಕರು ಕಿಟಕಿಗಳ ಮೂಲಕ ರೈಲಿನಲ್ಲಿ ಕುಳಿತ ಪ್ರಯಾಣಿಕರಿಗೆ ಕರಪತ್ರಗಳನ್ನು ಹಂಚುವುದನ್ನು ಕಾಣಬಹುದು.

ಮೇ 1 ರಿಂದ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್‌ ರೈಲುಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ ಅದರ ಟಿಕೆಟ್ ಹಣವನ್ನು ಕಾರ್ಮಿಕರಿಂದಲೇ ಪಡೆಯಲು ನಿರ್ಧರಿಸಿತ್ತು. ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ಕಾರ್ಮಿಕರು ರೈಲು ಪ್ರಯಾಣದರವನ್ನು ಭರಿಸಲು ಸಾಧ್ಯವಾಗದ ಹಲವು ದೃಶ್ಯಗಳು ಕಂಡುಬಂದಿದ್ದವು. ನಂತರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದ ಎಲ್ಲಾ ಕಾರ್ಮಿಕರ ರೈಲು ಪ್ರಯಣದರವನ್ನು ಕಾಂಗ್ರೆಸ್‌ ಪಕ್ಷ ಭರಿಸುತ್ತದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 


ತದನಂತರ ರೈಲ್ವೆ ಸಚಿವಾಲಯವು ಶೇಕಡಾ 85 ರಷ್ಟು ಶುಲ್ಕವನ್ನು ಕೇಂದ್ರ ಸರ್ಕಾರ ಪಾವತಿ ಮಾಡುತ್ತದೆ ಮತ್ತು ಉಳಿದ ಹಣವನ್ನು ರಾಜ್ಯಗಳು ಪಾವತಿಸಬಹುದೆಂದು ಸ್ಪಷ್ಟಪಡಿಸಿತು. ಆದಾಗ್ಯೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಯಾಣದರವನ್ನು ವಲಸೆ ಕಾರ್ಮಿಕರಿಂದಲೇ ವಸೂಲಿ ಮಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ಧ ಪ್ರತಿಭಟನೆಯೂ ಆರಂಭವಾಗಿದೆ.

ಇಂತಹ ಸಮಯದಲ್ಲಿ ಪಂಜಾಬ್‌ ಸರ್ಕಾರ ಉಚಿತವಾಗಿ ವಲಸೆ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದ ಅದಕ್ಕಾಗಿ ಕರಪತ್ರವನ್ನು ಸಹ ಹಂಚುತ್ತಿರುವುದು ವಿಶೇಷವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ತಪ್ಪು ಸಂದೇಶ್ ನೀಡುವ ವಿಚಾರವಾಗಿದೆ ಬಿಜೆಪಿ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...