Homeಮುಖಪುಟನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

- Advertisement -
- Advertisement -

ನಿಮ್ಮ ಟಿಕೆಟ್ ಶುಲ್ಕವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾವತಿಸಿದ್ದಾರೆ. ಕಾಂಗ್ರೆಸ್ ಪಕ್ಷ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಖರ್ ಅವರು ನಿಮ್ಮನ್ನು ಕಳುಹಿಸುತ್ತಿದ್ದಾರೆ. ಎಲ್ಲವನ್ನೂ ಈ ಕರಪತ್ರದಲ್ಲಿ ಬರೆಯಲಾಗಿದೆ, ನಿಮ್ಮ ಪ್ರಯಾಣದ ಬಿಡುವಿನ ವೇಳೆಯಲ್ಲಿ ನೀವು ಇದನ್ನು ಓದಬಹುದು ಎಂದು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಭಾಷಣ ಮಾಡಿರುವ ವಿಶೇಷ ಘಟನೆ ಜರುಗಿದೆ.

ಕಾಂಗ್ರೆಸ್‌ ಶಾಸಕರಾದ ಅಮರಿಂದರ್ ರಾಜಾ ವಾರಿಂಗ್ ಅವರು ಇಂದು ಪಂಜಾಬ್‌ನಿಂದ ರೈಲಿನಲ್ಲಿ ಬಿಹಾರದ ಮುಜಾಫರ್‌ಪುರಕ್ಕೆ ತೆರಳುತ್ತಿರುವ ವಲಸಿಗರನ್ನು ನೋಡಲು ಮತ್ತು ಅದಕ್ಕೆ ಹಣ ಪಾವತಿಸಿದವರು ಯಾರೆಂದು ಅವರಿಗೆ ತಿಳಿದಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರ ತಂಡದೊಂದಿಗೆ ರೈಲು ನಿಲ್ದಾಣಕ್ಕೆ ಧಾವಿಸಿದ್ದಾರೆ.

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

Posted by Naanu Gauri on Monday, May 11, 2020

ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ವಲಸಿಗರಿಗೆ ವಿಶೇಷ ರೈಲು ಭಾನುವಾರ ಆರಂಭವಾಗುತ್ತಿದ್ದಂತೆಯೇ ಪ್ರತಿ ಪ್ರಯಾಣಿಕರಿಗೆ “ನಿಮ್ಮ ಅಗತ್ಯದ ಸಮಯದಲ್ಲಿ ಕಾಂಗ್ರೆಸ್ ಜೊತೆಗಿರುತ್ತದೆ” ಎಂದು ಶೀರ್ಷಿಕೆಯುಳ್ಳ ಕರಪತ್ರವನ್ನು ಹಂಚಲಾಯಿತು. “ನಿಮ್ಮ ಟಿಕೆಟ್ ದರವನ್ನು ಸೋನಿಯಾ ಗಾಂಧಿ ಪಾವತಿಸಿದ್ದಾರೆ” ವಲಸೆ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಳೆದ ವಾರ ಘೋಷಿಸಿದ್ದ ಒಂದು ಕ್ರಮದಿಂದ ಇದು ಸಾಧ್ಯವಾಗಿದೆ ಎಂದು ಆ ಶಾಸಕರು ಭಟಿಂಡಾ ನಿಲ್ದಾಣದಲ್ಲಿ ಭಾಷಣ ಮಾಡಿದ್ದಾರೆ.

ವೈರಲ್‌ ವಿಡಯೋದ ದೃಶ್ಯಗಳಲ್ಲಿ ಗಿಡ್ಡರ್‌ಬಾಹಾದ ಶಾಸಕರು ಕಿಟಕಿಗಳ ಮೂಲಕ ರೈಲಿನಲ್ಲಿ ಕುಳಿತ ಪ್ರಯಾಣಿಕರಿಗೆ ಕರಪತ್ರಗಳನ್ನು ಹಂಚುವುದನ್ನು ಕಾಣಬಹುದು.

ಮೇ 1 ರಿಂದ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್‌ ರೈಲುಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ ಅದರ ಟಿಕೆಟ್ ಹಣವನ್ನು ಕಾರ್ಮಿಕರಿಂದಲೇ ಪಡೆಯಲು ನಿರ್ಧರಿಸಿತ್ತು. ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ಕಾರ್ಮಿಕರು ರೈಲು ಪ್ರಯಾಣದರವನ್ನು ಭರಿಸಲು ಸಾಧ್ಯವಾಗದ ಹಲವು ದೃಶ್ಯಗಳು ಕಂಡುಬಂದಿದ್ದವು. ನಂತರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದ ಎಲ್ಲಾ ಕಾರ್ಮಿಕರ ರೈಲು ಪ್ರಯಣದರವನ್ನು ಕಾಂಗ್ರೆಸ್‌ ಪಕ್ಷ ಭರಿಸುತ್ತದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 


ತದನಂತರ ರೈಲ್ವೆ ಸಚಿವಾಲಯವು ಶೇಕಡಾ 85 ರಷ್ಟು ಶುಲ್ಕವನ್ನು ಕೇಂದ್ರ ಸರ್ಕಾರ ಪಾವತಿ ಮಾಡುತ್ತದೆ ಮತ್ತು ಉಳಿದ ಹಣವನ್ನು ರಾಜ್ಯಗಳು ಪಾವತಿಸಬಹುದೆಂದು ಸ್ಪಷ್ಟಪಡಿಸಿತು. ಆದಾಗ್ಯೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಯಾಣದರವನ್ನು ವಲಸೆ ಕಾರ್ಮಿಕರಿಂದಲೇ ವಸೂಲಿ ಮಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ಧ ಪ್ರತಿಭಟನೆಯೂ ಆರಂಭವಾಗಿದೆ.

ಇಂತಹ ಸಮಯದಲ್ಲಿ ಪಂಜಾಬ್‌ ಸರ್ಕಾರ ಉಚಿತವಾಗಿ ವಲಸೆ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದ ಅದಕ್ಕಾಗಿ ಕರಪತ್ರವನ್ನು ಸಹ ಹಂಚುತ್ತಿರುವುದು ವಿಶೇಷವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ತಪ್ಪು ಸಂದೇಶ್ ನೀಡುವ ವಿಚಾರವಾಗಿದೆ ಬಿಜೆಪಿ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...