Homeಮುಖಪುಟನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

- Advertisement -
- Advertisement -

ನಿಮ್ಮ ಟಿಕೆಟ್ ಶುಲ್ಕವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾವತಿಸಿದ್ದಾರೆ. ಕಾಂಗ್ರೆಸ್ ಪಕ್ಷ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಸುನಿಲ್ ಜಖರ್ ಅವರು ನಿಮ್ಮನ್ನು ಕಳುಹಿಸುತ್ತಿದ್ದಾರೆ. ಎಲ್ಲವನ್ನೂ ಈ ಕರಪತ್ರದಲ್ಲಿ ಬರೆಯಲಾಗಿದೆ, ನಿಮ್ಮ ಪ್ರಯಾಣದ ಬಿಡುವಿನ ವೇಳೆಯಲ್ಲಿ ನೀವು ಇದನ್ನು ಓದಬಹುದು ಎಂದು ಪಂಜಾಬ್‌ನ ಕಾಂಗ್ರೆಸ್ ಶಾಸಕರು ಭಾಷಣ ಮಾಡಿರುವ ವಿಶೇಷ ಘಟನೆ ಜರುಗಿದೆ.

ಕಾಂಗ್ರೆಸ್‌ ಶಾಸಕರಾದ ಅಮರಿಂದರ್ ರಾಜಾ ವಾರಿಂಗ್ ಅವರು ಇಂದು ಪಂಜಾಬ್‌ನಿಂದ ರೈಲಿನಲ್ಲಿ ಬಿಹಾರದ ಮುಜಾಫರ್‌ಪುರಕ್ಕೆ ತೆರಳುತ್ತಿರುವ ವಲಸಿಗರನ್ನು ನೋಡಲು ಮತ್ತು ಅದಕ್ಕೆ ಹಣ ಪಾವತಿಸಿದವರು ಯಾರೆಂದು ಅವರಿಗೆ ತಿಳಿದಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರ ತಂಡದೊಂದಿಗೆ ರೈಲು ನಿಲ್ದಾಣಕ್ಕೆ ಧಾವಿಸಿದ್ದಾರೆ.

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ

ನಿಮ್ಮ ಟಿಕೆಟ್‌ ಶುಲ್ಕವನ್ನು ಸೋನಿಯಾಗಾಂಧಿ ಪಾವತಿಸಿದ್ದಾರೆ ; ರೈಲಿನಲ್ಲಿ ಕರಪತ್ರ ಹಂಚಿದ ಕಾಂಗ್ರೆಸ್‌ ಶಾಸಕ

Posted by Naanu Gauri on Monday, May 11, 2020

ಕಾಂಗ್ರೆಸ್ ಆಡಳಿತದ ಪಂಜಾಬ್‌ನಲ್ಲಿ ವಲಸಿಗರಿಗೆ ವಿಶೇಷ ರೈಲು ಭಾನುವಾರ ಆರಂಭವಾಗುತ್ತಿದ್ದಂತೆಯೇ ಪ್ರತಿ ಪ್ರಯಾಣಿಕರಿಗೆ “ನಿಮ್ಮ ಅಗತ್ಯದ ಸಮಯದಲ್ಲಿ ಕಾಂಗ್ರೆಸ್ ಜೊತೆಗಿರುತ್ತದೆ” ಎಂದು ಶೀರ್ಷಿಕೆಯುಳ್ಳ ಕರಪತ್ರವನ್ನು ಹಂಚಲಾಯಿತು. “ನಿಮ್ಮ ಟಿಕೆಟ್ ದರವನ್ನು ಸೋನಿಯಾ ಗಾಂಧಿ ಪಾವತಿಸಿದ್ದಾರೆ” ವಲಸೆ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕಳೆದ ವಾರ ಘೋಷಿಸಿದ್ದ ಒಂದು ಕ್ರಮದಿಂದ ಇದು ಸಾಧ್ಯವಾಗಿದೆ ಎಂದು ಆ ಶಾಸಕರು ಭಟಿಂಡಾ ನಿಲ್ದಾಣದಲ್ಲಿ ಭಾಷಣ ಮಾಡಿದ್ದಾರೆ.

ವೈರಲ್‌ ವಿಡಯೋದ ದೃಶ್ಯಗಳಲ್ಲಿ ಗಿಡ್ಡರ್‌ಬಾಹಾದ ಶಾಸಕರು ಕಿಟಕಿಗಳ ಮೂಲಕ ರೈಲಿನಲ್ಲಿ ಕುಳಿತ ಪ್ರಯಾಣಿಕರಿಗೆ ಕರಪತ್ರಗಳನ್ನು ಹಂಚುವುದನ್ನು ಕಾಣಬಹುದು.

ಮೇ 1 ರಿಂದ ವಲಸೆ ಕಾರ್ಮಿಕರಿಗಾಗಿ ಶ್ರಮಿಕ್‌ ರೈಲುಗಳಿಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ ಅದರ ಟಿಕೆಟ್ ಹಣವನ್ನು ಕಾರ್ಮಿಕರಿಂದಲೇ ಪಡೆಯಲು ನಿರ್ಧರಿಸಿತ್ತು. ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ಕಾರ್ಮಿಕರು ರೈಲು ಪ್ರಯಾಣದರವನ್ನು ಭರಿಸಲು ಸಾಧ್ಯವಾಗದ ಹಲವು ದೃಶ್ಯಗಳು ಕಂಡುಬಂದಿದ್ದವು. ನಂತರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದ ಎಲ್ಲಾ ಕಾರ್ಮಿಕರ ರೈಲು ಪ್ರಯಣದರವನ್ನು ಕಾಂಗ್ರೆಸ್‌ ಪಕ್ಷ ಭರಿಸುತ್ತದೆ ಎಂದು ಘೋಷಿಸಿದ್ದರು.


ಇದನ್ನೂ ಓದಿ: ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ 


ತದನಂತರ ರೈಲ್ವೆ ಸಚಿವಾಲಯವು ಶೇಕಡಾ 85 ರಷ್ಟು ಶುಲ್ಕವನ್ನು ಕೇಂದ್ರ ಸರ್ಕಾರ ಪಾವತಿ ಮಾಡುತ್ತದೆ ಮತ್ತು ಉಳಿದ ಹಣವನ್ನು ರಾಜ್ಯಗಳು ಪಾವತಿಸಬಹುದೆಂದು ಸ್ಪಷ್ಟಪಡಿಸಿತು. ಆದಾಗ್ಯೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಯಾಣದರವನ್ನು ವಲಸೆ ಕಾರ್ಮಿಕರಿಂದಲೇ ವಸೂಲಿ ಮಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ಧ ಪ್ರತಿಭಟನೆಯೂ ಆರಂಭವಾಗಿದೆ.

ಇಂತಹ ಸಮಯದಲ್ಲಿ ಪಂಜಾಬ್‌ ಸರ್ಕಾರ ಉಚಿತವಾಗಿ ವಲಸೆ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದ ಅದಕ್ಕಾಗಿ ಕರಪತ್ರವನ್ನು ಸಹ ಹಂಚುತ್ತಿರುವುದು ವಿಶೇಷವಾಗಿದೆ.


ಇದನ್ನೂ ಓದಿ: ಉಚಿತ ಟ್ರೈನ್‌ ಎಂಬುದು ದೊಡ್ಡ ಸುಳ್ಳು: ಕಾರ್ಮಿಕರಿಂದ ಹಣ ವಸೂಲಿಗಿಳಿದ ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ತಪ್ಪು ಸಂದೇಶ್ ನೀಡುವ ವಿಚಾರವಾಗಿದೆ ಬಿಜೆಪಿ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...