Homeಮುಖಪುಟನಿಮ್ಮ ನಿಜ ಮುಖವು ಮಹಿಳಾ ವಿರೋಧಿಯಾಗಿದೆ; ಅದು ಇಡೀ ಭಾರತಕ್ಕೆ ತಿಳಿದಿದೆ: ಮೋದಿ ವಿರುದ್ಧ ಟಿಎಂಸಿ...

ನಿಮ್ಮ ನಿಜ ಮುಖವು ಮಹಿಳಾ ವಿರೋಧಿಯಾಗಿದೆ; ಅದು ಇಡೀ ಭಾರತಕ್ಕೆ ತಿಳಿದಿದೆ: ಮೋದಿ ವಿರುದ್ಧ ಟಿಎಂಸಿ ವಾಗ್ದಾಳಿ

- Advertisement -
- Advertisement -

ಬಿಜೆಪಿ ಸಂಸದನ ವಿರುದ್ಧದ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ ಮಾತನಾಡದೆ, ಪಶ್ಚಿಮ ಬಂಗಾಳದ ಸಂದೇಶಖಾಲಿ ವಿಚಾರವನ್ನು ಮುಂದಿಟ್ಟುಕೊಂಡು ಟಿಎಂಸಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಮುಖಂಡರು, ಪ್ರಧಾನಿ ಮೋದಿ ನಡೆಯನ್ನು ‘ಇಬ್ಬಗೆ’ ಎಂದು ಕರೆದಿದ್ದಾರೆ. ‘ನಿಮ್ಮ ವಾಕ್ಚಾತುರ್ಯದ ಭಾಷಣಗಳು ತಮಾಷೆಯಷ್ಟೇ ಅಲ್ಲ. ನಿಮ್ಮ ನಿಜವಾದ ಮುಖವು ಮಹಿಳಾ ವಿರೋಧಿಯಾಗಿದೆ ಮತ್ತು ಅದು ಇಡೀ ಭಾರತಕ್ಕೆ ತಿಳಿದಿದೆ’ ಎಂದು ಕಿಡಿಕಾರಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕರ ವಿರುದ್ಧ ಮಹಿಳಾ ಭದ್ರತೆಯ ಕುರಿತು ಉಪನ್ಯಾಸ ನೀಡುವ ಹಕ್ಕು ಪ್ರಧಾನಿ ನರೇಂದ್ರ ಮೋದಿಯವರಿಗೆ ಇಲ್ಲ ಎಂದು ತೃಣಮೂಲ ಪಕ್ಷವು ವಾಗ್ದಾಳಿ ನಡೆಸಿದೆ.

‘ದೇಶದಲ್ಲಿ ಪ್ರತಿ ಗಂಟೆಗೆ ಮಹಿಳೆಯರ ವಿರುದ್ಧ 51 ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ; ಪರಿಸ್ಥಿತಿಯನ್ನು ಸುಧಾರಿಸಲು ನೀವು ಏನು ಮಾಡಿದ್ದೀರಿ’ ಎಂದು ಪ್ರಧಾನಿ ಮೋದಿಯವರನ್ನು ಟಿಎಂಸಿಯ ಹಿರಿಯ ನಾಯಕ ಮತ್ತು ಪಕ್ಷದ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ಪ್ರಶ್ನಿಸಿದ್ದಾರೆ.

ಇಂದು ಪಶ್ಚಿಮ ಬಂಗಾಳದ ಬರಾಸತ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಸಂದೇಶಖಾಲಿ ಚಂಡಮಾರುತ ಪಶ್ಚಿಮ ಬಂಗಾಳದ ಪ್ರತಿಯೊಂದು ಭಾಗಕ್ಕೂ ತಲುಪಲಿದೆ, ರಾಜ್ಯದಲ್ಲಿ ಆಡಳಿತಾರೂಢ ಟಿಎಂಸಿಯನ್ನು ನಾಶಮಾಡುವಲ್ಲಿ ‘ನಾರಿ ಶಕ್ತಿ’ (ಮಹಿಳಾ ಶಕ್ತಿ) ಪ್ರಮುಖ ಪಾತ್ರ ವಹಿಸುತ್ತದೆ’ ಎಂದು ಹೇಳಿದರು.

ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಎಂಬ ನದಿತೀರದ ದ್ವೀಪವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್, ಅವರ ಸಹವರ್ತಿಗಳಿಂದ ಭೂಕಬಳಿಕೆ ಆರೋಪದಿಂದ ದೇಶದಾದ್ಯಂತ ಸುದ್ದಿಯಲ್ಲಿದೆ.

‘ಪ್ರಧಾನಿ ನರೇಂದ್ರ ಮೋದಿಯವರು ಇಂದು ನಾರಿ ಶಕ್ತಿ ಕುರಿತು ಉಪನ್ಯಾಸ ನೀಡಿದ್ದಾರೆ. ನಿಮಗೆ ಮೂರು ಪ್ರಶ್ನೆಗಳು ಸರ್.. ಮಹಿಳೆಯರ ವಿರುದ್ಧ ಪ್ರತಿ ಗಂಟೆಗೆ 51 ಅಪರಾಧ ಪ್ರಕರಣಗಳು ಏಕೆ ದಾಖಲಾಗುತ್ತಿವೆ? ಲೋಕಸಭೆಯಲ್ಲಿ ಬಿಜೆಪಿ 13 ಪ್ರತಿಶತ ಮಹಿಳೆಯರನ್ನು ಏಕೆ ಹೊಂದಿದೆ? ಬಿಜೆಪಿ ಬಿಡುಗಡೆ ಮಾಡಿರುವ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇವಲ 14 ಪ್ರತಿಶತ ಮಹಿಳೆಯರಿದ್ದಾರೆ ಏಕೆ?’ ಎಂದು ಒ’ಬ್ರೇನ್ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

‘ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಸಂಸದರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ’ ಎಂದು ಪ್ರಶ್ನಿಸಿದ್ದು, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಮತ್ತು ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಈ ಪ್ರಶ್ನೆ ಉಲ್ಲೇಖಿಸಿದೆ. ಆದರೆ, ಸಿಂಗ್ ಅವರು ತಮ್ಮ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ.

ಅತ್ಯಾಚಾರಿಗಳ ವಿರುದ್ಧ ತಮ್ಮ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾತನಾಡಲು ಪ್ರಧಾನಿ ಮೋದಿಗೆ ನೈತಿಕ ಹಕ್ಕಿದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿದ ಟಿಎಂಸಿ ರಾಜ್ಯಸಭಾ ಸಂಸದೆ ಸುಶ್ಮಿತಾ ದೇವ್, ‘ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಅಭಿನಂದಿಸಿದ್ದಾರೆ’ ಎಂದು ಕಿಡಿಕಾರಿದರು.

2002ರ ಗುಜರಾತ್‌ನ ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳನ್ನು ಸುಪ್ರೀಂ ಕೋರ್ಟ್ ಆದೇಶದ ನಂತರ ಬಿಡುಗಡೆ ಮಾಡಲಾಯಿತು ಮತ್ತು 2023 ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಬಿಜೆಪಿ ನಾಯಕರು ಹೂಮಾಲೆಯೊಂದಿಗೆ ಸ್ವಾಗತಿಸಿದರು. ಆದರೆ ಈ ವರ್ಷದ ಜನವರಿ 8 ರಂದು ಸುಪ್ರೀಂ ಕೋರ್ಟ್ ಗುಜರಾತ್ ಅನ್ನು ರದ್ದುಗೊಳಿಸಿತು.

ಈ ಬಗ್ಗೆ ಮಾತನಾಡಿದ ಸುಶ್ಮಿತಾ ದೇವ್, ‘ಹರ್ಯಾಣದ ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್ ಹೊರಗೆ ಪ್ರತಿಭಟನೆ ನಡೆಸಿದ್ದಕ್ಕಾಗಿ ದೆಹಲಿ ಪೊಲೀಸರು ಅವರನ್ನು ಹೊಡೆದಾಗ ನೀವು (ಪ್ರಧಾನಿ ಮೋದಿ) ಮಹಿಳೆಯರ ಸುರಕ್ಷತೆಯ ಬಗ್ಗೆ ಮಾತನಾಡುತ್ತಿದ್ದೀರಿ. ಆಗ ಮಹಿಳೆಯರಿಗಾಗಿ ನಿಮ್ಮ ಸಹಾಯವಾಣಿ ಎಲ್ಲಿತ್ತು’ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ನಡೆಯನ್ನು ‘ಇಬ್ಬಗೆ’ ಎಂದು ಕರೆದ ಅವರು, ‘ನಿಮ್ಮ ವಾಕ್ಚಾತುರ್ಯದ ಭಾಷಣಗಳು ತಮಾಷೆಯಷ್ಟೇ ಅಲ್ಲ. ನಿಮ್ಮ ನಿಜವಾದ ಮುಖವು ಮಹಿಳಾ ವಿರೋಧಿಯಾಗಿದೆ ಮತ್ತು ಇಡೀ ಭಾರತಕ್ಕೆ ತಿಳಿದಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ‘ಸನಾತನ’ ಕುರಿತು ಟೀಕೆ; ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...