Homeಮುಖಪುಟ"ನೀವು ನಮ್ಮ ರಾಜನಲ್ಲ" : ಬ್ರಿಟನ್ ರಾಜನ ವಿರುದ್ಧ ಪ್ರತಿಭಟಿಸಿದ ಆಸ್ಟ್ರೇಲಿಯಾ ಸಂಸದೆ

“ನೀವು ನಮ್ಮ ರಾಜನಲ್ಲ” : ಬ್ರಿಟನ್ ರಾಜನ ವಿರುದ್ಧ ಪ್ರತಿಭಟಿಸಿದ ಆಸ್ಟ್ರೇಲಿಯಾ ಸಂಸದೆ

- Advertisement -
- Advertisement -

ಸೋಮವಾರ (ಅ.21) ಆಸ್ಟ್ರೇಲಿಯಾ ಸಂಸತ್ತಿನಲ್ಲಿ ಬ್ರಿಟನ್‌ನ ರಾಜ ಮೂರನೆಯ ಚಾರ್ಲ್ಸ್ ಭಾಷಣದ ಬಳಿಕ ಸ್ಥಳೀಯ ಸೆನೆಟರ್ (ಸಂಸದೆ) ಲಿಡಿಯಾ ಥೋರ್ಪ್ ಅವರು ವಸಾಹುಶಾಹಿ ದಬ್ಬಾಳಿಕೆಯ ವಿರುದ್ದ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಕಿಂಗ್ ಚಾರ್ಲ್ಸ್ ಭಾಷಣ ಕೊನೆಗೊಳಿಸುತ್ತಿದ್ದಂತೆ ಸಂಸತ್ ಸಭಾಂಗಣಕ್ಕೆ ಆಗಮಿಸಿದ ಸೆನೆಟರ್ ಥೋರ್ಪ್ ಅವರು, “ನೀವು ನಮ್ಮ ರಾಜನಲ್ಲ” ಎಂದು ಘೋಷಣೆ ಕೂಗಿದ್ದು, “ನಮ್ಮ ಭೂಮಿಯನ್ನು ನಮಗೆ ಹಿಂದಿರುಗಿಸಿ” ಎಂದಿದ್ದಾರೆ.

ಬ್ರಿಟನ್‌ನ ಐತಿಹಾಸಿಕ ದೌರ್ಜನ್ಯಗಳ ವಿರುದ್ದ ಸೆನೆಟರ್ ಥೋರ್ಪ್ ಪ್ರತಿಭಟಿಸಿದ್ದು, ಆಸ್ಟ್ರೇಲಿಯಾದ ಮೇಲೆ ಬ್ರಿಟನ್ ವಸಾಹತುಶಾಹಿಗಳು ನಡೆಸಿದ ದಬ್ಬಾಳಿಕೆಗೆ ಕ್ಷಮೆ ಯಾಚಿಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ಹೊರಗೆ ಕರೆದೊಯ್ದರು. ಲಿಡಿಯಾ ಥೋರ್ಪ್ ಅವರು ಸೆನೆಟರ್ ಮಾತ್ರವಲ್ಲದೆ, ಆಸ್ಟ್ರೇಲಿಯಾದ ಮೂಲ ನಿವಾಸಿಗಳ ಹಕ್ಕುಗಳ ದೀರ್ಘಾವಧಿಯ ವಕೀಲರಾಗಿದ್ದಾರೆ.

ಬ್ರಿಟಿಷ್ ವಸಾಹತುಶಾಹಿಗಳು ಅಸ್ಟ್ರೇಲಿಯಾದ ಮೂಲ ನಿವಾಸಿಗಳನ್ನು ನರಮೇಧ ನಡೆಸಿದ ಆರೋಪವನ್ನು ಥೋರ್ಪ್ ಮಾಡಿದ್ದು, “ನೀವು ನಮ್ಮಿಂದ ಕದ್ದಿರುವ ನಮ್ಮ ಭೂಮಿಯನ್ನು ನಮಗೆ ವಾಪಸ್ ಕೊಡಿ” ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆಯ ವೇಳೆ ಥೋರ್ಪ್ ಅವರು ಸಾಂಪ್ರದಾಯಿಕ ‘ಪೊಸಮ್’ ಚರ್ಮದ ಮೇಲಂಗಿಯನ್ನು ಧರಿಸಿದ್ದರು.

230 ವರ್ಷಗಳ ಹಿಂದೆ ಬ್ರಿಟಿಷ್ ವಸಾಹತುಗಾರರು ಆಸ್ಟ್ರೇಲಿಯಾಕ್ಕೆ ಬಂದು ನೆಲೆಸುವುದಕ್ಕೂ ಮುನ್ನ, ಹತ್ತಾರು ಸಾವಿರಾರು ವರ್ಷಗಳಿಂದ ಆಸ್ಟ್ರೇಲಿಯದಲ್ಲಿರುವ ಮೂಲ ನಿವಾಸಿಗಳನ್ನು ಕಿಂಗ್ ಚಾರ್ಲ್ಸ್ ತಮ್ಮ ಭಾಷಣದಲ್ಲಿ ಶ್ಲಾಘಿಸಿದ್ದರು.

“ನನ್ನ ಜೀವನಪರ್ಯಂತ ಆಸ್ಟ್ರೇಲಿಯಾದ ಮೂಲ ನಿವಾಸಿಗಳು ತಮ್ಮ ಕಥೆಗಳು ಮತ್ತು ಸಂಸ್ಕೃತಿಗಳನ್ನು ಉದಾರವಾಗಿ ಹಂಚಿಕೊಳ್ಳುವ ಮೂಲಕ ನಾನು ಭಾರೀ ಗೌರವಕ್ಕೊಳಗಾಗುವಂತೆ ಮಾಡಿದ್ದಾರೆ” ಎಂದು ಚಾರ್ಲ್ಸ್ ಹೇಳಿದ್ದರು.

ಕಿಂಗ್ ಚಾರ್ಲ್ಸ್‌ ಭಾಷಣಕ್ಕೂ ಮುನ್ನ ರಾಜ ಮನೆತನದ ದಂಪತಿಗೆ ಸಂಸತ್ತಿನ ಹೊರಗೆ ಸಾಂಪ್ರದಾಯಿಕ ಮೂಲ ನಿವಾಸಿ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ದೇಶದ ಬಹುಸಂಖ್ಯಾತ ಮೂಲನಿವಾಸಿಗಳ ಪೈಕಿ ಹಲವರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನವಿರಲಿಲ್ಲ.

ಇದನ್ನೂ ಓದಿ : ಲಡಾಖ್‌ನ ‘ವಾಸ್ತವಿಕ ನಿಯಂತ್ರಣ ರೇಖೆ’ಯಲ್ಲಿ ಗಸ್ತು ತಿರುಗಲು ಭಾರತ-ಚೀನಾ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...