Homeಮುಖಪುಟ"ನೀವು ನಮ್ಮ ರಾಜನಲ್ಲ" : ಬ್ರಿಟನ್ ರಾಜನ ವಿರುದ್ಧ ಪ್ರತಿಭಟಿಸಿದ ಆಸ್ಟ್ರೇಲಿಯಾ ಸಂಸದೆ

“ನೀವು ನಮ್ಮ ರಾಜನಲ್ಲ” : ಬ್ರಿಟನ್ ರಾಜನ ವಿರುದ್ಧ ಪ್ರತಿಭಟಿಸಿದ ಆಸ್ಟ್ರೇಲಿಯಾ ಸಂಸದೆ

- Advertisement -
- Advertisement -

ಸೋಮವಾರ (ಅ.21) ಆಸ್ಟ್ರೇಲಿಯಾ ಸಂಸತ್ತಿನಲ್ಲಿ ಬ್ರಿಟನ್‌ನ ರಾಜ ಮೂರನೆಯ ಚಾರ್ಲ್ಸ್ ಭಾಷಣದ ಬಳಿಕ ಸ್ಥಳೀಯ ಸೆನೆಟರ್ (ಸಂಸದೆ) ಲಿಡಿಯಾ ಥೋರ್ಪ್ ಅವರು ವಸಾಹುಶಾಹಿ ದಬ್ಬಾಳಿಕೆಯ ವಿರುದ್ದ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಕಿಂಗ್ ಚಾರ್ಲ್ಸ್ ಭಾಷಣ ಕೊನೆಗೊಳಿಸುತ್ತಿದ್ದಂತೆ ಸಂಸತ್ ಸಭಾಂಗಣಕ್ಕೆ ಆಗಮಿಸಿದ ಸೆನೆಟರ್ ಥೋರ್ಪ್ ಅವರು, “ನೀವು ನಮ್ಮ ರಾಜನಲ್ಲ” ಎಂದು ಘೋಷಣೆ ಕೂಗಿದ್ದು, “ನಮ್ಮ ಭೂಮಿಯನ್ನು ನಮಗೆ ಹಿಂದಿರುಗಿಸಿ” ಎಂದಿದ್ದಾರೆ.

ಬ್ರಿಟನ್‌ನ ಐತಿಹಾಸಿಕ ದೌರ್ಜನ್ಯಗಳ ವಿರುದ್ದ ಸೆನೆಟರ್ ಥೋರ್ಪ್ ಪ್ರತಿಭಟಿಸಿದ್ದು, ಆಸ್ಟ್ರೇಲಿಯಾದ ಮೇಲೆ ಬ್ರಿಟನ್ ವಸಾಹತುಶಾಹಿಗಳು ನಡೆಸಿದ ದಬ್ಬಾಳಿಕೆಗೆ ಕ್ಷಮೆ ಯಾಚಿಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ಹೊರಗೆ ಕರೆದೊಯ್ದರು. ಲಿಡಿಯಾ ಥೋರ್ಪ್ ಅವರು ಸೆನೆಟರ್ ಮಾತ್ರವಲ್ಲದೆ, ಆಸ್ಟ್ರೇಲಿಯಾದ ಮೂಲ ನಿವಾಸಿಗಳ ಹಕ್ಕುಗಳ ದೀರ್ಘಾವಧಿಯ ವಕೀಲರಾಗಿದ್ದಾರೆ.

ಬ್ರಿಟಿಷ್ ವಸಾಹತುಶಾಹಿಗಳು ಅಸ್ಟ್ರೇಲಿಯಾದ ಮೂಲ ನಿವಾಸಿಗಳನ್ನು ನರಮೇಧ ನಡೆಸಿದ ಆರೋಪವನ್ನು ಥೋರ್ಪ್ ಮಾಡಿದ್ದು, “ನೀವು ನಮ್ಮಿಂದ ಕದ್ದಿರುವ ನಮ್ಮ ಭೂಮಿಯನ್ನು ನಮಗೆ ವಾಪಸ್ ಕೊಡಿ” ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆಯ ವೇಳೆ ಥೋರ್ಪ್ ಅವರು ಸಾಂಪ್ರದಾಯಿಕ ‘ಪೊಸಮ್’ ಚರ್ಮದ ಮೇಲಂಗಿಯನ್ನು ಧರಿಸಿದ್ದರು.

230 ವರ್ಷಗಳ ಹಿಂದೆ ಬ್ರಿಟಿಷ್ ವಸಾಹತುಗಾರರು ಆಸ್ಟ್ರೇಲಿಯಾಕ್ಕೆ ಬಂದು ನೆಲೆಸುವುದಕ್ಕೂ ಮುನ್ನ, ಹತ್ತಾರು ಸಾವಿರಾರು ವರ್ಷಗಳಿಂದ ಆಸ್ಟ್ರೇಲಿಯದಲ್ಲಿರುವ ಮೂಲ ನಿವಾಸಿಗಳನ್ನು ಕಿಂಗ್ ಚಾರ್ಲ್ಸ್ ತಮ್ಮ ಭಾಷಣದಲ್ಲಿ ಶ್ಲಾಘಿಸಿದ್ದರು.

“ನನ್ನ ಜೀವನಪರ್ಯಂತ ಆಸ್ಟ್ರೇಲಿಯಾದ ಮೂಲ ನಿವಾಸಿಗಳು ತಮ್ಮ ಕಥೆಗಳು ಮತ್ತು ಸಂಸ್ಕೃತಿಗಳನ್ನು ಉದಾರವಾಗಿ ಹಂಚಿಕೊಳ್ಳುವ ಮೂಲಕ ನಾನು ಭಾರೀ ಗೌರವಕ್ಕೊಳಗಾಗುವಂತೆ ಮಾಡಿದ್ದಾರೆ” ಎಂದು ಚಾರ್ಲ್ಸ್ ಹೇಳಿದ್ದರು.

ಕಿಂಗ್ ಚಾರ್ಲ್ಸ್‌ ಭಾಷಣಕ್ಕೂ ಮುನ್ನ ರಾಜ ಮನೆತನದ ದಂಪತಿಗೆ ಸಂಸತ್ತಿನ ಹೊರಗೆ ಸಾಂಪ್ರದಾಯಿಕ ಮೂಲ ನಿವಾಸಿ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ದೇಶದ ಬಹುಸಂಖ್ಯಾತ ಮೂಲನಿವಾಸಿಗಳ ಪೈಕಿ ಹಲವರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನವಿರಲಿಲ್ಲ.

ಇದನ್ನೂ ಓದಿ : ಲಡಾಖ್‌ನ ‘ವಾಸ್ತವಿಕ ನಿಯಂತ್ರಣ ರೇಖೆ’ಯಲ್ಲಿ ಗಸ್ತು ತಿರುಗಲು ಭಾರತ-ಚೀನಾ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...