Homeಮುಖಪುಟ"ನೀವು ನಮ್ಮ ರಾಜನಲ್ಲ" : ಬ್ರಿಟನ್ ರಾಜನ ವಿರುದ್ಧ ಪ್ರತಿಭಟಿಸಿದ ಆಸ್ಟ್ರೇಲಿಯಾ ಸಂಸದೆ

“ನೀವು ನಮ್ಮ ರಾಜನಲ್ಲ” : ಬ್ರಿಟನ್ ರಾಜನ ವಿರುದ್ಧ ಪ್ರತಿಭಟಿಸಿದ ಆಸ್ಟ್ರೇಲಿಯಾ ಸಂಸದೆ

- Advertisement -
- Advertisement -

ಸೋಮವಾರ (ಅ.21) ಆಸ್ಟ್ರೇಲಿಯಾ ಸಂಸತ್ತಿನಲ್ಲಿ ಬ್ರಿಟನ್‌ನ ರಾಜ ಮೂರನೆಯ ಚಾರ್ಲ್ಸ್ ಭಾಷಣದ ಬಳಿಕ ಸ್ಥಳೀಯ ಸೆನೆಟರ್ (ಸಂಸದೆ) ಲಿಡಿಯಾ ಥೋರ್ಪ್ ಅವರು ವಸಾಹುಶಾಹಿ ದಬ್ಬಾಳಿಕೆಯ ವಿರುದ್ದ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಕಿಂಗ್ ಚಾರ್ಲ್ಸ್ ಭಾಷಣ ಕೊನೆಗೊಳಿಸುತ್ತಿದ್ದಂತೆ ಸಂಸತ್ ಸಭಾಂಗಣಕ್ಕೆ ಆಗಮಿಸಿದ ಸೆನೆಟರ್ ಥೋರ್ಪ್ ಅವರು, “ನೀವು ನಮ್ಮ ರಾಜನಲ್ಲ” ಎಂದು ಘೋಷಣೆ ಕೂಗಿದ್ದು, “ನಮ್ಮ ಭೂಮಿಯನ್ನು ನಮಗೆ ಹಿಂದಿರುಗಿಸಿ” ಎಂದಿದ್ದಾರೆ.

ಬ್ರಿಟನ್‌ನ ಐತಿಹಾಸಿಕ ದೌರ್ಜನ್ಯಗಳ ವಿರುದ್ದ ಸೆನೆಟರ್ ಥೋರ್ಪ್ ಪ್ರತಿಭಟಿಸಿದ್ದು, ಆಸ್ಟ್ರೇಲಿಯಾದ ಮೇಲೆ ಬ್ರಿಟನ್ ವಸಾಹತುಶಾಹಿಗಳು ನಡೆಸಿದ ದಬ್ಬಾಳಿಕೆಗೆ ಕ್ಷಮೆ ಯಾಚಿಸುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ಹೊರಗೆ ಕರೆದೊಯ್ದರು. ಲಿಡಿಯಾ ಥೋರ್ಪ್ ಅವರು ಸೆನೆಟರ್ ಮಾತ್ರವಲ್ಲದೆ, ಆಸ್ಟ್ರೇಲಿಯಾದ ಮೂಲ ನಿವಾಸಿಗಳ ಹಕ್ಕುಗಳ ದೀರ್ಘಾವಧಿಯ ವಕೀಲರಾಗಿದ್ದಾರೆ.

ಬ್ರಿಟಿಷ್ ವಸಾಹತುಶಾಹಿಗಳು ಅಸ್ಟ್ರೇಲಿಯಾದ ಮೂಲ ನಿವಾಸಿಗಳನ್ನು ನರಮೇಧ ನಡೆಸಿದ ಆರೋಪವನ್ನು ಥೋರ್ಪ್ ಮಾಡಿದ್ದು, “ನೀವು ನಮ್ಮಿಂದ ಕದ್ದಿರುವ ನಮ್ಮ ಭೂಮಿಯನ್ನು ನಮಗೆ ವಾಪಸ್ ಕೊಡಿ” ಎಂದು ಆಗ್ರಹಿಸಿದ್ದಾರೆ. ಪ್ರತಿಭಟನೆಯ ವೇಳೆ ಥೋರ್ಪ್ ಅವರು ಸಾಂಪ್ರದಾಯಿಕ ‘ಪೊಸಮ್’ ಚರ್ಮದ ಮೇಲಂಗಿಯನ್ನು ಧರಿಸಿದ್ದರು.

230 ವರ್ಷಗಳ ಹಿಂದೆ ಬ್ರಿಟಿಷ್ ವಸಾಹತುಗಾರರು ಆಸ್ಟ್ರೇಲಿಯಾಕ್ಕೆ ಬಂದು ನೆಲೆಸುವುದಕ್ಕೂ ಮುನ್ನ, ಹತ್ತಾರು ಸಾವಿರಾರು ವರ್ಷಗಳಿಂದ ಆಸ್ಟ್ರೇಲಿಯದಲ್ಲಿರುವ ಮೂಲ ನಿವಾಸಿಗಳನ್ನು ಕಿಂಗ್ ಚಾರ್ಲ್ಸ್ ತಮ್ಮ ಭಾಷಣದಲ್ಲಿ ಶ್ಲಾಘಿಸಿದ್ದರು.

“ನನ್ನ ಜೀವನಪರ್ಯಂತ ಆಸ್ಟ್ರೇಲಿಯಾದ ಮೂಲ ನಿವಾಸಿಗಳು ತಮ್ಮ ಕಥೆಗಳು ಮತ್ತು ಸಂಸ್ಕೃತಿಗಳನ್ನು ಉದಾರವಾಗಿ ಹಂಚಿಕೊಳ್ಳುವ ಮೂಲಕ ನಾನು ಭಾರೀ ಗೌರವಕ್ಕೊಳಗಾಗುವಂತೆ ಮಾಡಿದ್ದಾರೆ” ಎಂದು ಚಾರ್ಲ್ಸ್ ಹೇಳಿದ್ದರು.

ಕಿಂಗ್ ಚಾರ್ಲ್ಸ್‌ ಭಾಷಣಕ್ಕೂ ಮುನ್ನ ರಾಜ ಮನೆತನದ ದಂಪತಿಗೆ ಸಂಸತ್ತಿನ ಹೊರಗೆ ಸಾಂಪ್ರದಾಯಿಕ ಮೂಲ ನಿವಾಸಿ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ದೇಶದ ಬಹುಸಂಖ್ಯಾತ ಮೂಲನಿವಾಸಿಗಳ ಪೈಕಿ ಹಲವರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನವಿರಲಿಲ್ಲ.

ಇದನ್ನೂ ಓದಿ : ಲಡಾಖ್‌ನ ‘ವಾಸ್ತವಿಕ ನಿಯಂತ್ರಣ ರೇಖೆ’ಯಲ್ಲಿ ಗಸ್ತು ತಿರುಗಲು ಭಾರತ-ಚೀನಾ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...