Homeಮುಖಪುಟನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ನಿಮ್ಮ ವಿಚಾರಗಳಿಗೆ ತಕ್ಕಂತೆ ಉದ್ದೇಶಪೂರ್ವಕವಾಗಿ ವಿಷಯಗಳನ್ನು ತಿರುಚುತ್ತಿದ್ದೀರಿ. ಪತ್ರಿಕೋದ್ಯಮವನ್ನು ನೀವು ಇಷ್ಟೊಂದು ಕೀಳು ಮಟ್ಟಕ್ಕೆ ಒಯ್ಯಬೇಡಿ - ರಾಜ್‌ದೀಪ್

- Advertisement -
- Advertisement -

ಇಂಡಿಯಾ ಟುಡೆ ಪತ್ರಕರ್ತರಾದ ರಾಜ್‌ದೀಪ್ ಸರ್ದೇಸಾಯಿ ಇಂದು ರಿಪಬ್ಲಿಕ್ ಟಿವಿಯ ಸ್ಥಾಪಕ ಮತ್ತು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮೇಲೆ ತೀವ್ರವಾದ ವಾಗ್ದಾಳಿ ನಡೆಸಿದ್ದು, “ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್” ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡು ಟಿವಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದ ಅರ್ನಾಬ್ ಗೋಸ್ವಾಮಿಗೆ “ದಿ ಕಪಿಲ್ ಶರ್ಮ ಶೋ”ನಲ್ಲಿ ಕಿಕು ಶಾರ್ದ ಹಾಗೂ ಕೃಷ್ಣ ಅಭಿಷೇಕ್ ತಿರುಗೇಟು ನೀಡಿದ ನಂತರದ ಬೆಳವಣಿಗೆಯಲ್ಲಿ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಕೂಡ ಅರ್ನಾಬ್ ವಿರುದ್ಧ ಬಹಿರಂಗವಾಗಿ ತಮ್ಮ ಟಿವಿ ಕಾರ್ಯಕ್ರಮದಲ್ಲಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯ: ಶಿವಸೇನೆ ಸಂಸದರಿಂದ ಗೃಹ ಸಚಿವರಿಗೆ ಪತ್ರ

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

“ಅರ್ನಾಬ್ ಗೋಸ್ವಾಮಿ ನೀವು ಬನಾನಾ ರಿಪಬ್ಲಿಕ್ ಚಾನೆಲ್ ನಡೆಸುತ್ತಿದ್ದೀರಿ. ನಿಮ್ಮ ವಿಚಾರಗಳಿಗೆ ತಕ್ಕಂತೆ ಉದ್ದೇಶಪೂರ್ವಕವಾಗಿ ವಿಷಯಗಳನ್ನು ತಿರುಚುತ್ತಿದ್ದೀರಿ. ಪತ್ರಿಕೋದ್ಯಮವನ್ನು ನೀವು ಇಷ್ಟೊಂದು ಕೀಳು ಮಟ್ಟಕ್ಕೆ ಒಯ್ಯಬೇಡಿ. ನಿಮಗೆ ಒಂದು ಸಲಹೆ ನೀಡುತ್ತಿದ್ದೇನೆ. ಪತ್ರಿಕೋದ್ಯಮವೆಂದರೆ ಇದಲ್ಲ. ಕಳೆದ ಎರಡು ತಿಂಗಳಿನಿಂದ ನೀವು ಪ್ರಸಾರ ಮಾಡುತ್ತಿದ್ದ ಅಸಹ್ಯವಾದ ವಿಚಾರವನ್ನು ಕೇಳಿಸಿಕೊಂಡು ನಾನು ಸುಮ್ಮನಿದ್ದೆ. ಟಿಆರ್‌ಪಿಗಿಂತಲೂ ಹೆಚ್ಚಾಗಿರುವುದು ಇದೆ ಗೆಳಯ, ಅದು ಟೆಲಿವಿಶನ್ ರೆಸ್ಪೆಕ್ಟ್ ಪಾಯಿಂಟ್ಸ್” ಎಂದು ‘ಇಂಡಿಯಾ ಟುಡೆ’ ಟಿವಿ ವಾಹಿನಿಯ ಕಾರ್ಯಕ್ರಮ ಪ್ರಸಾರದ ವೇಳೆ ತಮ್ಮ ತಾಳ್ಮೆ ಕಳೆದುಕೊಂಡು ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಟಿವಿ ಡಿಬೆಟ್‌ನಲ್ಲಿ ಊಟ ಮಾಡಿದ ಪ್ಯಾನೆಲಿಸ್ಟ್; ಟ್ರೋಲ್ ಆದ ಅರ್ನಾಬ್ ಗೋಸ್ವಾಮಿ

ನಟಿ ರಿಯಾ ಚಕ್ರವರ್ತಿಯ ವಿಶೇಷ ಸಂದರ್ಶನವನ್ನು ತಮ್ಮ ಚಾನೆಲ್‍ನಲ್ಲಿ ರಾಜ್‌ದೀಪ್ ಪ್ರಸಾರ ಮಾಡಿದ ನಂತರ ಅರ್ನಾಬ್ ಗೋಸ್ವಾಮಿಯು ರಾಜ್‌ದೀಪ್ ವಿರುದ್ಧ ಕಿಡಿಕಾರುತ್ತಲೇ ಇದ್ದರು. ಸುಶಾಂತ್ ಸಿಂಗ್ ರಜಪುತ್ ಅವರದ್ದು ಕೊಲೆ ಎಂದೇ ಅರ್ನಾಬ್ ಗೋಸ್ವಾಮಿ ವಾದಿಸುತ್ತಿದ್ದರು. ಆದರೆ ಏಮ್ಸ್ ವೈದ್ಯ ಡಾ. ಸುಧೀರ್ ಗುಪ್ತಾ, ಸುಶಾಂತ್ ಅವರದ್ದು ಆತ್ಮಹತ್ಯೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಗೋಸ್ವಾಮಿ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...