Homeಮುಖಪುಟಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

- Advertisement -
- Advertisement -

ಪೊಲೀಸ್ ಕಸ್ಟಡಿಯಲ್ಲಿ ಚಿತ್ರ ಹಿಂಸೆ ನೀಡಲಾಗಿದೆ ಎಂದು ಆರೋಪಿಸಿ ಬಿಲ್ಲಾವರ್‌ನ ಗುಜ್ಜರ್ ಯುವಕ  ಮಖಾನ್ ದೀನ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಐದು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಥುವಾ ಉಪ ಆಯುಕ್ತ ರಾಕೇಶ್ ಮಿನ್ಹಾಸ್ ಅವರು ಲೋಹೈ ಮಲ್ಹಾರ್ ತಹಶೀಲ್ದಾರ್ ಅನಿಲ್ ಕುಮಾರ್ ಅವರಿಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ಉಪ ಪೊಲೀಸ್ ಮಹಾನಿರ್ದೇಶಕ (ಕಥುವಾ-ಸಾಂಬಾ-ಜಮ್ಮು ಶ್ರೇಣಿ) ಶಿವಕುಮಾರ್ ನೇತೃತ್ವದಲ್ಲಿ ಇಲಾಖಾ ತನಿಖೆಗೂ ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಆದೇಶಿಸಿದೆ. ಯಾವುದೇ ಗಡುವನ್ನು ನಿರ್ದಿಷ್ಟಪಡಿಸದೆ ಸಾಧ್ಯವಾದಷ್ಟು ಬೇಗ ತನಿಖೆ ಪೂರ್ಣಗೊಳಿಸಲಾಗುವುದು ಎಂದಿದೆ.

ಕಸ್ಟಡಿ ಹತ್ಯೆ ಎಂದೇ ಆರೋಪಿಸಲಾದ ಯುವಕನ ಆತ್ಮಹತ್ಯೆಯನ್ನು ಜಮ್ಮು ಕಾಶ್ಮೀರದ ನಾಗರಿಕ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಆತ್ಮಹತ್ಯೆ ಮಾಡಿಕೊಂಡ ಬುಡಕಟ್ಟು ಯುವಕನಿಗೆ ನ್ಯಾಯ ದೊರಕಿಸಿಕೊಡುವಂತೆ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ದೊಡ್ಡ ಮಟ್ಟದ ಆಗ್ರಹ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಮೆಹಬೂಬಾ ಮುಫ್ತಿ, “ಮಖಾನ್ ದೀನ್ ಅವರನ್ನು ಕ್ರೂರವಾಗಿ ಥಳಿಸಿ ಚಿತ್ರಹಿಂಸೆ ನೀಡಲಾಗಿದೆ. ತಪ್ಪೊಪ್ಪಿಗೆ ನೀಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದಿದ್ದಾರೆ.

ಫೆಬ್ರವರಿ 6ರಂದು ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ನಲ್ಲಿ ಮೆಹಬೂಬಾ ಮುಫ್ತಿ “ಕಥುವಾದಿಂದ ಆಘಾತಕಾರಿ ಸುದ್ದಿ : ಬಿಲ್ಲಾವರ್‌ನ ಪೆರೋಡಿಯ 25 ವರ್ಷದ ಮಖಾನ್ ದೀನ್ ಅವರನ್ನು ಬಿಲ್ಲಾವರ್ ಎಸ್‌ಹೆಚ್‌ಒ ಅವರು ಓವರ್ ಗ್ರೌಂಡ್ ವರ್ಕರ್ (ಒಜಿಡಬ್ಲ್ಯು) ಎಂಬ ಸುಳ್ಳು ಆರೋಪದ ಮೇಲೆ ಬಂಧಿಸಿದ್ದರು. ಬಳಿಕ ಆತನಿಗೆ ಕ್ರೂರವಾಗಿ ಥಳಿಸಿ, ಚಿತ್ರಹಿಂಸೆ ನೀಡಿ ಬಲವಂತವಾಗಿ ತಪ್ಪೊಪ್ಪಿಗೆ ಪತ್ರ ಬರೆಯಿಸಲಾಗಿದೆ. ದುರಂತ ಎಂಬಂತೆ ಇಂದು ಮಖಾನ್ ದೀನ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಆ ಪ್ರದೇಶವನ್ನು (ಕಥುವಾ) ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ. ಇದು ಭಾರೀ ಆತಂಕಕ್ಕೆ ಕಾರಣವಾಗಿದೆ. ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಜನರನ್ನು ಬಂಧಿಸಲಾಗುತ್ತಿದೆ. ಈ ಘಟನೆಯು ಸುಳ್ಳು ಆರೋಪಗಳ ಮೇಲೆ ಮುಗ್ಧ ಯುವಕರನ್ನು ಗುರಿಯಾಗಿಸಿದಂತೆ ತೋರುತ್ತಿದೆ. ಈ ಕುರಿತು ತಕ್ಷಣ ತನಿಖೆ ಕೈಗೊಳ್ಳುವಂತೆ ನಾನು ಜಮ್ಮು ಕಾಶ್ಮೀರ ಡಿಜಿಪಿಗೆ ಒತ್ತಾಯಿಸುತ್ತಿದ್ದೇನೆ” ಎಂದಿದ್ದರು

ಕಥುವಾ ಮತ್ತು ಅದರ ಪಕ್ಕದ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಕೆಲವು ಉಗ್ರಗಾಮಿ ಸಂಬಂಧಿತ ಘಟನೆಗಳಲ್ಲಿ ಮಖಾನ್ ದೀನ್ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ಈ ವಾರದ ಆರಂಭದಲ್ಲಿ ಕಥುವಾ ಪೊಲೀಸರು ಅವರನ್ನು ಬಂಧಿಸಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬುಧವಾರ (ಫೆ.5) ಸಂಜೆ ಸಾವಿಗೂ ಮುನ್ನ ರೆಕಾರ್ಡ್ ಮಾಡಲಾದ ವಿಡಿಯೋದಲ್ಲಿ ಮಖಾನ್ ದೀನ್ ತಲೆಯ ಮೇಲೆ ಪವಿತ್ರ ಕುರಾನ್ ಪ್ರತಿಯನ್ನು ಹಿಡಿದು, ಇಸ್ಲಾಮಿಕ್ ಶುಭಾಶಯಗಳನ್ನು ವ್ಯಕ್ತಪಡಿಸುತ್ತಿರುವುದು ಮತ್ತು ಜಮ್ಮು ಪ್ರದೇಶದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದಾನೆಂದು ಆರೋಪಿಸಲಾದ ಸಕ್ರಿಯ ಉಗ್ರಗಾಮಿ ಸ್ವರ್ ದೀನ್ ಅಲಿಯಾಸ್ ಸ್ವರು ಗುಜ್ಜರ್‌ನನ್ನು ನೋಡಿಲ್ಲ ಎಂದು ಪ್ರಮಾಣ ಮಾಡುತ್ತಿರುವುದು ಇದೆ.

ಬುಧವಾರ ಸಂಜೆ ಪೊಲೀಸರು ಮಖಾನ್ ದೀನ್ ಅವರನ್ನು ಬಂಧನದಿಂದ ಬಿಡುಗಡೆ ಮಾಡಿ, ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದರೆಂದು ಹೇಳಲಾದ ಫೋನ್ ತರಲು ಸೂಚಿಸಿದ್ದರು. ಅವರೊಂದಿಗೆ ಯಾರಾದರು ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿತ್ತೋ ಎಂಬುವುದು ತಿಳಿದು ಬಂದಿಲ್ಲ.

“ನಾನು ಬೇರೆ ಫೋನ್ ಬಳಸಿ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದೆ ಎಂದು ಪೊಲೀಸರಿಗೆ ಸುಳ್ಳು ಹೇಳಿದ್ದೇನೆ. ನನಗೆ ಕ್ರೂರವಾಗಿ ಹೊಡೆಯುತ್ತಿದ್ದರು. ಅದರಿಂದ ತಪ್ಪಿಸಿಕೊಳ್ಳಲು ಸುಮ್ಮನೆ ಸುಳ್ಳು ಕಥೆ ಹೇಳಿದ್ದೆ. ಪೊಲೀಸರು ಈಗ ಆ ಫೋನ್ ತರಲು ನನಗೆ ಸೂಚಿಸಿದ್ದಾರೆ. ನಾನು ಯಾವುದೇ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿ ಇಲ್ಲ. ಹೀಗಿರುವಾಗ, ಅವರನ್ನು ಸಂಪರ್ಕಿಸಿದ ಫೋನ್ ಎಲ್ಲಿಂದ ತರಲಿ? ಎಂದು ಸಾವಿಗೂ ಮುನ್ನ ಮಾಡಿದ ವಿಡಿಯೋದಲ್ಲಿ ಮಖಾನ್ ದೀನ್ ಅಳಲು ತೋಡಿಕೊಂಡಿದ್ದರು.

ಮುಂದುವರಿದು, “ನಾನು ಚಿಕ್ಕವನಿದ್ದಾಗ, ಬಹುಶಃ ಹಾಗೆ ಮಾಡಿರಬಹುದು. ಆದರೆ, ಯಾರು ಹೇಗೆ ಎಂದು ನನಗೆ ತಿಳಿದಾಗಿನಿಂದ ನಾನು ಯಾವುದೇ ಉಗ್ರಗಾಮಿಯನ್ನು ನೋಡಿಲ್ಲ. ನಾನು ಎಂದಿಗೂ ಪೊಲೀಸರಿಗೆ ದ್ರೋಹ ಮಾಡುವುದಿಲ್ಲ ಎಂದು ಶಫಿ ಭಾಯ್‌ಗೆ ಭರವಸೆ ನೀಡಿದ್ದೇನೆ. ನಾನು ನನ್ನ ಭರವಸೆಯನ್ನು ಉಳಿಸಿಕೊಂಡಿದ್ದೇನೆ” ಎಂದು ಎಂದಿದ್ದರು.

ಮಖಾನ್ ದೀನ್ ಅವರು ಉಗ್ರಗಾಮಿ ಎಂದು ಹೇಳಲಾದ ಸ್ವರು ಗುಜ್ಜರ್ ಅವರ ಸೋದರಳಿಯ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಬದ್ನೋಟಾ ಪ್ರದೇಶದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ಹೊಂಚು ಹಾಕಿ ದಾಳಿ ನಡೆಸಿದ್ದ ಉಗ್ರರ ಗುಂಪಿನೊಂದಿಗೆ ಈತ ಸಂಪರ್ಕ ಹೊಂದಿದ್ದ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಜೂನಿಯರ್ ಕಮಿಷನರ್ ಅಧಿಕಾರಿ ಸೇರಿದಂತೆ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು.

“ಕೊಹಾಗ್ ಕಾರ್ಯಾಚರಣೆಯಲ್ಲಿ ಹೆಚ್‌ಸಿ ಬಶೀರ್ ಅವರ ಸಾವಿಗೆ ಕಾರಣವಾದ ಗುಂಪು ಇದೇ ಆಗಿದೆ. ಮಖಾನ್‌ಗೆ ಪಾಕಿಸ್ತಾನ ಮತ್ತು ಇತರ ವಿದೇಶಗಳಲ್ಲಿ ಹಲವಾರು ಅನುಮಾನಾಸ್ಪದ ಸಂಪರ್ಕಗಳಿದ್ದವು. ಯಾವುದೇ ಕಸ್ಟಡಿ ಚಿತ್ರಹಿಂಸೆ ಅಥವಾ ಹಲ್ಲೆ ಆಗಿಲ್ಲ. ಮಖಾನ್ ಅವರನ್ನು ವಿಚಾರಣೆಗೆ ಒಳಪಡಿಸಿ, ಬಿಟ್ಟು ಕಳುಹಿಸಲಾಗಿದೆ. ಆತನ ಮನೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂಬ ಮೆಹಬೂಬಾ ಮುಫ್ತಿ ಅವರ ಆರೋಪಗಳನ್ನು ‘ಆಧಾರರಹಿತ ಮತ್ತು ದಾರಿತಪ್ಪಿಸುವ’ ಹೇಳಿಕೆ ಎಂದಿದ್ದಾರೆ.

ಪೂಂಚ್‌ನ ನಾರ್ ಗ್ರಾಮದ ನಿವಾಸಿ, ಉಗ್ರಗಾಮಿ ದಾಳಿ ಸಂಬಂಧ ವಿಚಾರಣೆಗೆ ಕರೆಯಲ್ಪಟ್ಟಿದ್ದ 50 ವರ್ಷದ ಮುಖ್ತಾರ್ ಹುಸೇನ್ ಶಾ ಎಂಬಾತ ಏಪ್ರಿಲ್ 27, 2023ರಂದು ವಿಷ ಸೇವಿಸಿ ಸಾವನ್ನಪ್ಪಿದ್ದರು. ಅದಾಗಿ, ಎರಡು ವರ್ಷಗಳ ಒಳಗೆ ಈ ಘಟನೆ ನಡೆದಿದೆ. ಮುಖ್ತಾರ್ ಹುಸೇನ್ ಶಾ ಕೂಡ ಸಾವಿಗೂ ಮುನ್ನ 9 ನಿಮಿಷ 45 ಸೆಕೆಂಡುಗಳ ವೀಡಿಯೊವನ್ನು ರೆಕಾರ್ಡ್ ಮಾಡಿದ್ದರು.

“ನನಗೆ ಸೇನೆ, ಪೊಲೀಸರು ಅಥವಾ ಯಾವುದೇ ಗ್ರಾಮಸ್ಥರಿಂದ ಯಾವುದೇ ಒತ್ತಡವಿಲ್ಲ. ನನ್ನ ಕುಟುಂಬ ಮತ್ತು ನೆರೆಹೊರೆಯವರು ಎದುರಿಸುತ್ತಿರುವ ಚಿತ್ರ ಹಿಂಸೆಯಿಂದಾಗಿ ನನ್ನ ಧರ್ಮವು ನಿಷೇಧಿಸಿರುವ ಆತ್ಮಹತ್ಯೆ ಮೂಲಕ ನನ್ನ ಪ್ರಾಣವನ್ನು ನಾನು ತೆಗೆದುಕೊಳ್ಳುತ್ತಿದ್ದೇನೆ…ನನಗೆ ಏನೂ ತಿಳಿದಿಲ್ಲ” ಎಂದು ಶಾ ವಿಡಿಯೋದಲ್ಲಿ ಹೇಳಿದ್ದರು. ವಿಡಿಯೋ ಮಾಡುವ ವೇಳೆ ಕೀಟನಾಶಕದ ಬಾಟಲಿಯನ್ನು ಹೊಂದಿದ್ದ ಸಣ್ಣ ಪಾಲಿಥಿನ್ ಚೀಲವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು.

ಫೆಬ್ರವರಿ 6ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, “ಕಳೆದ 24 ಗಂಟೆಗಳಲ್ಲಿ ಬಾರಾಮುಲ್ಲಾ ಮತ್ತು ಕಥುವಾದಲ್ಲಿ ಇಬ್ಬರು ನಾಗರಿಕರ ಸಾವುಗಳ ವಿಷಯವನ್ನು ಗಮನಿಸಿದ್ದೇನೆ. ಒಬ್ಬರು ಸೇನೆಯ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದು ಅತ್ಯಂತ ದುರದೃಷ್ಟಕರ. ಈ ಘಟನೆಗಳು ನಡೆಯಬಾರದಿತ್ತು ಎಂದು ಬರೆದುಕೊಂಡಿದ್ದರು.

ಮುಂದುವರಿದು, “ಸ್ಥಳೀಯ ಜನರ ಸಹಕಾರ ಮತ್ತು ಪಾಲುದಾರಿಕೆ ಇಲ್ಲದೆ ಜಮ್ಮು ಕಾಶ್ಮೀರ ಎಂದಿಗೂ ಸಂಪೂರ್ಣವಾಗಿ ಸಹಬದಿಗೆ ಬರಲು ಮತ್ತು ಭಯೋತ್ಪಾದನೆ ಮುಕ್ತವಾಗಲು ಸಾಧ್ಯವಿಲ್ಲ. ಈ ರೀತಿಯ ಘಟನೆಗಳು ಸಾಮಾನ್ಯ ಸ್ಥಿತಿಗೆ ಮರಳಲು ನಾವು ನಮ್ಮೊಂದಿಗೆ ಕೊಂಡೊಯ್ಯಬೇಕಾದ ಜನರನ್ನೇ ದೂರವಿಡುವ ಅಪಾಯವನ್ನುಂಟುಮಾಡುತ್ತವೆ. ನಾನು ಈ ಘಟನೆಗಳನ್ನು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿದ್ದೇನೆ ಮತ್ತು ಎರಡೂ ಘಟನೆಗಳನ್ನು ಸಮಯಕ್ಕೆ ಅನುಗುಣವಾಗಿ, ಪಾರದರ್ಶಕ ರೀತಿಯಲ್ಲಿ ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದೇನೆ. ಜಮ್ಮು ಕಾಶ್ಮೀರ ಸರ್ಕಾರವು ತನ್ನದೇ ಆದ ವಿಚಾರಣೆಗೆ ಆದೇಶಿಸಿದೆ ಎಂದು ತಿಳಿಸಿದ್ದರು.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...