Homeಮುಖಪುಟಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

- Advertisement -
- Advertisement -

ಪೊಲೀಸ್ ಕಸ್ಟಡಿಯಲ್ಲಿ ಚಿತ್ರ ಹಿಂಸೆ ನೀಡಲಾಗಿದೆ ಎಂದು ಆರೋಪಿಸಿ ಬಿಲ್ಲಾವರ್‌ನ ಗುಜ್ಜರ್ ಯುವಕ  ಮಖಾನ್ ದೀನ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಐದು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಥುವಾ ಉಪ ಆಯುಕ್ತ ರಾಕೇಶ್ ಮಿನ್ಹಾಸ್ ಅವರು ಲೋಹೈ ಮಲ್ಹಾರ್ ತಹಶೀಲ್ದಾರ್ ಅನಿಲ್ ಕುಮಾರ್ ಅವರಿಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ಉಪ ಪೊಲೀಸ್ ಮಹಾನಿರ್ದೇಶಕ (ಕಥುವಾ-ಸಾಂಬಾ-ಜಮ್ಮು ಶ್ರೇಣಿ) ಶಿವಕುಮಾರ್ ನೇತೃತ್ವದಲ್ಲಿ ಇಲಾಖಾ ತನಿಖೆಗೂ ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಆದೇಶಿಸಿದೆ. ಯಾವುದೇ ಗಡುವನ್ನು ನಿರ್ದಿಷ್ಟಪಡಿಸದೆ ಸಾಧ್ಯವಾದಷ್ಟು ಬೇಗ ತನಿಖೆ ಪೂರ್ಣಗೊಳಿಸಲಾಗುವುದು ಎಂದಿದೆ.

ಕಸ್ಟಡಿ ಹತ್ಯೆ ಎಂದೇ ಆರೋಪಿಸಲಾದ ಯುವಕನ ಆತ್ಮಹತ್ಯೆಯನ್ನು ಜಮ್ಮು ಕಾಶ್ಮೀರದ ನಾಗರಿಕ ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿವೆ. ಆತ್ಮಹತ್ಯೆ ಮಾಡಿಕೊಂಡ ಬುಡಕಟ್ಟು ಯುವಕನಿಗೆ ನ್ಯಾಯ ದೊರಕಿಸಿಕೊಡುವಂತೆ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ದೊಡ್ಡ ಮಟ್ಟದ ಆಗ್ರಹ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಮೆಹಬೂಬಾ ಮುಫ್ತಿ, “ಮಖಾನ್ ದೀನ್ ಅವರನ್ನು ಕ್ರೂರವಾಗಿ ಥಳಿಸಿ ಚಿತ್ರಹಿಂಸೆ ನೀಡಲಾಗಿದೆ. ತಪ್ಪೊಪ್ಪಿಗೆ ನೀಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದಿದ್ದಾರೆ.

ಫೆಬ್ರವರಿ 6ರಂದು ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ನಲ್ಲಿ ಮೆಹಬೂಬಾ ಮುಫ್ತಿ “ಕಥುವಾದಿಂದ ಆಘಾತಕಾರಿ ಸುದ್ದಿ : ಬಿಲ್ಲಾವರ್‌ನ ಪೆರೋಡಿಯ 25 ವರ್ಷದ ಮಖಾನ್ ದೀನ್ ಅವರನ್ನು ಬಿಲ್ಲಾವರ್ ಎಸ್‌ಹೆಚ್‌ಒ ಅವರು ಓವರ್ ಗ್ರೌಂಡ್ ವರ್ಕರ್ (ಒಜಿಡಬ್ಲ್ಯು) ಎಂಬ ಸುಳ್ಳು ಆರೋಪದ ಮೇಲೆ ಬಂಧಿಸಿದ್ದರು. ಬಳಿಕ ಆತನಿಗೆ ಕ್ರೂರವಾಗಿ ಥಳಿಸಿ, ಚಿತ್ರಹಿಂಸೆ ನೀಡಿ ಬಲವಂತವಾಗಿ ತಪ್ಪೊಪ್ಪಿಗೆ ಪತ್ರ ಬರೆಯಿಸಲಾಗಿದೆ. ದುರಂತ ಎಂಬಂತೆ ಇಂದು ಮಖಾನ್ ದೀನ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಆ ಪ್ರದೇಶವನ್ನು (ಕಥುವಾ) ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ. ಇದು ಭಾರೀ ಆತಂಕಕ್ಕೆ ಕಾರಣವಾಗಿದೆ. ನಿರಂತರ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಜನರನ್ನು ಬಂಧಿಸಲಾಗುತ್ತಿದೆ. ಈ ಘಟನೆಯು ಸುಳ್ಳು ಆರೋಪಗಳ ಮೇಲೆ ಮುಗ್ಧ ಯುವಕರನ್ನು ಗುರಿಯಾಗಿಸಿದಂತೆ ತೋರುತ್ತಿದೆ. ಈ ಕುರಿತು ತಕ್ಷಣ ತನಿಖೆ ಕೈಗೊಳ್ಳುವಂತೆ ನಾನು ಜಮ್ಮು ಕಾಶ್ಮೀರ ಡಿಜಿಪಿಗೆ ಒತ್ತಾಯಿಸುತ್ತಿದ್ದೇನೆ” ಎಂದಿದ್ದರು

ಕಥುವಾ ಮತ್ತು ಅದರ ಪಕ್ಕದ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಕೆಲವು ಉಗ್ರಗಾಮಿ ಸಂಬಂಧಿತ ಘಟನೆಗಳಲ್ಲಿ ಮಖಾನ್ ದೀನ್ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ಈ ವಾರದ ಆರಂಭದಲ್ಲಿ ಕಥುವಾ ಪೊಲೀಸರು ಅವರನ್ನು ಬಂಧಿಸಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬುಧವಾರ (ಫೆ.5) ಸಂಜೆ ಸಾವಿಗೂ ಮುನ್ನ ರೆಕಾರ್ಡ್ ಮಾಡಲಾದ ವಿಡಿಯೋದಲ್ಲಿ ಮಖಾನ್ ದೀನ್ ತಲೆಯ ಮೇಲೆ ಪವಿತ್ರ ಕುರಾನ್ ಪ್ರತಿಯನ್ನು ಹಿಡಿದು, ಇಸ್ಲಾಮಿಕ್ ಶುಭಾಶಯಗಳನ್ನು ವ್ಯಕ್ತಪಡಿಸುತ್ತಿರುವುದು ಮತ್ತು ಜಮ್ಮು ಪ್ರದೇಶದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದಾನೆಂದು ಆರೋಪಿಸಲಾದ ಸಕ್ರಿಯ ಉಗ್ರಗಾಮಿ ಸ್ವರ್ ದೀನ್ ಅಲಿಯಾಸ್ ಸ್ವರು ಗುಜ್ಜರ್‌ನನ್ನು ನೋಡಿಲ್ಲ ಎಂದು ಪ್ರಮಾಣ ಮಾಡುತ್ತಿರುವುದು ಇದೆ.

ಬುಧವಾರ ಸಂಜೆ ಪೊಲೀಸರು ಮಖಾನ್ ದೀನ್ ಅವರನ್ನು ಬಂಧನದಿಂದ ಬಿಡುಗಡೆ ಮಾಡಿ, ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದರೆಂದು ಹೇಳಲಾದ ಫೋನ್ ತರಲು ಸೂಚಿಸಿದ್ದರು. ಅವರೊಂದಿಗೆ ಯಾರಾದರು ಪೊಲೀಸ್ ಸಿಬ್ಬಂದಿಯನ್ನು ಕಳುಹಿಸಲಾಗಿತ್ತೋ ಎಂಬುವುದು ತಿಳಿದು ಬಂದಿಲ್ಲ.

“ನಾನು ಬೇರೆ ಫೋನ್ ಬಳಸಿ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದೆ ಎಂದು ಪೊಲೀಸರಿಗೆ ಸುಳ್ಳು ಹೇಳಿದ್ದೇನೆ. ನನಗೆ ಕ್ರೂರವಾಗಿ ಹೊಡೆಯುತ್ತಿದ್ದರು. ಅದರಿಂದ ತಪ್ಪಿಸಿಕೊಳ್ಳಲು ಸುಮ್ಮನೆ ಸುಳ್ಳು ಕಥೆ ಹೇಳಿದ್ದೆ. ಪೊಲೀಸರು ಈಗ ಆ ಫೋನ್ ತರಲು ನನಗೆ ಸೂಚಿಸಿದ್ದಾರೆ. ನಾನು ಯಾವುದೇ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿ ಇಲ್ಲ. ಹೀಗಿರುವಾಗ, ಅವರನ್ನು ಸಂಪರ್ಕಿಸಿದ ಫೋನ್ ಎಲ್ಲಿಂದ ತರಲಿ? ಎಂದು ಸಾವಿಗೂ ಮುನ್ನ ಮಾಡಿದ ವಿಡಿಯೋದಲ್ಲಿ ಮಖಾನ್ ದೀನ್ ಅಳಲು ತೋಡಿಕೊಂಡಿದ್ದರು.

ಮುಂದುವರಿದು, “ನಾನು ಚಿಕ್ಕವನಿದ್ದಾಗ, ಬಹುಶಃ ಹಾಗೆ ಮಾಡಿರಬಹುದು. ಆದರೆ, ಯಾರು ಹೇಗೆ ಎಂದು ನನಗೆ ತಿಳಿದಾಗಿನಿಂದ ನಾನು ಯಾವುದೇ ಉಗ್ರಗಾಮಿಯನ್ನು ನೋಡಿಲ್ಲ. ನಾನು ಎಂದಿಗೂ ಪೊಲೀಸರಿಗೆ ದ್ರೋಹ ಮಾಡುವುದಿಲ್ಲ ಎಂದು ಶಫಿ ಭಾಯ್‌ಗೆ ಭರವಸೆ ನೀಡಿದ್ದೇನೆ. ನಾನು ನನ್ನ ಭರವಸೆಯನ್ನು ಉಳಿಸಿಕೊಂಡಿದ್ದೇನೆ” ಎಂದು ಎಂದಿದ್ದರು.

ಮಖಾನ್ ದೀನ್ ಅವರು ಉಗ್ರಗಾಮಿ ಎಂದು ಹೇಳಲಾದ ಸ್ವರು ಗುಜ್ಜರ್ ಅವರ ಸೋದರಳಿಯ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಬದ್ನೋಟಾ ಪ್ರದೇಶದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ಹೊಂಚು ಹಾಕಿ ದಾಳಿ ನಡೆಸಿದ್ದ ಉಗ್ರರ ಗುಂಪಿನೊಂದಿಗೆ ಈತ ಸಂಪರ್ಕ ಹೊಂದಿದ್ದ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಜೂನಿಯರ್ ಕಮಿಷನರ್ ಅಧಿಕಾರಿ ಸೇರಿದಂತೆ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು.

“ಕೊಹಾಗ್ ಕಾರ್ಯಾಚರಣೆಯಲ್ಲಿ ಹೆಚ್‌ಸಿ ಬಶೀರ್ ಅವರ ಸಾವಿಗೆ ಕಾರಣವಾದ ಗುಂಪು ಇದೇ ಆಗಿದೆ. ಮಖಾನ್‌ಗೆ ಪಾಕಿಸ್ತಾನ ಮತ್ತು ಇತರ ವಿದೇಶಗಳಲ್ಲಿ ಹಲವಾರು ಅನುಮಾನಾಸ್ಪದ ಸಂಪರ್ಕಗಳಿದ್ದವು. ಯಾವುದೇ ಕಸ್ಟಡಿ ಚಿತ್ರಹಿಂಸೆ ಅಥವಾ ಹಲ್ಲೆ ಆಗಿಲ್ಲ. ಮಖಾನ್ ಅವರನ್ನು ವಿಚಾರಣೆಗೆ ಒಳಪಡಿಸಿ, ಬಿಟ್ಟು ಕಳುಹಿಸಲಾಗಿದೆ. ಆತನ ಮನೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂಬ ಮೆಹಬೂಬಾ ಮುಫ್ತಿ ಅವರ ಆರೋಪಗಳನ್ನು ‘ಆಧಾರರಹಿತ ಮತ್ತು ದಾರಿತಪ್ಪಿಸುವ’ ಹೇಳಿಕೆ ಎಂದಿದ್ದಾರೆ.

ಪೂಂಚ್‌ನ ನಾರ್ ಗ್ರಾಮದ ನಿವಾಸಿ, ಉಗ್ರಗಾಮಿ ದಾಳಿ ಸಂಬಂಧ ವಿಚಾರಣೆಗೆ ಕರೆಯಲ್ಪಟ್ಟಿದ್ದ 50 ವರ್ಷದ ಮುಖ್ತಾರ್ ಹುಸೇನ್ ಶಾ ಎಂಬಾತ ಏಪ್ರಿಲ್ 27, 2023ರಂದು ವಿಷ ಸೇವಿಸಿ ಸಾವನ್ನಪ್ಪಿದ್ದರು. ಅದಾಗಿ, ಎರಡು ವರ್ಷಗಳ ಒಳಗೆ ಈ ಘಟನೆ ನಡೆದಿದೆ. ಮುಖ್ತಾರ್ ಹುಸೇನ್ ಶಾ ಕೂಡ ಸಾವಿಗೂ ಮುನ್ನ 9 ನಿಮಿಷ 45 ಸೆಕೆಂಡುಗಳ ವೀಡಿಯೊವನ್ನು ರೆಕಾರ್ಡ್ ಮಾಡಿದ್ದರು.

“ನನಗೆ ಸೇನೆ, ಪೊಲೀಸರು ಅಥವಾ ಯಾವುದೇ ಗ್ರಾಮಸ್ಥರಿಂದ ಯಾವುದೇ ಒತ್ತಡವಿಲ್ಲ. ನನ್ನ ಕುಟುಂಬ ಮತ್ತು ನೆರೆಹೊರೆಯವರು ಎದುರಿಸುತ್ತಿರುವ ಚಿತ್ರ ಹಿಂಸೆಯಿಂದಾಗಿ ನನ್ನ ಧರ್ಮವು ನಿಷೇಧಿಸಿರುವ ಆತ್ಮಹತ್ಯೆ ಮೂಲಕ ನನ್ನ ಪ್ರಾಣವನ್ನು ನಾನು ತೆಗೆದುಕೊಳ್ಳುತ್ತಿದ್ದೇನೆ…ನನಗೆ ಏನೂ ತಿಳಿದಿಲ್ಲ” ಎಂದು ಶಾ ವಿಡಿಯೋದಲ್ಲಿ ಹೇಳಿದ್ದರು. ವಿಡಿಯೋ ಮಾಡುವ ವೇಳೆ ಕೀಟನಾಶಕದ ಬಾಟಲಿಯನ್ನು ಹೊಂದಿದ್ದ ಸಣ್ಣ ಪಾಲಿಥಿನ್ ಚೀಲವನ್ನು ಕೈಯಲ್ಲಿ ಹಿಡಿದುಕೊಂಡಿದ್ದರು.

ಫೆಬ್ರವರಿ 6ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, “ಕಳೆದ 24 ಗಂಟೆಗಳಲ್ಲಿ ಬಾರಾಮುಲ್ಲಾ ಮತ್ತು ಕಥುವಾದಲ್ಲಿ ಇಬ್ಬರು ನಾಗರಿಕರ ಸಾವುಗಳ ವಿಷಯವನ್ನು ಗಮನಿಸಿದ್ದೇನೆ. ಒಬ್ಬರು ಸೇನೆಯ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದು ಅತ್ಯಂತ ದುರದೃಷ್ಟಕರ. ಈ ಘಟನೆಗಳು ನಡೆಯಬಾರದಿತ್ತು ಎಂದು ಬರೆದುಕೊಂಡಿದ್ದರು.

ಮುಂದುವರಿದು, “ಸ್ಥಳೀಯ ಜನರ ಸಹಕಾರ ಮತ್ತು ಪಾಲುದಾರಿಕೆ ಇಲ್ಲದೆ ಜಮ್ಮು ಕಾಶ್ಮೀರ ಎಂದಿಗೂ ಸಂಪೂರ್ಣವಾಗಿ ಸಹಬದಿಗೆ ಬರಲು ಮತ್ತು ಭಯೋತ್ಪಾದನೆ ಮುಕ್ತವಾಗಲು ಸಾಧ್ಯವಿಲ್ಲ. ಈ ರೀತಿಯ ಘಟನೆಗಳು ಸಾಮಾನ್ಯ ಸ್ಥಿತಿಗೆ ಮರಳಲು ನಾವು ನಮ್ಮೊಂದಿಗೆ ಕೊಂಡೊಯ್ಯಬೇಕಾದ ಜನರನ್ನೇ ದೂರವಿಡುವ ಅಪಾಯವನ್ನುಂಟುಮಾಡುತ್ತವೆ. ನಾನು ಈ ಘಟನೆಗಳನ್ನು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿದ್ದೇನೆ ಮತ್ತು ಎರಡೂ ಘಟನೆಗಳನ್ನು ಸಮಯಕ್ಕೆ ಅನುಗುಣವಾಗಿ, ಪಾರದರ್ಶಕ ರೀತಿಯಲ್ಲಿ ತನಿಖೆ ಮಾಡಬೇಕೆಂದು ಒತ್ತಾಯಿಸಿದ್ದೇನೆ. ಜಮ್ಮು ಕಾಶ್ಮೀರ ಸರ್ಕಾರವು ತನ್ನದೇ ಆದ ವಿಚಾರಣೆಗೆ ಆದೇಶಿಸಿದೆ ಎಂದು ತಿಳಿಸಿದ್ದರು.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...