Homeಚಳವಳಿಯುವ ಸಮಾವೇಶ: ಮಾಧ್ಯಮ ಕಟ್ಟಿದ ಕಥನಗಳು ಮತ್ತು ದ್ವೇಷ ಭಾಷಣದ ಕುರಿತು ಚರ್ಚೆ

ಯುವ ಸಮಾವೇಶ: ಮಾಧ್ಯಮ ಕಟ್ಟಿದ ಕಥನಗಳು ಮತ್ತು ದ್ವೇಷ ಭಾಷಣದ ಕುರಿತು ಚರ್ಚೆ

ಡಾ. ಅಶ್ವಿನಿ ಕೆ.ಪಿ, ಜಿ.ಮಹಾಂತೇಶ್ ಭದ್ರಾವತಿ, ತಬಸ್ಸುಮ್ ಮಂಗಳೂರು, ತನ್ವೀರ್ ಅಹ್ಮದ್ ಸೇರಿದಂತೆ 10 ಜನರಿಗೆ 'ಸಾಲಿಡಾರಿಟಿ ಎಕ್ಸಲೆನ್ಸ್ ಅವಾರ್ಡ್ - 2022' ಪ್ರಶಸ್ತಿ ನೀಡಿ ಗೌರವಿಸಲಾಗುವುದು.

- Advertisement -
- Advertisement -

ಡಿಸೆಂಬರ್ 18 ರಂದು ರಾಜ್ಯ ಮಟ್ಟದ ಯುವ ಸಮಾವೇಶ ನಡೆಯಲಿದ್ದು, ಮಾಧ್ಯಮ ಕಟ್ಟಿದ ಕಥನಗಳು ಮತ್ತು ದ್ವೇಷ ಭಾಷಣದ ಕುರಿತು ಚರ್ಚಾ ಕಾರ್ಯಕ್ರಮ ಹಾಗೂ ಯುವ ಸಾಧಕರಿಗೆ ‘ಸಾಲಿಡಾರಿಟಿ ಎಕ್ಸಲೆನ್ಸ್ ಅವಾರ್ಡ್’ ನೀಡಲಾಗುವುದು ಎಂದು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಅಧ್ಯಕ್ಷರಾದ ಲಬೀದ್ ಶಾಫಿ ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭರವಸೆ – ಮರುನಿರ್ಮಾಣ – ಘನತೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ಸಮಾವೇಶ ನಡೆಯಲಿದೆ. ಸಮಾಜದ ನಿರ್ಮಾಣಾತ್ಮಕ ಕೆಲಸಗಳಲ್ಲಿ ಯುವ ಸಮೂಹವನ್ನು ಸಜ್ಜುಗೊಳಿಸುವುದು ಈ ಸಮ್ಮೇಳನದ ಬಹು ಮುಖ್ಯ ಗುರಿಯಾಗಿದೆ ಎಂದರು.

ಸಮಾಜದಲ್ಲಿ ಶಾಂತಿ, ಪ್ರಗತಿ ಹಾಗೂ ಅಭ್ಯುದಯವನ್ನು ಸಾಧಿಸಲು ಯುವಕರನ್ನು ರಚನಾತ್ಮಕವಾಗಿ ಸಿದ್ಧಗೊಳಿಸುವುದು ಕಾಲದ ಬೇಡಿಕೆಯಾಗಿದೆ. ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಈ ನಿಟ್ಟಿನಲ್ಲಿ ತನ್ನ ಕೆಲಸವನ್ನು ನಿರ್ವಹಿಸುತ್ತಿದೆ. ಯುವಜನರನ್ನು ನೈತಿಕ, ಸಾಮಾಜಿಕ, ಆರ್ಥಿಕ, ಆರೋಗ್ಯ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಬಲೀಕರಿಸುವುದು ನಮ್ಮ ಪ್ರಥಮ ಆದ್ಯತೆಯಾಗಿದೆ ಎಂದರು.

‘ಮಾಧ್ಯಮ ಕಟ್ಟಿದ ಕಥನಗಳು ಮತ್ತು ದ್ವೇಷ ಭಾಷಣ: ಒಂದು ಅವಲೋಕನ’ ಎಂಬ ವಿಷಯದಲ್ಲಿ ಚಾವಡಿ ಚರ್ಚೆ ನಡೆಯಲಿರುವುದು. ಈ ಚರ್ಚೆಯಲ್ಲಿ ದಿ ಕ್ವಿಂಟ್ ಪತ್ರಕರ್ತರಾದ ಆದಿತ್ಯ ಮೆನನ್, ಹಿರಿಯ ಪತ್ರಕರ್ತರಾದ ಪ್ರಶಾಂತ್ ಟಂಡನ್ ಮತ್ತು ಕರ್ನಾಟಕದ ಹಿರಿಯ ಪತ್ರಕರ್ತರಾದ ಬಿ.ಎಂ. ಹನೀಫ್  ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಡಾ. ಅಶ್ವಿನಿ ಕೆ.ಪಿ, ಜಿ.ಮಹಾಂತೇಶ್ ಭದ್ರಾವತಿ, ತಬಸ್ಸುಮ್ ಮಂಗಳೂರು, ತನ್ವೀರ್ ಅಹ್ಮದ್ ಸೇರಿದಂತೆ 10 ಜನರಿಗೆ ‘ಸಾಲಿಡಾರಿಟಿ ಎಕ್ಸಲೆನ್ಸ್ ಅವಾರ್ಡ್ – 2022’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಈ ಸಮಾವೇಶದ ಪ್ರಮುಖ ಭಾಷಣಕಾರರಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ನ ರಾಷ್ಟ್ರೀಯ ಅಧ್ಯಕ್ಷರಾದ ಸೈಯದ್ ಸಾದತುಲ್ಲಾ ಹುಸೈನಿ, ವಿದ್ವಾಂಸರಾದ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ, ಯುವ ನಾಯಕರಾದ ನಹಾಸ್ ಮಾಲ, ಪ್ರಖ್ಯಾತ ವಾಗ್ಮಿಗಳಾದ ಡಾ. ತಾಹಾ ಮತೀನ್, ಮುಹಮ್ಮದ್ ಕುಂಞ, ಮಾನವ ಹಕ್ಕು ಹೋರಾಟಗಾರರಾದ ಕೆ.ಕೆ.ಸುಹೈಲ್, ಲದೀದಾ ಪರ್ಝಾನಾ, ಶಬರಿಮಾಲ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ರಿಹಾನ್, ಮುಹಮ್ಮದ್ ಅಖೀಲ್, ಮಾಝ್ ಸಲ್ಮಾನ್ ಮನಿಯಾರ್ ಮತ್ತು
ಮುಹಮ್ಮದ್ ನವಾಝ್ ಹಾಜರಿದ್ದರು.

ಇದನ್ನೂ ಓದಿ: 100ನೇ ದಿನಕ್ಕೆ ಕಾಲಿಟ್ಟ ಭಾರತ ಐಕ್ಯತಾ ಯಾತ್ರೆ: ಪಾದಯಾತ್ರೆಯ 10 ಮುಖ್ಯ ಸಂಗತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....