Homeಚಳವಳಿಯುವ ಸಮಾವೇಶ: ಮಾಧ್ಯಮ ಕಟ್ಟಿದ ಕಥನಗಳು ಮತ್ತು ದ್ವೇಷ ಭಾಷಣದ ಕುರಿತು ಚರ್ಚೆ

ಯುವ ಸಮಾವೇಶ: ಮಾಧ್ಯಮ ಕಟ್ಟಿದ ಕಥನಗಳು ಮತ್ತು ದ್ವೇಷ ಭಾಷಣದ ಕುರಿತು ಚರ್ಚೆ

ಡಾ. ಅಶ್ವಿನಿ ಕೆ.ಪಿ, ಜಿ.ಮಹಾಂತೇಶ್ ಭದ್ರಾವತಿ, ತಬಸ್ಸುಮ್ ಮಂಗಳೂರು, ತನ್ವೀರ್ ಅಹ್ಮದ್ ಸೇರಿದಂತೆ 10 ಜನರಿಗೆ 'ಸಾಲಿಡಾರಿಟಿ ಎಕ್ಸಲೆನ್ಸ್ ಅವಾರ್ಡ್ - 2022' ಪ್ರಶಸ್ತಿ ನೀಡಿ ಗೌರವಿಸಲಾಗುವುದು.

- Advertisement -
- Advertisement -

ಡಿಸೆಂಬರ್ 18 ರಂದು ರಾಜ್ಯ ಮಟ್ಟದ ಯುವ ಸಮಾವೇಶ ನಡೆಯಲಿದ್ದು, ಮಾಧ್ಯಮ ಕಟ್ಟಿದ ಕಥನಗಳು ಮತ್ತು ದ್ವೇಷ ಭಾಷಣದ ಕುರಿತು ಚರ್ಚಾ ಕಾರ್ಯಕ್ರಮ ಹಾಗೂ ಯುವ ಸಾಧಕರಿಗೆ ‘ಸಾಲಿಡಾರಿಟಿ ಎಕ್ಸಲೆನ್ಸ್ ಅವಾರ್ಡ್’ ನೀಡಲಾಗುವುದು ಎಂದು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಅಧ್ಯಕ್ಷರಾದ ಲಬೀದ್ ಶಾಫಿ ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭರವಸೆ – ಮರುನಿರ್ಮಾಣ – ಘನತೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ಸಮಾವೇಶ ನಡೆಯಲಿದೆ. ಸಮಾಜದ ನಿರ್ಮಾಣಾತ್ಮಕ ಕೆಲಸಗಳಲ್ಲಿ ಯುವ ಸಮೂಹವನ್ನು ಸಜ್ಜುಗೊಳಿಸುವುದು ಈ ಸಮ್ಮೇಳನದ ಬಹು ಮುಖ್ಯ ಗುರಿಯಾಗಿದೆ ಎಂದರು.

ಸಮಾಜದಲ್ಲಿ ಶಾಂತಿ, ಪ್ರಗತಿ ಹಾಗೂ ಅಭ್ಯುದಯವನ್ನು ಸಾಧಿಸಲು ಯುವಕರನ್ನು ರಚನಾತ್ಮಕವಾಗಿ ಸಿದ್ಧಗೊಳಿಸುವುದು ಕಾಲದ ಬೇಡಿಕೆಯಾಗಿದೆ. ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಈ ನಿಟ್ಟಿನಲ್ಲಿ ತನ್ನ ಕೆಲಸವನ್ನು ನಿರ್ವಹಿಸುತ್ತಿದೆ. ಯುವಜನರನ್ನು ನೈತಿಕ, ಸಾಮಾಜಿಕ, ಆರ್ಥಿಕ, ಆರೋಗ್ಯ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಬಲೀಕರಿಸುವುದು ನಮ್ಮ ಪ್ರಥಮ ಆದ್ಯತೆಯಾಗಿದೆ ಎಂದರು.

‘ಮಾಧ್ಯಮ ಕಟ್ಟಿದ ಕಥನಗಳು ಮತ್ತು ದ್ವೇಷ ಭಾಷಣ: ಒಂದು ಅವಲೋಕನ’ ಎಂಬ ವಿಷಯದಲ್ಲಿ ಚಾವಡಿ ಚರ್ಚೆ ನಡೆಯಲಿರುವುದು. ಈ ಚರ್ಚೆಯಲ್ಲಿ ದಿ ಕ್ವಿಂಟ್ ಪತ್ರಕರ್ತರಾದ ಆದಿತ್ಯ ಮೆನನ್, ಹಿರಿಯ ಪತ್ರಕರ್ತರಾದ ಪ್ರಶಾಂತ್ ಟಂಡನ್ ಮತ್ತು ಕರ್ನಾಟಕದ ಹಿರಿಯ ಪತ್ರಕರ್ತರಾದ ಬಿ.ಎಂ. ಹನೀಫ್  ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಡಾ. ಅಶ್ವಿನಿ ಕೆ.ಪಿ, ಜಿ.ಮಹಾಂತೇಶ್ ಭದ್ರಾವತಿ, ತಬಸ್ಸುಮ್ ಮಂಗಳೂರು, ತನ್ವೀರ್ ಅಹ್ಮದ್ ಸೇರಿದಂತೆ 10 ಜನರಿಗೆ ‘ಸಾಲಿಡಾರಿಟಿ ಎಕ್ಸಲೆನ್ಸ್ ಅವಾರ್ಡ್ – 2022’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.

ಈ ಸಮಾವೇಶದ ಪ್ರಮುಖ ಭಾಷಣಕಾರರಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ನ ರಾಷ್ಟ್ರೀಯ ಅಧ್ಯಕ್ಷರಾದ ಸೈಯದ್ ಸಾದತುಲ್ಲಾ ಹುಸೈನಿ, ವಿದ್ವಾಂಸರಾದ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ, ಯುವ ನಾಯಕರಾದ ನಹಾಸ್ ಮಾಲ, ಪ್ರಖ್ಯಾತ ವಾಗ್ಮಿಗಳಾದ ಡಾ. ತಾಹಾ ಮತೀನ್, ಮುಹಮ್ಮದ್ ಕುಂಞ, ಮಾನವ ಹಕ್ಕು ಹೋರಾಟಗಾರರಾದ ಕೆ.ಕೆ.ಸುಹೈಲ್, ಲದೀದಾ ಪರ್ಝಾನಾ, ಶಬರಿಮಾಲ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಹಮ್ಮದ್ ರಿಹಾನ್, ಮುಹಮ್ಮದ್ ಅಖೀಲ್, ಮಾಝ್ ಸಲ್ಮಾನ್ ಮನಿಯಾರ್ ಮತ್ತು
ಮುಹಮ್ಮದ್ ನವಾಝ್ ಹಾಜರಿದ್ದರು.

ಇದನ್ನೂ ಓದಿ: 100ನೇ ದಿನಕ್ಕೆ ಕಾಲಿಟ್ಟ ಭಾರತ ಐಕ್ಯತಾ ಯಾತ್ರೆ: ಪಾದಯಾತ್ರೆಯ 10 ಮುಖ್ಯ ಸಂಗತಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...