Homeಕರ್ನಾಟಕಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

ಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆಂದು ಬಿಜೆಪಿಯ ಹಲವು ನಾಯಕರು ಹೇಳಿದ್ದರು, ಜೊತೆಗೆ ಅವರು ಈಗಲೂ ಅಂತಹದೇ ಕುತಂತ್ರಗಳ್ನು ಮುಂದುವರೆಸಿದ್ದಾರೆ. ಆದುದರಿಂದ ಯುವಜನತೆ ಕೋಮುವಾದಿಗಳಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ನಾಯಕರಾಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನಾಯಕ, ಪತ್ರಕರ್ತ ಮನೋಜ್ ಆಜಾದ್ ಶನಿವಾರ ಕರೆ ನೀಡಿದ್ದಾರೆ. ಯುವಜನತೆ ಸಂವಿಧಾನ

ಬೆಂಗಳೂರು ವಿಶ್ವವಿದ್ಯಾನಿಲಯದ ಕೇಂದ್ರೀಯ ಗ್ರಂಥಾಲಯ ಆವರಣದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮತ್ತು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಚಿಂತಕ ಶಿವಸುಂದರ್ ರಚಿಸಿರುವ ‘ಸಂವಿಧಾನ ಮತ್ತು ಸಂಘಿಗಳ ಸುಳ್ಳು ಅಭಿಯಾನ’ ಕೃತಿ ಓದುವ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಸಮಾಜದಲ್ಲಿ ಶಾಂತಿ-ಸೌಹಾರ್ಧತೆಯಿಂದ ಜೀವಿಸಲು ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರಬಲರಾಗಿ ಬದುಕಲು, ಜನರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಂವಿಧಾನ ಅತ್ಯವಶ್ಯಕ. ಪ್ರತಿಯೊಂದು ಧರ್ಮವೂ ತಮ್ಮದೇ ಆದ ಧರ್ಮ ಗ್ರಂಥ ಹೊಂದಿದೆ. ಆದರೆ ಅದೆಲ್ಲವನ್ನೂ ಮೀರಿದ ಮತ್ತು ಎಲ್ಲ ಧರ್ಮದವರಿಗೂ ಅನ್ವಯಿಸುವ ಮಹಾಗ್ರಂಥವೇ ಸಂವಿಧಾನ. ಅದನ್ನು ಉಳಿಸಿ ರಕ್ಷಿಸುವುದು ಮತ್ತು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ಅಂಬೇಡ್ಕರ್‌ ಅವರ ನಿಜವಾದ ಅನುಯಾಯಿಗಳು ನಾವೇ ಎಂದು ಹೇಳುತ್ತಿರುವ ಸಂಘಪರಿವಾರದವರು, ಜನರನ್ನು ನಂಬಿಸುವ ಸಲುವಾಗಿ ಹಲವಾರು ಸುಳ್ಳುಗಳನ್ನು ಹೇಳುತ್ತಾ, ಅರ್ಧ ಸತ್ಯಗಳನ್ನು ಹೇಳುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಹಿಂದುತ್ವದ ಬಗ್ಗೆ ಅಂಬೇಡ್ಕರ್‌ ಅವರಿಗೆ ಇದ್ದ ನಿಜವಾದ ಅಭಿಪ್ರಾಯಗಳನ್ನು ಮರೆಮಾಚಲು ಸಂವಿಧಾನ ವಿರೋಧಿ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಯುವಜನತೆ ಅಧ್ಯಯನ, ಸಂಶೋಧನೆಗಳ ಮೂಲಕ ನಿಜ ಏನೆಂದರು ಅರ್ಥ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿವಸುಂದರ್ ರಚಿಸಿರುವ ಕೃತಿ ನೆರವಾಗಲಿದೆ ಎಂದು ಮನೋಜ್ ಅಭಿಪ್ರಾಯಪಟ್ಟಿದ್ದಾರೆ.

ಕೆವಿಎಸ್ ಪದಾಧಿಕಾರಿ ಗುರುಬಸವ ಮಾತನಾಡಿ, ಸಂವಿಧಾನದ ಆಶಯವನ್ನು ಅರ್ಥ ಮಾಡಿಕೊಳ್ಳುವುದು ಇದೆಂದಿಗಿಂತಲು ಮಹತ್ವದ್ದಾಗಿದೆ. ನಮ್ಮ ಸಂವಿಧಾನ ಇತರೇ ದೇಶಗಳ ಸಂವಿಧಾನದಂತಲ್ಲ. ಸ್ವಾತಂತ್ರ್ಯ ಪೂರ್ವ, ಸ್ವಾತಂತ್ರದ ಸಂದರ್ಭದಲ್ಲಿ ಹಾಗೂ ನಂತರದ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಭಾರತದ ಇತಿಹಾಸವನ್ನು ಮತ್ತು ಅಂಬೇಡ್ಕರ್ ಜೀವನ ಚರಿತ್ರೆಯನ್ನು ಓದಿಕೊಳ್ಳಬೇಕು. ಇಲ್ಲವಾದರೆ ಸಂವಿಧಾನದ ಮಹತ್ವ ತಿಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಭಿಯಾನದಲ್ಲಿ ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಾದ ಸುಗುಣಾ, ನಾಗಪ್ಪ, ಗೌತಮ್, ನಾಗರಾಜ, ಅಭಿ, ಶ್ರೀನಿವಾಸ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...