Homeಕರ್ನಾಟಕಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

ಯುವಜನತೆ ಸಂವಿಧಾನ ರಕ್ಷಿಸಿಕೊಳ್ಳುವ ನಾಯಕರಾಗಬೇಕು: ಮನೋಜ್ ಆಜಾದ್

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆಂದು ಬಿಜೆಪಿಯ ಹಲವು ನಾಯಕರು ಹೇಳಿದ್ದರು, ಜೊತೆಗೆ ಅವರು ಈಗಲೂ ಅಂತಹದೇ ಕುತಂತ್ರಗಳ್ನು ಮುಂದುವರೆಸಿದ್ದಾರೆ. ಆದುದರಿಂದ ಯುವಜನತೆ ಕೋಮುವಾದಿಗಳಿಂದ ಸಂವಿಧಾನವನ್ನು ರಕ್ಷಿಸಿಕೊಳ್ಳುವ ನಾಯಕರಾಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ನಾಯಕ, ಪತ್ರಕರ್ತ ಮನೋಜ್ ಆಜಾದ್ ಶನಿವಾರ ಕರೆ ನೀಡಿದ್ದಾರೆ. ಯುವಜನತೆ ಸಂವಿಧಾನ

ಬೆಂಗಳೂರು ವಿಶ್ವವಿದ್ಯಾನಿಲಯದ ಕೇಂದ್ರೀಯ ಗ್ರಂಥಾಲಯ ಆವರಣದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮತ್ತು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಚಿಂತಕ ಶಿವಸುಂದರ್ ರಚಿಸಿರುವ ‘ಸಂವಿಧಾನ ಮತ್ತು ಸಂಘಿಗಳ ಸುಳ್ಳು ಅಭಿಯಾನ’ ಕೃತಿ ಓದುವ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಸಮಾಜದಲ್ಲಿ ಶಾಂತಿ-ಸೌಹಾರ್ಧತೆಯಿಂದ ಜೀವಿಸಲು ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರಬಲರಾಗಿ ಬದುಕಲು, ಜನರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಂವಿಧಾನ ಅತ್ಯವಶ್ಯಕ. ಪ್ರತಿಯೊಂದು ಧರ್ಮವೂ ತಮ್ಮದೇ ಆದ ಧರ್ಮ ಗ್ರಂಥ ಹೊಂದಿದೆ. ಆದರೆ ಅದೆಲ್ಲವನ್ನೂ ಮೀರಿದ ಮತ್ತು ಎಲ್ಲ ಧರ್ಮದವರಿಗೂ ಅನ್ವಯಿಸುವ ಮಹಾಗ್ರಂಥವೇ ಸಂವಿಧಾನ. ಅದನ್ನು ಉಳಿಸಿ ರಕ್ಷಿಸುವುದು ಮತ್ತು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ಅಂಬೇಡ್ಕರ್‌ ಅವರ ನಿಜವಾದ ಅನುಯಾಯಿಗಳು ನಾವೇ ಎಂದು ಹೇಳುತ್ತಿರುವ ಸಂಘಪರಿವಾರದವರು, ಜನರನ್ನು ನಂಬಿಸುವ ಸಲುವಾಗಿ ಹಲವಾರು ಸುಳ್ಳುಗಳನ್ನು ಹೇಳುತ್ತಾ, ಅರ್ಧ ಸತ್ಯಗಳನ್ನು ಹೇಳುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಹಿಂದುತ್ವದ ಬಗ್ಗೆ ಅಂಬೇಡ್ಕರ್‌ ಅವರಿಗೆ ಇದ್ದ ನಿಜವಾದ ಅಭಿಪ್ರಾಯಗಳನ್ನು ಮರೆಮಾಚಲು ಸಂವಿಧಾನ ವಿರೋಧಿ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಯುವಜನತೆ ಅಧ್ಯಯನ, ಸಂಶೋಧನೆಗಳ ಮೂಲಕ ನಿಜ ಏನೆಂದರು ಅರ್ಥ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಶಿವಸುಂದರ್ ರಚಿಸಿರುವ ಕೃತಿ ನೆರವಾಗಲಿದೆ ಎಂದು ಮನೋಜ್ ಅಭಿಪ್ರಾಯಪಟ್ಟಿದ್ದಾರೆ.

ಕೆವಿಎಸ್ ಪದಾಧಿಕಾರಿ ಗುರುಬಸವ ಮಾತನಾಡಿ, ಸಂವಿಧಾನದ ಆಶಯವನ್ನು ಅರ್ಥ ಮಾಡಿಕೊಳ್ಳುವುದು ಇದೆಂದಿಗಿಂತಲು ಮಹತ್ವದ್ದಾಗಿದೆ. ನಮ್ಮ ಸಂವಿಧಾನ ಇತರೇ ದೇಶಗಳ ಸಂವಿಧಾನದಂತಲ್ಲ. ಸ್ವಾತಂತ್ರ್ಯ ಪೂರ್ವ, ಸ್ವಾತಂತ್ರದ ಸಂದರ್ಭದಲ್ಲಿ ಹಾಗೂ ನಂತರದ ವಿದ್ಯಮಾನಗಳನ್ನು ಅರ್ಥಮಾಡಿಕೊಳ್ಳಬೇಕೆಂದರೆ ಭಾರತದ ಇತಿಹಾಸವನ್ನು ಮತ್ತು ಅಂಬೇಡ್ಕರ್ ಜೀವನ ಚರಿತ್ರೆಯನ್ನು ಓದಿಕೊಳ್ಳಬೇಕು. ಇಲ್ಲವಾದರೆ ಸಂವಿಧಾನದ ಮಹತ್ವ ತಿಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಭಿಯಾನದಲ್ಲಿ ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಾದ ಸುಗುಣಾ, ನಾಗಪ್ಪ, ಗೌತಮ್, ನಾಗರಾಜ, ಅಭಿ, ಶ್ರೀನಿವಾಸ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...