HomeUncategorizedಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡ ಉತ್ತರ ಪ್ರದೇಶದ ಯುವಕ ಆಸ್ಪತ್ರೆಯಲ್ಲಿ ಸಾವು

ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡ ಉತ್ತರ ಪ್ರದೇಶದ ಯುವಕ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಉತ್ತರ ಪ್ರದೇಶದ ಬಾಗ್‌ಪತ್‌ನ 26 ವರ್ಷದ ಯುವಕ ಘಟನೆ ನಡೆದು ಎರಡು ದಿನಗಳ ನಂತರ ನವದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಶುಕ್ರವಾರ ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಯುವಕನನ್ನು ಜಿತೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ.

ಜಿತೇಂದ್ರ ಕುಮಾರ್ ಬುಧವಾರ ಮಧ್ಯಾಹ್ನ 3.30 ಕ್ಕೆ ಸಂಸತ್‌ ಕಟ್ಟಡದ ವೃತ್ತದ ಬಳಿಯ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದು ಆತ್ಮಹತ್ಯಾಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನೆರವಾಗಿದ್ದರು. ಅಲ್ಲಿಂದ ಜಿತೇಂದ್ರ ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ ಅವರಿಗೆ 95% ಸುಟ್ಟ ಗಾಯಗಳಾಗಿವೆ ಎಂದು ಪಿಟಿಐ ವರದಿ ಮಾಡಿತ್ತು. ಸಂಸತ್ತಿನ ಬಳಿ

“ಅವರು [ಶುಕ್ರವಾರ] ಸುಮಾರು 2 ಗಂಟೆಗೆ ನಿಧನರಾದರು,” ಎಂದು ಪೊಲೀಸ್ ಅಧಿಕಾರಿ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಯುವಕನ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಅವರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಾವಿಗೀಡಾದ ಯುವಕ ನೀಡಿದ್ದ ಹೇಳಿಕೆಯಲ್ಲಿ, ಸ್ಥಳೀಯ ಪೊಲೀಸರು ಪ್ರಕರಣವನ್ನು ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಕೆಲವು ವರ್ಷಗಳಿಂದ ತನಗೆ ಮತ್ತು ತನ್ನ ಕುಟುಂಬಕ್ಕೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿರುವ ವ್ಯಕ್ತಿಯನ್ನು ಹೆಸರಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ಆರೋಪದ ಕಿರುಕುಳದ ಬಗ್ಗೆ ತಮ್ಮ ಕುಟುಂಬದ ಮಾತನ್ನು ಯಾವುದೇ ಅಧಿಕಾರಿಗಳು ಕೇಳಲಿಲ್ಲ ಎಂದು ಜಿತೇಂದ್ರ ಕುಮಾರ್ ಅವರ ಸೋದರಸಂಬಂಧಿ ಗೌರವ್ ತಿಳಿಸಿದ್ದಾರೆ. ಕೆಲವು ವ್ಯಕ್ತಿಗಳು 2021 ರಲ್ಲಿ ಜಿತೇಂದ್ರ ಕುಮಾರ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ್ದರು. “ಅವರ ಕುಟುಂಬವು ಪ್ರಕರಣವನ್ನು ದಾಖಲಿಸಲು ಪ್ರಯತ್ನಿಸಿದಾಗ, ಅದರ ಬದಲಿಗೆ ಜಿತೇಂದ್ರ ಅವರ ವಿರುದ್ಧವೇ ಪ್ರಕರಣ ದಾಖಲಿಸಲಾಯಿತು” ಎಂದು ಅವರು ಹೇಳಿದ್ದಾರೆ.

ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳೇ 2022ರಲ್ಲಿ ಜಿತೇಂದ್ರ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅದೇ ಗುಂಪು 2024 ರಲ್ಲಿ ಜಿತೇಂದ್ರ ಕುಮಾರ್ ಮತ್ತು ಅವನ ತಂದೆಯ ಮೇಲೆ ವಾಹನ ಹರಿಸಲು ಪ್ರಯತ್ನಿಸಿತು. ಜೊತೆಗೆ ಜಿತೇಂದ್ರ ವಿರುದ್ಧ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಗೌರವ್‌ ಹೇಳಿದ್ದಾರೆ.

“ಈ ವರ್ಷಗಳಲ್ಲಿ ಅವರು ಮೌನವಾಗಿರಲು ಅವರು ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದರು,” ಎಂದು ಗೌರವ್ ಹೇಳಿದ್ದಾರೆ. ಈ ಪ್ರಕರಣವೊಂದರಲ್ಲಿ ಮೃತ ಜಿತೇಂದ್ರ ಕುಮಾರ್ 1.5 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು ಎಂದು ಅವರು ಹೇಳಿದ್ದಾರೆ.

ಪೊಲೀಸ್ ಉಪ ಆಯುಕ್ತ ದೇವೇಶ್ ಮಹಲಾ ಪ್ರತಿಕ್ರಿಯಿಸಿ, ವೈಯಕ್ತಿಕ ದ್ವೇಷದಿಂದಾಗಿ ಜಿತೇಂದ್ರ ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ. ಪ್ರಕರಣದ ತನಿಖೆಯ ಸಮಯದಲ್ಲಿ ಪೊಲೀಸರು ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಅದರಲ್ಲಿ ಜಿತೇಂದ್ರ ಕುಮಾರ್ ವಿರುದ್ಧ ಮೇ 2021, ಏಪ್ರಿಲ್ 2022 ಮತ್ತು ಮೇ 2024 ರಲ್ಲಿ ಬಾಗ್‌ಪತ್‌ನಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಹಿರಂಗವಾಗಿದೆ ಎಂದು ಅವರು ಹೇಳಿದ್ದಾರೆ. ಸಂಸತ್ತಿನ ಬಳಿ

ಇದನ್ನೂ ಓದಿ: ‘ದೆಹಲಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ’ ಎಂದು ಆರೋಪಿಸಿದ ಎಎಪಿ; ಜಾರಿ ನಿರ್ದೇಶನಾಲಯಕ್ಕೆ ದೂರು

‘ದೆಹಲಿಯಲ್ಲಿ ಬಿಜೆಪಿ ಹಣ ಹಂಚುತ್ತಿದೆ’ ಎಂದು ಆರೋಪಿಸಿದ ಎಎಪಿ; ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...