HomeUncategorized‘ಇದು ಸಿದ್ಧಾರ್ಥನ ದುರಂತವಷ್ಟೇ ಅಲ್ಲ, ದೇಶದ ಎಕಾನಮಿಯದೂ ಕೂಡ..’ ಯುವ ಉದ್ಯಮಿಯ ಮನದಾಳದ ಮಾತುಗಳು

‘ಇದು ಸಿದ್ಧಾರ್ಥನ ದುರಂತವಷ್ಟೇ ಅಲ್ಲ, ದೇಶದ ಎಕಾನಮಿಯದೂ ಕೂಡ..’ ಯುವ ಉದ್ಯಮಿಯ ಮನದಾಳದ ಮಾತುಗಳು

- Advertisement -
- Advertisement -

‘ಇದು ಸಿದ್ಧಾರ್ಥ ದುರಂತವಷ್ಟೇ ಅಲ್ಲ, ದೇಶದ ಎಕಾನಮಿಯದೂ ಕೂಡ…..’
ಯುವ ಉದ್ಯಮಿಯೊಬ್ಬನ ಮನದಾಳದ ಮಾತುಗಳು..

ಇವತ್ತು ದೇಶದ ಆರ್ಥಿಕತೆ ಅಪಾಯದಲ್ಲಿದೆ. ಹೊರ ರಾಜ್ಯದಲ್ಲಿ ಸಣ್ಣ ಉದ್ಯಮ ಆರಂಭಿಸಿರುವ ಗದಗ ಜಿಲ್ಲೆಯ ಗಜೇಂದ್ರಗಡದ ಯುವ ಇಂಜಿನಿಯರ್-ಎಂಟರಪ್ರೈನರ್ ಒಬ್ಬರು ನಮ್ಮ ಪತ್ರಿಕೆ ಮತು ಪೋರ್ಟಲ್ ಮುಂದೆ ಹೇಳಿದ ಮನದಾಳದ ಮಾತುಗಳು ಇಲ್ಲಿವೆ…….

ಒಂದು ದುರಂತ ಸಾವು ಇವತ್ತು ಒಂದಿಷ್ಟು ಪ್ರಶ್ನೆಗಳನ್ನೂ ಎಬ್ಬಿಸಿದೆ. ಎಲ್ಲ ಸಾವುಗಳೂ, ಅವೂ ಆತ್ಮಹತ್ಯೆಯಾಗಿದ್ದರೆ ಇಂತಹ ಪ್ರಶ್ನೆಗಳನ್ನು ಹುಟ್ಟು ಹಾಕಲೇಬೇಕು…

ಇತ್ತೀಚೆಗೆ ಬಿಡಿಬಿಡಿಯಾಗಿ ವ್ಯಾಟ್ಸಾಫ್‍ನಲ್ಲಿ ಸಿಗುತ್ತಿರುವ ‘ನ್ಯಾಯಪಥ’ದ ಬರಹಗಳು ಮತ್ತು ಕೈಗೇ ಸಿಗುತ್ತಿರುವ ನಾನುಗೌರಿ.ಕಾಂ ಬರಹಗಳು ನನಗೆ ಇಷ್ಟವಾಗಿವೆ. ಸಿದ್ಧಾರ್ಥ ಕುರಿತಾಗಿ, ಈ ಸಲದ ನ್ಯಾಯಪಥದಲ್ಲಿ ಬಂದ ಲೇಖನ ಮತ್ತು ಸಿದ್ಧಾರ್ಥ ಸಾವಿನ ಕುರಿತಾಗಿ ಶಿವಸುಂದರ್ ಎನ್ನುವವರು ವಿಶ್ಲೇಷಣೆ ಮಾಡಿದ ವಿಡಿಯೋ ನೋಡಿದ ಮೇಲೆ ನನಗೆ ಅನಿಸಿದ್ದನ್ನು ಇಲ್ಲಿ ಮುಂದಿಡುತ್ತಿರುವೆ:

ಬರಹ ಮತ್ತು ವಿಡಿಯೋದ ಕೆಲವು ಅಂಶಗಳಲ್ಲಿ ವೈರುಧ್ಯ ಇರಬಹುದಾದರೂ ಒಟ್ಟೂ ಕಾಳಜಿ ಜನಪರವಾಗಿಯೇ ಇದೆ ಎಂಬುದನ್ನು ಒಪ್ಪಿಕೊಳ್ಳುತ್ತಾ, ಒಬ್ಬ ತೀರಾ ಪುಟ್ಟ ಉದ್ಯಮಿಯಾಗಿ ನನ್ನ ಈ ಅನಿಸಿಕೆಗಳನ್ನು ಇಲ್ಲಿ ನಿಮ್ಮ ಮುಂದೆ ಇಡುತ್ತಿರುವೆ:

‘ಸಿದ್ಧಾರ್ಥ್ ಹೆಗ್ಡೆ ಒಬ್ಬ ಬ್ರಿಲಿಯಂಟ್ ಉದ್ಯಮಿಯಾಗಿದ್ದ… ಶೂನ್ಯದಿಂದ ಶುರು ಮಾಡಿ, ಈ (ಜಟಿಲ) ಅರ್ಥವ್ಯವಸ್ಥೆ ಮತ್ತು ಮಾರುಕಟ್ಟೆಯ ಸೂಕ್ಷ್ಮಗಳನ್ನು ಮನಗಂಡಿದ್ದ ಒಬ್ಬ ವ್ಯಕ್ತಿಯಾಗಿ ನನ್ನಂತಹ ಯಾವುದೇ ಬಿಸಿನೆಸ್ ಹಿನ್ನೆಲೆಯಿಂದ ಬರದ ಯುವಕರಿಗೆ ಸ್ಪೂರ್ತಿಯೂ ಆಗಿದ್ದರು… ಆದರೆ, ಕಾಲಘಟ್ಟ ಅದೆಷ್ಟು ಅಪಾಯಕಾರಿ ವೇಗದಲ್ಲಿ ಅರ್ಥವ್ಯವಸ್ಥೆಯನ್ನು ಮುಂದಕ್ಕೆ ಒಯ್ಯುವ ಭರವಸೆ ಮೂಡಿಸಿ ಬಿಟ್ಟಿತು ಎಂದರೆ….. ಈ ವೇಗದೋಟದ ಹಾದಿಯಲ್ಲಿ ಜನಸಾಮಾನ್ಯರಿಗೆ ಜಾಗವೇ ಇಲ್ಲ ಎಂಬುದು ಸತ್ಯವಾಗಿದ್ದರೂ, ಜನರನ್ನು ದಾರಿ ತಪ್ಪಿಸುತ್ತಲೇ ಬರಲಾಗಿತು…

ಸಿದ್ಧಾರ್ಥರು ಸೃಷ್ಟಿಸಿದ ಉದ್ಯೋಗಗಳ ಸಂಖ್ಯೆ ಮತ್ತು ಸಂಪತ್ತನ (?) ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಆದರೆ ಒಬ್ಬ ಅತಿ ಸಣ್ಣ ಉದ್ಯಮಿಯಾಗಿ ನನಗೆ ವೈಯಕ್ತಿಕವಾಗಿ ಸಿದ್ಧಾರ್ಥರ ಬಗ್ಗೆ ಗೌರವವಂತೂ ಇದೆ, ಅದು ಅವರು ತಳಮಟ್ಟದಿಂದ ಕಟ್ಟಿದ ಹೊಸ ಉದ್ಯಮ ಸಾಮ್ರಾಜ್ಯಕ್ಕಾಗಿ… ಆದರೆ ಅದಷ್ಟೇ ಜೀವನವಲ್ಲವಲ್ಲ….

***
2014ರ ಚುನಾವಣೆ ಸಂದರ್ಭ. ಅಲ್ಲಿವರೆಗೂ ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಹೇರುತ್ತಿದ್ದ ತೆರಿಗೆ ಭಾರಗಳನ್ನು ತಡೆಯದೇ ನನ್ನಂತಹ ಪುಟ್ಟ ಪುಟ್ಟ ಹೊಸ ಉದ್ಯಮಿಗಳು ( ಇಂಜಿನಿಯರಿಂಗ್ ನೆರವಿನಿಂದ ದೊಡ್ಡ ಸಂಬಳದ ಹುದ್ದೆ ಗಿಟ್ಟಿಸಿ, ಅದರಲ್ಲಿ ಉಳಿಸಿದ ಹಣ ಮತ್ತು ಅದರ ಆಧಾರದಲ್ಲಿ ಸಿಕ್ಕ ಬ್ಯಾಂಕ್ ಸಾಲಗಳಿಂದ ಸಣ್ಣ ಉದ್ಯಮ ಘಟಕ) ಆಘಾತ ಅನುಭವಿಸುತ್ತಿದ್ದ ಸಂದರ್ಭದಲ್ಲಿ, ಪಾರದರ್ಶಕ, ಉದ್ಯಮಿಗಳಿಗೆ ಕಿರುಕುಳಮುಕ್ತ …ಇತ್ಯಾದಿ ಇತ್ಯಾದಿ ಭರವಸೆಗಳನ್ನೇ ನೀಡಿದ ಮೋದಿಯಿಂದ ಬದಲಾವಣೆ ಆಗಬಹುದು ಎಂದು ಎಲ್ಲರಂತೆ ನಾವೂ ನಂಬಿದೆವು.

ಆದರೆ, ಆ ಮನುಷ್ಯನ ಆಡಳಿತದ ಒಂದೇ ವರ್ಷದಲ್ಲಿ ಎಲ್ಲವೂ ಸ್ಪಷ್ಟವಾಯಿತು. ಈತ ಮಹಾನ್ ದರೋಡೆಕೋರ, ಮಹಾನ್ ಠಕ್ಕ ಎಂಬುದು. ಈತ ಕೇವಲ ಗುಜರಾತಿನ ಪಿಎಂ ಅಷ್ಟೇ ಎಂಬುದು ಗೊತ್ತಾಗಿತು.

ಆದರೆ, ದೇಶಭಕ್ತಿ ಮತ್ತು ಇತರ ಧಾರ್ಮಿಕ ಭಾವನಾತ್ಮಕ ವಿಷಯ ಇಟ್ಟುಕೊಂಡು ಚುನಾವಣೆ ಎದುರಿಸುವಾಗ ಈ ದೇಶದ ಉದ್ಯಮ ಸಮೂಹ ಆತನ ಬೆಂಬಲಕ್ಕೇ ನಿಂತಿದ್ದು ವಿಚಿತ್ರವಾಗಿತ್ತು. ಮೀಡಿಯಾ ಕೂಡ ನಿನ್ನೆ ಮೊನ್ನೆವರೆಗೆ ಬೊಂಬಡಾ ಬಜಾಯಿಸಿ ಈಗ ಸಿದ್ಧಾರ್ಥರ ಸಾವಿನ ನಂತರ ಎಚ್ಚರಗೊಂಡು ಕೆಲವು ಸತ್ಯಗಳನ್ನು ಹೇಳುತ್ತಿದೆ.

ಸದ್ಯ ದೇಶದ ಆರ್ಥಿಕತೆ ಕುಸಿಯುತ್ತಲೇ ಸಾಗಿದೆ, ಬಂಡವಾಳ ಹೂಡಿಕೆ ಕುಸಿದಿದೆ ಕೂಡ… ಮೇಲಾಗಿ ಜನರ ಕೊಳ್ಳುವ ಶಕ್ತಿಯೇ ಕುಸಿದು ಹೋಗಿದೆ.. ಇಲ್ಲಿ ಏರುತ್ತಲೇ ಇರೋದು ಒಂದು ಮಾತ್ರ: ಅದು ಮೋದಿಯ ಹುಚ್ಚಾಟ, ಹುಂಬತನಗಳಷ್ಟೇ…

ಸಣ್ಣ ಮತ್ತ ಮಧ್ಯಮ ಉದ್ಯಮಗಳಿಗೆ ಈ ವರ್ಷ ಭಾರಿ ಗಂಡಾಂತರ ಕಾದಿದೆ. ಒಟ್ಟೂ ಅರ್ಥವ್ಯವಸ್ಥೆ ನಿಧಾನಕ್ಕೆ ಕುಸಿಯತೊಡಗಿದೆ….

(ಲೇಖಕರ ಕೋರಿಕೆಯ ಮೇರೆಗೆ ಅವರ ಹೆಸರನ್ನು ಪ್ರಕಟಿಸಿಲ್ಲ.)

ನಿರೂಪಣೆ: ಪಿ.ಕೆ ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...