HomeUncategorized‘ಇದು ಸಿದ್ಧಾರ್ಥನ ದುರಂತವಷ್ಟೇ ಅಲ್ಲ, ದೇಶದ ಎಕಾನಮಿಯದೂ ಕೂಡ..’ ಯುವ ಉದ್ಯಮಿಯ ಮನದಾಳದ ಮಾತುಗಳು

‘ಇದು ಸಿದ್ಧಾರ್ಥನ ದುರಂತವಷ್ಟೇ ಅಲ್ಲ, ದೇಶದ ಎಕಾನಮಿಯದೂ ಕೂಡ..’ ಯುವ ಉದ್ಯಮಿಯ ಮನದಾಳದ ಮಾತುಗಳು

- Advertisement -
- Advertisement -

‘ಇದು ಸಿದ್ಧಾರ್ಥ ದುರಂತವಷ್ಟೇ ಅಲ್ಲ, ದೇಶದ ಎಕಾನಮಿಯದೂ ಕೂಡ…..’
ಯುವ ಉದ್ಯಮಿಯೊಬ್ಬನ ಮನದಾಳದ ಮಾತುಗಳು..

ಇವತ್ತು ದೇಶದ ಆರ್ಥಿಕತೆ ಅಪಾಯದಲ್ಲಿದೆ. ಹೊರ ರಾಜ್ಯದಲ್ಲಿ ಸಣ್ಣ ಉದ್ಯಮ ಆರಂಭಿಸಿರುವ ಗದಗ ಜಿಲ್ಲೆಯ ಗಜೇಂದ್ರಗಡದ ಯುವ ಇಂಜಿನಿಯರ್-ಎಂಟರಪ್ರೈನರ್ ಒಬ್ಬರು ನಮ್ಮ ಪತ್ರಿಕೆ ಮತು ಪೋರ್ಟಲ್ ಮುಂದೆ ಹೇಳಿದ ಮನದಾಳದ ಮಾತುಗಳು ಇಲ್ಲಿವೆ…….

ಒಂದು ದುರಂತ ಸಾವು ಇವತ್ತು ಒಂದಿಷ್ಟು ಪ್ರಶ್ನೆಗಳನ್ನೂ ಎಬ್ಬಿಸಿದೆ. ಎಲ್ಲ ಸಾವುಗಳೂ, ಅವೂ ಆತ್ಮಹತ್ಯೆಯಾಗಿದ್ದರೆ ಇಂತಹ ಪ್ರಶ್ನೆಗಳನ್ನು ಹುಟ್ಟು ಹಾಕಲೇಬೇಕು…

ಇತ್ತೀಚೆಗೆ ಬಿಡಿಬಿಡಿಯಾಗಿ ವ್ಯಾಟ್ಸಾಫ್‍ನಲ್ಲಿ ಸಿಗುತ್ತಿರುವ ‘ನ್ಯಾಯಪಥ’ದ ಬರಹಗಳು ಮತ್ತು ಕೈಗೇ ಸಿಗುತ್ತಿರುವ ನಾನುಗೌರಿ.ಕಾಂ ಬರಹಗಳು ನನಗೆ ಇಷ್ಟವಾಗಿವೆ. ಸಿದ್ಧಾರ್ಥ ಕುರಿತಾಗಿ, ಈ ಸಲದ ನ್ಯಾಯಪಥದಲ್ಲಿ ಬಂದ ಲೇಖನ ಮತ್ತು ಸಿದ್ಧಾರ್ಥ ಸಾವಿನ ಕುರಿತಾಗಿ ಶಿವಸುಂದರ್ ಎನ್ನುವವರು ವಿಶ್ಲೇಷಣೆ ಮಾಡಿದ ವಿಡಿಯೋ ನೋಡಿದ ಮೇಲೆ ನನಗೆ ಅನಿಸಿದ್ದನ್ನು ಇಲ್ಲಿ ಮುಂದಿಡುತ್ತಿರುವೆ:

ಬರಹ ಮತ್ತು ವಿಡಿಯೋದ ಕೆಲವು ಅಂಶಗಳಲ್ಲಿ ವೈರುಧ್ಯ ಇರಬಹುದಾದರೂ ಒಟ್ಟೂ ಕಾಳಜಿ ಜನಪರವಾಗಿಯೇ ಇದೆ ಎಂಬುದನ್ನು ಒಪ್ಪಿಕೊಳ್ಳುತ್ತಾ, ಒಬ್ಬ ತೀರಾ ಪುಟ್ಟ ಉದ್ಯಮಿಯಾಗಿ ನನ್ನ ಈ ಅನಿಸಿಕೆಗಳನ್ನು ಇಲ್ಲಿ ನಿಮ್ಮ ಮುಂದೆ ಇಡುತ್ತಿರುವೆ:

‘ಸಿದ್ಧಾರ್ಥ್ ಹೆಗ್ಡೆ ಒಬ್ಬ ಬ್ರಿಲಿಯಂಟ್ ಉದ್ಯಮಿಯಾಗಿದ್ದ… ಶೂನ್ಯದಿಂದ ಶುರು ಮಾಡಿ, ಈ (ಜಟಿಲ) ಅರ್ಥವ್ಯವಸ್ಥೆ ಮತ್ತು ಮಾರುಕಟ್ಟೆಯ ಸೂಕ್ಷ್ಮಗಳನ್ನು ಮನಗಂಡಿದ್ದ ಒಬ್ಬ ವ್ಯಕ್ತಿಯಾಗಿ ನನ್ನಂತಹ ಯಾವುದೇ ಬಿಸಿನೆಸ್ ಹಿನ್ನೆಲೆಯಿಂದ ಬರದ ಯುವಕರಿಗೆ ಸ್ಪೂರ್ತಿಯೂ ಆಗಿದ್ದರು… ಆದರೆ, ಕಾಲಘಟ್ಟ ಅದೆಷ್ಟು ಅಪಾಯಕಾರಿ ವೇಗದಲ್ಲಿ ಅರ್ಥವ್ಯವಸ್ಥೆಯನ್ನು ಮುಂದಕ್ಕೆ ಒಯ್ಯುವ ಭರವಸೆ ಮೂಡಿಸಿ ಬಿಟ್ಟಿತು ಎಂದರೆ….. ಈ ವೇಗದೋಟದ ಹಾದಿಯಲ್ಲಿ ಜನಸಾಮಾನ್ಯರಿಗೆ ಜಾಗವೇ ಇಲ್ಲ ಎಂಬುದು ಸತ್ಯವಾಗಿದ್ದರೂ, ಜನರನ್ನು ದಾರಿ ತಪ್ಪಿಸುತ್ತಲೇ ಬರಲಾಗಿತು…

ಸಿದ್ಧಾರ್ಥರು ಸೃಷ್ಟಿಸಿದ ಉದ್ಯೋಗಗಳ ಸಂಖ್ಯೆ ಮತ್ತು ಸಂಪತ್ತನ (?) ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಆದರೆ ಒಬ್ಬ ಅತಿ ಸಣ್ಣ ಉದ್ಯಮಿಯಾಗಿ ನನಗೆ ವೈಯಕ್ತಿಕವಾಗಿ ಸಿದ್ಧಾರ್ಥರ ಬಗ್ಗೆ ಗೌರವವಂತೂ ಇದೆ, ಅದು ಅವರು ತಳಮಟ್ಟದಿಂದ ಕಟ್ಟಿದ ಹೊಸ ಉದ್ಯಮ ಸಾಮ್ರಾಜ್ಯಕ್ಕಾಗಿ… ಆದರೆ ಅದಷ್ಟೇ ಜೀವನವಲ್ಲವಲ್ಲ….

***
2014ರ ಚುನಾವಣೆ ಸಂದರ್ಭ. ಅಲ್ಲಿವರೆಗೂ ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಹೇರುತ್ತಿದ್ದ ತೆರಿಗೆ ಭಾರಗಳನ್ನು ತಡೆಯದೇ ನನ್ನಂತಹ ಪುಟ್ಟ ಪುಟ್ಟ ಹೊಸ ಉದ್ಯಮಿಗಳು ( ಇಂಜಿನಿಯರಿಂಗ್ ನೆರವಿನಿಂದ ದೊಡ್ಡ ಸಂಬಳದ ಹುದ್ದೆ ಗಿಟ್ಟಿಸಿ, ಅದರಲ್ಲಿ ಉಳಿಸಿದ ಹಣ ಮತ್ತು ಅದರ ಆಧಾರದಲ್ಲಿ ಸಿಕ್ಕ ಬ್ಯಾಂಕ್ ಸಾಲಗಳಿಂದ ಸಣ್ಣ ಉದ್ಯಮ ಘಟಕ) ಆಘಾತ ಅನುಭವಿಸುತ್ತಿದ್ದ ಸಂದರ್ಭದಲ್ಲಿ, ಪಾರದರ್ಶಕ, ಉದ್ಯಮಿಗಳಿಗೆ ಕಿರುಕುಳಮುಕ್ತ …ಇತ್ಯಾದಿ ಇತ್ಯಾದಿ ಭರವಸೆಗಳನ್ನೇ ನೀಡಿದ ಮೋದಿಯಿಂದ ಬದಲಾವಣೆ ಆಗಬಹುದು ಎಂದು ಎಲ್ಲರಂತೆ ನಾವೂ ನಂಬಿದೆವು.

ಆದರೆ, ಆ ಮನುಷ್ಯನ ಆಡಳಿತದ ಒಂದೇ ವರ್ಷದಲ್ಲಿ ಎಲ್ಲವೂ ಸ್ಪಷ್ಟವಾಯಿತು. ಈತ ಮಹಾನ್ ದರೋಡೆಕೋರ, ಮಹಾನ್ ಠಕ್ಕ ಎಂಬುದು. ಈತ ಕೇವಲ ಗುಜರಾತಿನ ಪಿಎಂ ಅಷ್ಟೇ ಎಂಬುದು ಗೊತ್ತಾಗಿತು.

ಆದರೆ, ದೇಶಭಕ್ತಿ ಮತ್ತು ಇತರ ಧಾರ್ಮಿಕ ಭಾವನಾತ್ಮಕ ವಿಷಯ ಇಟ್ಟುಕೊಂಡು ಚುನಾವಣೆ ಎದುರಿಸುವಾಗ ಈ ದೇಶದ ಉದ್ಯಮ ಸಮೂಹ ಆತನ ಬೆಂಬಲಕ್ಕೇ ನಿಂತಿದ್ದು ವಿಚಿತ್ರವಾಗಿತ್ತು. ಮೀಡಿಯಾ ಕೂಡ ನಿನ್ನೆ ಮೊನ್ನೆವರೆಗೆ ಬೊಂಬಡಾ ಬಜಾಯಿಸಿ ಈಗ ಸಿದ್ಧಾರ್ಥರ ಸಾವಿನ ನಂತರ ಎಚ್ಚರಗೊಂಡು ಕೆಲವು ಸತ್ಯಗಳನ್ನು ಹೇಳುತ್ತಿದೆ.

ಸದ್ಯ ದೇಶದ ಆರ್ಥಿಕತೆ ಕುಸಿಯುತ್ತಲೇ ಸಾಗಿದೆ, ಬಂಡವಾಳ ಹೂಡಿಕೆ ಕುಸಿದಿದೆ ಕೂಡ… ಮೇಲಾಗಿ ಜನರ ಕೊಳ್ಳುವ ಶಕ್ತಿಯೇ ಕುಸಿದು ಹೋಗಿದೆ.. ಇಲ್ಲಿ ಏರುತ್ತಲೇ ಇರೋದು ಒಂದು ಮಾತ್ರ: ಅದು ಮೋದಿಯ ಹುಚ್ಚಾಟ, ಹುಂಬತನಗಳಷ್ಟೇ…

ಸಣ್ಣ ಮತ್ತ ಮಧ್ಯಮ ಉದ್ಯಮಗಳಿಗೆ ಈ ವರ್ಷ ಭಾರಿ ಗಂಡಾಂತರ ಕಾದಿದೆ. ಒಟ್ಟೂ ಅರ್ಥವ್ಯವಸ್ಥೆ ನಿಧಾನಕ್ಕೆ ಕುಸಿಯತೊಡಗಿದೆ….

(ಲೇಖಕರ ಕೋರಿಕೆಯ ಮೇರೆಗೆ ಅವರ ಹೆಸರನ್ನು ಪ್ರಕಟಿಸಿಲ್ಲ.)

ನಿರೂಪಣೆ: ಪಿ.ಕೆ ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...