HomeUncategorized‘ಇದು ಸಿದ್ಧಾರ್ಥನ ದುರಂತವಷ್ಟೇ ಅಲ್ಲ, ದೇಶದ ಎಕಾನಮಿಯದೂ ಕೂಡ..’ ಯುವ ಉದ್ಯಮಿಯ ಮನದಾಳದ ಮಾತುಗಳು

‘ಇದು ಸಿದ್ಧಾರ್ಥನ ದುರಂತವಷ್ಟೇ ಅಲ್ಲ, ದೇಶದ ಎಕಾನಮಿಯದೂ ಕೂಡ..’ ಯುವ ಉದ್ಯಮಿಯ ಮನದಾಳದ ಮಾತುಗಳು

- Advertisement -
- Advertisement -

‘ಇದು ಸಿದ್ಧಾರ್ಥ ದುರಂತವಷ್ಟೇ ಅಲ್ಲ, ದೇಶದ ಎಕಾನಮಿಯದೂ ಕೂಡ…..’
ಯುವ ಉದ್ಯಮಿಯೊಬ್ಬನ ಮನದಾಳದ ಮಾತುಗಳು..

ಇವತ್ತು ದೇಶದ ಆರ್ಥಿಕತೆ ಅಪಾಯದಲ್ಲಿದೆ. ಹೊರ ರಾಜ್ಯದಲ್ಲಿ ಸಣ್ಣ ಉದ್ಯಮ ಆರಂಭಿಸಿರುವ ಗದಗ ಜಿಲ್ಲೆಯ ಗಜೇಂದ್ರಗಡದ ಯುವ ಇಂಜಿನಿಯರ್-ಎಂಟರಪ್ರೈನರ್ ಒಬ್ಬರು ನಮ್ಮ ಪತ್ರಿಕೆ ಮತು ಪೋರ್ಟಲ್ ಮುಂದೆ ಹೇಳಿದ ಮನದಾಳದ ಮಾತುಗಳು ಇಲ್ಲಿವೆ…….

ಒಂದು ದುರಂತ ಸಾವು ಇವತ್ತು ಒಂದಿಷ್ಟು ಪ್ರಶ್ನೆಗಳನ್ನೂ ಎಬ್ಬಿಸಿದೆ. ಎಲ್ಲ ಸಾವುಗಳೂ, ಅವೂ ಆತ್ಮಹತ್ಯೆಯಾಗಿದ್ದರೆ ಇಂತಹ ಪ್ರಶ್ನೆಗಳನ್ನು ಹುಟ್ಟು ಹಾಕಲೇಬೇಕು…

ಇತ್ತೀಚೆಗೆ ಬಿಡಿಬಿಡಿಯಾಗಿ ವ್ಯಾಟ್ಸಾಫ್‍ನಲ್ಲಿ ಸಿಗುತ್ತಿರುವ ‘ನ್ಯಾಯಪಥ’ದ ಬರಹಗಳು ಮತ್ತು ಕೈಗೇ ಸಿಗುತ್ತಿರುವ ನಾನುಗೌರಿ.ಕಾಂ ಬರಹಗಳು ನನಗೆ ಇಷ್ಟವಾಗಿವೆ. ಸಿದ್ಧಾರ್ಥ ಕುರಿತಾಗಿ, ಈ ಸಲದ ನ್ಯಾಯಪಥದಲ್ಲಿ ಬಂದ ಲೇಖನ ಮತ್ತು ಸಿದ್ಧಾರ್ಥ ಸಾವಿನ ಕುರಿತಾಗಿ ಶಿವಸುಂದರ್ ಎನ್ನುವವರು ವಿಶ್ಲೇಷಣೆ ಮಾಡಿದ ವಿಡಿಯೋ ನೋಡಿದ ಮೇಲೆ ನನಗೆ ಅನಿಸಿದ್ದನ್ನು ಇಲ್ಲಿ ಮುಂದಿಡುತ್ತಿರುವೆ:

ಬರಹ ಮತ್ತು ವಿಡಿಯೋದ ಕೆಲವು ಅಂಶಗಳಲ್ಲಿ ವೈರುಧ್ಯ ಇರಬಹುದಾದರೂ ಒಟ್ಟೂ ಕಾಳಜಿ ಜನಪರವಾಗಿಯೇ ಇದೆ ಎಂಬುದನ್ನು ಒಪ್ಪಿಕೊಳ್ಳುತ್ತಾ, ಒಬ್ಬ ತೀರಾ ಪುಟ್ಟ ಉದ್ಯಮಿಯಾಗಿ ನನ್ನ ಈ ಅನಿಸಿಕೆಗಳನ್ನು ಇಲ್ಲಿ ನಿಮ್ಮ ಮುಂದೆ ಇಡುತ್ತಿರುವೆ:

‘ಸಿದ್ಧಾರ್ಥ್ ಹೆಗ್ಡೆ ಒಬ್ಬ ಬ್ರಿಲಿಯಂಟ್ ಉದ್ಯಮಿಯಾಗಿದ್ದ… ಶೂನ್ಯದಿಂದ ಶುರು ಮಾಡಿ, ಈ (ಜಟಿಲ) ಅರ್ಥವ್ಯವಸ್ಥೆ ಮತ್ತು ಮಾರುಕಟ್ಟೆಯ ಸೂಕ್ಷ್ಮಗಳನ್ನು ಮನಗಂಡಿದ್ದ ಒಬ್ಬ ವ್ಯಕ್ತಿಯಾಗಿ ನನ್ನಂತಹ ಯಾವುದೇ ಬಿಸಿನೆಸ್ ಹಿನ್ನೆಲೆಯಿಂದ ಬರದ ಯುವಕರಿಗೆ ಸ್ಪೂರ್ತಿಯೂ ಆಗಿದ್ದರು… ಆದರೆ, ಕಾಲಘಟ್ಟ ಅದೆಷ್ಟು ಅಪಾಯಕಾರಿ ವೇಗದಲ್ಲಿ ಅರ್ಥವ್ಯವಸ್ಥೆಯನ್ನು ಮುಂದಕ್ಕೆ ಒಯ್ಯುವ ಭರವಸೆ ಮೂಡಿಸಿ ಬಿಟ್ಟಿತು ಎಂದರೆ….. ಈ ವೇಗದೋಟದ ಹಾದಿಯಲ್ಲಿ ಜನಸಾಮಾನ್ಯರಿಗೆ ಜಾಗವೇ ಇಲ್ಲ ಎಂಬುದು ಸತ್ಯವಾಗಿದ್ದರೂ, ಜನರನ್ನು ದಾರಿ ತಪ್ಪಿಸುತ್ತಲೇ ಬರಲಾಗಿತು…

ಸಿದ್ಧಾರ್ಥರು ಸೃಷ್ಟಿಸಿದ ಉದ್ಯೋಗಗಳ ಸಂಖ್ಯೆ ಮತ್ತು ಸಂಪತ್ತನ (?) ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಆದರೆ ಒಬ್ಬ ಅತಿ ಸಣ್ಣ ಉದ್ಯಮಿಯಾಗಿ ನನಗೆ ವೈಯಕ್ತಿಕವಾಗಿ ಸಿದ್ಧಾರ್ಥರ ಬಗ್ಗೆ ಗೌರವವಂತೂ ಇದೆ, ಅದು ಅವರು ತಳಮಟ್ಟದಿಂದ ಕಟ್ಟಿದ ಹೊಸ ಉದ್ಯಮ ಸಾಮ್ರಾಜ್ಯಕ್ಕಾಗಿ… ಆದರೆ ಅದಷ್ಟೇ ಜೀವನವಲ್ಲವಲ್ಲ….

***
2014ರ ಚುನಾವಣೆ ಸಂದರ್ಭ. ಅಲ್ಲಿವರೆಗೂ ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಹೇರುತ್ತಿದ್ದ ತೆರಿಗೆ ಭಾರಗಳನ್ನು ತಡೆಯದೇ ನನ್ನಂತಹ ಪುಟ್ಟ ಪುಟ್ಟ ಹೊಸ ಉದ್ಯಮಿಗಳು ( ಇಂಜಿನಿಯರಿಂಗ್ ನೆರವಿನಿಂದ ದೊಡ್ಡ ಸಂಬಳದ ಹುದ್ದೆ ಗಿಟ್ಟಿಸಿ, ಅದರಲ್ಲಿ ಉಳಿಸಿದ ಹಣ ಮತ್ತು ಅದರ ಆಧಾರದಲ್ಲಿ ಸಿಕ್ಕ ಬ್ಯಾಂಕ್ ಸಾಲಗಳಿಂದ ಸಣ್ಣ ಉದ್ಯಮ ಘಟಕ) ಆಘಾತ ಅನುಭವಿಸುತ್ತಿದ್ದ ಸಂದರ್ಭದಲ್ಲಿ, ಪಾರದರ್ಶಕ, ಉದ್ಯಮಿಗಳಿಗೆ ಕಿರುಕುಳಮುಕ್ತ …ಇತ್ಯಾದಿ ಇತ್ಯಾದಿ ಭರವಸೆಗಳನ್ನೇ ನೀಡಿದ ಮೋದಿಯಿಂದ ಬದಲಾವಣೆ ಆಗಬಹುದು ಎಂದು ಎಲ್ಲರಂತೆ ನಾವೂ ನಂಬಿದೆವು.

ಆದರೆ, ಆ ಮನುಷ್ಯನ ಆಡಳಿತದ ಒಂದೇ ವರ್ಷದಲ್ಲಿ ಎಲ್ಲವೂ ಸ್ಪಷ್ಟವಾಯಿತು. ಈತ ಮಹಾನ್ ದರೋಡೆಕೋರ, ಮಹಾನ್ ಠಕ್ಕ ಎಂಬುದು. ಈತ ಕೇವಲ ಗುಜರಾತಿನ ಪಿಎಂ ಅಷ್ಟೇ ಎಂಬುದು ಗೊತ್ತಾಗಿತು.

ಆದರೆ, ದೇಶಭಕ್ತಿ ಮತ್ತು ಇತರ ಧಾರ್ಮಿಕ ಭಾವನಾತ್ಮಕ ವಿಷಯ ಇಟ್ಟುಕೊಂಡು ಚುನಾವಣೆ ಎದುರಿಸುವಾಗ ಈ ದೇಶದ ಉದ್ಯಮ ಸಮೂಹ ಆತನ ಬೆಂಬಲಕ್ಕೇ ನಿಂತಿದ್ದು ವಿಚಿತ್ರವಾಗಿತ್ತು. ಮೀಡಿಯಾ ಕೂಡ ನಿನ್ನೆ ಮೊನ್ನೆವರೆಗೆ ಬೊಂಬಡಾ ಬಜಾಯಿಸಿ ಈಗ ಸಿದ್ಧಾರ್ಥರ ಸಾವಿನ ನಂತರ ಎಚ್ಚರಗೊಂಡು ಕೆಲವು ಸತ್ಯಗಳನ್ನು ಹೇಳುತ್ತಿದೆ.

ಸದ್ಯ ದೇಶದ ಆರ್ಥಿಕತೆ ಕುಸಿಯುತ್ತಲೇ ಸಾಗಿದೆ, ಬಂಡವಾಳ ಹೂಡಿಕೆ ಕುಸಿದಿದೆ ಕೂಡ… ಮೇಲಾಗಿ ಜನರ ಕೊಳ್ಳುವ ಶಕ್ತಿಯೇ ಕುಸಿದು ಹೋಗಿದೆ.. ಇಲ್ಲಿ ಏರುತ್ತಲೇ ಇರೋದು ಒಂದು ಮಾತ್ರ: ಅದು ಮೋದಿಯ ಹುಚ್ಚಾಟ, ಹುಂಬತನಗಳಷ್ಟೇ…

ಸಣ್ಣ ಮತ್ತ ಮಧ್ಯಮ ಉದ್ಯಮಗಳಿಗೆ ಈ ವರ್ಷ ಭಾರಿ ಗಂಡಾಂತರ ಕಾದಿದೆ. ಒಟ್ಟೂ ಅರ್ಥವ್ಯವಸ್ಥೆ ನಿಧಾನಕ್ಕೆ ಕುಸಿಯತೊಡಗಿದೆ….

(ಲೇಖಕರ ಕೋರಿಕೆಯ ಮೇರೆಗೆ ಅವರ ಹೆಸರನ್ನು ಪ್ರಕಟಿಸಿಲ್ಲ.)

ನಿರೂಪಣೆ: ಪಿ.ಕೆ ಮಲ್ಲನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...