Homeಮುಖಪುಟಗೋರಕ್ಷಣೆ ಹೆಸರಲ್ಲಿ ಬಜರಂಗದಳ ಕಾರ್ಯಕರ್ತರಿಂದ ಯುವಕನ ಕೊಲೆ; ಪೋಷಕರ ಆರೋಪ

ಗೋರಕ್ಷಣೆ ಹೆಸರಲ್ಲಿ ಬಜರಂಗದಳ ಕಾರ್ಯಕರ್ತರಿಂದ ಯುವಕನ ಕೊಲೆ; ಪೋಷಕರ ಆರೋಪ

- Advertisement -
- Advertisement -

22 ವರ್ಷದ ಯುವಕನೊಬ್ಬ ದನವನ್ನು ಕಳ್ಳಸಾಗಣೆ ಮಾಡುತ್ತಿದ್ದಾನೆ ಎಂದು ಶಂಕಿಸಿ ಗೋರಕ್ಷಕರು ಥಳಿಸಿ, ಕೊಂದಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಆದರೆ, ಟೆಂಪೋಗೆ ಕಾರು ಡಿಕ್ಕಿ ಹೊಡೆದು ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಬೇರೆ ರೀತಿಯ ಹೇಳಿಕೆ ನೀಡಿದ್ದಾರೆ.

ಘಟನೆಯ ಕುರಿತು ಪತ್ರಕರ್ತ ಝಾಕಿರ್ ಅಲಿ ತ್ಯಾಗಿ ಟ್ವೀಟ್ ಮಾಡಿದ್ದಾರೆ. ಬಲಿಪಶು ವಾರಿಸ್ ಅವರನ್ನು ಬಜರಂಗದಳದ ಕಾರ್ಯಕರ್ತರು ಥಳಿಸಿದ್ದಾರೆ. ಆದರೆ, “ಬಜರಂಗದಳದ ಜನರನ್ನು ರಕ್ಷಿಸಲು ಪೊಲೀಸರು ಈ ಹತ್ಯೆಯನ್ನು ಅಪಘಾತ ಎಂದು ಕರೆಯುತ್ತಿದ್ದಾರೆ” ಎಂದು ವಾರಿಸ್ ಅವರ ಕುಟುಂಬ ಹೇಳಿದೆ ಎಂದು ಅಲಿ ತ್ಯಾಗಿ ಅವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತರು ಟ್ವೀಟ್ ಜೊತೆಗೆ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ವೀಡಿಯೊಗ್ರಾಫರ್ ಒಬ್ಬರು ಗಾಯಗೊಂಡ ಮೂವರು ಪುರುಷರಿಗೆ ಅವರ ಹೆಸರೇನು ಎಂದು ಕೇಳುತ್ತಿದ್ದಾರೆ. ತನ್ನನ್ನು ನಫೀಸ್ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಇಬ್ಬರಲ್ಲಿ ಓರ್ವ ವಾರಿಸ್ ಎಂದು ಗುರುತಿಸಿಕೊಂಡಿದ್ದಾರೆ.

ಇದು ಬಲಪಂಥೀಯ ಸಂಘಟನೆಯ ಕಾರ್ಯಕರ್ತರ ತಪ್ಪಿಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಸುದ್ದಿ ವಾಹಿನಿಗಳಿಗೆ ತಿಳಿಸಿದ್ದಾರೆ ಮತ್ತು ನ್ಯಾಯಕ್ಕಾಗಿ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕಾವೂರು ಜಾತ್ರೆಯಲ್ಲಿ ಮುಸ್ಲಿಮರ ಮಳಿಗೆಗೆ ನಿಷೇಧ: ವಿಎಚ್‌ಪಿ, ಭಜರಂಗದಳದಿಂದ ಬ್ಯಾನರ್‌

ಜನವರಿ 28 ರಂದು ವಾರಿಸ್ ಅವರು ನಫೀಸ್ ಮತ್ತು ಶೌಕೀನ್ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮುಂಜಾನೆ 5 ಗಂಟೆಗೆ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಟೆಂಪೋ ಚಾಲಕ ಅಬ್ದುಲ್ ಕರೀಂ ಅವರು ತಮ್ಮ ಪೊಲೀಸ್ ದೂರಿನಲ್ಲಿ ತುರ್ತು ಸಂಖ್ಯೆ 112 ಕ್ಕೆ ಪೊಲೀಸರಿಗೆ ಕರೆ ಮಾಡಿದ್ದಾರೆ ಎಂದು ಬರೆದಿದ್ದಾರೆ. ಕರೀಮ್ ಗಾಯಗೊಂಡಿಲ್ಲ, ಅವನೊಂದಿಗೆ ಟೆಂಪೋ ಸವಾರಿ ಮಾಡುತ್ತಿದ್ದ ಅವನ ಮಗ ಮತ್ತು ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ ಎಂದು ಕರೀಂ ಬರೆದಿದ್ದಾರೆ.

“”ಟೌರಿನಿಂದ ಗೊರಕ್ಷಕ ದಳದ ಕೆಲವು ಸದಸ್ಯರು” ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಪೊಲೀಸರು ಬಂದರು ಎಂದು ಕರೀಂ ಬರೆದಿದ್ದಾರೆ. ಕಾರಿನ ಹಿಂಬದಿಯ ಸೀಟಿನಲ್ಲಿ ಹಸು ಇತ್ತು, ಅದು ಗಾಯಗೊಂಡಿತ್ತು ಮತ್ತು ಗೋರಕ್ಷಕರು ಅದನ್ನು ರಕ್ಷಿಸಿದರು ಎಂದು ಕರೀಮ್ ಬರೆದಿದ್ದಾರೆ.

ಗೋರಕ್ಷಕರು ಕಾರನ್ನು ಚೇಸ್ ಮಾಡಿದ್ದರಿಂದ ಅಪಘಾತಕ್ಕೆ ಸಂಭವಿಸಿದೆ ಎಂದು ವಾರಿಸ್ ಕುಟುಂಬ ಆರೋಪಿಸಿದ್ದಾರೆ. ನಂತರ ಮೂವರನ್ನು ಭಜರಂಗದಳದ ಕಾರ್ಯಕರ್ತರು ಥಳಿಸಿದ್ದಾರೆ ಎಂದು ವಾರಿಸ್ ಮನೆಯವರು ತಿಳಿಸಿದ್ದಾರೆ.

ಮೂವರನ್ನು ತೌರುನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ವಾರಿಸ್ ಮತ್ತು ನಫೀಸ್ ಅವರನ್ನು ನಲ್ಹಾರ್ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಶಿಫಾರಸು ಮಾಡಲಾಯಿತು, ಅಲ್ಲಿಯೇ ಆತ  ಸಾವನ್ನಪ್ಪಿದ ಎಂದು ಪೊಲೀಸರು ಹೇಳಿದ್ದಾರೆ.

ಕರೀಂ ಅವರ ದೂರಿನ ಮೇರೆಗೆ ಪೊಲೀಸರು ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳು ಮತ್ತು ಹರಿಯಾಣದ ಗೋಸಂರಕ್ಷಣಾ ಕಾನೂನುಗಳ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ರಾಷ್ಟ್ರೀಯ ಲೋಕದಳದ ವಕ್ತಾರ ಭೂಪೇಂದರ್ ಚೌಧರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ವಾರಿಸ್ ಅವರನ್ನು ಥಳಿಸುತ್ತಿರುವ ವೀಡಿಯೊವನ್ನು ವೀಕ್ಷಿಸಲು ಸಾಧ್ಯವಾಗಲಿಲ್ಲ ಏಕೆಂದರೆ ಅದರಲ್ಲಿ ವಾರಿಸ್ ಅವರನ್ನು ನೋವಿನಿಂದ ಮತ್ತು ನ್ಯಾಯಕ್ಕಾಗಿ ಕರೆದಿದ್ದಕ್ಕೆ ಮತ್ತಷ್ಟು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ ಅದಾಗಿತ್ತು” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...