Homeಮುಖಪುಟಗೋರಕ್ಷಣೆ ಹೆಸರಲ್ಲಿ ಬಜರಂಗದಳ ಕಾರ್ಯಕರ್ತರಿಂದ ಯುವಕನ ಕೊಲೆ; ಪೋಷಕರ ಆರೋಪ

ಗೋರಕ್ಷಣೆ ಹೆಸರಲ್ಲಿ ಬಜರಂಗದಳ ಕಾರ್ಯಕರ್ತರಿಂದ ಯುವಕನ ಕೊಲೆ; ಪೋಷಕರ ಆರೋಪ

- Advertisement -
- Advertisement -

22 ವರ್ಷದ ಯುವಕನೊಬ್ಬ ದನವನ್ನು ಕಳ್ಳಸಾಗಣೆ ಮಾಡುತ್ತಿದ್ದಾನೆ ಎಂದು ಶಂಕಿಸಿ ಗೋರಕ್ಷಕರು ಥಳಿಸಿ, ಕೊಂದಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಆದರೆ, ಟೆಂಪೋಗೆ ಕಾರು ಡಿಕ್ಕಿ ಹೊಡೆದು ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಬೇರೆ ರೀತಿಯ ಹೇಳಿಕೆ ನೀಡಿದ್ದಾರೆ.

ಘಟನೆಯ ಕುರಿತು ಪತ್ರಕರ್ತ ಝಾಕಿರ್ ಅಲಿ ತ್ಯಾಗಿ ಟ್ವೀಟ್ ಮಾಡಿದ್ದಾರೆ. ಬಲಿಪಶು ವಾರಿಸ್ ಅವರನ್ನು ಬಜರಂಗದಳದ ಕಾರ್ಯಕರ್ತರು ಥಳಿಸಿದ್ದಾರೆ. ಆದರೆ, “ಬಜರಂಗದಳದ ಜನರನ್ನು ರಕ್ಷಿಸಲು ಪೊಲೀಸರು ಈ ಹತ್ಯೆಯನ್ನು ಅಪಘಾತ ಎಂದು ಕರೆಯುತ್ತಿದ್ದಾರೆ” ಎಂದು ವಾರಿಸ್ ಅವರ ಕುಟುಂಬ ಹೇಳಿದೆ ಎಂದು ಅಲಿ ತ್ಯಾಗಿ ಅವರು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತರು ಟ್ವೀಟ್ ಜೊತೆಗೆ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ವೀಡಿಯೊಗ್ರಾಫರ್ ಒಬ್ಬರು ಗಾಯಗೊಂಡ ಮೂವರು ಪುರುಷರಿಗೆ ಅವರ ಹೆಸರೇನು ಎಂದು ಕೇಳುತ್ತಿದ್ದಾರೆ. ತನ್ನನ್ನು ನಫೀಸ್ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಇಬ್ಬರಲ್ಲಿ ಓರ್ವ ವಾರಿಸ್ ಎಂದು ಗುರುತಿಸಿಕೊಂಡಿದ್ದಾರೆ.

ಇದು ಬಲಪಂಥೀಯ ಸಂಘಟನೆಯ ಕಾರ್ಯಕರ್ತರ ತಪ್ಪಿಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಸುದ್ದಿ ವಾಹಿನಿಗಳಿಗೆ ತಿಳಿಸಿದ್ದಾರೆ ಮತ್ತು ನ್ಯಾಯಕ್ಕಾಗಿ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕಾವೂರು ಜಾತ್ರೆಯಲ್ಲಿ ಮುಸ್ಲಿಮರ ಮಳಿಗೆಗೆ ನಿಷೇಧ: ವಿಎಚ್‌ಪಿ, ಭಜರಂಗದಳದಿಂದ ಬ್ಯಾನರ್‌

ಜನವರಿ 28 ರಂದು ವಾರಿಸ್ ಅವರು ನಫೀಸ್ ಮತ್ತು ಶೌಕೀನ್ ಅವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮುಂಜಾನೆ 5 ಗಂಟೆಗೆ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಟೆಂಪೋ ಚಾಲಕ ಅಬ್ದುಲ್ ಕರೀಂ ಅವರು ತಮ್ಮ ಪೊಲೀಸ್ ದೂರಿನಲ್ಲಿ ತುರ್ತು ಸಂಖ್ಯೆ 112 ಕ್ಕೆ ಪೊಲೀಸರಿಗೆ ಕರೆ ಮಾಡಿದ್ದಾರೆ ಎಂದು ಬರೆದಿದ್ದಾರೆ. ಕರೀಮ್ ಗಾಯಗೊಂಡಿಲ್ಲ, ಅವನೊಂದಿಗೆ ಟೆಂಪೋ ಸವಾರಿ ಮಾಡುತ್ತಿದ್ದ ಅವನ ಮಗ ಮತ್ತು ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ ಎಂದು ಕರೀಂ ಬರೆದಿದ್ದಾರೆ.

“”ಟೌರಿನಿಂದ ಗೊರಕ್ಷಕ ದಳದ ಕೆಲವು ಸದಸ್ಯರು” ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಪೊಲೀಸರು ಬಂದರು ಎಂದು ಕರೀಂ ಬರೆದಿದ್ದಾರೆ. ಕಾರಿನ ಹಿಂಬದಿಯ ಸೀಟಿನಲ್ಲಿ ಹಸು ಇತ್ತು, ಅದು ಗಾಯಗೊಂಡಿತ್ತು ಮತ್ತು ಗೋರಕ್ಷಕರು ಅದನ್ನು ರಕ್ಷಿಸಿದರು ಎಂದು ಕರೀಮ್ ಬರೆದಿದ್ದಾರೆ.

ಗೋರಕ್ಷಕರು ಕಾರನ್ನು ಚೇಸ್ ಮಾಡಿದ್ದರಿಂದ ಅಪಘಾತಕ್ಕೆ ಸಂಭವಿಸಿದೆ ಎಂದು ವಾರಿಸ್ ಕುಟುಂಬ ಆರೋಪಿಸಿದ್ದಾರೆ. ನಂತರ ಮೂವರನ್ನು ಭಜರಂಗದಳದ ಕಾರ್ಯಕರ್ತರು ಥಳಿಸಿದ್ದಾರೆ ಎಂದು ವಾರಿಸ್ ಮನೆಯವರು ತಿಳಿಸಿದ್ದಾರೆ.

ಮೂವರನ್ನು ತೌರುನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ವಾರಿಸ್ ಮತ್ತು ನಫೀಸ್ ಅವರನ್ನು ನಲ್ಹಾರ್ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಶಿಫಾರಸು ಮಾಡಲಾಯಿತು, ಅಲ್ಲಿಯೇ ಆತ  ಸಾವನ್ನಪ್ಪಿದ ಎಂದು ಪೊಲೀಸರು ಹೇಳಿದ್ದಾರೆ.

ಕರೀಂ ಅವರ ದೂರಿನ ಮೇರೆಗೆ ಪೊಲೀಸರು ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳು ಮತ್ತು ಹರಿಯಾಣದ ಗೋಸಂರಕ್ಷಣಾ ಕಾನೂನುಗಳ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ರಾಷ್ಟ್ರೀಯ ಲೋಕದಳದ ವಕ್ತಾರ ಭೂಪೇಂದರ್ ಚೌಧರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ವಾರಿಸ್ ಅವರನ್ನು ಥಳಿಸುತ್ತಿರುವ ವೀಡಿಯೊವನ್ನು ವೀಕ್ಷಿಸಲು ಸಾಧ್ಯವಾಗಲಿಲ್ಲ ಏಕೆಂದರೆ ಅದರಲ್ಲಿ ವಾರಿಸ್ ಅವರನ್ನು ನೋವಿನಿಂದ ಮತ್ತು ನ್ಯಾಯಕ್ಕಾಗಿ ಕರೆದಿದ್ದಕ್ಕೆ ಮತ್ತಷ್ಟು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ ಅದಾಗಿತ್ತು” ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...