Homeಕರೋನಾ ತಲ್ಲಣಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

- Advertisement -
- Advertisement -

ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿದೆ. ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ರಪ್ತಿ ನದಿ ಸೇತುವೆಯ ಮೇಲೆ ನಡೆದಿದೆ ಎಂದು ಗುರುತಿಸಲಾಗಿದೆ.

ಮೇ 28 ರಂದು ನಗರದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಸೇತುವೆಯ ಸಮೀಪ ರಸ್ತೆಯಲ್ಲಿ ಕಾರು ನಿಲ್ಲಿಸಿ ನಿಂತಿದ್ದ ಸ್ಥಳೀಯರೊಬ್ಬರು ಯುವಕರು ದೇಹವನ್ನು ನದಿಗೆ ಎಸೆಯುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆ ದೇಶಾದ್ಯಂತ ಜನರಲ್ಲಿ ಸಾಕಷ್ಟು ಆಕ್ರೋಶವನ್ನು ಹುಟ್ಟಿಹಾಕಿತ್ತು. ಗಂಗಾ ನದಿಯ ತಟದಲ್ಲಿ ಜನರು ಕೋವಿಡ್‌ ಸೋಂಕಿತರ ಅಂತ್ಯಕ್ರಿಯೆ ನಡೆಸುತ್ತಿರುವ ಮತ್ತು ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಘಟನೆಗಳು ದೇಶಾದ್ಯಂತ ಸಂಚಲನವನ್ನು ಉಂಟುಮಾಡಿತ್ತು. ನದಿಯಲ್ಲಿ ತೇಲಿ ಬರುತ್ತಿರುವ ಮೃತದೇಹಗಳ ಕಾರಣದಿಂದ ಸಾಕಷ್ಟು ಮುಜುಗರವನ್ನು ಎದುರಿಸಿದ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮೃತದೇಹಗಳನ್ನು ನದಿಗೆ ಎಸೆಯದಂತೆ ಜನರಲ್ಲಿ ಹಲವು ಬಾರಿ ಮನವಿಗಳನ್ನು ಕೂಡ ಮಾಡಿತ್ತು. ಜೊತೆಗೆ ಕಠಿಣ ಶಿಕ್ಷೆಯನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಈ ಎಲ್ಲ ಘಟನೆಗಳ ನಂತರವೂ ಉತ್ತರಪ್ರದೇಶದಲ್ಲಿ ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಅಮಾನವೀಯ ಕೃತ್ಯಗಳು ಮುಂದುವರೆಯುತ್ತಿರುವುದಕ್ಕೆ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಸಾಕ್ಷಿ ನೀಡಿದೆ.

ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಪ್ರಕರಣಕ್ಕೆ ಸಂಬಂಧ ಸೋಂಕಿತರ ಕುಟುಂಬದ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ವಿಡಿಯೋದಲ್ಲಿ ಪಿಪಿಇ ಕಿಟ್‌ ಧರಿಸಿರುವ ವ್ಯಕ್ತಿಯೊಬ್ಬ ದೇಹವನ್ನು ಹಿಡಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ವ್ಯಕ್ತಿ ದೀರ್ಘಕಾಲದಿಂದ ದೇಹವನ್ನು ಬ್ಯಾಗ್‌ನಿಂದ ತೆಗೆಯಲು ಪ್ರಯತ್ನಿಸುತ್ತಿರುವಂತೆ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಯಲ್ಲಿ ಕಂಡುಬರುತ್ತಿದೆ.

ಈ ಘಟನೆಯಲ್ಲಿ ಕಾಣಿಸಿರುವ ಮೃತ ದೇಹ ಸಿದ್ಧಾರ್ಥ ನಗರ ನಿವಾಸಿಯದಾಗಿದ್ದು ಅವರು ಮೇ 25 ರಂದು ಕೋವಿಡ್‌ ಸೋಂಕಿನಿಂದ ಬಲರಾಮಪುರ ಆಸ್ಪತ್ರೆಗೆ ದಾಖಲಾಗಿದ್ದರು. 3 ದಿನಗಳ ನಂತರ ಅಂದರೆ ಮೇ 28 ರಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಕೋವಿಡ್‌ ನಿಂದ ಮೃತಪಟ್ಟ ಕಾರಣ ಅವರ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆದಿರುವುದು ತಿಳಿದುಬಂದಿದೆ ಬಲರಾಮಪುರ ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ ಸಿದ್ದಾರ್ಥ್‌ ನಗರದ ವ್ಯಕ್ತಿಯೊಬ್ಬರು ಕಳೆದ ಮಂಗಳವಾರ ಕೋವಿಡ್‌ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳ ನಂತರ ಅಂದರೆ ಮೇ 28 ರ ವೇಳೆಗೆ ರೋಗಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ಮೃತಪಟ್ಟ ವ್ಯಕ್ತಿಯ ದೇಹವನ್ನು ಅವರ ಕುಟುಂಬಸ್ಥರಿಗೆ ನೀಡಲಾಗಿದೆ. ಅವರ ಕುಟುಂಬಸ್ಥರು ಮೃತದೇಹವನ್ನು ನದಿಗೆ ಎಸೆದಿದ್ದಾರೆ. ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬಲರಾಮಪುರ ಜಿಲ್ಲೆ ಮುಖ್ಯ ಆರೋಗ್ಯಾಧಿಕಾರಿ ವಿ.ಬಿ. ಸಿಂಗ್‌ ತಿಳಿಸಿದ್ದಾರೆ.

ಮೃತದೇಹವನ್ನು ಕುಟುಂಬಸ್ಥರಿಗೆ ಮರಳಿ ನೀಡಲಾಗಿದೆ. ಆದ್ದರಿಂದ ಮೃತ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ಕಾಯ್ದೆ ಮತ್ತು ಎಪಿಡೆಮಿಕ್‌ ಖಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಲರಾಮಪುರ ಜಿಲ್ಲಾ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಟಿಯಾಲ್‌ ತಿಳಿಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ತಪ್ಪಾಗಿ ನೀಡುತ್ತಿದೆ ಎಂಬ ಆರೋಪ ಈಗಾಗಲೇ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬರುತ್ತಿರುವ ಘಟನೆಗಳು ಬೆಳಕಿಗೆ ಬಂದಿದ್ದವು. ಈಗ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ನದಿಗೆ ಎಸೆಯುತ್ತಿರುವ ಘಟನೆಯ ಈ ದೃಶ್ಯಾವಳಿ ಉತ್ತರ ಪ್ರದೇಶದ ಕೊರೋನಾ ಕಾಲದ ಕರುಣಾ ಜನಕ ಕಥೆಗಳನ್ನು, ಕೋವಿಡ್‌ ಸೋಂಕಿನಿಂದ ಜನರು ಎದುರಿಸುತ್ತಿರುವ ಅಮಾನವೀಯ ವ್ಯಥೆಗಳನ್ನು ನಮ್ಮ ಮುಂದೆ ತೆರೆದಿಟ್ಟಿದೆ.


ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...