Homeಕರೋನಾ ತಲ್ಲಣಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

- Advertisement -
- Advertisement -

ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿದೆ. ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ರಪ್ತಿ ನದಿ ಸೇತುವೆಯ ಮೇಲೆ ನಡೆದಿದೆ ಎಂದು ಗುರುತಿಸಲಾಗಿದೆ.

ಮೇ 28 ರಂದು ನಗರದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಸೇತುವೆಯ ಸಮೀಪ ರಸ್ತೆಯಲ್ಲಿ ಕಾರು ನಿಲ್ಲಿಸಿ ನಿಂತಿದ್ದ ಸ್ಥಳೀಯರೊಬ್ಬರು ಯುವಕರು ದೇಹವನ್ನು ನದಿಗೆ ಎಸೆಯುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆ ದೇಶಾದ್ಯಂತ ಜನರಲ್ಲಿ ಸಾಕಷ್ಟು ಆಕ್ರೋಶವನ್ನು ಹುಟ್ಟಿಹಾಕಿತ್ತು. ಗಂಗಾ ನದಿಯ ತಟದಲ್ಲಿ ಜನರು ಕೋವಿಡ್‌ ಸೋಂಕಿತರ ಅಂತ್ಯಕ್ರಿಯೆ ನಡೆಸುತ್ತಿರುವ ಮತ್ತು ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಘಟನೆಗಳು ದೇಶಾದ್ಯಂತ ಸಂಚಲನವನ್ನು ಉಂಟುಮಾಡಿತ್ತು. ನದಿಯಲ್ಲಿ ತೇಲಿ ಬರುತ್ತಿರುವ ಮೃತದೇಹಗಳ ಕಾರಣದಿಂದ ಸಾಕಷ್ಟು ಮುಜುಗರವನ್ನು ಎದುರಿಸಿದ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮೃತದೇಹಗಳನ್ನು ನದಿಗೆ ಎಸೆಯದಂತೆ ಜನರಲ್ಲಿ ಹಲವು ಬಾರಿ ಮನವಿಗಳನ್ನು ಕೂಡ ಮಾಡಿತ್ತು. ಜೊತೆಗೆ ಕಠಿಣ ಶಿಕ್ಷೆಯನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಈ ಎಲ್ಲ ಘಟನೆಗಳ ನಂತರವೂ ಉತ್ತರಪ್ರದೇಶದಲ್ಲಿ ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಅಮಾನವೀಯ ಕೃತ್ಯಗಳು ಮುಂದುವರೆಯುತ್ತಿರುವುದಕ್ಕೆ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಸಾಕ್ಷಿ ನೀಡಿದೆ.

ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಪ್ರಕರಣಕ್ಕೆ ಸಂಬಂಧ ಸೋಂಕಿತರ ಕುಟುಂಬದ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ವಿಡಿಯೋದಲ್ಲಿ ಪಿಪಿಇ ಕಿಟ್‌ ಧರಿಸಿರುವ ವ್ಯಕ್ತಿಯೊಬ್ಬ ದೇಹವನ್ನು ಹಿಡಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ವ್ಯಕ್ತಿ ದೀರ್ಘಕಾಲದಿಂದ ದೇಹವನ್ನು ಬ್ಯಾಗ್‌ನಿಂದ ತೆಗೆಯಲು ಪ್ರಯತ್ನಿಸುತ್ತಿರುವಂತೆ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಯಲ್ಲಿ ಕಂಡುಬರುತ್ತಿದೆ.

ಈ ಘಟನೆಯಲ್ಲಿ ಕಾಣಿಸಿರುವ ಮೃತ ದೇಹ ಸಿದ್ಧಾರ್ಥ ನಗರ ನಿವಾಸಿಯದಾಗಿದ್ದು ಅವರು ಮೇ 25 ರಂದು ಕೋವಿಡ್‌ ಸೋಂಕಿನಿಂದ ಬಲರಾಮಪುರ ಆಸ್ಪತ್ರೆಗೆ ದಾಖಲಾಗಿದ್ದರು. 3 ದಿನಗಳ ನಂತರ ಅಂದರೆ ಮೇ 28 ರಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಕೋವಿಡ್‌ ನಿಂದ ಮೃತಪಟ್ಟ ಕಾರಣ ಅವರ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆದಿರುವುದು ತಿಳಿದುಬಂದಿದೆ ಬಲರಾಮಪುರ ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ ಸಿದ್ದಾರ್ಥ್‌ ನಗರದ ವ್ಯಕ್ತಿಯೊಬ್ಬರು ಕಳೆದ ಮಂಗಳವಾರ ಕೋವಿಡ್‌ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳ ನಂತರ ಅಂದರೆ ಮೇ 28 ರ ವೇಳೆಗೆ ರೋಗಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ಮೃತಪಟ್ಟ ವ್ಯಕ್ತಿಯ ದೇಹವನ್ನು ಅವರ ಕುಟುಂಬಸ್ಥರಿಗೆ ನೀಡಲಾಗಿದೆ. ಅವರ ಕುಟುಂಬಸ್ಥರು ಮೃತದೇಹವನ್ನು ನದಿಗೆ ಎಸೆದಿದ್ದಾರೆ. ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬಲರಾಮಪುರ ಜಿಲ್ಲೆ ಮುಖ್ಯ ಆರೋಗ್ಯಾಧಿಕಾರಿ ವಿ.ಬಿ. ಸಿಂಗ್‌ ತಿಳಿಸಿದ್ದಾರೆ.

ಮೃತದೇಹವನ್ನು ಕುಟುಂಬಸ್ಥರಿಗೆ ಮರಳಿ ನೀಡಲಾಗಿದೆ. ಆದ್ದರಿಂದ ಮೃತ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ಕಾಯ್ದೆ ಮತ್ತು ಎಪಿಡೆಮಿಕ್‌ ಖಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಲರಾಮಪುರ ಜಿಲ್ಲಾ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಟಿಯಾಲ್‌ ತಿಳಿಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ತಪ್ಪಾಗಿ ನೀಡುತ್ತಿದೆ ಎಂಬ ಆರೋಪ ಈಗಾಗಲೇ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬರುತ್ತಿರುವ ಘಟನೆಗಳು ಬೆಳಕಿಗೆ ಬಂದಿದ್ದವು. ಈಗ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ನದಿಗೆ ಎಸೆಯುತ್ತಿರುವ ಘಟನೆಯ ಈ ದೃಶ್ಯಾವಳಿ ಉತ್ತರ ಪ್ರದೇಶದ ಕೊರೋನಾ ಕಾಲದ ಕರುಣಾ ಜನಕ ಕಥೆಗಳನ್ನು, ಕೋವಿಡ್‌ ಸೋಂಕಿನಿಂದ ಜನರು ಎದುರಿಸುತ್ತಿರುವ ಅಮಾನವೀಯ ವ್ಯಥೆಗಳನ್ನು ನಮ್ಮ ಮುಂದೆ ತೆರೆದಿಟ್ಟಿದೆ.


ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...