Homeಕರೋನಾ ತಲ್ಲಣಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

- Advertisement -
- Advertisement -

ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿದೆ. ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ರಪ್ತಿ ನದಿ ಸೇತುವೆಯ ಮೇಲೆ ನಡೆದಿದೆ ಎಂದು ಗುರುತಿಸಲಾಗಿದೆ.

ಮೇ 28 ರಂದು ನಗರದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಸೇತುವೆಯ ಸಮೀಪ ರಸ್ತೆಯಲ್ಲಿ ಕಾರು ನಿಲ್ಲಿಸಿ ನಿಂತಿದ್ದ ಸ್ಥಳೀಯರೊಬ್ಬರು ಯುವಕರು ದೇಹವನ್ನು ನದಿಗೆ ಎಸೆಯುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆ ದೇಶಾದ್ಯಂತ ಜನರಲ್ಲಿ ಸಾಕಷ್ಟು ಆಕ್ರೋಶವನ್ನು ಹುಟ್ಟಿಹಾಕಿತ್ತು. ಗಂಗಾ ನದಿಯ ತಟದಲ್ಲಿ ಜನರು ಕೋವಿಡ್‌ ಸೋಂಕಿತರ ಅಂತ್ಯಕ್ರಿಯೆ ನಡೆಸುತ್ತಿರುವ ಮತ್ತು ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಘಟನೆಗಳು ದೇಶಾದ್ಯಂತ ಸಂಚಲನವನ್ನು ಉಂಟುಮಾಡಿತ್ತು. ನದಿಯಲ್ಲಿ ತೇಲಿ ಬರುತ್ತಿರುವ ಮೃತದೇಹಗಳ ಕಾರಣದಿಂದ ಸಾಕಷ್ಟು ಮುಜುಗರವನ್ನು ಎದುರಿಸಿದ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮೃತದೇಹಗಳನ್ನು ನದಿಗೆ ಎಸೆಯದಂತೆ ಜನರಲ್ಲಿ ಹಲವು ಬಾರಿ ಮನವಿಗಳನ್ನು ಕೂಡ ಮಾಡಿತ್ತು. ಜೊತೆಗೆ ಕಠಿಣ ಶಿಕ್ಷೆಯನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಈ ಎಲ್ಲ ಘಟನೆಗಳ ನಂತರವೂ ಉತ್ತರಪ್ರದೇಶದಲ್ಲಿ ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಅಮಾನವೀಯ ಕೃತ್ಯಗಳು ಮುಂದುವರೆಯುತ್ತಿರುವುದಕ್ಕೆ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಸಾಕ್ಷಿ ನೀಡಿದೆ.

ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಪ್ರಕರಣಕ್ಕೆ ಸಂಬಂಧ ಸೋಂಕಿತರ ಕುಟುಂಬದ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ವಿಡಿಯೋದಲ್ಲಿ ಪಿಪಿಇ ಕಿಟ್‌ ಧರಿಸಿರುವ ವ್ಯಕ್ತಿಯೊಬ್ಬ ದೇಹವನ್ನು ಹಿಡಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ವ್ಯಕ್ತಿ ದೀರ್ಘಕಾಲದಿಂದ ದೇಹವನ್ನು ಬ್ಯಾಗ್‌ನಿಂದ ತೆಗೆಯಲು ಪ್ರಯತ್ನಿಸುತ್ತಿರುವಂತೆ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಯಲ್ಲಿ ಕಂಡುಬರುತ್ತಿದೆ.

ಈ ಘಟನೆಯಲ್ಲಿ ಕಾಣಿಸಿರುವ ಮೃತ ದೇಹ ಸಿದ್ಧಾರ್ಥ ನಗರ ನಿವಾಸಿಯದಾಗಿದ್ದು ಅವರು ಮೇ 25 ರಂದು ಕೋವಿಡ್‌ ಸೋಂಕಿನಿಂದ ಬಲರಾಮಪುರ ಆಸ್ಪತ್ರೆಗೆ ದಾಖಲಾಗಿದ್ದರು. 3 ದಿನಗಳ ನಂತರ ಅಂದರೆ ಮೇ 28 ರಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಕೋವಿಡ್‌ ನಿಂದ ಮೃತಪಟ್ಟ ಕಾರಣ ಅವರ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆದಿರುವುದು ತಿಳಿದುಬಂದಿದೆ ಬಲರಾಮಪುರ ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ ಸಿದ್ದಾರ್ಥ್‌ ನಗರದ ವ್ಯಕ್ತಿಯೊಬ್ಬರು ಕಳೆದ ಮಂಗಳವಾರ ಕೋವಿಡ್‌ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳ ನಂತರ ಅಂದರೆ ಮೇ 28 ರ ವೇಳೆಗೆ ರೋಗಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ಮೃತಪಟ್ಟ ವ್ಯಕ್ತಿಯ ದೇಹವನ್ನು ಅವರ ಕುಟುಂಬಸ್ಥರಿಗೆ ನೀಡಲಾಗಿದೆ. ಅವರ ಕುಟುಂಬಸ್ಥರು ಮೃತದೇಹವನ್ನು ನದಿಗೆ ಎಸೆದಿದ್ದಾರೆ. ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬಲರಾಮಪುರ ಜಿಲ್ಲೆ ಮುಖ್ಯ ಆರೋಗ್ಯಾಧಿಕಾರಿ ವಿ.ಬಿ. ಸಿಂಗ್‌ ತಿಳಿಸಿದ್ದಾರೆ.

ಮೃತದೇಹವನ್ನು ಕುಟುಂಬಸ್ಥರಿಗೆ ಮರಳಿ ನೀಡಲಾಗಿದೆ. ಆದ್ದರಿಂದ ಮೃತ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ಕಾಯ್ದೆ ಮತ್ತು ಎಪಿಡೆಮಿಕ್‌ ಖಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಲರಾಮಪುರ ಜಿಲ್ಲಾ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಟಿಯಾಲ್‌ ತಿಳಿಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ತಪ್ಪಾಗಿ ನೀಡುತ್ತಿದೆ ಎಂಬ ಆರೋಪ ಈಗಾಗಲೇ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬರುತ್ತಿರುವ ಘಟನೆಗಳು ಬೆಳಕಿಗೆ ಬಂದಿದ್ದವು. ಈಗ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ನದಿಗೆ ಎಸೆಯುತ್ತಿರುವ ಘಟನೆಯ ಈ ದೃಶ್ಯಾವಳಿ ಉತ್ತರ ಪ್ರದೇಶದ ಕೊರೋನಾ ಕಾಲದ ಕರುಣಾ ಜನಕ ಕಥೆಗಳನ್ನು, ಕೋವಿಡ್‌ ಸೋಂಕಿನಿಂದ ಜನರು ಎದುರಿಸುತ್ತಿರುವ ಅಮಾನವೀಯ ವ್ಯಥೆಗಳನ್ನು ನಮ್ಮ ಮುಂದೆ ತೆರೆದಿಟ್ಟಿದೆ.


ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...