Homeಕರೋನಾ ತಲ್ಲಣಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

- Advertisement -
- Advertisement -

ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿದೆ. ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ರಪ್ತಿ ನದಿ ಸೇತುವೆಯ ಮೇಲೆ ನಡೆದಿದೆ ಎಂದು ಗುರುತಿಸಲಾಗಿದೆ.

ಮೇ 28 ರಂದು ನಗರದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಸೇತುವೆಯ ಸಮೀಪ ರಸ್ತೆಯಲ್ಲಿ ಕಾರು ನಿಲ್ಲಿಸಿ ನಿಂತಿದ್ದ ಸ್ಥಳೀಯರೊಬ್ಬರು ಯುವಕರು ದೇಹವನ್ನು ನದಿಗೆ ಎಸೆಯುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆ ದೇಶಾದ್ಯಂತ ಜನರಲ್ಲಿ ಸಾಕಷ್ಟು ಆಕ್ರೋಶವನ್ನು ಹುಟ್ಟಿಹಾಕಿತ್ತು. ಗಂಗಾ ನದಿಯ ತಟದಲ್ಲಿ ಜನರು ಕೋವಿಡ್‌ ಸೋಂಕಿತರ ಅಂತ್ಯಕ್ರಿಯೆ ನಡೆಸುತ್ತಿರುವ ಮತ್ತು ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಘಟನೆಗಳು ದೇಶಾದ್ಯಂತ ಸಂಚಲನವನ್ನು ಉಂಟುಮಾಡಿತ್ತು. ನದಿಯಲ್ಲಿ ತೇಲಿ ಬರುತ್ತಿರುವ ಮೃತದೇಹಗಳ ಕಾರಣದಿಂದ ಸಾಕಷ್ಟು ಮುಜುಗರವನ್ನು ಎದುರಿಸಿದ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮೃತದೇಹಗಳನ್ನು ನದಿಗೆ ಎಸೆಯದಂತೆ ಜನರಲ್ಲಿ ಹಲವು ಬಾರಿ ಮನವಿಗಳನ್ನು ಕೂಡ ಮಾಡಿತ್ತು. ಜೊತೆಗೆ ಕಠಿಣ ಶಿಕ್ಷೆಯನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಈ ಎಲ್ಲ ಘಟನೆಗಳ ನಂತರವೂ ಉತ್ತರಪ್ರದೇಶದಲ್ಲಿ ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಅಮಾನವೀಯ ಕೃತ್ಯಗಳು ಮುಂದುವರೆಯುತ್ತಿರುವುದಕ್ಕೆ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಸಾಕ್ಷಿ ನೀಡಿದೆ.

ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಪ್ರಕರಣಕ್ಕೆ ಸಂಬಂಧ ಸೋಂಕಿತರ ಕುಟುಂಬದ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ವಿಡಿಯೋದಲ್ಲಿ ಪಿಪಿಇ ಕಿಟ್‌ ಧರಿಸಿರುವ ವ್ಯಕ್ತಿಯೊಬ್ಬ ದೇಹವನ್ನು ಹಿಡಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ವ್ಯಕ್ತಿ ದೀರ್ಘಕಾಲದಿಂದ ದೇಹವನ್ನು ಬ್ಯಾಗ್‌ನಿಂದ ತೆಗೆಯಲು ಪ್ರಯತ್ನಿಸುತ್ತಿರುವಂತೆ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಯಲ್ಲಿ ಕಂಡುಬರುತ್ತಿದೆ.

ಈ ಘಟನೆಯಲ್ಲಿ ಕಾಣಿಸಿರುವ ಮೃತ ದೇಹ ಸಿದ್ಧಾರ್ಥ ನಗರ ನಿವಾಸಿಯದಾಗಿದ್ದು ಅವರು ಮೇ 25 ರಂದು ಕೋವಿಡ್‌ ಸೋಂಕಿನಿಂದ ಬಲರಾಮಪುರ ಆಸ್ಪತ್ರೆಗೆ ದಾಖಲಾಗಿದ್ದರು. 3 ದಿನಗಳ ನಂತರ ಅಂದರೆ ಮೇ 28 ರಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಕೋವಿಡ್‌ ನಿಂದ ಮೃತಪಟ್ಟ ಕಾರಣ ಅವರ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆದಿರುವುದು ತಿಳಿದುಬಂದಿದೆ ಬಲರಾಮಪುರ ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ ಸಿದ್ದಾರ್ಥ್‌ ನಗರದ ವ್ಯಕ್ತಿಯೊಬ್ಬರು ಕಳೆದ ಮಂಗಳವಾರ ಕೋವಿಡ್‌ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳ ನಂತರ ಅಂದರೆ ಮೇ 28 ರ ವೇಳೆಗೆ ರೋಗಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ಮೃತಪಟ್ಟ ವ್ಯಕ್ತಿಯ ದೇಹವನ್ನು ಅವರ ಕುಟುಂಬಸ್ಥರಿಗೆ ನೀಡಲಾಗಿದೆ. ಅವರ ಕುಟುಂಬಸ್ಥರು ಮೃತದೇಹವನ್ನು ನದಿಗೆ ಎಸೆದಿದ್ದಾರೆ. ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬಲರಾಮಪುರ ಜಿಲ್ಲೆ ಮುಖ್ಯ ಆರೋಗ್ಯಾಧಿಕಾರಿ ವಿ.ಬಿ. ಸಿಂಗ್‌ ತಿಳಿಸಿದ್ದಾರೆ.

ಮೃತದೇಹವನ್ನು ಕುಟುಂಬಸ್ಥರಿಗೆ ಮರಳಿ ನೀಡಲಾಗಿದೆ. ಆದ್ದರಿಂದ ಮೃತ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ಕಾಯ್ದೆ ಮತ್ತು ಎಪಿಡೆಮಿಕ್‌ ಖಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಲರಾಮಪುರ ಜಿಲ್ಲಾ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಟಿಯಾಲ್‌ ತಿಳಿಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ತಪ್ಪಾಗಿ ನೀಡುತ್ತಿದೆ ಎಂಬ ಆರೋಪ ಈಗಾಗಲೇ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬರುತ್ತಿರುವ ಘಟನೆಗಳು ಬೆಳಕಿಗೆ ಬಂದಿದ್ದವು. ಈಗ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ನದಿಗೆ ಎಸೆಯುತ್ತಿರುವ ಘಟನೆಯ ಈ ದೃಶ್ಯಾವಳಿ ಉತ್ತರ ಪ್ರದೇಶದ ಕೊರೋನಾ ಕಾಲದ ಕರುಣಾ ಜನಕ ಕಥೆಗಳನ್ನು, ಕೋವಿಡ್‌ ಸೋಂಕಿನಿಂದ ಜನರು ಎದುರಿಸುತ್ತಿರುವ ಅಮಾನವೀಯ ವ್ಯಥೆಗಳನ್ನು ನಮ್ಮ ಮುಂದೆ ತೆರೆದಿಟ್ಟಿದೆ.


ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...