Homeಮುಖಪುಟಪಾಕಿಸ್ತಾನ, ಬಾಂಗ್ಲದೇಶಕ್ಕಿಂತ ಭಾರತದಲ್ಲಿ ನಿರುದ್ಯೋಗದ ದರ ಹೆಚ್ಚಳ

ಪಾಕಿಸ್ತಾನ, ಬಾಂಗ್ಲದೇಶಕ್ಕಿಂತ ಭಾರತದಲ್ಲಿ ನಿರುದ್ಯೋಗದ ದರ ಹೆಚ್ಚಳ

- Advertisement -
- Advertisement -

2022ರಲ್ಲಿ ಭಾರತದ ಯುವ ಜನರಲ್ಲಿನ ನಿರುದ್ಯೋಗ ದರವು ನೆರೆಯ ದೇಶಗಳಾದ ಪಾಕಿಸ್ತಾನ, ಬಾಂಗ್ಲದೇಶ ಮತ್ತು ಭೂತಾನ್‌ಗಿಂತಲೂ ಹೆಚ್ಚಾಗಿದೆ ಎಂದು ವಿಶ್ವಬ್ಯಾಂಕ್‌( ವರ್ಲ್ಡ್‌ ಬ್ಯಾಂಕ್‌) ಅಂಕಿ ಅಂಶಗಳು ಬಹಿರಂಗಪಡಿಸಿದೆ.

2022ರಲ್ಲಿ ಭಾರತದಲ್ಲಿನ ಯುವಕರ ನಿರುದ್ಯೋಗ ದರವು 23.22% ರಷ್ಟಿದೆ. ಪಾಕಿಸ್ತಾನದಲ್ಲಿನ ನಿರುದ್ಯೋಗ ದರವು 11.3%ರಷ್ಟಿದೆ.. ಬಾಂಗ್ಲಾದೇಶದಲ್ಲಿ 12.9% ಮತ್ತು ಭೂತಾನ್‌ನಲ್ಲಿ ನಿರುದ್ಯೋಗ ದರವು 14.4% ಇದೆ ಎಂದು ವಿಶ್ವ ಬ್ಯಾಂಕ್ (ವರ್ಲ್ಡ್‌ ಬ್ಯಾಂಕ್) ಅಂಕಿ-ಅಂಶಗಳು ತಿಳಿಸಿದೆ.

ವರದಿಯ ಪ್ರಕಾರ 2022ರ ವರ್ಷದಲ್ಲಿ ಚೀನಾದಲ್ಲಿ ನಿರುದ್ಯೋಗ ದರವು 13.2%, ಸಿರಿಯಾದಲ್ಲಿ 22.1%, ಇಂಡೋನೇಷ್ಯಾದಲ್ಲಿ 13%, ಮಲೇಷ್ಯಾದಲ್ಲಿ 11.7%, ವಿಯೆಟ್ನಾಂನಲ್ಲಿ 7.4%, ದಕ್ಷಿಣ ಕೊರಿಯಾದಲ್ಲಿ 6.9% ಮತ್ತು ಸಿಂಗಾಪುರದಲ್ಲಿ 6.1% ರಷ್ಟಿದೆ. ಈ ಎಲ್ಲಾ ದೇಶಗಳ ನಿರುದ್ಯೋಗದ ದರಕ್ಕಿಂತ ಭಾರತದಲ್ಲಿ ನಿರುದ್ಯೋಗ ದರ ಹೆಚ್ಚಳವಾಗಿದೆ.

ಈ ಮಾಹಿತಿಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯಿಂದ ಪಡೆಯಲಾಗಿದೆ. ಅಂಕಿ ಅಂಶವನ್ನು 15ರಿಂದ 24 ವರ್ಷ ವಯಸ್ಸಿನವರು ಮತ್ತು ಉದ್ಯೋಗ ಇಲ್ಲದೆ ಉದ್ಯೋಗವನ್ನು ಹುಡುಕುತ್ತಿರುವವರ ಅಂಕಿ-ಅಂಶಗಳನ್ನು ಸಂಗ್ರಹಿಸಿ ಸಿದ್ದಪಡಿಸಲಾಗಿದೆ.

15-34 ವರ್ಷ ವಯಸ್ಸಿನ ಸುಮಾರು 36%  ಜನರು ಭಾರತದಲ್ಲಿ ನಿರುದ್ಯೋಗವು ಅತಿದೊಡ್ಡ ಸಮಸ್ಯೆ ಎಂದು ಹೇಳುತ್ತಿದ್ದಾರೆ ಎಂದು ಲೋಕನೀತಿ-ಸಿಎಸ್ಡಿಎಸ್ ಸಮೀಕ್ಷೆಯು (Lokniti-CSDS survey) ಕಂಡುಹಿಡಿದಿದೆ. ಯುವಕರ ವೃತ್ತಿ ಆಕಾಂಕ್ಷೆಗಳು, ಉದ್ಯೋಗದ ಆದ್ಯತೆಗಳು ಮತ್ತು ನಿರೀಕ್ಷೆಗಳನ್ನು ವಿಶ್ಲೇಷಿಸಿ ಸಮೀಕ್ಷೆಯನ್ನು ಸಿದ್ದಪಡಿಸಲಾಗಿದೆ.

ಭಾರತದ ನಿರುದ್ಯೋಗ ಪ್ರಮಾಣ 2023ರ ಜನವರಿಗೆ ಹೋಲಿಸಿದರೆ ಫೆಬ್ರವರಿಯಲ್ಲಿ ಹೆಚ್ಚಾಗಿತ್ತು. ಕಳೆದ ಜನವರಿಯಲ್ಲಿ ಶೇ.7.14 ರಷ್ಟಿದ್ದ ನಿರುದ್ಯೋಗ ಪ್ರಮಾಣ ಫೆಬ್ರವರಿಯಲ್ಲಿ ಶೇ.7.45ಕ್ಕೆ ಏರಿಕೆಯಾಗಿತ್ತು. ಫೆಬ್ರವರಿಯಲ್ಲಿ ನಿರುದ್ಯೋಗದ ಕುರಿತು ಬಿಡುಗಡೆಯಾದ ವರದಿಯಲ್ಲಿ ನಗರ ಭಾಗದ ಜನರಲ್ಲಿ ನಿರುದ್ಯೋಗ ಪ್ರಮಾಣ ಶೇ.7.93ರಷ್ಟಿದ್ದರೆ, ಗ್ರಾಮೀಣ ಪ್ರದೇಶದಲ್ಲಿ ಶೇ. 7.23ರಷ್ಟಿತ್ತು.

ಇದನ್ನು ಓದಿ: ಅಮೆರಿಕಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ 8,076 ಭಾರತೀಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...