Homeಚಳವಳಿಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿರುವಂತೆಯೇ ಯುವಜನರ ಆಕ್ರೋಶವೂ ಕೂಡ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ನೀಡಿ, ಉದ್ಯೋಗ ಹೆಚ್ಚಿಸಿ, ಪ್ರಧಾನಿಗಳೇ ಉತ್ತರ ನೀಡಿ ಎಂದು ಕೇಳುತ್ತಿದ್ದಾರೆ. ಗುರುವಾರ (ಮಾರ್ಚ್ 4) ಕೂಡ #noजॉब_noवोट  (ನೋ ಜಾಬ್, ನೋ ವೋಟ್) ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದು, #noजॉब_noवोट ಹ್ಯಾಶ್‌ಟ್ಯಾಗ್ ಟ್ವಿಟರ್‌ ಟ್ರೆಂಡಿಂಗ್‌ನಲ್ಲಿದೆ.

ಗುರುವಾರ ಟ್ವಿಟರ್‌ನಲ್ಲಿ #noजॉब_noवोट ಬಳಸಿ ಟ್ವೀಟ್ ಮಾಡುತ್ತಿರುವ ಜನರು, ಕೆಲಸ ನೀಡದಿದ್ದರೇ ಮತವೂ ನೀಡಲಾಗದು ಎಂದು ಹೇಳುತ್ತಿದ್ದಾರೆ. 2 ಕೋಟಿ ಉದ್ಯೋಗಗಳನ್ನು ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ಇಂದು ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಯುವಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಭಾರತವೇ ಇಂದು ಒಂದು ಧ್ವನಿಯನ್ನು ಎತ್ತಿದೆ. ಅದೇನೆಂದರೆ ಬಿಜೆಪಿಗೆ ಮತ ನೀಡಬೇಡಿ ಎಂಬುದು ಎಂದು ಇಂಡಿಯನ್ ಸ್ಟೂಡೆಂಟ್ಸ್ ಅಂಡ್ ಯೂತ್ ಟ್ವಿಟರ್‌ ಹ್ಯಾಂಡಲ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

32 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಎಲ್ಲಾ ವಯೋಮಾನದವು ಬಿಜೆಪಿಗೆ ಮತ ನೀಡಬೇಡಿ ಎಂಬ ಭಿತ್ತಿಪತ್ರ ಹಿಡಿದುಕೊಂಡಿದ್ದಾರೆ. ದೇಶದ ಹಲವಾರು ರಾಜ್ಯಗಳ ಜನರನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.

ವಿಕ್ಕಿ ರಾಜ್ ಎನ್ನುವವರು ಖಾಲಿ ಹುದ್ದೆಗಳು ಹೇಗೆ ಪಾತಾಳಕ್ಕೆ ಇಳಿಯುತ್ತಿವೆ ಎಂಬ ಗ್ರಾಫ್‌ ಪೋಸ್ಟ್ ಮಾಡಿ, ಇನ್ನು ಮಕ್ಕಳು ಓದಿ ಏನಾಗಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಈಗ ವಿದ್ಯಾಭ್ಯಾಸ ಮುಗಿಸಿದವರಿಗೆ ಸರ್ಕಾರ ಉದ್ಯೋಗ ನೀಡುತ್ತಿಲ್ಲ. ಇನ್ನು ಮುಂದಿನ ಪೀಳಿಗೆ ಮಕ್ಕಳು ಓದಿ ಏನಾಗಬೇಕು ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ನಮ್ಮ ಉತ್ತಮ ಭವಿಷ್ಯಕ್ಕಾಗಿ ಈ ಅಭಿಯಾನಕ್ಕೆ ಎಲ್ಲಾ ವಿದ್ಯಾರ್ಥಿಗಳು ಕೈಜೊಡಿಸಿ. ಈಗ ಒಂದಾಗದಿದ್ದರೇ ಮುಂದೆಂದೂ ಸಾಧ್ಯವಿಲ್ಲ ಎಂದು ಅನುರಾಗ್ ಶ್ರೀವಾತ್ಸವ್ ಎಂಬುವ ನೆಟ್ಟಿಗರು ಟ್ವೀಟ್ ಮಾಡಿದ್ದಾರೆ.

#modi_jawab_do ಎಂಬ ಹ್ಯಾಶ್‌ಟ್ಯಾಗ್ ಬುಧವಾರ ಇಡೀ ದಿನ ಟ್ರೆಂಡಿಂಗ್‌ನಲ್ಲಿತ್ತು. ಇಂದು #noजॉब_noवोट ಹ್ಯಾಶ್‌ಟ್ಯಾಗ್ ಬಳಸಲಾಗುತ್ತಿದೆ. ಪ್ರಧಾನಿಗಳ ಬಳಿ ನಿರುದ್ಯೋಗಿಗಳು, ವಿದ್ಯಾರ್ಥಿಗಳು ಉದ್ಯೋಗದ ಬಗ್ಗೆ ಮಾತನಾಡಿದಾಗ ಕಣ್ಣು ಕಾಣಿಸುವುದಿಲ್ಲ, ಕಿವಿ ಕೇಳಿಸುವುದಿಲ್ಲ ಮತ್ತು ಮಾತು ಬರುವುದಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮುಂದುವರಿದು, ಭಾರತದ ಯುವಜನತೆಯ ಬೇಡಿಕೆ ಈಡೇರಿಸದಿದ್ದರೇ, ನಿರುದ್ಯೋಗವನ್ನು ತಡೆದು ಎಲ್ಲರಿಗೂ ಕೆಲಸ ನೀಡದಿದ್ದರೇ ನಿಮ್ಮ ಕುರ್ಚಿ ಉಳಿಯುವುದಿಲ್ಲ ಇದು ಭಾರತದ ಯುವಜನತೆ ಪ್ರಧಾನಿಯವರಿಗೆ ನೀಡುತ್ತಿರುವ ಎಚ್ಚರಿಕೆ ಎಂಬಂತ ಟ್ವೀಟ್‌ಗಳು ಕಾಣಿಸುತ್ತಿವೆ.

ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

ದೇಶದ ಎಲ್ಲ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಿ. ಉದ್ಯೋಗ ನೀಡದಿದ್ದರೇ ವೋಟು ನೀಡುವುದಿಲ್ಲ ಎಂಬುದನ್ನು ಒತ್ತಿ ಹೇಳಿ. 2024ರ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬೇಡಿ. ನೋ ಜಾಬ್, ನೋ ವೋಟ್ ಎಂಬ ಹ್ಯಾಶ್‌ಟ್ಯಾಗ್ ಬಳಸಿ, ವಿದ್ಯಾರ್ಥಿಗಳ ಶಕ್ತಿ ದೇಶಕ್ಕೆ ತಿಳಿಯಲಿ ಎಂದು ನೆಟ್ಟಿಗರು ವಿದ್ಯಾರ್ಥಿ ಸಮುದಾಯವನ್ನು ಕೇಳಿಕೊಂಡಿದ್ದಾರೆ.

ಚುನಾವಣೆಯಲ್ಲಿ ಮತ ಕೇಳುವಾಗ ದೊಡ್ಡ ದೊಡ್ಡ ಭರವಸೆಗಳನ್ನು ನೀಡುತ್ತಾರೆ. ಅವುಗಳನ್ನು ಈಡೇರಿಸುವ ಸಮಯದಲ್ಲಿ ನಮ್ಮನ್ನು ಮೋಸಗೊಳಿಸುತ್ತಾರೆ. ಹಾಗಾಗಿ ಯುಜನತೆ ಮತ್ತು ವಿದ್ಯಾರ್ಥಿಗಳು ತಮ್ಮ ಧ್ವನಿಯನ್ನು ಗಟ್ಟಿ ಮಾಡಬೇಕಿದೆ. ಈ ಬಾರಿ ಉದ್ಯೋಗ ನೀಡದಿದ್ದರೇ ಮೋದಿಜಿಯವರನ್ನು ಮನೆಗೆ ಕಳಿಸುತ್ತೇವೆ ಎಂಬುದನ್ನು ತಿಳಿಸಿ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆಯೇ ಹೊರತು ಹೊಸ ಉದ್ಯೋಗವನ್ನು ಸೃಷ್ಟಿಸುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.


ಇದನ್ನೂ ಓದಿ: ಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಹೇರಿದ್ದು ತಪ್ಪು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...