Homeಚಳವಳಿಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

- Advertisement -
- Advertisement -

ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿರುವಂತೆಯೇ ಯುವಜನರ ಆಕ್ರೋಶವೂ ಕೂಡ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ನೀಡಿ, ಉದ್ಯೋಗ ಹೆಚ್ಚಿಸಿ, ಪ್ರಧಾನಿಗಳೇ ಉತ್ತರ ನೀಡಿ ಎಂದು ಕೇಳುತ್ತಿದ್ದಾರೆ. ಗುರುವಾರ (ಮಾರ್ಚ್ 4) ಕೂಡ #noजॉब_noवोट  (ನೋ ಜಾಬ್, ನೋ ವೋಟ್) ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದು, #noजॉब_noवोट ಹ್ಯಾಶ್‌ಟ್ಯಾಗ್ ಟ್ವಿಟರ್‌ ಟ್ರೆಂಡಿಂಗ್‌ನಲ್ಲಿದೆ.

ಗುರುವಾರ ಟ್ವಿಟರ್‌ನಲ್ಲಿ #noजॉब_noवोट ಬಳಸಿ ಟ್ವೀಟ್ ಮಾಡುತ್ತಿರುವ ಜನರು, ಕೆಲಸ ನೀಡದಿದ್ದರೇ ಮತವೂ ನೀಡಲಾಗದು ಎಂದು ಹೇಳುತ್ತಿದ್ದಾರೆ. 2 ಕೋಟಿ ಉದ್ಯೋಗಗಳನ್ನು ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ಇಂದು ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಯುವಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಭಾರತವೇ ಇಂದು ಒಂದು ಧ್ವನಿಯನ್ನು ಎತ್ತಿದೆ. ಅದೇನೆಂದರೆ ಬಿಜೆಪಿಗೆ ಮತ ನೀಡಬೇಡಿ ಎಂಬುದು ಎಂದು ಇಂಡಿಯನ್ ಸ್ಟೂಡೆಂಟ್ಸ್ ಅಂಡ್ ಯೂತ್ ಟ್ವಿಟರ್‌ ಹ್ಯಾಂಡಲ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

32 ಸೆಕೆಂಡ್‌ಗಳ ಈ ವಿಡಿಯೋದಲ್ಲಿ ಎಲ್ಲಾ ವಯೋಮಾನದವು ಬಿಜೆಪಿಗೆ ಮತ ನೀಡಬೇಡಿ ಎಂಬ ಭಿತ್ತಿಪತ್ರ ಹಿಡಿದುಕೊಂಡಿದ್ದಾರೆ. ದೇಶದ ಹಲವಾರು ರಾಜ್ಯಗಳ ಜನರನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.

ವಿಕ್ಕಿ ರಾಜ್ ಎನ್ನುವವರು ಖಾಲಿ ಹುದ್ದೆಗಳು ಹೇಗೆ ಪಾತಾಳಕ್ಕೆ ಇಳಿಯುತ್ತಿವೆ ಎಂಬ ಗ್ರಾಫ್‌ ಪೋಸ್ಟ್ ಮಾಡಿ, ಇನ್ನು ಮಕ್ಕಳು ಓದಿ ಏನಾಗಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ಈಗ ವಿದ್ಯಾಭ್ಯಾಸ ಮುಗಿಸಿದವರಿಗೆ ಸರ್ಕಾರ ಉದ್ಯೋಗ ನೀಡುತ್ತಿಲ್ಲ. ಇನ್ನು ಮುಂದಿನ ಪೀಳಿಗೆ ಮಕ್ಕಳು ಓದಿ ಏನಾಗಬೇಕು ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 2 ಕೋಟಿ ಉದ್ಯೋಗ ಎಲ್ಲಿ: “ಉತ್ತರ ಕೊಡಿ ಮೋದಿ” ಎಂದು 25 ಲಕ್ಷಕ್ಕೂ ಹೆಚ್ಚು ಟ್ವೀಟ್!

ನಮ್ಮ ಉತ್ತಮ ಭವಿಷ್ಯಕ್ಕಾಗಿ ಈ ಅಭಿಯಾನಕ್ಕೆ ಎಲ್ಲಾ ವಿದ್ಯಾರ್ಥಿಗಳು ಕೈಜೊಡಿಸಿ. ಈಗ ಒಂದಾಗದಿದ್ದರೇ ಮುಂದೆಂದೂ ಸಾಧ್ಯವಿಲ್ಲ ಎಂದು ಅನುರಾಗ್ ಶ್ರೀವಾತ್ಸವ್ ಎಂಬುವ ನೆಟ್ಟಿಗರು ಟ್ವೀಟ್ ಮಾಡಿದ್ದಾರೆ.

#modi_jawab_do ಎಂಬ ಹ್ಯಾಶ್‌ಟ್ಯಾಗ್ ಬುಧವಾರ ಇಡೀ ದಿನ ಟ್ರೆಂಡಿಂಗ್‌ನಲ್ಲಿತ್ತು. ಇಂದು #noजॉब_noवोट ಹ್ಯಾಶ್‌ಟ್ಯಾಗ್ ಬಳಸಲಾಗುತ್ತಿದೆ. ಪ್ರಧಾನಿಗಳ ಬಳಿ ನಿರುದ್ಯೋಗಿಗಳು, ವಿದ್ಯಾರ್ಥಿಗಳು ಉದ್ಯೋಗದ ಬಗ್ಗೆ ಮಾತನಾಡಿದಾಗ ಕಣ್ಣು ಕಾಣಿಸುವುದಿಲ್ಲ, ಕಿವಿ ಕೇಳಿಸುವುದಿಲ್ಲ ಮತ್ತು ಮಾತು ಬರುವುದಿಲ್ಲ ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ಮುಂದುವರಿದು, ಭಾರತದ ಯುವಜನತೆಯ ಬೇಡಿಕೆ ಈಡೇರಿಸದಿದ್ದರೇ, ನಿರುದ್ಯೋಗವನ್ನು ತಡೆದು ಎಲ್ಲರಿಗೂ ಕೆಲಸ ನೀಡದಿದ್ದರೇ ನಿಮ್ಮ ಕುರ್ಚಿ ಉಳಿಯುವುದಿಲ್ಲ ಇದು ಭಾರತದ ಯುವಜನತೆ ಪ್ರಧಾನಿಯವರಿಗೆ ನೀಡುತ್ತಿರುವ ಎಚ್ಚರಿಕೆ ಎಂಬಂತ ಟ್ವೀಟ್‌ಗಳು ಕಾಣಿಸುತ್ತಿವೆ.

ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

ದೇಶದ ಎಲ್ಲ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಿ. ಉದ್ಯೋಗ ನೀಡದಿದ್ದರೇ ವೋಟು ನೀಡುವುದಿಲ್ಲ ಎಂಬುದನ್ನು ಒತ್ತಿ ಹೇಳಿ. 2024ರ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಬೇಡಿ. ನೋ ಜಾಬ್, ನೋ ವೋಟ್ ಎಂಬ ಹ್ಯಾಶ್‌ಟ್ಯಾಗ್ ಬಳಸಿ, ವಿದ್ಯಾರ್ಥಿಗಳ ಶಕ್ತಿ ದೇಶಕ್ಕೆ ತಿಳಿಯಲಿ ಎಂದು ನೆಟ್ಟಿಗರು ವಿದ್ಯಾರ್ಥಿ ಸಮುದಾಯವನ್ನು ಕೇಳಿಕೊಂಡಿದ್ದಾರೆ.

ಚುನಾವಣೆಯಲ್ಲಿ ಮತ ಕೇಳುವಾಗ ದೊಡ್ಡ ದೊಡ್ಡ ಭರವಸೆಗಳನ್ನು ನೀಡುತ್ತಾರೆ. ಅವುಗಳನ್ನು ಈಡೇರಿಸುವ ಸಮಯದಲ್ಲಿ ನಮ್ಮನ್ನು ಮೋಸಗೊಳಿಸುತ್ತಾರೆ. ಹಾಗಾಗಿ ಯುಜನತೆ ಮತ್ತು ವಿದ್ಯಾರ್ಥಿಗಳು ತಮ್ಮ ಧ್ವನಿಯನ್ನು ಗಟ್ಟಿ ಮಾಡಬೇಕಿದೆ. ಈ ಬಾರಿ ಉದ್ಯೋಗ ನೀಡದಿದ್ದರೇ ಮೋದಿಜಿಯವರನ್ನು ಮನೆಗೆ ಕಳಿಸುತ್ತೇವೆ ಎಂಬುದನ್ನು ತಿಳಿಸಿ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಇರುವ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆಯೇ ಹೊರತು ಹೊಸ ಉದ್ಯೋಗವನ್ನು ಸೃಷ್ಟಿಸುತ್ತಿಲ್ಲ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.


ಇದನ್ನೂ ಓದಿ: ಇಂದಿರಾ ಗಾಂಧಿ ತುರ್ತುಪರಿಸ್ಥಿತಿ ಹೇರಿದ್ದು ತಪ್ಪು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...