Homeಕರ್ನಾಟಕಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

- Advertisement -
- Advertisement -

ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಅದನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಯಾವುದೇ ‘ಮಾನಹಾನಿಕರ ವಿಷಯವನ್ನು’ ಪ್ರಕಟಿಸದಂತೆ ವಿವಿಧ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ ವಿಧಿಸಿರುವ ಬೆಂಗಳೂರು ನ್ಯಾಯಾಲಯದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜೆ ಅವಧಿಯ ಅರ್ಜಿ ಸಲ್ಲಿಸಲಾಗಿದೆ ಎಂದು livelaw.in ವರದಿ ಮಾಡಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ವಿರುದ್ಧ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳು ಯಾವುದೇ ಅವಹೇಳನಕಾರಿ ವಿಷಯವನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದನ್ನು ನಿರ್ಬಂಧಿಸಿದ ಬೆಂಗಳೂರು ನಗರದ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ‘ಥರ್ಡ್ ಐ ಯೂಟ್ಯೂಬ್ ಚಾನೆಲ್’ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು barandbench.com ವರದಿ ಹೇಳಿದೆ.

ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರು ಮತ್ತು ಅದಕ್ಕೆ ಸಂಬಂಧಿಸಿದ ಇತರ ಪ್ರಕರಣಗಳ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವು ಎಸ್‌ಐಟಿ ತನಿಖೆಗೆ ನೇರವಾಗಿ ಅಡ್ಡಿಪಡಿಸುತ್ತದೆ ಎಂದು ಥರ್ಡ್ ಐ ಯೂಟ್ಯೂಬ್ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ. ಅಲ್ಲದೆ, “ಇದು ವಾಕ್ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ” ಎಂದು ಅರ್ಜಿಯಲ್ಲಿ ಹೇಳಿದೆ ಎಂದು livelaw.in ವರದಿ ತಿಳಿಸಿದೆ.

ಮಾಧ್ಯಮಗಳಿಗೆ ತಡೆ ತಂಡ ಅರ್ಜಿದಾರರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಹೆಣಗಳನ್ನು ಹೂತು ಹಾಕಿದ ಪ್ರಕರಣದ ಎಫ್‌ಐಆರ್‌ನಲ್ಲಿ ತನ್ನ, ತನ್ನ ಕುಟುಂಬದ ಮತ್ತು ತಮಗೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ದ ಆರೋಪಗಳಿಲ್ಲ ಎಂದಿದ್ದಾರೆ. ಆದರೆ, ಎಫ್‌ಐಆರ್‌ನಲ್ಲಿ ಎರಡು ದೂರುಗಳನ್ನು ಸೇರಿಸಲಾಗಿದೆ. ಇವು ದೇವಾಲಯದ ಆಡಳಿತದ ವಿರುದ್ದ ಆರೋಪ ಹೊರಿಸಿವೆ ಮತ್ತು ಅರ್ಜಿದಾರರನ್ನು ಹೆಸರಿಸಿವೆ ಎಂದು ಥರ್ಡ್ ಐ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ವಿವರಿಸಿದೆ.

ಅರ್ಜಿದಾರರು 8,842 ಯುಆರ್‌ಎಲ್‌ಗಳನ್ನು ಅಳಿಸಲು ಕೋರಿದ್ದರು. ಬೆಂಗಳೂರು ನ್ಯಾಯಾಲಯವು ಅವರು ಅರ್ಜಿ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಕಡ್ಡಾಯವಾಗಿ ಯುಆರ್‌ಎಲ್‌ಗಳನ್ನು ಡಿಲಿಟ್ ಮಾಡುವಂತೆ ‘ಗ್ಯಾಗ್ ಆರ್ಡರ್’ ನೀಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜುಲೈ 18ರಂದು ಆದೇಶ ನೀಡಿದ್ದು, ಹರ್ಷೇಂದ್ರ ಕುಮಾರ್, ಅವರ ಕುಟುಂಬ ಸದಸ್ಯರು, ಹರ್ಷೇಂದ್ರ ಕುಮಾರ್ ಅವರ ಕುಟುಂಬ ನಡೆಸುತ್ತಿರುವ ಸಂಸ್ಥೆಗಳು ಮತ್ತು ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದ ವಿರುದ್ಧ ಯಾವುದೇ ಮಾನನಷ್ಟಕರ ವಿಷಯ ಮತ್ತು ಮಾಹಿತಿಯನ್ನು ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಡಿಜಿಟಲ್ ಮಾಧ್ಯಮ, ಎಲ್ಲಾ ಸಾಮಾಜಿಕ ಮಾಧ್ಯಮ ಅಥವಾ ಯಾವುದೇ ರೀತಿಯ ಮುದ್ರಣ ಮಾಧ್ಯಮಗಳಲ್ಲಿ ಪ್ರಕಟಿಸುವುದು, ಪ್ರಸಾರ ಮಾಡುವುದು, ಫಾರ್ವರ್ಡ್ ಮಾಡುವುದು, ಅಪ್‌ಲೋಡ್ ಮಾಡುವುದು, ರವಾನಿಸುವುದು ಮತ್ತು ಪ್ರಸಾರ ಮಾಡುವುದನ್ನು ಮುಂದಿನ ವಿಚಾರಣೆಯವರೆಗೆ ನಿರ್ಬಂಧಿಸಿ ತಡೆಯಾಜ್ಞೆ ಹೊರಡಿಸಿದೆ ಎಂದು livelaw.in ವರದಿ ಮಾಡಿದೆ.

‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ: ಉಪ ರಾಷ್ಟ್ರಪತಿ ರಾಜೀನಾಮೆ ಬಗ್ಗೆ ಪ್ರಶ್ನೆ ಎತ್ತಿದ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...