Homeಕರ್ನಾಟಕಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

- Advertisement -
- Advertisement -

ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಅದನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಯಾವುದೇ ‘ಮಾನಹಾನಿಕರ ವಿಷಯವನ್ನು’ ಪ್ರಕಟಿಸದಂತೆ ವಿವಿಧ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಿಗೆ ನಿರ್ಬಂಧ ವಿಧಿಸಿರುವ ಬೆಂಗಳೂರು ನ್ಯಾಯಾಲಯದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ರಜೆ ಅವಧಿಯ ಅರ್ಜಿ ಸಲ್ಲಿಸಲಾಗಿದೆ ಎಂದು livelaw.in ವರದಿ ಮಾಡಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ವಿರುದ್ಧ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳು ಯಾವುದೇ ಅವಹೇಳನಕಾರಿ ವಿಷಯವನ್ನು ಪ್ರಕಟಿಸುವುದು ಮತ್ತು ಪ್ರಸಾರ ಮಾಡುವುದನ್ನು ನಿರ್ಬಂಧಿಸಿದ ಬೆಂಗಳೂರು ನಗರದ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶದ ವಿರುದ್ಧ ‘ಥರ್ಡ್ ಐ ಯೂಟ್ಯೂಬ್ ಚಾನೆಲ್’ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು barandbench.com ವರದಿ ಹೇಳಿದೆ.

ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರು ಮತ್ತು ಅದಕ್ಕೆ ಸಂಬಂಧಿಸಿದ ಇತರ ಪ್ರಕರಣಗಳ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವು ಎಸ್‌ಐಟಿ ತನಿಖೆಗೆ ನೇರವಾಗಿ ಅಡ್ಡಿಪಡಿಸುತ್ತದೆ ಎಂದು ಥರ್ಡ್ ಐ ಯೂಟ್ಯೂಬ್ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ. ಅಲ್ಲದೆ, “ಇದು ವಾಕ್ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ” ಎಂದು ಅರ್ಜಿಯಲ್ಲಿ ಹೇಳಿದೆ ಎಂದು livelaw.in ವರದಿ ತಿಳಿಸಿದೆ.

ಮಾಧ್ಯಮಗಳಿಗೆ ತಡೆ ತಂಡ ಅರ್ಜಿದಾರರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಹೆಣಗಳನ್ನು ಹೂತು ಹಾಕಿದ ಪ್ರಕರಣದ ಎಫ್‌ಐಆರ್‌ನಲ್ಲಿ ತನ್ನ, ತನ್ನ ಕುಟುಂಬದ ಮತ್ತು ತಮಗೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ದ ಆರೋಪಗಳಿಲ್ಲ ಎಂದಿದ್ದಾರೆ. ಆದರೆ, ಎಫ್‌ಐಆರ್‌ನಲ್ಲಿ ಎರಡು ದೂರುಗಳನ್ನು ಸೇರಿಸಲಾಗಿದೆ. ಇವು ದೇವಾಲಯದ ಆಡಳಿತದ ವಿರುದ್ದ ಆರೋಪ ಹೊರಿಸಿವೆ ಮತ್ತು ಅರ್ಜಿದಾರರನ್ನು ಹೆಸರಿಸಿವೆ ಎಂದು ಥರ್ಡ್ ಐ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ವಿವರಿಸಿದೆ.

ಅರ್ಜಿದಾರರು 8,842 ಯುಆರ್‌ಎಲ್‌ಗಳನ್ನು ಅಳಿಸಲು ಕೋರಿದ್ದರು. ಬೆಂಗಳೂರು ನ್ಯಾಯಾಲಯವು ಅವರು ಅರ್ಜಿ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಕಡ್ಡಾಯವಾಗಿ ಯುಆರ್‌ಎಲ್‌ಗಳನ್ನು ಡಿಲಿಟ್ ಮಾಡುವಂತೆ ‘ಗ್ಯಾಗ್ ಆರ್ಡರ್’ ನೀಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜುಲೈ 18ರಂದು ಆದೇಶ ನೀಡಿದ್ದು, ಹರ್ಷೇಂದ್ರ ಕುಮಾರ್, ಅವರ ಕುಟುಂಬ ಸದಸ್ಯರು, ಹರ್ಷೇಂದ್ರ ಕುಮಾರ್ ಅವರ ಕುಟುಂಬ ನಡೆಸುತ್ತಿರುವ ಸಂಸ್ಥೆಗಳು ಮತ್ತು ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನದ ವಿರುದ್ಧ ಯಾವುದೇ ಮಾನನಷ್ಟಕರ ವಿಷಯ ಮತ್ತು ಮಾಹಿತಿಯನ್ನು ಯೂಟ್ಯೂಬ್ ಚಾನೆಲ್‌ಗಳು ಸೇರಿದಂತೆ ಡಿಜಿಟಲ್ ಮಾಧ್ಯಮ, ಎಲ್ಲಾ ಸಾಮಾಜಿಕ ಮಾಧ್ಯಮ ಅಥವಾ ಯಾವುದೇ ರೀತಿಯ ಮುದ್ರಣ ಮಾಧ್ಯಮಗಳಲ್ಲಿ ಪ್ರಕಟಿಸುವುದು, ಪ್ರಸಾರ ಮಾಡುವುದು, ಫಾರ್ವರ್ಡ್ ಮಾಡುವುದು, ಅಪ್‌ಲೋಡ್ ಮಾಡುವುದು, ರವಾನಿಸುವುದು ಮತ್ತು ಪ್ರಸಾರ ಮಾಡುವುದನ್ನು ಮುಂದಿನ ವಿಚಾರಣೆಯವರೆಗೆ ನಿರ್ಬಂಧಿಸಿ ತಡೆಯಾಜ್ಞೆ ಹೊರಡಿಸಿದೆ ಎಂದು livelaw.in ವರದಿ ಮಾಡಿದೆ.

‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ: ಉಪ ರಾಷ್ಟ್ರಪತಿ ರಾಜೀನಾಮೆ ಬಗ್ಗೆ ಪ್ರಶ್ನೆ ಎತ್ತಿದ ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...