Homeಎಲೆಮರೆಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ.

- Advertisement -
- Advertisement -

ಆ ಹುಡುಗ ಚಡಚಣದಲ್ಲಿ ಡಿಗ್ರಿ ಮುಗಿಸಿದ ನಂತರ ಬಿಜಾಪುರದ ಜಿಎಸ್‍ಎಸ್ ಕಾಲೇಜಿನಲ್ಲಿ ಬಿಎಡ್ ಪೂರೈಸಿ, ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ತನ್ನ ಊರಾದ ಮೈಲಾರ ಎಂಬ ಚಿಕ್ಕ ಹಳ್ಳಿಯಲ್ಲಿದ್ದ. ಮನೆಯಲ್ಲಿ ತಂದೆ ಕಾಕಾ ಹಾಡಿಕಿ ಸಂಘದಲ್ಲಿದ್ದರು. ಡೊಳ್ಳಿನ ಪದ ಹಾಡತಿದ್ದರು. ಯಾರೋ ಮೊಬೈಲದಾಗ ಡೊಳ್ಳಿನ ಹಾಡ ಹಚ್ಚಿಕೊಟ್ಟರು. ಅಪ್ಪ ಮಗನಿಗೆ ‘ರೇವಣಸಿದ್ಧ ಈ ಮೊಬೈಲದಾಗ ಹಾಡ ಹೆಂಗ್ ಬಿಡತಾರು ನೋಡಿಕೋ’ ಎಂದರು. ಮಗನ ಗ್ಯಾನ ಮೊಬೈಲಿನ ಮ್ಯಾಲೆ ಬಿತ್ತು. ಹೀಗೆ ನೋಡ್ತಾ ನೋಡ್ತಾ ಪದಾನ ಮೊಬೈಲದಾಗ ಹೆಂಗ್ ಬಿಡ್ತಾರ ಅಂತ ತಿಳಕಂಡು ಆಗಸ್ಟ್ 6, 2017 ರಲ್ಲಿ ಯೂಟೂಬ್ ಅಕೌಂಟ್ ಕ್ರಿಯೇಟ್ ಮಾಡಿ, ತಾನೂ ತನ್ನ ಅಪ್ಪ ಕಕ್ಕರು ಹಾಡೋ ಹಾಡ ಮೊಬೈಲಿನ್ಯಾಗ ಬಿಡಾಕತ್ತಿದ.

ಇದೀಗ ಈ ಹುಡುಗ ಹೀಗೆ ಯೂಟೂಬಿಗೆ 1260 ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಾನೆ, 87 ಸಾವಿರದಷ್ಟು ಚಂದಾದಾರರಿದ್ದಾರೆ, ಮೂರು ಕೋಟಿ ನಲವತ್ನಾಲ್ಕು ಲಕ್ಷದಷ್ಟು ವೀಕ್ಷಣೆ ಇದೆ. ಇದೀಗ ಜನಪದ ಹಾಡಿಕೆ ಮದ್ಯೆ ಜಾಹೀರಾತುಗಳು ಕಾಣಿಸಿಕೊಳ್ಳುತ್ತವೆ. ಯೂಟೂಬಿನಿಂದ ಪ್ರತಿ ತಿಂಗಳು ಕನಿಷ್ಠ ಹತ್ತು ಸಾವಿರ ಈ ಹುಡುಗನ ಅಕೌಂಟಿಗೆ ಜಮೆ ಆಗುತ್ತದೆ. ಇಂದು ಉತ್ತರ ಕರ್ನಾಟಕ ಹೈದರಬಾದ ಕರ್ನಾಟಕದ ಮುನ್ನೂರಕ್ಕಿಂತ ಹೆಚ್ಚು ಜನಪದ ಕವಿಗಳ ಹಾಡಿಕೆಯ, ಡೊಳ್ಳಿನ ಹಾಡು, ಭಜನೆ, ಮೊಹರಂ ಪದ, ಗೀಗೀ, ಸೋಬಾನೆ, ಚೌಡಕಿ ಪದ ಹೀಗೆ ಹಲವು ಜನಪದ ಪ್ರಕಾರಗಳ ಹಾಡುಗಳನ್ನು `ರೇವಣಸಿದ್ಧ ದ್ಯಾಮಗೋಳ್’ ಎನ್ನುವ ಯೂಟೂಬ್ ಚಾನಲ್ಲಿನಲ್ಲಿ ನೀವು ಕೇಳಬಹುದು.

ರೇವಣಸಿದ್ಧ ದ್ಯಾಮಗೋಳಗೆ ಈಗ 28 ವರ್ಷದ ಹರೆಯ. ಪುಟಿಯುವ ಉತ್ಸಾಹ. ಇಂಥ ಕಡೆ ಜನಪದ ಹಾಡಿಕೆ ಇದೆ ಎಂದು ಗೊತ್ತಾದರೆ, ಬೈಕಿಗೆ ಪೆಟ್ರೋಲ್ ತುಂಬಿಸಿ, ಟ್ರೈಪ್ಯಾಡ್ ತಗೊಂಡು ಹೊರಡುತ್ತಾನೆ. ಹಾಡಿಕೆ ಇರೋ ಕಡೆ ಹೋಗಿ, ಹಾಡಿಕೆ ಮಾಡುವ ಕಲಾವಿದರಿಗೆ ಕಾಣಿಕೆ ಸಲ್ಲಿಸಿ ಆಶೀರ್ವಾದ ತಗೊಳ್ತಾನೆ. ನನ್ನ ಬಗ್ಗೆ ಏನೂ ಹೇಳಬ್ಯಾಡ್ರಿ ಅಂದ್ರೂನು, ಹಾಡಿಕೆ ಆರಂಭಿಸುವ ಮುನ್ನ ಕಲಾವಿದರು `ರೇವಣಸಿದ್ಧ ದ್ಯಾಮಗೋಳ ಅವರು ತಮ್ಮ ಚಾನಲದಿಂದ ನಮ್ಮನ್ನ ಬೆಳಸ್ಯಾರ, ಬಾಳ ಪ್ರಚಾರ ಮಾಡ್ಯಾರ, ನಮಿಗೆ ಅವರ ಕಡೆಲಿಂದ ಬಾಳ ದುಡಿಮಿ ಆಗ್ಯಾತಿ, ಹಂಗಾಗಿ ಅವ್ರು ಬ್ಯಾಡ ಅಂದ್ರೂ ನಾವು ಅವರನ್ನ ನೆನಿಯೋದು ನಮ್ಮ ಧರ್ಮ ಐತಿ. ರೇವಣಸಿದ್ಧಪ್ಪರೋನ್ನ ದೇವರು ಆಯುಶ್ಯಾರೋಗ್ಯ ಕೊಟ್ ಚೆನ್ನಾಗಿ ಇಟ್ಟಿರಲಿ’ ಅಂತ ಹಾರೈಸುತ್ತಾರೆ. ಈ ಹುಡುಗ ನಾಚಿಕೆಯ ಮುದ್ದೆಯಾಗಿ ತಾನು ರೆಕಾರ್ಡ್ ಮಾಡುವುದರಲ್ಲಿ ತಲ್ಲೀನನಾಗುತ್ತಾನೆ.

ನಾನು ಗಮನಿಸಿದಂತೆ ಆಡಿಯೋ-ವೀಡಿಯೋ ಸಂಸ್ಥೆಗಳನ್ನು ಹೊರತುಪಡಿಸಿ ಹೀಗೆ ವೈಯಕ್ತಿಕ ನೆಲೆಯಲ್ಲಿ ಚಾನಲ್ ರೂಪಿಸಿ ಜನಪದ ಹಾಡಿಕೆ ವೀಡಿಯೋಗಳನ್ನು ಕೆಲವರು ಅಪ್ಲೋಡ್ ಮಾಡಿದ್ದಾರೆ. ಆದರೆ ಆ ಎಲ್ಲಾ ಚಾನಲ್ಲುಗಳಲ್ಲಿಯೇ ಅತಿಹೆಚ್ಚು ಚಂದಾದಾರಿಕೆ ಮತ್ತು ವೀಕ್ಷೆಣೆಯನ್ನು ದ್ಯಾಮಗೋಳ್ ಚಾನಲ್ ಹೊಂದಿದೆ. ಹಿಂದೆ ಆಡಿಯೋ ರೆಕಾರ್ಡ್ ಆಗಿದ್ದ ಕ್ಯಾಸೆಟ್‍ಗಳನ್ನು ತೆಗೆದುಕೊಂಡು, ಆ ಕ್ಯಾಸೆಟ್‍ನಲ್ಲಿ ಹಾಡಿದ ಕವಿಗಳ ಒಪ್ಪಿಗೆ ಪಡೆದು, ಕ್ಯಾಸೆಟ್ ಹಾಡಿಕೆಯನ್ನು ಎಂಪಿ-3 ಆಡಿಯೋ ಫೈಲನ್ನಾಗಿ ವರ್ಗಾಯಿಸಿಕೊಂಡು ಆ ನಂತರ, ಎಂಪಿ-3 ಪೈಲನ್ನು ವೀಡಿಯೋವಾಗಿ ರೂಪಾಂತರಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಕೆಸೆಟ್ಟಿನ ಪೋಸ್ಟರ್ ಅನ್ನು ವೀಡಿಯೋದ ಕವರ್ ಫೋಟೋವಾಗಿ ಬಳಸಲಾಗುತ್ತದೆ. ಆಗ ಕ್ಯಾಸೆಟ್ ಮೇಲಿನ ಮುಖ ಹೊದಿಕೆ, ಅದೇ ಹಾಡುಗಳ ವೀಡಿಯೋ ಮುಖಹೊದಿಕೆಯಾಗಿ ಬದಲಾಗುತ್ತದೆ.

ಹೀಗೆ ರೂಪಾಂತರಿಸುವಾಗ ಹಾಡಿಕೆ ಮಾಡಿದ ಕವಿಯ ಫೋಟೋ ಮತ್ತು ವೀಡಿಯೋದಲ್ಲಿಯೇ ಕವಿಯ ಮೊಬೈಲ್ ನಂಬರನ್ನು ಕೊಡಲಾಗುತ್ತದೆ. ಯೂಟೂಬಲ್ಲಿ ಈ ಹಾಡು ಕೇಳಿದವರು ಇಷ್ಟವಾದರೆ ಹಾಡಿಕೆ ತಂಡಕ್ಕೆ ಪೋನಚ್ಚಿ ಮಾತಾಡಿಸಿ ತಮ್ಮ ಊರಿನ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಾರೆ. `ಮೊದಲಾದರೆ ಹೀಗೆ ರೆಕಾರ್ಡ್ ಮಾಡಬೇಕಾದರೆ ಜನಪದ ಕಲಾವಿದರನ್ನೇ ರೆಕಾರ್ಡಿಂಗ್ ಸ್ಟುಡಿಯೋಕ್ಕೆ ಕರೆಯಿಸಬೇಕಿತ್ತು. ಹೀಗೆ ರೆಕಾರ್ಡ್ ಮಾಡಲು ಸ್ವತಃ ಜನಪದ ಕಲಾವಿದರೆ ರೆಕಾರ್ಡಿಂಗ್ ಕಂಪನಿಗಳಿಗೆ ಹಣ ಕೊಟ್ಟದ್ದೂ ಇದೆ. ಈಗ ಹಾಗಿಲ್ಲ. ನಾವೇ ಹಾಡುವಲ್ಲಿಗೆ ಹೋಗಿ ರೆಕಾರ್ಡ್ ಮಾಡಿಕೊಂಡು ಬಂದು ಯೂಟೂಬಿಗೆ ಹಾಕುತ್ತೇವೆ. ನಾನು ಅಪ್ಲೋಡ್ ಮಾಡಿದ್ದಕ್ಕಿಂತ ಒಳ್ಳೆಯ ಹಾಡುಗಳು ಇದಾವ್ ಸರ್, ಅಂತವುಗಳನ್ನೆಲ್ಲಾ ಸಂಗ್ರಹಿಸಬೇಕು ಅಂತ ಆಸೆ ಇದೆ’ ಎಂದು ರೇವಣಸಿದ್ಧ ಹೇಳುತ್ತಾರೆ.

ಮುಂದುವರಿದು `ನಮ್ಮ ಚಾನಲ್ ಫೇಮಸ್ ಆಗಿರೋದ್ರಿಂದ, ನಮ್ಮ ಚಾನಲದಾಗ ಹಾಡು ಹಾಕಿದ್ರೆ ಹೆಚ್ಚು ಪ್ರಚಾರ ಆಗಿ ಹಾಡಿಕಿ ಆರ್ಡರ್ ಸಿಗುತ್ತೆ ಅಂತೇಳಿ ಕೆಲವೊಮ್ಮೆ ಜನಪದ ಕಲಾವಿದರೆ ನಮ್ಮ ಹಾಡ ಯೂಟೂಬದಾಗ ಬಿಡರಿ ಅಂತೇಳಿ ಹಣ ಕೊಡೋಕೆ ಬರ್ತಾರೆ. ಆದರೆ ನಾನು ಯಾವ ಕಲಾವಿದರಿಂದಲೂ ಹಣ ಪಡೆಯೋಲ್ಲ. ಯೂಟೂಬಿಂದ ನನ್ನ ಕೆಲಸಕ್ಕೆ ಒಂದಷ್ಟು ಹಣ ಕೊಡ್ತಾರೆ. ಹಾಗಾಗಿ ನಿಮ್ಮಿಂದ ಹಣ ನಾನು ತಗೊಳ್ಳಲ್ಲ ಎಂದು ಹೇಳುತ್ತೇನೆ’ ಎಂದು ತನ್ನ ವೃತ್ತಿನಿಷ್ಠೆಯನ್ನು ವಿವರಿಸುತ್ತಾರೆ.

ಅವರು ಅಪ್‌ಲೋಡ್ ಮಾಡಿರುವ ಒಂದು ಹಾಡು ಕೇಳಿ

ಕಲ್ಬುರ್ಗಿ, ಅಫಜಲಫುರ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಮಹರಾಷ್ಟ್ರದ ಸಾಂಗಲಿ, ಜತ್ತ ಮೊದಲಾದ ಕಡೆಗಳ ಸುಮಾರು ಇನ್ನೂರಕ್ಕಿಂತ ಹೆಚ್ಚು ಜನಪದ ಹಾಡಿಕೆ ತಂಡಗಳು ರೇವಣಸಿದ್ಧ ಅವರಿಗೆ ಸಂಪರ್ಕವಿದೆ. ಶಿವರಾಯ ಮಾಸ್ತರ್, ಕಲ್ಮೇಶ, ಕೇದಾರ ಮಾಸ್ತರ್, ಗುರುಲಿಂಗ ಮಾಸ್ತರ ಸಂಕನಾಳ, ನಾಗೂರು ಲಕ್ಷ್ಮಣ, ಸುಮಿತ್ರಾ ಮುಗಳಿಹಾಳ, ಸಾವಿತ್ರಿ ಕಿರಣಗಿ, ಆಕಾಶ ಮನಗುಳಿ ಮುಂತಾದ ಜನಪ್ರಿಯ ಜನಪದ ಕವಿಗಳು ಪದಕಟ್ಟುವ ಬಗ್ಗೆ, ಹಾಡಿಕೆ ಬಗ್ಗೆ ರೇವಣಸಿದ್ಧ ಅಭಿಮಾನ ಇಟ್ಟುಕೊಂಡಿದ್ದಾರೆ. ರೇವಣಸಿದ್ಧ ಸದ್ಯಕ್ಕೆ ತಂದೆ ರಾಮಚಂದ್ರ, ತಾಯಿ ಕಮಲಾಬಾಯಿ, ಕಾಕಾ ಲಕ್ಷ್ಮಣ, ಅಣ್ಣಂದಿರಾದ ಶಿವಣ್ಣ ಮತ್ತು ಸಂತೋಷ್, ಒಂದು ವರ್ಷದ ಹಿಂದೆ ಮದುವೆಯಾದ ಪತ್ನಿ ಮೋನಿಕಾರೊಂದಿಗೆ ನೆಲೆಸಿ, ಹೈಸ್ಕೂಲ್ ಮೇಷ್ಟ್ರಾಗುವ ಕನಸೊತ್ತು ಸಿಇಟಿಗೆ ಅಗತ್ಯವಾದ ಓದು ಓದಿಕೊಂಡಿದ್ದಾರೆ.

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ. ಎಷ್ಟೋ ಜನಪದ ಕಲಾ ತಂಡಗಳಿಗೆ ತಮ್ಮ ಚಾನಲ್ ಮೂಲಕ ಹಾಡಿಕೆಯ ಅವಕಾಶಗಳನ್ನು ಕಲ್ಪಿಸಿಕೊಟ್ಟು ನೆರವಾಗಿದ್ದಾರೆ. ಜಾನಪದ ಸಂಶೋಧಕರಿಗೆ/ಅಧ್ಯಯನಕಾರರಿಗೆ ಆಕರ ಒದಗಿಸಿದ್ದಾರೆ. ನನ್ನ ಪೋಸ್ಟ್ ಡಾಕ್ಟರಲ್ ಸಂಶೋಧನೆಯ ಭಾಗವಾಗಿ ಜನಪದ ಹಾಡಿಕೆ ಕೇಳುವಾಗಲೆ ನನಗೂ ರೇವಣಸಿದ್ಧ ಅವರು ಪರಿಚಯವಾದದ್ದು. ರೇವಣಸಿದ್ಧ ಅವರ ನಿರಂತರ ಶ್ರಮದ ಫಲವಾಗಿ ಯೂಟೂಬಿನಿಂದ ಒಂದಷ್ಟು ಹಣ ಸಂದಾಯವಾದರೂ, ಅದು ಅವರ ಶ್ರಮಕ್ಕೆ ಕಡಿಮೆಯೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವಾಗಲಿ, ಕರ್ನಾಟಕದ ಜಾನಪದ ಪರಿಷತ್ತಾಗಲಿ, ಜಾನಪದ ಅಕಾಡೆಮಿಯಾಗಲಿ ಇಂಥವರನ್ನು ಗುರುತಿಸಬೇಕಿದೆ.

ಫೇಸ್ ಬುಕ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

ರೇವಣಸಿದ್ಧ ದ್ಯಾಮಗೊಳ ಅವರ ಯೂಟೂಬ್ ಚಾನಲ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

  • ಅರುಣ್ ಜೋಳದ ಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅರುಣ್ ಸರ್,
    ನೀವೂ ಕೂಡ ಇಂಥ ಎಲೆಮರೆಯ ಪ್ರತಿಭೆಯನ್ನು ನಮಗೆ ಪರಿಚಯಿಸುವ ಮುಖಾಂತರ ಬೇರೆಯವರಿಗೂ ಸ್ಪೂರ್ತಿಯಾಗುವಂತ ರೇವಣಸಿದ್ಧರನ್ನು ಹುಡುಕಿ ಕೊಟ್ಟಿದ್ದೀರಿ.
    ಕಂಡಿತವಾಗಿಯೂ ಇಂಥ ಪ್ರತಿಭೆಗಳನ್ನು ಗುರುತಿಸಿ ಕರೆತಂದು ಇಡೀ ಲೋಕಕ್ಕೆ ಪರಿಚಯಿಸುಂಥ ಕೆಲಸ ವಿಶ್ವವಿದ್ಯಾಲಯ, ಅಕಾಡೆಮಿಗಳು ಮಾಡಲೆಎಬೇಕಾದ ಅನಿವಾರ್ಯತೆಯಿದೆ. ಇದು ಅವುಗಳ ಕರ್ತವ್ಯವೂ ಕೂಡ ಎಂದರೆ ತಪ್ಪಾಗದು.
    -ರಾಜಶೇಖರ ಚಂ.ಡೊಂಬರಮತ್ತೂರ
    ಹಾವೇರಿ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...