Homeಎಲೆಮರೆಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ.

- Advertisement -
- Advertisement -

ಆ ಹುಡುಗ ಚಡಚಣದಲ್ಲಿ ಡಿಗ್ರಿ ಮುಗಿಸಿದ ನಂತರ ಬಿಜಾಪುರದ ಜಿಎಸ್‍ಎಸ್ ಕಾಲೇಜಿನಲ್ಲಿ ಬಿಎಡ್ ಪೂರೈಸಿ, ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ತನ್ನ ಊರಾದ ಮೈಲಾರ ಎಂಬ ಚಿಕ್ಕ ಹಳ್ಳಿಯಲ್ಲಿದ್ದ. ಮನೆಯಲ್ಲಿ ತಂದೆ ಕಾಕಾ ಹಾಡಿಕಿ ಸಂಘದಲ್ಲಿದ್ದರು. ಡೊಳ್ಳಿನ ಪದ ಹಾಡತಿದ್ದರು. ಯಾರೋ ಮೊಬೈಲದಾಗ ಡೊಳ್ಳಿನ ಹಾಡ ಹಚ್ಚಿಕೊಟ್ಟರು. ಅಪ್ಪ ಮಗನಿಗೆ ‘ರೇವಣಸಿದ್ಧ ಈ ಮೊಬೈಲದಾಗ ಹಾಡ ಹೆಂಗ್ ಬಿಡತಾರು ನೋಡಿಕೋ’ ಎಂದರು. ಮಗನ ಗ್ಯಾನ ಮೊಬೈಲಿನ ಮ್ಯಾಲೆ ಬಿತ್ತು. ಹೀಗೆ ನೋಡ್ತಾ ನೋಡ್ತಾ ಪದಾನ ಮೊಬೈಲದಾಗ ಹೆಂಗ್ ಬಿಡ್ತಾರ ಅಂತ ತಿಳಕಂಡು ಆಗಸ್ಟ್ 6, 2017 ರಲ್ಲಿ ಯೂಟೂಬ್ ಅಕೌಂಟ್ ಕ್ರಿಯೇಟ್ ಮಾಡಿ, ತಾನೂ ತನ್ನ ಅಪ್ಪ ಕಕ್ಕರು ಹಾಡೋ ಹಾಡ ಮೊಬೈಲಿನ್ಯಾಗ ಬಿಡಾಕತ್ತಿದ.

ಇದೀಗ ಈ ಹುಡುಗ ಹೀಗೆ ಯೂಟೂಬಿಗೆ 1260 ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಾನೆ, 87 ಸಾವಿರದಷ್ಟು ಚಂದಾದಾರರಿದ್ದಾರೆ, ಮೂರು ಕೋಟಿ ನಲವತ್ನಾಲ್ಕು ಲಕ್ಷದಷ್ಟು ವೀಕ್ಷಣೆ ಇದೆ. ಇದೀಗ ಜನಪದ ಹಾಡಿಕೆ ಮದ್ಯೆ ಜಾಹೀರಾತುಗಳು ಕಾಣಿಸಿಕೊಳ್ಳುತ್ತವೆ. ಯೂಟೂಬಿನಿಂದ ಪ್ರತಿ ತಿಂಗಳು ಕನಿಷ್ಠ ಹತ್ತು ಸಾವಿರ ಈ ಹುಡುಗನ ಅಕೌಂಟಿಗೆ ಜಮೆ ಆಗುತ್ತದೆ. ಇಂದು ಉತ್ತರ ಕರ್ನಾಟಕ ಹೈದರಬಾದ ಕರ್ನಾಟಕದ ಮುನ್ನೂರಕ್ಕಿಂತ ಹೆಚ್ಚು ಜನಪದ ಕವಿಗಳ ಹಾಡಿಕೆಯ, ಡೊಳ್ಳಿನ ಹಾಡು, ಭಜನೆ, ಮೊಹರಂ ಪದ, ಗೀಗೀ, ಸೋಬಾನೆ, ಚೌಡಕಿ ಪದ ಹೀಗೆ ಹಲವು ಜನಪದ ಪ್ರಕಾರಗಳ ಹಾಡುಗಳನ್ನು `ರೇವಣಸಿದ್ಧ ದ್ಯಾಮಗೋಳ್’ ಎನ್ನುವ ಯೂಟೂಬ್ ಚಾನಲ್ಲಿನಲ್ಲಿ ನೀವು ಕೇಳಬಹುದು.

ರೇವಣಸಿದ್ಧ ದ್ಯಾಮಗೋಳಗೆ ಈಗ 28 ವರ್ಷದ ಹರೆಯ. ಪುಟಿಯುವ ಉತ್ಸಾಹ. ಇಂಥ ಕಡೆ ಜನಪದ ಹಾಡಿಕೆ ಇದೆ ಎಂದು ಗೊತ್ತಾದರೆ, ಬೈಕಿಗೆ ಪೆಟ್ರೋಲ್ ತುಂಬಿಸಿ, ಟ್ರೈಪ್ಯಾಡ್ ತಗೊಂಡು ಹೊರಡುತ್ತಾನೆ. ಹಾಡಿಕೆ ಇರೋ ಕಡೆ ಹೋಗಿ, ಹಾಡಿಕೆ ಮಾಡುವ ಕಲಾವಿದರಿಗೆ ಕಾಣಿಕೆ ಸಲ್ಲಿಸಿ ಆಶೀರ್ವಾದ ತಗೊಳ್ತಾನೆ. ನನ್ನ ಬಗ್ಗೆ ಏನೂ ಹೇಳಬ್ಯಾಡ್ರಿ ಅಂದ್ರೂನು, ಹಾಡಿಕೆ ಆರಂಭಿಸುವ ಮುನ್ನ ಕಲಾವಿದರು `ರೇವಣಸಿದ್ಧ ದ್ಯಾಮಗೋಳ ಅವರು ತಮ್ಮ ಚಾನಲದಿಂದ ನಮ್ಮನ್ನ ಬೆಳಸ್ಯಾರ, ಬಾಳ ಪ್ರಚಾರ ಮಾಡ್ಯಾರ, ನಮಿಗೆ ಅವರ ಕಡೆಲಿಂದ ಬಾಳ ದುಡಿಮಿ ಆಗ್ಯಾತಿ, ಹಂಗಾಗಿ ಅವ್ರು ಬ್ಯಾಡ ಅಂದ್ರೂ ನಾವು ಅವರನ್ನ ನೆನಿಯೋದು ನಮ್ಮ ಧರ್ಮ ಐತಿ. ರೇವಣಸಿದ್ಧಪ್ಪರೋನ್ನ ದೇವರು ಆಯುಶ್ಯಾರೋಗ್ಯ ಕೊಟ್ ಚೆನ್ನಾಗಿ ಇಟ್ಟಿರಲಿ’ ಅಂತ ಹಾರೈಸುತ್ತಾರೆ. ಈ ಹುಡುಗ ನಾಚಿಕೆಯ ಮುದ್ದೆಯಾಗಿ ತಾನು ರೆಕಾರ್ಡ್ ಮಾಡುವುದರಲ್ಲಿ ತಲ್ಲೀನನಾಗುತ್ತಾನೆ.

ನಾನು ಗಮನಿಸಿದಂತೆ ಆಡಿಯೋ-ವೀಡಿಯೋ ಸಂಸ್ಥೆಗಳನ್ನು ಹೊರತುಪಡಿಸಿ ಹೀಗೆ ವೈಯಕ್ತಿಕ ನೆಲೆಯಲ್ಲಿ ಚಾನಲ್ ರೂಪಿಸಿ ಜನಪದ ಹಾಡಿಕೆ ವೀಡಿಯೋಗಳನ್ನು ಕೆಲವರು ಅಪ್ಲೋಡ್ ಮಾಡಿದ್ದಾರೆ. ಆದರೆ ಆ ಎಲ್ಲಾ ಚಾನಲ್ಲುಗಳಲ್ಲಿಯೇ ಅತಿಹೆಚ್ಚು ಚಂದಾದಾರಿಕೆ ಮತ್ತು ವೀಕ್ಷೆಣೆಯನ್ನು ದ್ಯಾಮಗೋಳ್ ಚಾನಲ್ ಹೊಂದಿದೆ. ಹಿಂದೆ ಆಡಿಯೋ ರೆಕಾರ್ಡ್ ಆಗಿದ್ದ ಕ್ಯಾಸೆಟ್‍ಗಳನ್ನು ತೆಗೆದುಕೊಂಡು, ಆ ಕ್ಯಾಸೆಟ್‍ನಲ್ಲಿ ಹಾಡಿದ ಕವಿಗಳ ಒಪ್ಪಿಗೆ ಪಡೆದು, ಕ್ಯಾಸೆಟ್ ಹಾಡಿಕೆಯನ್ನು ಎಂಪಿ-3 ಆಡಿಯೋ ಫೈಲನ್ನಾಗಿ ವರ್ಗಾಯಿಸಿಕೊಂಡು ಆ ನಂತರ, ಎಂಪಿ-3 ಪೈಲನ್ನು ವೀಡಿಯೋವಾಗಿ ರೂಪಾಂತರಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಕೆಸೆಟ್ಟಿನ ಪೋಸ್ಟರ್ ಅನ್ನು ವೀಡಿಯೋದ ಕವರ್ ಫೋಟೋವಾಗಿ ಬಳಸಲಾಗುತ್ತದೆ. ಆಗ ಕ್ಯಾಸೆಟ್ ಮೇಲಿನ ಮುಖ ಹೊದಿಕೆ, ಅದೇ ಹಾಡುಗಳ ವೀಡಿಯೋ ಮುಖಹೊದಿಕೆಯಾಗಿ ಬದಲಾಗುತ್ತದೆ.

ಹೀಗೆ ರೂಪಾಂತರಿಸುವಾಗ ಹಾಡಿಕೆ ಮಾಡಿದ ಕವಿಯ ಫೋಟೋ ಮತ್ತು ವೀಡಿಯೋದಲ್ಲಿಯೇ ಕವಿಯ ಮೊಬೈಲ್ ನಂಬರನ್ನು ಕೊಡಲಾಗುತ್ತದೆ. ಯೂಟೂಬಲ್ಲಿ ಈ ಹಾಡು ಕೇಳಿದವರು ಇಷ್ಟವಾದರೆ ಹಾಡಿಕೆ ತಂಡಕ್ಕೆ ಪೋನಚ್ಚಿ ಮಾತಾಡಿಸಿ ತಮ್ಮ ಊರಿನ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಾರೆ. `ಮೊದಲಾದರೆ ಹೀಗೆ ರೆಕಾರ್ಡ್ ಮಾಡಬೇಕಾದರೆ ಜನಪದ ಕಲಾವಿದರನ್ನೇ ರೆಕಾರ್ಡಿಂಗ್ ಸ್ಟುಡಿಯೋಕ್ಕೆ ಕರೆಯಿಸಬೇಕಿತ್ತು. ಹೀಗೆ ರೆಕಾರ್ಡ್ ಮಾಡಲು ಸ್ವತಃ ಜನಪದ ಕಲಾವಿದರೆ ರೆಕಾರ್ಡಿಂಗ್ ಕಂಪನಿಗಳಿಗೆ ಹಣ ಕೊಟ್ಟದ್ದೂ ಇದೆ. ಈಗ ಹಾಗಿಲ್ಲ. ನಾವೇ ಹಾಡುವಲ್ಲಿಗೆ ಹೋಗಿ ರೆಕಾರ್ಡ್ ಮಾಡಿಕೊಂಡು ಬಂದು ಯೂಟೂಬಿಗೆ ಹಾಕುತ್ತೇವೆ. ನಾನು ಅಪ್ಲೋಡ್ ಮಾಡಿದ್ದಕ್ಕಿಂತ ಒಳ್ಳೆಯ ಹಾಡುಗಳು ಇದಾವ್ ಸರ್, ಅಂತವುಗಳನ್ನೆಲ್ಲಾ ಸಂಗ್ರಹಿಸಬೇಕು ಅಂತ ಆಸೆ ಇದೆ’ ಎಂದು ರೇವಣಸಿದ್ಧ ಹೇಳುತ್ತಾರೆ.

ಮುಂದುವರಿದು `ನಮ್ಮ ಚಾನಲ್ ಫೇಮಸ್ ಆಗಿರೋದ್ರಿಂದ, ನಮ್ಮ ಚಾನಲದಾಗ ಹಾಡು ಹಾಕಿದ್ರೆ ಹೆಚ್ಚು ಪ್ರಚಾರ ಆಗಿ ಹಾಡಿಕಿ ಆರ್ಡರ್ ಸಿಗುತ್ತೆ ಅಂತೇಳಿ ಕೆಲವೊಮ್ಮೆ ಜನಪದ ಕಲಾವಿದರೆ ನಮ್ಮ ಹಾಡ ಯೂಟೂಬದಾಗ ಬಿಡರಿ ಅಂತೇಳಿ ಹಣ ಕೊಡೋಕೆ ಬರ್ತಾರೆ. ಆದರೆ ನಾನು ಯಾವ ಕಲಾವಿದರಿಂದಲೂ ಹಣ ಪಡೆಯೋಲ್ಲ. ಯೂಟೂಬಿಂದ ನನ್ನ ಕೆಲಸಕ್ಕೆ ಒಂದಷ್ಟು ಹಣ ಕೊಡ್ತಾರೆ. ಹಾಗಾಗಿ ನಿಮ್ಮಿಂದ ಹಣ ನಾನು ತಗೊಳ್ಳಲ್ಲ ಎಂದು ಹೇಳುತ್ತೇನೆ’ ಎಂದು ತನ್ನ ವೃತ್ತಿನಿಷ್ಠೆಯನ್ನು ವಿವರಿಸುತ್ತಾರೆ.

ಅವರು ಅಪ್‌ಲೋಡ್ ಮಾಡಿರುವ ಒಂದು ಹಾಡು ಕೇಳಿ

ಕಲ್ಬುರ್ಗಿ, ಅಫಜಲಫುರ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಮಹರಾಷ್ಟ್ರದ ಸಾಂಗಲಿ, ಜತ್ತ ಮೊದಲಾದ ಕಡೆಗಳ ಸುಮಾರು ಇನ್ನೂರಕ್ಕಿಂತ ಹೆಚ್ಚು ಜನಪದ ಹಾಡಿಕೆ ತಂಡಗಳು ರೇವಣಸಿದ್ಧ ಅವರಿಗೆ ಸಂಪರ್ಕವಿದೆ. ಶಿವರಾಯ ಮಾಸ್ತರ್, ಕಲ್ಮೇಶ, ಕೇದಾರ ಮಾಸ್ತರ್, ಗುರುಲಿಂಗ ಮಾಸ್ತರ ಸಂಕನಾಳ, ನಾಗೂರು ಲಕ್ಷ್ಮಣ, ಸುಮಿತ್ರಾ ಮುಗಳಿಹಾಳ, ಸಾವಿತ್ರಿ ಕಿರಣಗಿ, ಆಕಾಶ ಮನಗುಳಿ ಮುಂತಾದ ಜನಪ್ರಿಯ ಜನಪದ ಕವಿಗಳು ಪದಕಟ್ಟುವ ಬಗ್ಗೆ, ಹಾಡಿಕೆ ಬಗ್ಗೆ ರೇವಣಸಿದ್ಧ ಅಭಿಮಾನ ಇಟ್ಟುಕೊಂಡಿದ್ದಾರೆ. ರೇವಣಸಿದ್ಧ ಸದ್ಯಕ್ಕೆ ತಂದೆ ರಾಮಚಂದ್ರ, ತಾಯಿ ಕಮಲಾಬಾಯಿ, ಕಾಕಾ ಲಕ್ಷ್ಮಣ, ಅಣ್ಣಂದಿರಾದ ಶಿವಣ್ಣ ಮತ್ತು ಸಂತೋಷ್, ಒಂದು ವರ್ಷದ ಹಿಂದೆ ಮದುವೆಯಾದ ಪತ್ನಿ ಮೋನಿಕಾರೊಂದಿಗೆ ನೆಲೆಸಿ, ಹೈಸ್ಕೂಲ್ ಮೇಷ್ಟ್ರಾಗುವ ಕನಸೊತ್ತು ಸಿಇಟಿಗೆ ಅಗತ್ಯವಾದ ಓದು ಓದಿಕೊಂಡಿದ್ದಾರೆ.

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ. ಎಷ್ಟೋ ಜನಪದ ಕಲಾ ತಂಡಗಳಿಗೆ ತಮ್ಮ ಚಾನಲ್ ಮೂಲಕ ಹಾಡಿಕೆಯ ಅವಕಾಶಗಳನ್ನು ಕಲ್ಪಿಸಿಕೊಟ್ಟು ನೆರವಾಗಿದ್ದಾರೆ. ಜಾನಪದ ಸಂಶೋಧಕರಿಗೆ/ಅಧ್ಯಯನಕಾರರಿಗೆ ಆಕರ ಒದಗಿಸಿದ್ದಾರೆ. ನನ್ನ ಪೋಸ್ಟ್ ಡಾಕ್ಟರಲ್ ಸಂಶೋಧನೆಯ ಭಾಗವಾಗಿ ಜನಪದ ಹಾಡಿಕೆ ಕೇಳುವಾಗಲೆ ನನಗೂ ರೇವಣಸಿದ್ಧ ಅವರು ಪರಿಚಯವಾದದ್ದು. ರೇವಣಸಿದ್ಧ ಅವರ ನಿರಂತರ ಶ್ರಮದ ಫಲವಾಗಿ ಯೂಟೂಬಿನಿಂದ ಒಂದಷ್ಟು ಹಣ ಸಂದಾಯವಾದರೂ, ಅದು ಅವರ ಶ್ರಮಕ್ಕೆ ಕಡಿಮೆಯೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವಾಗಲಿ, ಕರ್ನಾಟಕದ ಜಾನಪದ ಪರಿಷತ್ತಾಗಲಿ, ಜಾನಪದ ಅಕಾಡೆಮಿಯಾಗಲಿ ಇಂಥವರನ್ನು ಗುರುತಿಸಬೇಕಿದೆ.

ಫೇಸ್ ಬುಕ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

ರೇವಣಸಿದ್ಧ ದ್ಯಾಮಗೊಳ ಅವರ ಯೂಟೂಬ್ ಚಾನಲ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

  • ಅರುಣ್ ಜೋಳದ ಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅರುಣ್ ಸರ್,
    ನೀವೂ ಕೂಡ ಇಂಥ ಎಲೆಮರೆಯ ಪ್ರತಿಭೆಯನ್ನು ನಮಗೆ ಪರಿಚಯಿಸುವ ಮುಖಾಂತರ ಬೇರೆಯವರಿಗೂ ಸ್ಪೂರ್ತಿಯಾಗುವಂತ ರೇವಣಸಿದ್ಧರನ್ನು ಹುಡುಕಿ ಕೊಟ್ಟಿದ್ದೀರಿ.
    ಕಂಡಿತವಾಗಿಯೂ ಇಂಥ ಪ್ರತಿಭೆಗಳನ್ನು ಗುರುತಿಸಿ ಕರೆತಂದು ಇಡೀ ಲೋಕಕ್ಕೆ ಪರಿಚಯಿಸುಂಥ ಕೆಲಸ ವಿಶ್ವವಿದ್ಯಾಲಯ, ಅಕಾಡೆಮಿಗಳು ಮಾಡಲೆಎಬೇಕಾದ ಅನಿವಾರ್ಯತೆಯಿದೆ. ಇದು ಅವುಗಳ ಕರ್ತವ್ಯವೂ ಕೂಡ ಎಂದರೆ ತಪ್ಪಾಗದು.
    -ರಾಜಶೇಖರ ಚಂ.ಡೊಂಬರಮತ್ತೂರ
    ಹಾವೇರಿ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...